2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕ ಜೂನ್ 15ಕ್ಕೆ ವಿಸ್ತರಣೆ

ಬೆಂಗಳೂರು :  ಕನ್ನಡ ಸಾಹಿತ್ಯ ಪರಿಷತ್ತಿನ 2023ನೇ  ಸಾಲಿನ ವಿವಿಧ  ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕವನ್ನು ಜೂನ್ 15ಕ್ಕೆ ವಿಸ್ತರಣೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದ್ದು, 2023ರ ಜನವರಿ 1 ರಿಂದ ಡಿಸೆಂಬರ್ 31ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳುಹಿಸಿಕೊಡಬಹುದಾಗಿದೆ ಎಂದು ಈ ಹಿಂದಿನ ಪತ್ರಿಕಾ ಪ್ರಕಟಣೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿ ಮೇ […]

2023ನೇ ಸಾಲಿನ ವಿವಿಧ ಪುಸ್ತಕ ದತ್ತಿ ಪ್ರಶಸ್ತಿಯ ಕೊನೆಯ ದಿನಾಂಕ ಜೂನ್ 15ಕ್ಕೆ ವಿಸ್ತರಣೆ Read More »

ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ

ಮಂಗಳೂರು : ಮನೆಯಿಂದ ಹೊರಗೆ ತೆರಳಿದ ತಾಯಿ ಹಾಗೂ ಮಗು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಕಂಪಾಡಿ ಮೀನಕಳಿ ನಿವಾಸಿ ಶ್ವೇತಾ (31) ಹಾಗೂ ಮಗಳು ಇಶಿಕಾ(6) ನಾಪತ್ತೆಯಾದವರು. ನಿನ್ನೆ ಮಧ್ಯಾಹ್ನ 3 ಗಂಟೆ ಹೊತ್ತಿಗೆ ತಾಯಿ ಮನೆಯಿಂದ ಗಂಡನ ಮನೆ ಕೂಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ತಾಯಿ ಮಗಳು ನಾಪತ್ತೆಯಾಗಿದ್ದಾರೆ. ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾರಿಗಾದರೂ ತಾಯಿ ಮಗಳ ಬಗ್ಗೆ ಮಾಹಿತಿ ಸಿಕ್ಕಿದರೆ

ಮನೆಯಿಂದ ಹೊರ ಹೋದ ತಾಯಿ-ಮಗಳು ನಾಪತ್ತೆ Read More »

ಅಯೋಧ್ಯೆ ರಾಮಮಂದಿರ ಸ್ಪೋಟಿಸುವ ಬೆದರಿಕೆ ಹಾಕಿದ ಇಬ್ಬರ ಬಂಧನ

ಲಕ್ನೋ: ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ 14 ವರ್ಷದ ಬಾಲಕ ಹಾಗೂ ಆತನ ಅಜ್ಜಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕ ಮಂಗಳವಾರ ರಾತ್ರಿ ಪೊಲೀಸ್ ಕಂಟ್ರೋಲ್ ರೂಮ್‌ನ ತುರ್ತು ಸಹಾಯವಾಣಿ 112ಕ್ಕೆ ಕರೆಮಾಡಿ, ಮಂದಿರವನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಪೊಲೀಸರು ಸೈಬರ್ ಸೆಲ್ ಸಹಾಯದಿಂದ ಆರೋಪಿಗಳಿರುವ ಸ್ಥಳವನ್ನು ಪತ್ತೆಹಚ್ಚಿದ್ದಾರೆ. ಇದೀಗ ಆರೋಪಿ ಬಾಲಕ ಹಾಗೂ ಆತನ ಅಜ್ಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕ ಬುದ್ದಿಮಾಂದ್ಯತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ

ಅಯೋಧ್ಯೆ ರಾಮಮಂದಿರ ಸ್ಪೋಟಿಸುವ ಬೆದರಿಕೆ ಹಾಕಿದ ಇಬ್ಬರ ಬಂಧನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಟ್ರಾ ಡಿಪಾರ್ಟ್‌ಮೆಂಟ್‌ ಐಟಿ ಫೆಸ್ಟ್‌ ವಿಶನ್- 24 ಕ್ಕೆ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಪಿನ್ಯಾಕಲ್‌ ಐಟಿ ಕ್ಲಬ್‌ಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಇಂಟ್ರಾ ಡಿಪಾರ್ಟ್‌ಮೆಂಟ್‌ ಐಟಿ ಫೆಸ್ಟ್‌ ವಿಶನ್-24 ಸ್ಪರ್ಧೆಗಳಿಗೆ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲ ವಂ.ಡಾ. ಆ್ಯಂಟನಿ ಪ್ರಕಾಶ್‌ ಮೊಂತೇರೊ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಅನುಭವಗಳು ಜೀವನದಲ್ಲಿ ಹೆಚ್ಚಿನ ಪಾಠ ಕಲಿಸುತ್ತವೆ. ನಮ್ಮನ್ನು ಕೆಣಕುವವರು, ಟೀಕಿಸುವವರು ಸಮಾಜದಲ್ಲಿ ಸಾಕಷ್ಟು ಜನರಿರುತ್ತಾರೆ. ಅವರ ಟೀಕೆ ಟಿಪ್ಪಣಿಗಳನ್ನು ನಮ್ಮಲ್ಲಿ ಧನಾತ್ಮಕ ಬದಲಾವಣೆಗಳನ್ನು ತರುವುದಕ್ಕೆ ಮಾತ್ರವೇ ಬಳಸಿಕೊಳ್ಳಬೇಕು

ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಟ್ರಾ ಡಿಪಾರ್ಟ್‌ಮೆಂಟ್‌ ಐಟಿ ಫೆಸ್ಟ್‌ ವಿಶನ್- 24 ಕ್ಕೆ ಚಾಲನೆ Read More »

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ !

ನೆಲ್ಯಾಡಿ: ನೇಣುಬಿಗಿದ ಸ್ಥಿತಿಯಲ್ಲಿ ವ್ಯಕ್ತಯೊಬ್ಬರ ಮೃತದೇಹ ಕೊಕ್ಕಡ ಗ್ರಾಮದ ಹಿತ್ತಿಲು ಸಮೀಪದ ಗೇರು ಗುಡ್ಡೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರು ಬೆಂಗಳೂರಿನಿಂದ-ಹಾಸನ, ಹಾಸನದಿಂದ-ಕೊಕ್ಕಡಕ್ಕೆ ಮೇ.24ರಂದು ಬಸ್ಸಿನಲ್ಲಿ ಪ್ರಯಾಣಿಸಿರುವ ಟಿಕೆಟ್ ಹಾಗೂ ಬ್ಯಾಂಕ್ ಎಟಿಎಂ ಕಾರ್ಡ್ ದೊರೆತಿದ್ದು ಅದರಲ್ಲಿ ನಿಂಗಣ್ಣ ಎಂದು ಹೆಸರು ನಮೂದಿಸಲಾಗಿದೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟ‌ರ್ ಸಮರ್ಥ ಗಾಣಿಗ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅರಸಿನಮಕ್ಕಿ ಹಾಗೂ ಶಿಶಿಲ ಶೌರ್ಯ ಘಟಕದ ತಂಡದ ಸದಸ್ಯರ ಸಹಕಾರದಿಂದ ಮೃತದೇಹವನ್ನು ಮರಣೋತ್ತರ

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ! Read More »

ಬಪ್ಪಳಿಗೆ ಅಂಬಿಕಾ ಕಾಲೇಜಿಗೆ ವಿಶ್ವವಿದ್ಯಾನಿಲಯ ಮಟ್ಟದ ಎರಡು ರ್ಯಾಂಕ್

ಪುತ್ತೂರು: ಬಪ್ಪಳಿಗೆ ಅಂಬಿಕಾ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ರ್ಯಾಂಕ್ ಗೆ ಭಾಜನರಾಗಿದ್ದಾರೆ. ಬಿ.ಎಸ್ಸಿ ವಿಭಾಗದಲ್ಲಿ ಪೆರ್ಲದ ಪಡ್ರೆ ನಿವಾಸಿಗಳಾದ ಬಾಲಚಂದ್ರ ಬಿ.ವಿ ಹಾಗೂ ಪ್ರಿಯಾ ವಿ ದಂಪತಿ ಪುತ್ರಿ ವರೇಣ್ಯಾ ಒಟ್ಟು 4200  ಅಂಕಗಳಲ್ಲಿ 4093 ಅಂಕ ಗಳಿಸಿ 97.45 ಶೇ. ದೊಂದಿಗೆ ಮೂರನೇ ರ್ಯಾಂಕ್ ಗಳಿಸಿದ್ದಾರೆ. ಬಿ.ಎ ವಿಭಾಗದಲ್ಲಿ ಪುತ್ತೂರಿನ ವಾಲ್ತಾಜೆ ನಿವಾಸಿ ಸತ್ಯನಾರಾಯಣ ಭಟ್ ಹಾಗೂ ವಿನಯಾ ದಂಪತಿ ಪುತ್ರಿ ನಯನಾ ಒಟ್ಟು 3814 ಅಂಕ ಗಳಿಸಿ 90.81 ಶೇ.

ಬಪ್ಪಳಿಗೆ ಅಂಬಿಕಾ ಕಾಲೇಜಿಗೆ ವಿಶ್ವವಿದ್ಯಾನಿಲಯ ಮಟ್ಟದ ಎರಡು ರ್ಯಾಂಕ್ Read More »

ನಾಳೆ (ಮೇ 31): ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ಐ2 ಕನೆಕ್ಟ್-2024 ಪ್ರಾಜೆಕ್ಟ್‌ಗಳ ಪ್ರದರ್ಶನ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ಮತ್ತು ಐಇಇಇ ಮಂಗಳೂರು ಉಪ ವಿಭಾಗದ ಸಂಯುಕ್ತ ಆಶ್ರಯದಲ್ಲಿ ನವದೆಹಲಿ ಐಎಸ್‌ಟಿಇ, ವಿವೇಕಾನಂದ ಸೆಂಟರ್ ಫಾರ್ ರೀಸರ್ಚ್ ಸ್ಟಡೀಸ್, ಇನ್ಸ್ಟಿಟ್ಯೂಶನ್ ಇನ್ನೋವೇಶನ್ ಕೌನ್ಸಿಲ್ ಹಾಗೂ ಐಇಇಇ ವಿಸಿಇಟಿ ವಿದ್ಯಾರ್ಥಿ ವಿಭಾಗದ ಸಹಭಾಗಿತ್ವದಲ್ಲಿ ರಾಜ್ಯಮಟ್ಟದ ಐ2 ಕನೆಕ್ಟ್-2024 ಪ್ರಾಜೆಕ್ಟ್‌ಗಳ ಪ್ರದರ್ಶನ ಮೇ 31 ನಾಳೆ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ. ಇದೊಂದು ಐಇಇಇ ಮಂಗಳೂರು ಉಪ ವಿಭಾಗದ ಪ್ರಮುಖ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳ ನವ-ನವೀನ ಯೋಜನೆಗಳ ಪ್ರದರ್ಶನಕ್ಕೆ ವೇದಿಕೆಯಾಗಿದೆ. ಅಲ್ಲದೆ

ನಾಳೆ (ಮೇ 31): ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ಐ2 ಕನೆಕ್ಟ್-2024 ಪ್ರಾಜೆಕ್ಟ್‌ಗಳ ಪ್ರದರ್ಶನ Read More »

ಹಿರಿಯ ಸಾಹಿತಿ, ಕಾದಂಬರಿಗಾರ್ತಿ ಲಲಿತಾ ಆರ್. ರೈಯವರಿಗೆ ಎಸ್‍ಸಿಐ ವತಿಯಿಂದ ಗೌರವಾರ್ಪಣೆ

ಪುತ್ತೂರು: ಹಿರಿಯ ಸಾಹಿತಿ, ಕಾದಂಬರಿಗಾರ್ತಿ ಲಲಿತಾ ಆರ್ ರೈ ಅವರಿಗೆ ಎಸ್‍ಸಿಐ ಪುತ್ತೂರು ಲಿಜನ್ ವತಿಯಿಂದ ಗೌರವಾರ್ಪಣೆ ನಡೆಯಿತು. ಸಾಹಿತ್ಯ ಪ್ರಿಯೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್(ಎಸ್.ಸಿ.ಐ.)  ಅವರ ತೊಂಬತ್ತಾರರ ಇಳಿ ಹರೆಯದ ಹೊತ್ತಲ್ಲಿ ಲಲಿತಾ ಆರ್. ರೈ ಅವರನ್ನು ಪುತ್ತೂರು ಲೀಜನ್ ಅಧ್ಯಕ್ಷೆ ಮಲ್ಲಿಕಾ ಜೆ ಆರ್ ರೈ ತಮ್ಮ SCI ಪುತ್ತೂರು ತಂಡದೊಂದಿಗೆ ಶಾಲು, ಹಣ್ಣು ಹಂಪಲು ಹಾಗೂ ಪುಸ್ತಕವನ್ನು ನೀಡಿ ಸ್ವಗೃಹದಲ್ಲಿ ಸತ್ಕರಿಸಿದರು. ಈ ಸಂದರ್ಭದಲ್ಲಿ ಲಲಿತಾ ಆರ್ ರೈ ಯವರ ಕಿರಿಯ ಪುತ್ರಿ

ಹಿರಿಯ ಸಾಹಿತಿ, ಕಾದಂಬರಿಗಾರ್ತಿ ಲಲಿತಾ ಆರ್. ರೈಯವರಿಗೆ ಎಸ್‍ಸಿಐ ವತಿಯಿಂದ ಗೌರವಾರ್ಪಣೆ Read More »

ಕಾಂಕ್ರೀಟ್ ಭಾರ ತಾಳಲಾರದೆ ಸೇತುವೆ ಕುಸಿತ !

ನೆಲ್ಯಾಡಿ: ಕಾಂಕ್ರೀಟ್ ಭಾರ ತಾಳಲಾರದೆ ಸೇತುವೆ ಕಾಮಗಾರಿ ವೇಳೆ ಕುಸಿದು ಬಿದ್ದ ಘಟನೆ ರೆಖ್ಯ ಗ್ರಾಮದ ಪರಕ್ಕಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಅಡ್ಡಹೊಳೆ-ಬಿ.ಸಿ.ರೋಡ್ ನಡುವೆ ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ಈ ಭಾಗದ ಕಾಮಗಾರಿಯನ್ನು  ಔತ್ತಡೆ ಕನ್‍ ಸ್ಟ್ರಕ್ಷನ್ ಕಂಪನಿಯವರು ಮಾಡುತ್ತಿದ್ದು  ರೆಖ್ಯ ಗ್ರಾಮದ ಪರಕ್ಕಳ ಎಂಬಲ್ಲಿ ತೋಡಿಗೆ ಅಡ್ಡವಾಗಿ ನಿರ್ಮಾಣಗೊಂಡಿದ್ದ ಹಳೆಯ ಸೇತುವೆ ತೆಗೆದು ಹೊಸ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇಲ್ಲಿ ತೋಡಿಗೆ ಎರಡು ಪಿಲ್ಲರ್ ಹಾಕಿ ಅಂದಾಜು 25

ಕಾಂಕ್ರೀಟ್ ಭಾರ ತಾಳಲಾರದೆ ಸೇತುವೆ ಕುಸಿತ ! Read More »

ಅಕ್ರಮ ಹಣ ವರ್ಗಾವಣೆ : ಸಚಿವ ನಾಗೇಂದ್ರ ರಾಜೀನಾಮೆಗೆ ಯಡಿಯೂರಪ್ಪ ಒತ್ತಾಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆ ನೀಡುವುದೇ ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ವಿಷಯ ಒಂದು ದುರ್ದೈವದ ವಿಷಯ. ಹಲವಾರು ಅಧಿಕಾರಿಗಳ ಬಗ್ಗೆ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಸಚಿವ ನಾಗೇಂದ್ರ ಅವರ ರಾಜೀನಾಮೆಯನ್ನು ಎಲ್ಲರೂ ಕೇಳುತ್ತಿದ್ದಾರೆ. ಆದರೆ ಅವರೇ ತಿಳಿದು ರಾಜೀನಾಮೆ ಕೊಡುವುದು ಸೂಕ್ತ

ಅಕ್ರಮ ಹಣ ವರ್ಗಾವಣೆ : ಸಚಿವ ನಾಗೇಂದ್ರ ರಾಜೀನಾಮೆಗೆ ಯಡಿಯೂರಪ್ಪ ಒತ್ತಾಯ Read More »

error: Content is protected !!
Scroll to Top