ಹಲಸು ಮತ್ತು ಹಣ್ಣು ಮೇಳದ ಸಮಾರೋಪ

ಪುತ್ತೂರು: ಹಲಸಿನ ಹಣ್ಣಿನ ಉದ್ದಿಮೆಗಳನ್ನು ನಡೆಸುವ ನಿಟ್ಟಿನಲ್ಲಿ ಸಾಧ್ಯತೆಗಳು ಬಹಳಷ್ಟಿವೆ. ಇದಕ್ಕೆ ಉದ್ಯಮಶೀಲತೆಯ ಜತೆಗೆ ಪ್ರಯತ್ನಶೀಲತೆ ಬೇಕಾಗಿದೆ ಎಂದು ಅಡಿಕೆ ಪತ್ರಿಕೆ ಸಂಪಾದಕ ಶ್ರೀಪಡ್ರೆ ಅಭಿಪ್ರಾಯಪಟ್ಟರು. ಅವರು ಪುತ್ತೂರು ನವತೇಜ, ಜೆಸಿಐ, ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಅಡಿಕೆ ಪತ್ರಿಕೆ ಸಹಯೋಗದಲ್ಲಿ ಮೂರು ದಿನಗಳ ಕಾಲ ಜೈನಭವನದಲ್ಲಿ ನಡೆದ ಹಲಸು ಮತ್ತು ಹಣ್ಣು ಮೇಳದ ಸಮಾರೋಪ ಸಮಾರಂಭದಲ್ಲಿ ಸಮಾರೋಪ ಭಾಷಣ ಮಾಡಿದರು. ಹಲಸಿನ ಹಣ್ಣಿನ ಪೂರೈಕೆಯಲ್ಲಿ ತ್ರಿಪುರ ಪ್ರಥಮ ಸ್ಥಾನವಿದ್ದರೆ, ಕರ್ನಾಟಕ ದ್ವಿತೀಯ ಸ್ಥಾನವಿದೆ. ಆದರೆ ಹಲಸಿಹಣ್ಣಿನ ಉತ್ಪನ್ನಗಳ […]

ಹಲಸು ಮತ್ತು ಹಣ್ಣು ಮೇಳದ ಸಮಾರೋಪ Read More »

ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಿದ ರೆಮಲ್ ಚಂಡಮಾರುತ | ವಿಮಾನ ಹಾರಾಟ ರದ್ದು

ಹೊಸದಿಲ್ಲಿ: ಇಂದು ಬೆಳಗ್ಗೆ ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದ ಕರಾವಳಿಗೆ ಬಂದು ಅಪ್ಪಳಿಸಿದ್ದು ಎಲ್ಲೆಡೆ ಭೂಕುಸಿತ ಉಂಟಾಗುತ್ತಿದೆ. ಇದರ ಪರಿಣಾಮ ಬಿಹಾರದ ಮೇಲೂ ಗೋಚರಿಸಿದೆ. ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವಂತೆ ಬಂಗಾಳದಲ್ಲಿ ರೆಮಲ್ ಚಂಡಮಾರುತದ ಪ್ರಭಾವದ ಹಿನ್ನೆಲೆಯಲ್ಲಿ ಕೋಲ್ಕತ್ತಾ-ಪಾಟ್ನಾ ನಡುವೆ ಹಾರಾಟ ನಡೆಸುತ್ತಿದ್ದ ಎರಡು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇದರಿಂದಾಗಿ 700ಕ್ಕೂ ಹೆಚ್ಚುಪ್ರಯಾಣಿಕರು ಪರದಾಡುವಂತಾಯಿತು. ಈಶಾನ್ಯದ ರಾಜ್ಯಗಳಲ್ಲಿ ಚಂಡಮಾರುತದ ಪ್ರಭಾವದಿಂದ ಮಳೆಯಾಗಲಿದೆ. ಈ ರಾಜ್ಯಗಳಲ್ಲಿ ಒಂದೆರಡು ದಿನ ಚಂಡಮಾರುತದ ಪ್ರಭಾವ ಇರಬಹುದು. ಸೋಮವಾರ ಹಾಗೂ ಮಂಗಳವಾರ ಅಸ್ಸಾಂ, ಮೇಘಾಲಯ,

ಪಶ್ಚಿಮ ಬಂಗಾಳದ ಕರಾವಳಿಗೆ ಅಪ್ಪಳಿಸಿದ ರೆಮಲ್ ಚಂಡಮಾರುತ | ವಿಮಾನ ಹಾರಾಟ ರದ್ದು Read More »

ವಿದ್ಯಾರ್ಥಿಯ ಖಾತೆಯಿಂದ ನಗದು ಅಪಹರಿಸಿ ವಂಚನೆ : ಪ್ರಕರಣ ದಾಖಲು

ಉಜಿರೆ: ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆಯಿಂದ ನಗದು ಅಪಹರಿಸಿದ ಘಟನೆ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರ ಖಾತೆಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ್ದಾರೆ. ಗುಲ್ಬರ್ಗ ಜಿಲ್ಲೆಯ ಅಫಲ್ ಪುರದ ಯೂನಿಯನ್ ಬ್ಯಾಂಕಿನಲ್ಲಿ ಖಾತೆ ಹೊಂದಿದ್ದು ಈ ಖಾತೆಯಿಂದ ಹಣ ಎಗರಿಸಲಾಗಿದೆ. ಮೇ 23ರವರೆಗೆ ಅವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30ರ ಹೊತ್ತಿಗೆ ಇವರ ಮೊಬೈಲ್ ಗೆ

ವಿದ್ಯಾರ್ಥಿಯ ಖಾತೆಯಿಂದ ನಗದು ಅಪಹರಿಸಿ ವಂಚನೆ : ಪ್ರಕರಣ ದಾಖಲು Read More »

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ ಸುವರ್ಣ ಮಹೋತ್ಸವ : ಅಕ್ಷಯಾಂಬರ ತಾಳ ಮದ್ದಳೆ

ಉಪ್ಪಿನಂಗಡಿ: ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿ ಕಾರ್ಯಕ್ರಮದ ಅಂಗವಾಗಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಅಕ್ಷಯಾಂಬರ ತಾಳಮದ್ದಳೆ ಜರಗಿತು. ಭಾಗವತರಾಗಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ನಿತೀಶ್ ಕುಮಾರ್ ವೈ, ಹಿಮ್ಮೇಳದಲ್ಲಿ ಪ್ರಚೇತ್ ಆಳ್ವ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಅಂಬಾ ಪ್ರಸಾದ ಪಾತಾಳ (ದ್ರೌಪದಿ), ಸತೀಶ ಶಿರ್ಲಾಲು(ಕೌರವ), ಸಂಜೀವ ಪಾರೆಂಕಿ (ವಿದುರ ಮತ್ತು ವಿಕರ್ಣ), ದಿವಾಕರ ಆಚಾರ್ಯ ಗೇರುಕಟ್ಟೆ (ಪ್ರಾತಿಕಾಮಿ, ಭೀಷ್ಮ ಮತ್ತು ಶ್ರೀಕೃಷ್ಣ), ಶ್ರೀಧರ ಎಸ್.

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾಸೇವಾ ಸಂಘದ ಸುವರ್ಣ ಮಹೋತ್ಸವ : ಅಕ್ಷಯಾಂಬರ ತಾಳ ಮದ್ದಳೆ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ

ಸುಳ್ಯ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಸುಳ್ಯ ನಗರ ಪಂಚಾಯಿತಿ ಸಹಕಾರದಲ್ಲಿ ಸುಳ್ಯದ ಪೈಚಾರಿನಲ್ಲಿ ಸುಮತಿ ಎಂಬವರಿಗೆ ನೂತನವಾಗಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ ಕಾರ್ಯಕ್ರಮ ಇಂದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ,  ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಲ್ಪನೆಯಂತೆ ಸೇವೆ ಎಂಬ ಯಜ್ಞದಲ್ಲಿ ಸವಿದೆಯಂತೆ ಉರಿದು ಸಮಾಜದಲ್ಲಿ  ಮತ್ತೊಬ್ಬರಿಗೆ ಸಹಾಯ ಮಾಡುವುದೇ  ನಮ್ಮ ಜೀವನದ ಭಾಗವಾಗಿರಬೇಕು. ಈ ಮೂಲಕ ನಮ್ಮ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ನಿರ್ಮಿಸಿದ ಮನೆ ‘ಸೇವಾಶ್ರಯ’ದ ಹಸ್ತಾಂತರ Read More »

ಎಲ್ಲರ ಮನಸ್ಸನ್ನು ಅರಿಯುವ ಮನಸ್ಸು ಕೇಶವರದ್ದು | ಎಸ್‍.ಆರ್.ಕೆ. ಲ್ಯಾಡರ್ಸ್‍ ನ ರಜತ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ | ಕೃಷಿಕ ಕೃಷಿ ಉದ್ದಿಮೆದಾರನಾಗಬೇಕು ಎಂಬುದನ್ನು ತನ್ನ ಸಾಧನೆ ಮೂಲಕ ಸಮಾಜಕ್ಕೆ ತೋರಿಸಿದ್ದಾರೆ : ಸಂಜೀವ ಮಠಂದೂರು | ಕೇಶವ ಅಮೈಯವರ ಸಂಶೋಧನಾ ವಿಭಾಗ ಬಹಳ ಸ್ಟ್ರಾಂಗ್ ಆಗಿದೆ : ಡಾ.ಮೋಹನ್ | ಕೇಶವ ಅಮೈಯವರು ತನ್ನ ಸುತ್ತಮುತ್ತಲಿನ ಎಲ್ಲಾ ಆಗುಹೋಗುಗಳಿಗೆ ಸ್ಪಂದಿಸುವ ಮುಂದಾಳು  : ಡಾ.ಪ್ರಸನ್ನ ಹೆಬ್ಬಾರ್ | ಎಲ್ಲರನ್ನೂ ಮುಂದೆ ತರುವ ಮನಸ್ಸು ಕೇಶವರದ್ದು : ಸುರೇಶ್ ಬೈಲು | ದೇವರು ಕೇಶವರ ಜೊತೆಗಿದ್ದಾರೆ ಎಂಬುದಕ್ಕೆ ಎರಡು ಮಾತಿಲ್ಲ: ಅರವಿಂದ್ ಬೋಳಾರ್ | ಇದು ಸಾಧನೆಯ ಸಮಾವೇಶವಲ್ಲ. ಸಹಕಾರ ನೀಡಿದವರಿಗೆ ಕೃತಜ್ಞತಾಭಾವದ ಸಮಾವೇಶ : ಕೇಶವ ಅಮೈ

ಕಡಬ: ಖ್ಯಾತ ಕೃಷಿ ಯಂತ್ರೋಪಕರಣಗಳ ಸಂಸ್ಥೆ ಎಸ್‍.ಆರ್.ಕೆ. ಲ್ಯಾಡರ್ಸ್ ರಜತ ಸಂಭ್ರಮದ ಸಮಾರೋಪ ಕಾರ್ಯಕ್ರಮದ ಸಭಾ ಕಾರ್ಯಕ್ರಮ ಶನಿವಾರ ಸಂಜೆ ಕೊಯಿಲ ಗ್ರಾಮದ ಕಲಾಯಿಗುತ್ತುವಿನಲ್ಲಿ ನಡೆಯಿತು. ಸಂಜೆ ನಡೆದ ಸಭಾಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಂಡು ಮಾತನಾಡಿ, ಕೇಶವರಂತಹ ಸಾಧಕರನ್ನು ಗೌರವಿಸಲು ಬಂದಿದ್ದೇವೆ. ಇದು ಅವರ ಉದ್ಯಮದಲ್ಲಿ ಹೆಗಲಿಗೆ ಹೆಗಲು ಕೊಟ್ಟವರನ್ನು ಗೌರವಿಸುವ ಕಾರ್ಯಕ್ರಮವಾಗಿದೆ. ಸಾಮಾನ್ಯರಲ್ಲಿ ಅಸಮಾನ್ಯ ವ್ಯಕ್ತಿ ಎಲ್ಲರ ಮನಸ್ಸನ್ನು ಅರಿಯುವ ಮನಸ್ಸು ಕೇಶವರದ್ದು. ರೈತ ದೇಶದ ಬೆನ್ನೆಲುಬು. ಅಂತಹ ರೈತನ

ಎಲ್ಲರ ಮನಸ್ಸನ್ನು ಅರಿಯುವ ಮನಸ್ಸು ಕೇಶವರದ್ದು | ಎಸ್‍.ಆರ್.ಕೆ. ಲ್ಯಾಡರ್ಸ್‍ ನ ರಜತ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ | ಕೃಷಿಕ ಕೃಷಿ ಉದ್ದಿಮೆದಾರನಾಗಬೇಕು ಎಂಬುದನ್ನು ತನ್ನ ಸಾಧನೆ ಮೂಲಕ ಸಮಾಜಕ್ಕೆ ತೋರಿಸಿದ್ದಾರೆ : ಸಂಜೀವ ಮಠಂದೂರು | ಕೇಶವ ಅಮೈಯವರ ಸಂಶೋಧನಾ ವಿಭಾಗ ಬಹಳ ಸ್ಟ್ರಾಂಗ್ ಆಗಿದೆ : ಡಾ.ಮೋಹನ್ | ಕೇಶವ ಅಮೈಯವರು ತನ್ನ ಸುತ್ತಮುತ್ತಲಿನ ಎಲ್ಲಾ ಆಗುಹೋಗುಗಳಿಗೆ ಸ್ಪಂದಿಸುವ ಮುಂದಾಳು  : ಡಾ.ಪ್ರಸನ್ನ ಹೆಬ್ಬಾರ್ | ಎಲ್ಲರನ್ನೂ ಮುಂದೆ ತರುವ ಮನಸ್ಸು ಕೇಶವರದ್ದು : ಸುರೇಶ್ ಬೈಲು | ದೇವರು ಕೇಶವರ ಜೊತೆಗಿದ್ದಾರೆ ಎಂಬುದಕ್ಕೆ ಎರಡು ಮಾತಿಲ್ಲ: ಅರವಿಂದ್ ಬೋಳಾರ್ | ಇದು ಸಾಧನೆಯ ಸಮಾವೇಶವಲ್ಲ. ಸಹಕಾರ ನೀಡಿದವರಿಗೆ ಕೃತಜ್ಞತಾಭಾವದ ಸಮಾವೇಶ : ಕೇಶವ ಅಮೈ Read More »

ಮನೆಗೆ ನುಗ್ಗಿದ ಕಳ್ಳರು ಡಿವಿಆರ್ ಹೊತ್ತೊಯ್ದರು

ವಿಟ್ಲ : ಮನೆಗೆ ನುಗ್ಗಿದ ಕಳ್ಳರು ಒಂದು ಲಕ್ಷ ರೂ. ಮೌಲ್ಯದ ವಾಚ್ ಜತೆಗೆ ಡಿವಿಆರ್ ಹಪತ್ತೊಯ್ದ ಘಟನೆ ವಿಟ್ಲ ಪರ್ತಿಪಾಡಿನಲ್ಲಿ ನಡೆದಿದೆ. ವಿಟ್ಲ ಪಡೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಎಂ.ಕೆ.ಖಲೀಲ್ ಎಂಬವರ ಮನೆಗೆ ಕನ್ನ ಹಾಕಿದ್ದಾರೆ. ಖಲೀಲ್ ಕುಟುಂಬ ಅರಬ್ ರಾಷ್ಟ್ರದ ಅಹ್ಮನ್ ನಲ್ಲಿದ್ದು ಆರು ತಿಂಗಳ ಹಿಂದಷ್ಟೇ ಊರಿಗೆ ಬಂದು ಹೋಗಿದ್ದರು. ಭಾನುವಾರ ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ ಅನುಮಾನದಿಂದ ಮನೆಗೆ ಹೋಗಿ ನೋಡಿದಾಗ ಅಂಗಳದಲ್ಲಿದ್ದ

ಮನೆಗೆ ನುಗ್ಗಿದ ಕಳ್ಳರು ಡಿವಿಆರ್ ಹೊತ್ತೊಯ್ದರು Read More »

ಬ್ಯೂಟಿಷಿಯನ್ ಅಕ್ಷತಾ ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಗತ್ಯೆ ಮಾಡಿಕೊಂಡ ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಇಂದು ನಡೆದಿದೆ. ಅಕ್ಷತಾ (30)  ಆತ್ಮಹತ್ಯೆ ಮಾಡಿಕೊಂಡವರು. ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅಕ್ಷತಾ ಅವರು ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದವರು. ಚಂದ್ರಗುತ್ತಿ ಗ್ರಾಮದ ಸಂತೋಪ್ ಜೊತೆ ಅಕ್ಷತಾ ಅವರ ಮದುವೆ ಆಗಿತ್ತು. ಹೊಟ್ಟೆನೋವು ತಾಳಲಾರದೆ ಸೊರಬ ಪಟ್ಟಣದ ವಿದ್ಯುತ್ ನಗರದ ಮನೆಯಲ್ಲಿ ಅಕ್ಷತಾ ಆತ್ಮಹತ್ಯೆ

ಬ್ಯೂಟಿಷಿಯನ್ ಅಕ್ಷತಾ ಆತ್ಮಹತ್ಯೆಗೆ ಶರಣು Read More »

ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಏಳು ನವಜಾತು ಶಿಶುಗಳು ಮೃತ್ಯು

ನವದೆಹಲಿ: ಆಸ್ಪತ್ರೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಏಳು  ನವಜಾತ ಶಿಶುಗಳು ಮೃತಪಟ್ಟ ಘಟನೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ನಗರದಲ್ಲಿ  ನಡೆದಿದೆ. ಈ ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಚಿಕಿತ್ಸೆಗೆಂದು ದಾಖಲು ಮಾಡಲಾಗಿತ್ತು. ಆದರೆ ರಾತ್ರಿ 11:32ರ ಸುಮಾರಿಗೆ ಕಟ್ಟಡದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 7 ನವಜಾತ ಶಿಶುಗಳು ಮೃತಪಟ್ಟಿವೆ. ಅಲ್ಲದೇ ಮೊದಲ ಮಹಡಿಯಲ್ಲಿದ್ದ 12 ಶಿಶುಗಳನ್ನು ರಕ್ಷಣೆ ಮಾಡಲಾಗಿದೆ. 5 ಮಕ್ಕಳಿಗೆ ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಏಳು ನವಜಾತು ಶಿಶುಗಳು ಮೃತ್ಯು Read More »

ಟ್ರಕ್-ಕಾರು ಭೀಕರ ಅಪಘಾತ : ಐವರು ಸ್ಥಳದಲ್ಲೇ ಮೃತ್ಯು

ಹಾಸನ: ಕಾರು ಹಾಗೂ ಟ್ರಕ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಬಾಲಕ ಚೇತನ್, ಡ್ರೈವರ್ ರಾಕೇಶ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಮೃತರು ಹೊಸಕೋಟೆ ತಾಲ್ಲೂಕಿನ, ಅಂದರಹಳ್ಳಿ ಹಾಗೂ ದೇವನಹಳ್ಳಿ ಬಳಿಯ ಕಾರಹಳ್ಳಿ ಮೂಲದವರು ಎನ್ನಲಾಗಿದೆ. ಇಬ್ಬರು ಮಹಿಳೆ, ಮೂವರು ಪುರುಷರು, ಒಂದು ಮಗು ಕೂಡ ಮೃತಪಟ್ಟಿದೆ. ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಕುಟುಂಬ ತೆರಳಿತ್ತು.

ಟ್ರಕ್-ಕಾರು ಭೀಕರ ಅಪಘಾತ : ಐವರು ಸ್ಥಳದಲ್ಲೇ ಮೃತ್ಯು Read More »

error: Content is protected !!
Scroll to Top