ಸುಳ್ಯ: ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ; ಚಾಲಕನಿಗೆ ಗಾಯ

ಸುಳ್ಯ : ಇಲ್ಲಿನ ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಗೂನಡ್ಕ ಬಳಿ ಸುಳ್ಯದಿಂದ ಕಲ್ಲಗುಂಡಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿದೆ. ಓಮ್ನಿ ಕಾರು ಲಾರಿ ಅಡಿಯಲ್ಲಿ ಸಿಲುಕಿಕೊಂಡಿತ್ತು. ಆದರೆ, ಅಪಘಾತದ ಸಮಯದಲ್ಲಿ ಕಾರು ಚಾಲಕ ಹತ್ತಿರದ ಅಂಗಡಿಯಲ್ಲಿ ನಿಂತಿದ್ದರಿಂದ ಪಾರಾಗಿದ್ದಾರೆ. […]

ಸುಳ್ಯ: ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಲಾರಿ; ಚಾಲಕನಿಗೆ ಗಾಯ Read More »

ಪುತ್ತೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ನಗರದ ಗ್ರಾಮಗಳಾದ ಬಲ್ನಾಡು, ಆರ್ಯಾಪು, ಇರ್ದೆ, ಬೆಟ್ಟಾಂಪಾಡಿ, ಕೆಮ್ಮಿಂಜೆ, ಪುತ್ತೂರು, ಕಸಬ, ಕೊಡಿಪ್ಪಾಡಿ ಗ್ರಾಮಗಳನ್ನು ಒಳಗೊಂಡ ಪುತ್ತೂರು ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಪುತ್ತೂರು ಗೌಡ ಸಮುದಾಯ ಭವನ ತೆಂಕಿಲದಲ್ಲಿ ನಡೆಯಿತು. ಅಧ್ಯಕ್ಷರಾಗಿ ದಾಮೋದರ ಗೌಡ ಗೆಣಸಿನಕುಮೆರ್, ಪ್ರದಾನ ಕಾರ್ಯದರ್ಶಿಯಾಗಿ ಸತೀಶ್ ಗೌಡ ತೆಂಕಿಲ, ಕ್ರೀಡಾ ಕಾರ್ಯದರ್ಶಿಯಾಗಿ ಸುರೇಶ್ ಗೌಡ ಸರಳಿಕಾನ ಅವರನ್ನು ಆಯ್ಕೆ ಮಾಡಲಾಯಿತು. ಪುತ್ತೂರು ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಗೌರವ ಅಧ್ಯಕ್ಷರಾಗಿ ಧೀರಜ್

ಪುತ್ತೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ Read More »

ರಾಜ್ಯವನ್ನು ಬೆಚ್ಚಿಬೀಳಿಸಿದ ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಘಟನೆ

ತುಂಬು ಗರ್ಭಿಣಿ ಮಗಳನ್ನು ಗುದ್ದಲಿಯಿಂದ ಹೊಡೆದು ಕೊಂದ ತಂದೆ ಬೆಂಗಳೂರು : ಅನ್ಯ ಜಾತಿಯ ಯುವಕನನ್ನು ಮದುವೆಯಾದ ಮಗಳನ್ನು ತಂದೆಯೇ ಬರ್ಬರವಾಗಿ ಕೊಲೆ ಮಾಡಿರುವ ಮರ್ಯಾದಾ ಹತ್ಯೆ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದ್ದು, ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇನಾಂವೀರಾಪುರ ಗ್ರಾಮದ ಮಾನ್ಯಾ (19) ಹತ್ಯೆಯಾದ ಯುವತಿ. ಈಕೆ ಅದೇ ಗ್ರಾಮದ ವಿವೇಕಾನಂದ ಎಂಬವನನ್ನು ಪ್ರೀತಿಸಿ ಮದುವೆಯಾಗಿದ್ದಳು. ಯುವಕ ಅನ್ಯಜಾತಿಯವನು ಎಂಬ ಕಾರಣಕ್ಕೆ ಆಕೆಯ ತಂದೆ ಪ್ರಕಾಶಗೌಡ ಮನೆಗೆ ನುಗ್ಗಿ, ಮಗಳು 7 ತಿಂಗಳ ಗರ್ಭಿಣಿ

ರಾಜ್ಯವನ್ನು ಬೆಚ್ಚಿಬೀಳಿಸಿದ ಹುಬ್ಬಳ್ಳಿಯ ಮರ್ಯಾದಾ ಹತ್ಯೆ ಘಟನೆ Read More »

ಹಾವು ಕಡಿತದಿಂದ ಮಹಿಳೆ ಸಾವು

ಬೆಳ್ತಂಗಡಿ: ಶಿಶಿಲ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಯೊಬ್ಬರು ಹಾವಿನ ಕಡಿತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಡಿ. 21ರಂದು ನಡೆದಿದೆ. ಇಲ್ಲಿನ ಗುಡ್ಡೆತೋಟ ನಿವಾಸಿ ಪ್ರೇಮ ( ವ. 55) ಮೃತ ಮಹಿಳೆ. ಮಧ್ಯಾಹ್ನದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಇವರಿಗೆ ನಾಗರಹಾವು ಕಡಿದಿದೆ. ಹಾವು ಕಡಿದ ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆಶೌರ್ಯ ವಿಪತ್ತು ತಂಡದ ಸದಸ್ಯರ ಸಹಾಯದೊಂದೊಂದಿಗೆ ಕರೆದೋಯ್ಯಲಾಯಿತಾದರೂ ವಿಷ ವಿಪರೀತ ಅವರಿಸಿರುವ ಕಾರಣ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಾವು ಕಡಿತದಿಂದ ಮಹಿಳೆ ಸಾವು Read More »

ಬಿಸಿಯೂಟ, ಹಾಲು, ಮೊಟ್ಟೆ ಪಿಯುಸಿ ತನಕ ವಿಸ್ತರಣೆ : ಮಧು ಬಂಗಾರಪ್ಪ

ಪಠ್ಯಪುಸ್ತಕ, ಶೂ, ಸಾಕ್ಸ್‌ ಸಹಿತ ಎಲ್ಲ ಸೌಲಭ್ಯ ಕೊಡಲು ನಿರ್ಧಾರ ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12ನೇ ತರಗತಿ ವರೆಗಿನ ಸರಕಾರಿ ಶಾಲೆಯ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಇದಲ್ಲದೆ ಪಠ್ಯಪುಸ್ತಕ, ಶೂ, ಸಾಕ್ಸ್‌, ಹಾಲು, ಮೊಟ್ಟೆ ಸೇರಿ ಎಲ್ಲ ಸೌಲಭ್ಯವನ್ನು ಪಿಯುಸಿ ತನಕ ವಿಸ್ತರಿಸುತ್ತೇವೆ ಎಂದಿದ್ದಾರೆ. ಪ್ರಸ್ತುತ ನೀಡುತ್ತಿರುವ ಬಿಸಿಯೂಟದಿಂದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಇದರಿಂದ ಹೆಚ್ಚುವರಿಯಾಗಿ 200 ಕೋಟಿ ರೂ. ವೆಚ್ಚವಾಗಲಿದೆ. ಇದು

ಬಿಸಿಯೂಟ, ಹಾಲು, ಮೊಟ್ಟೆ ಪಿಯುಸಿ ತನಕ ವಿಸ್ತರಣೆ : ಮಧು ಬಂಗಾರಪ್ಪ Read More »

ಕೇಪು ಕೋಳಿಅಂಕ ಅಖಾಡಕ್ಕೆ ಬಿಜೆಪಿ ಎಂಟ್ರಿ : ರಾಜಕೀಯ ಮೇಲಾಟ

ಮಾಜಿ ಶಾಸಕರ ಸಹಿತ 27 ಮಂದಿಯ ವಿರುದ್ಧ ಕೇಸ್‌ ದಾಖಲು ವಿಟ್ಲ: ಕೇಪು ಉಳ್ಳಾಲ್ತಿ ಕಜಂಬು ಉತ್ಸವದಂಗವಾಗಿ ನಡೆಯುವ ಕೋಳಿಅಂಕದ ವಿವಾದ ಈಗ ರಾಜಕೀಯ ಮೇಲಾಟವಾಗಿ ಬದಲಾಗಿದೆ. ಶನಿವಾರ ಶಾಸಕ ಅಶೋಕ್‌ ರೈಯವರು ತಾನೇ ಮುಂದೆ ನಿಂತು ಕೋಳಿಅಂಕ ಮಾಡಿಸಿದ ಬಳಿಕ ಭಾನುವಾರ ಬಿಜೆಪಿಯವರು ಕೋಳಿಅಂಕ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಭಾನುವಾರವೂ ಕೋಳಿಅಂಕ ನಡೆದಿದ್ದು, ಈ ಕೋಳಿಅಂಕಕ್ಕೆ ಬಿಜೆಪಿ ನಾಯಕರು ರಕ್ಷಣೆ ಕೊಟ್ಟಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ

ಕೇಪು ಕೋಳಿಅಂಕ ಅಖಾಡಕ್ಕೆ ಬಿಜೆಪಿ ಎಂಟ್ರಿ : ರಾಜಕೀಯ ಮೇಲಾಟ Read More »

ಕುಕ್ಕೆ ಕಿರುಷಷ್ಠಿ ಉತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ

ಸರ್ಕಾರದ ಶಿಷ್ಟಾಚಾರದಂತೆ ಆಹ್ವಾನ ಪತ್ರದಲ್ಲಿ ಅನ್ಯಧರ್ಮದ ಜನಪ್ರತಿನಿಧಿಗಳ ಹೆಸರು ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರದಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಇಂದಿನಿಂದ ಡಿ.26ರವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ. ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದು ಸರಿಯಲ್ಲ, ತಕ್ಷಣ ಅದನ್ನ ತಡೆಯಬೇಕೆಂದು ಕ್ಷೇತ್ರ ಸಂರಕ್ಷಣಾ ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ. ಆಹ್ವಾನ ವಾಪಸ್ ಪಡೆಯದೇ ಇದ್ದರೆ ಡಿ.22ರಂದು ಆಡಳಿತ ಕಚೇರಿ

ಕುಕ್ಕೆ ಕಿರುಷಷ್ಠಿ ಉತ್ಸವಕ್ಕೆ ಅನ್ಯಧರ್ಮೀಯರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ Read More »

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್‌ ವಶ

ಜೇನುಕೃಷಿ ಕಲಿಸುವ ನೆಪದಲ್ಲಿ ಮನೆಗೆ ಕರೆದೊಯ್ದು ಅತ್ಯಾಚಾರ ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಫಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಗಫೂರ್ ವಶವಾಗಿರುವ ಆರೋಪಿ. ಪ್ರಕರಣದ ದೂರುದಾರರಾದ ಬೆಳಗಾವಿ ಮೂಲದ ಮಹಿಳೆ ತನ್ನ ಗಂಡ ಹಾಗೂ ಅಪ್ರಾಪ್ತ ಪ್ರಾಯದ ಮಗಳೊಂದಿಗೆ ಕೆಲಸದ ನಿಮಿತ್ತ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದಾರೆ. ಆರೋಪಿ ಅಬ್ದುಲ್ ಗಫೂರ್ ಮಗಳಿಗೆ ಜೇನು ಕೃಷಿ ಕಲಿಸುತ್ತೇನೆಂದು ಹೇಳಿದ್ದು, ಅದರಂತೆ

ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್‌ ವಶ Read More »

ಮೊಟ್ಟೆಯಲ್ಲಿಲ್ಲ ಕ್ಯಾಕ್ಸರ್‌ಕಾರಕ ಅಂಶ : ಎಫ್‌ಎಸ್‌ಎಸ್‌ಎಐ

ಮಾಧ್ಯಮಗಳಲ್ಲಿ ಹರಿದಾಡಿರುವುದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನವದೆಹಲಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಇಲ್ಲ, ಈ ಬಗ್ಗೆ ಯಾವುದೇ ಆತಂಕದ ಅಗತ್ಯವಿಲ್ಲ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ತಿಳಿಸಿದೆ. ಮೊಟ್ಟೆಗಳಲ್ಲಿ ಕ್ಯಾನ್ಸರ್‌ಕಾರಕ ನೈಟ್ರೋಪ್ಯೂರಾನ್ ಅಂಶ ಪತ್ತೆಯಾಗಿರುವುದಾಗಿ ಯೂಟ್ಯೂಬ್‌ ಚಾನಲ್‌ನಲ್ಲಿ ಒಂದರಲ್ಲಿ ಹೇಳಲಾಗಿತ್ತು. ಇದರ ಬೆನ್ನಲ್ಲೇ ಹಲವು ವಿಧದ ಮೊಟ್ಟೆಗಳ ಪರೀಕ್ಷೆ ನಡೆಸಿರುವ ಎಫ್‌ಎಸ್‌ಎಸ್‌ಎಐ, ಇದು ಜನರ ದಾರಿತಪ್ಪಿಸುವ ವರದಿಯಾಗಿದೆ. ಆ ಆರೋಪಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. 2011ರ ಆಹಾರ

ಮೊಟ್ಟೆಯಲ್ಲಿಲ್ಲ ಕ್ಯಾಕ್ಸರ್‌ಕಾರಕ ಅಂಶ : ಎಫ್‌ಎಸ್‌ಎಸ್‌ಎಐ Read More »

ಕೊಲ್ಲೂರು ದೇವಳದ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ

ಭಕ್ತಿರಿಗೆ ಲಕ್ಷಗಟ್ಟಲೆ ರೂ. ವಂಚಿಸಿದ್ದ ರಾಜಸ್ಥಾನದ ನಾಸೀರ್‌ ಹುಸೇನ್‌ ಉಡುಪಿ : ಕೊಲ್ಲೂರು ದೇಗುಲದ ನಕಲಿ ವೆಬ್‌ಸೈಟ್ ಸೃಷ್ಟಿಸಿ ಭಕ್ತರನ್ನು ವಂಚಿಸುತ್ತಿದ್ದ ರಾಜಸ್ಥಾನದ ನಾಸೀರ್ ಹುಸೇನ್ ಎಂಬಾತನನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನಾಸಿರ್‌ ಹುಸೇನ್‌ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ರೂಮ್ ಬುಕ್ಕಿಂಗ್ ಹೆಸರಲ್ಲಿ ಭಕ್ತರಿಗೆ ಟೋಪಿ ಹಾಕುತ್ತಿದ್ದ. ​ದೇವಸ್ಥಾನದ ಅಧಿಕೃತ ವೆಬ್‌ಸೈಟ್‌ನಂತೆಯೇ ಕಾಣುವ ನಕಲಿ ಸೈಟ್ ಸೃಷ್ಟಿ ಮಾಡಿ ಭಕ್ತರಿಂದ ಆನ್‌ಲೈನ್‌ ಮೂಲಕ ಮುಂಗಡ ಹಣ ಪಡೆದು ನಕಲಿ

ಕೊಲ್ಲೂರು ದೇವಳದ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚಿಸಿದ ಆರೋಪಿ ಬಂಧನ Read More »

error: Content is protected !!
Scroll to Top