ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು

ಪುತ್ತೂರು: ಆನ್ಲೈನ್ ಮೂಲಕ ಡ್ರಮ್ ಉತ್ಪನ್ನಗಳನ್ನು ಪೂರೈಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಕೃಷಿ ಉಪಕರಣಗಳನ್ನು ಪೂರೈಸದೆ ವಂಚಿಸಿರುವುದಾಗಿ ವ್ಯಕ್ತಿಯೋರ್ವರು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ನಗರದ ನರಿಮೊಗರು ನಿವಾಸಿ ಗಣೇಶ್ ಪ್ರಭು (40) ಎಂಬವರು ಈ ಕುರಿತು  ದೂರು ನೀಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ, ಅಗ್ರೋ ಉತ್ಪನ್ನಗಳನ್ನು ಕೃಷಿಕರಿಗೆ ಮಾರಾಟ ಮಾಡುತ್ತಿದ್ದು, ಯುನಿಟಿ ಪಾಲಿ ಬ್ಯಾರೆಲ್ಸ್ ಪ್ರೈವೇಟ್ ಲಿಮಿಟೆಡ್ ಅಶೋಕ ನಗರ, ಶಿವಾಜಿ ನಗರ, ಪುಣೆ, ಮಹಾರಾಷ್ಟ್ರ ಎಂಬ ಹೆಸರಿನಿಂದ ಗಣೇಶ್ […]

ವ್ಯಕ್ತಿಗೆ ಆನ್ಲೈನ್ ವಂಚನೆ : ಪ್ರಕರಣ ದಾಖಲು Read More »

ಹೆತ್ತವರ ಆಶೀರ್ವಾದದೊಂದಿಗೆ ದಿನವನ್ನು ಆರಂಭಿಸಬೇಕು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ಶೈಕ್ಷಣಿಕ ಪ್ರಾರಂಭೋತ್ಸವದಲ್ಲಿ : ರಾಜಶ್ರೀ ಎಸ್. ನಟ್ಟೋಜ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳನ್ನು ಹೊದಳು ಬೀರಿ, ಆರತಿ ಬೆಳಗಿ, ತಿಲಕವಿಟ್ಟು, ಹೂ ಮುಡಿಸಿ ಬಹು ಸಂಭ್ರಮದಿಂದ ಸಾಂಪ್ರದಾಯಿಕ ರೀತಿಯಲ್ಲಿ ಶಾಲೆಗೆ ಬರ ಮಾಡಿಕೊಳ್ಳಲಾಯಿತು.  ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ, ಮಕ್ಕಳು ಹೆತ್ತವರ ಆಶೀರ್ವಾದ ಪಡೆದು ದಿನವನ್ನ ಆರಂಭಿಸಬೇಕು. ಗುರಿಯ ಕಡೆ ಲಕ್ಷ್ಯವಿಟ್ಟು ಹಂತ ಹಂತವಾಗಿ ಮುನ್ನಡೆದರೆ ಸಫಲತೆ ನಮ್ಮದಾಗುವುದು ಎಂದರು. ಪ್ರಾಂಶುಪಾಲೆ ಮಾಲತಿ ಡಿ, ಉಪ

ಹೆತ್ತವರ ಆಶೀರ್ವಾದದೊಂದಿಗೆ ದಿನವನ್ನು ಆರಂಭಿಸಬೇಕು | ಅಂಬಿಕಾ ಸಿಬಿಎಸ್ಇ ವಿದ್ಯಾಲಯದ ಶೈಕ್ಷಣಿಕ ಪ್ರಾರಂಭೋತ್ಸವದಲ್ಲಿ : ರಾಜಶ್ರೀ ಎಸ್. ನಟ್ಟೋಜ Read More »

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಬಿರುಸಿನ ಪ್ರಚಾರ

ಪುತ್ತೂರು: ಎನ್.ಡಿ.ಎ ಮೈತ್ರಿಕೂಟದ  ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ ನಡೆಯಿತು. ಪುತ್ತೂರಿನ ನೆಹರುನಗರದ ವಿವೇಕಾನಂದ ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ನರೇಂದ್ರ ಪದವಿಪೂರ್ವ ಕಾಲೇಜು, ಅಂಬಿಕಾ ಪದವಿಪೂರ್ವ ಹಾಗೂ ಪದವಿ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಜೂನಿಯರ್ ಕಾಲೇಜು ಕೊಂಬೆಟ್ಟು, ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು, ಅಕ್ಷಯ

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಬಿರುಸಿನ ಪ್ರಚಾರ Read More »

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಟೆಕ್ನೋ ಫ್ಯೂಷನ್-2024 ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

ಪುತ್ತೂರು: ಆಧುನಿಕ ಯುಗದಲ್ಲಿ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆಯನ್ನು ಅಭಿವೃದ್ಧಿಯ ಇಂಧನ ಎಂದು ಪರಿಗಣಿಸಲಾಗುತ್ತದೆ. ಗಣಕ ವಿಜ್ಞಾನವನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆಯನ್ನು ಬಳಸಿ, ಹೊಸ ಉದ್ಯಮಗಳನ್ನು ಸೃಷ್ಟಿಸಿ ದೇಶದ ಆರ್ಥಿಕ ವಿಕಾಸಕ್ಕೆ ಕಾರಣವಾಗಬೇಕು ಎಂದು ಧಾರವಾಡ ನ್ಯಾಷನಲ್ ಫೋರೆನ್ಸಿಕ್ ಸೈನ್ಸ್ ಯುನಿವರ್ಸಿಟಿಯ ಸಹಾಯಕ ಪ್ರಾಧ್ಯಾಪಕ, ವಿವೇಕಾನಂದ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿ ಕೌಶಿಕ್ ಜಿ. ಎನ್. ಅಭಿಪ್ರಾಯಪಟ್ಟರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿನ  ಗಣಕ ವಿಜ್ಞಾನ ವಿಭಾಗ, ಐಟಿ ಕ್ಲಬ್ ಮತ್ತು

ವಿವೇಕಾನಂದ ಮಹಾವಿದ್ಯಾಲಯದಲ್ಲಿ ಟೆಕ್ನೋ ಫ್ಯೂಷನ್-2024 ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ Read More »

ಜೂ.1 (ಇಂದು) : ಪಾಂಚಜನ್ಯ ಯಕ್ಷ ಕಲಾವೃಂದದ ವಾರ್ಷಿಕೋತ್ಸವ | ‘ಶ್ರೀ ಕೃಷ್ಣ ಕಾರುಣ್ಯ ಹಾಗೂ ಮಹಿಷವಧೆ’ ಕನ್ನಡ ಪೌರಾಣಿಕ ಯಕ್ಷಗಾನ

ಪುತ್ತೂರು: ಪಾಂಚಜನ್ಯ ಯಕ್ಷ ಕಲಾವೃಂದದ ವಾರ್ಷಿಕೋತ್ಸವದ ಅಂಗವಾಗಿ ‘ಶ್ರೀ ಕೃಷ್ಣ ಕಾರುಣ್ಯ ಹಾಗೂ ಮಹಿಷವಧೆ’ ಕನ್ನಡ ಪೌರಾಣಿಕ ಯಕ್ಷಗಾನ ಜೂ.1 ಇಂದು ಸಂಜೆ 5.30 ರಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪಕ ಹರೀಶ್ ಶೆಟ್ಟಿ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬಳಿಕ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಅವರ ನಿರ್ದೇಶನದಲ್ಲಿ ನಡೆಯುವ ಯಕ್ಷಗಾನಕ್ಕೆ ಭಾಗವತರಾಗಿ ಯೋಗೀಶ್ ಕಡಂಬಳಿತ್ತಾಯ, ಸತೀಶ್ ಇರ್ದೆ, ಚೆಂಡೆ ಮದ್ದಳೆಯಲ್ಲಿ ರಾಜೇಂದ್ರ ಪ್ರಸಾದ್ ಪುಂಡಿಕಾಯಿ, ಹರ್ಷಿತ್ ಕಜೆಕ್ಕಾರ್, ಚಕ್ರತಾಳದಲ್ಲಿ

ಜೂ.1 (ಇಂದು) : ಪಾಂಚಜನ್ಯ ಯಕ್ಷ ಕಲಾವೃಂದದ ವಾರ್ಷಿಕೋತ್ಸವ | ‘ಶ್ರೀ ಕೃಷ್ಣ ಕಾರುಣ್ಯ ಹಾಗೂ ಮಹಿಷವಧೆ’ ಕನ್ನಡ ಪೌರಾಣಿಕ ಯಕ್ಷಗಾನ Read More »

ದೇಶದ ಜಿಡಿಪಿ ನಿರೀಕ್ಷೆ ಮೀರಿ ಪ್ರಗತಿ | ಶೇ.8.2% ಪ್ರಗತಿ

ಪ್ರಸ್ತುತ ಸಾಲಿನಲ್ಲಿ ಶೇ.7.7ರಷ್ಟು ಜಿಡಿಪಿ ಏರಿಕೆಯಾಗಬಹುದು ಎಂದು ಕೇಂದ್ರ ಸರ್ಕಾರ ಅಂದಾಜಿಸಿತ್ತು. ಆದರೆ ಎಲ್ಲರ ನಿರೀಕ್ಷೆ ತಲೆಕೆಳಗೆ ಮಾಡಿ ಶೇ.8.2ರಷ್ಟು ಜಿಡಿಪಿ ದಾಖಲಾಗಿದೆ. 2024ರ ಮೊದಲ 3 ತ್ರೈಮಾಸಿಕದಲ್ಲಿ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾ ಕೇವಲ ಶೇ.5.3ರಷ್ಟು ಏರಿಕೆ ಕಂಡಿದೆ. ಅದಕ್ಕೆ ಹೋಲಿಸಿದರೆ ಭಾರತದ ಆರ್ಥಿಕತೆ ಬಲಿಷ್ಠವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಜಿಡಿಪಿ ಪ್ರಗತಿ ನಮ್ಮ ಆರ್ಥಿಕತೆಯ ಶಕ್ತಿ ತೋರಿಸುತ್ತಿದೆ. ಕಷ್ಟಪಟ್ಟು ದುಡಿವ ಜನರಿಗೆ ಧನ್ಯವಾದ. ಇದು ಟ್ರೇಲರ್ ಮಾತ್ರ.

ದೇಶದ ಜಿಡಿಪಿ ನಿರೀಕ್ಷೆ ಮೀರಿ ಪ್ರಗತಿ | ಶೇ.8.2% ಪ್ರಗತಿ Read More »

ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು !

ಪುತ್ತೂರು: ಕಬಕ ಪುತ್ತೂರು ರೈಲ್ವೇ ನಿಲ್ದಾಣ ಸಮೀಪದ ಮುರದಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಕುರಿತು ಇಂದು ಮುಂಜಾನೆ ಬೆಳಕಿಗೆ ಬಂದಿದೆ. ರೈಲು ಹಳಿ ದಾಟುವ ವೇಳೆ ರೈಲು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ರೈಲ್ವೇ ಪೊಲೀಸರು ಆಗಮಿಸಿದ್ದಾರೆ.

ರೈಲು ಡಿಕ್ಕಿಯಾಗಿ ವ್ಯಕ್ತಿ ಮೃತ್ಯು ! Read More »

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಕ್ಷಯ ಕಾಲೇಜಿಗೆ ಪ್ರಥಮ ರ್‍ಯಾಂಕ್

ಪುತ್ತೂರು: 2022-23ನೇ ಸಾಲಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಬಿ. ಎಸ್ಸಿ. ಫ್ಯಾಷನ್ ಡಿಸೈನ್ ಪದವಿಯಲ್ಲಿ ಅಕ್ಷಯ ಕಾಲೇಜು ಪುತ್ತೂರಿನ ವಿದ್ಯಾರ್ಥಿನಿ, ಅಂತರಾಷ್ಟ್ರೀಯ ಯೋಗಪಟು ಪ್ರಣಮ್ಯ ಸಿ.ಎ. ಪ್ರಥಮ ರ್‍ಯಾಂಕ್ ಗಳಿಸಿ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಅಕ್ಷಯ ಕಾಲೇಜು ಪುತ್ತೂರು ಫ್ಯಾಷನ್ ಡಿಸೈನ್ ಪದವಿಯ ತನ್ನ ಎರಡನೇ ಬ್ಯಾಚಿನಲ್ಲಿ ಈ ಸಾಧನೆ ಮಾಡಿದ್ದು, ಪ್ರಥಮ ಬ್ಯಾಚಿನಲ್ಲೇ ಪ್ರಥಮ ಮತ್ತು ದ್ವಿತೀಯ ರ್‍ಯಾಂಕ್ ಗಳನ್ನು ಗಳಿಸಿಕೊಂಡಿರುವುದನ್ನು ಇಲ್ಲಿ ಸ್ಮರಿಸಬಹುದು. ಜನ ಮೆಚ್ಚುಗೆಗೆ ಪಾತ್ರವಾಗಿರುವ ಪುತ್ತೂರಿನ ಅತ್ಯುತ್ತಮ ಸಂಸ್ಥೆ ಎನಿಸಿಕೊಂಡಿರುವ ಅಕ್ಷಯ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಕ್ಷಯ ಕಾಲೇಜಿಗೆ ಪ್ರಥಮ ರ್‍ಯಾಂಕ್ Read More »

ಅಲ್ಪ ಸಂಖ್ಯಾತರು ರಸ್ತೆಯಲ್ಲಿ ನಮಾಜ್ ಮಾಡುವುದಾದರೆ ನಮಗೂ ರಸ್ತೆಯಲ್ಲಿ ಭಜನೆ ಮಾಡಲು ಬರುತ್ತದೆ | ಸರಕಾರಕ್ಕೆ ಎಚ್ಚರಿಕೆ ನೀಡಿದ ಮುರಳೀಕೃಷ್ಣ ಹಸಂತಡ್ಕ

ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ.ನಾವೂ ರಸ್ತೆಯಲ್ಲಿ ಭಜನೆ ಮಾಡುವ ಮೂಲಕ ಉತ್ತರ ಕೊಡಲು ಸಿದ್ಧರಿದ್ದೇವೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಗೋರಕ್ಷ ಪ್ರಮುಖ್ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ. ಮಂಗಳೂರಿನ ಕಂಕನಾಡಿ ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಅಶಾಂತಿ ಸೃಷ್ಠಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸ್ವಯಂಪ್ರೇರಿತ ಕೇಸು ದಾಖಲಿಸಿದ ಪೋಲಿಸ್ ಅಧಿಕಾರಿಯನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿರುವುದನ್ನು ಖಂಡಿಸಿ

ಅಲ್ಪ ಸಂಖ್ಯಾತರು ರಸ್ತೆಯಲ್ಲಿ ನಮಾಜ್ ಮಾಡುವುದಾದರೆ ನಮಗೂ ರಸ್ತೆಯಲ್ಲಿ ಭಜನೆ ಮಾಡಲು ಬರುತ್ತದೆ | ಸರಕಾರಕ್ಕೆ ಎಚ್ಚರಿಕೆ ನೀಡಿದ ಮುರಳೀಕೃಷ್ಣ ಹಸಂತಡ್ಕ Read More »

ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಅಭ್ಯರ್ಥಿಗಳ ಪರ ಬಿರುಸಿನ ಮತ ಪ್ರಚಾರ

ಪುತ್ತೂರು: ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಪರ ಬಿರುಸಿನ ಮತ ಪ್ರಚಾರ ಕಾರ್ಯ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲದಲ್ಲಿ ಶುಕ್ರವಾರ ನಡೆಯಿತು. ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್‍.ಎಲ್‍.ಭೋಜೇಗೌಡ ಪರ ಮತ ಪ್ರಚಾರ ಕಾರ್ಯ ನಡೆಯಿತು. ಪ್ರಚಾರ ಕಾರ್ಯದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು.

ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಅಭ್ಯರ್ಥಿಗಳ ಪರ ಬಿರುಸಿನ ಮತ ಪ್ರಚಾರ Read More »

error: Content is protected !!
Scroll to Top