ಶಾಸಕ ಹರೀಶ್ ಪೂಂಜ ಬಂಧನ ಸಾಧ್ಯತೆ | ವಕೀಲರ ತಂಡ ಭೇಟಿ

ಬೆಳ್ತಂಗಡಿ : ಹರೀಶ್ ಪೂಂಜ ಬಂಧನ ಸಾಧ್ಯತೆಯಿದ್ದು, ಈ ಹಿನ್ನಲೆಯಲ್ಲಿ ಹರೀಶ್ ಪೂಂಜ ಅವರ ನಿವಾಸಕ್ಕೆ ವಕೀಲರ ತಂಡ ಇಂದು ಭೇಟಿ ನೀಡಿದೆ. ಶಾಸಕ ಹರಿಶ್ ಪೂಂಜ ನಿವಾಸಕ್ಕೆ ಬೇಟಿ ನೀಡಿರುವ ವಕೀಲರ ತಂಡ ಪೊಲೀಸರ ಜೊತೆ ಮಾತುಕತೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯು ನಡೆಯುತ್ತಿದೆ ಎನ್ನಲಾಗಿದೆ.

ಶಾಸಕ ಹರೀಶ್ ಪೂಂಜ ಬಂಧನ ಸಾಧ್ಯತೆ | ವಕೀಲರ ತಂಡ ಭೇಟಿ Read More »

ಮೇ.25 : ಖ್ಯಾತ ಕೃಷಿ ಉಪಕರಣಗಳ  ತಯಾರಿಕಾ ಸಂಸ್ಥೆ “ಎಸ್.ಆರ್.ಕೆ. ಲ್ಯಾಡರ್ಸ್” ನ ರಜತ ಸಂಭ್ರಮದ ಸಮಾರೋಪ ಸಮಾರಂಭ | ನಿರಂತರ 12 ಗಂಟೆಗಳ ಕಾಲ ಮೇಳೈಸಲಿದೆ ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಕೇಶವ ಅಮೈ

ಪುತ್ತೂರು: ಖ್ಯಾತ ಕೃಷಿ ಉಪಕರಣಗಳ ತಯಾರಿಕಾ ಸಂಸ್ಥೆ ಎಸ್‍ ಆರ್‍ ಕೆ. ಲ್ಯಾಡರ್ಸ್ ನ ರಜತ ಸಂಭ್ರಮದ ಸಮಾರೋಪ ಸಮಾರಂಭ ವಿವಿಧ ಸಾಂಸ್ಕೃತಿ ಹಾಗೂ ಸಭಾ ಕಾರ್ಯಕ್ರಮದೊಂದಿಗೆ ವಿಜೃಂಭಣೆಯಿಂದ ಕಡಬ ತಾಲೂಕಿನ ಕೊಯಿಲ ಗ್ರಾಮದ ಕಲಾಯಿಗುತ್ತುವಿನಲ್ಲಿ ನಡೆಯಲಿದೆ ಎಂದು ಎಸ್‍ ಆರ್‍ ಕೆ. ಲ್ಯಾಡರ್ಸ್ ಸಂಸ್ಥೆಯ ಮಾಲಕ ಕೇಶವ ಅಮೈ ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಸ್ಥೆ 24 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ನವೆಂಬರ್ 2023 ಕ್ಕೆ ಸಂಸ್ಥೆಯ ರಜತ ಸಂಭ್ರಮಕ್ಕೆ ಕಾಲಿಟ್ಟಿದೆ. ಈ ನಿಟ್ಟಿನಲ್ಲಿ

ಮೇ.25 : ಖ್ಯಾತ ಕೃಷಿ ಉಪಕರಣಗಳ  ತಯಾರಿಕಾ ಸಂಸ್ಥೆ “ಎಸ್.ಆರ್.ಕೆ. ಲ್ಯಾಡರ್ಸ್” ನ ರಜತ ಸಂಭ್ರಮದ ಸಮಾರೋಪ ಸಮಾರಂಭ | ನಿರಂತರ 12 ಗಂಟೆಗಳ ಕಾಲ ಮೇಳೈಸಲಿದೆ ಸಾಂಸ್ಕೃತಿಕ ಕಾರ್ಯಕ್ರಮ : ಪತ್ರಿಕಾಗೋಷ್ಠಿಯಲ್ಲಿ ಕೇಶವ ಅಮೈ Read More »

ಪ್ಲಾಸ್ಟಿಕ್ ಬಳಕೆ ಪರಿಶೀಲನೆ | ವಿವಿಧ ಅಂಗಡಿ ಮಳಿಗೆಗೆ ದಾಳಿ ಮಾಡಿದ ನಗರಸಭೆ

ಪುತ್ತೂರು: ಪ್ಲಾಸ್ಟಿಕ್ ಬಳಕೆ ಪರಿಶೀಲನೆ ಕುರಿತು ವಿವಿಧ ವಾಣಿಜ್ಯ ಮಳಿಗೆಗಳಿಗೆ ನಗರಸಭೆ ಇಂದು ದಾಳಿ ಮಾಡಿದೆ. ಕೋರ್ಟ್ ರೋಡ್, ಮುಖ್ಯ ರಸ್ತೆ ಹಾಗೂ ದರ್ಬೆಯ ಕೆಲವು ಅಂಗಡಿ ಮಳಿಗೆಗೆ ದಾಳಿ ಮಾಡಿದ ಅಧಿಕಾರಿಗಳು ವಿವಿಧ ಅಂಗಡಿ ಮಳಿಗೆಗಳಿಂದ ಸುಮಾರು 40 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರಸಭಾ ಸಹಾಯಕ ಕಾರ್ಯಪಾಲಕ ಅಭಿಯಂತರ ಶಬರಿನಾಥ್ ರೈ, ಕಂದಾಯ ಅಧಿಕಾರಿ ಪಕೀರ ಮೂಲ್ಯ, ಹಿರಿಯ ಆರೋಗ್ಯ ನಿರೀಕ್ಷಕ ರಾಮಚಂದ್ರ ಕೆ, ಕಂದಾಯ ವಿಭಾಗದ ಸಿಬ್ಬಂದಿ ಪುರುಷೋತ್ತಮ್ ಹಾಗೂ ಸ್ವಚ್ಛತಾ

ಪ್ಲಾಸ್ಟಿಕ್ ಬಳಕೆ ಪರಿಶೀಲನೆ | ವಿವಿಧ ಅಂಗಡಿ ಮಳಿಗೆಗೆ ದಾಳಿ ಮಾಡಿದ ನಗರಸಭೆ Read More »

ಅಗತ್ಯ ಔಷಧಿಗಳ ದರ ಇಳಿಸಿದ ಕೇಂದ್ರ ಸರಕಾರ

ದೆಹಲಿ: ಅಗತ್ಯ ಔಷಧಿಗಳ ಬೆಲೆಯನ್ನು ಕೇಂದ್ರ ಸರಕಾರ ಕಡಿಮೆ ಮಾಡಿದೆ. ಕೇಂದ್ರವು ಹೃದ್ರೋಗದಿಂದ ಮಧುಮೇಹ ಮತ್ತು ಆರು ಸೂತ್ರೀಕರಣಗಳವರೆಗೆ ಸಾಮಾನ್ಯವಾಗಿ ವರದಿಯಾದ 41 ಕಾಯಿಲೆಗಳಿಗೆ ಔಷಧಿಗಳ ಬೆಲೆಗಳನ್ನು ಕಡಿಮೆ ಮಾಡಿದೆ. ಫಾರ್ಮಾಸ್ಯುಟಿಕಲ್ಸ್ ಇಲಾಖೆ ಮತ್ತು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರವು ಹೊಸ ಮಿತಿಯನ್ನು ಪ್ರಕಟಿಸಿದ ನಂತರ ಕೇಂದ್ರವು ಬೆಲೆಯನ್ನು ಕಡಿಮೆ ಮಾಡಿದೆ. ಮಲ್ಟಿವಿಟಾಮಿನ್‌ಗಳು ಮತ್ತು ಪ್ರತಿಜೀವಕಗಳ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಮಧುಮೇಹ, ದೇಹದ ನೋವು, ಹೃದಯರಕ್ತನಾಳದ ಕಾಯಿಲೆಗಳು, ಪಿತ್ತಜನಕಾಂಗದ ತೊಂದರೆಗಳು, ಆಂಟಾಸಿಡ್‌ಗಳು, ಸೋಂಕುಗಳು, ಅಲರ್ಜಿಗಳು ಇತ್ಯಾದಿಗಳಿಗೆ ಔಷಧಿಗಳ

ಅಗತ್ಯ ಔಷಧಿಗಳ ದರ ಇಳಿಸಿದ ಕೇಂದ್ರ ಸರಕಾರ Read More »

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ | ಪ್ರಮುಖ ಆರೋಪಿಗಳಿಗೆ ಹಣ ಸಹಾಯ ಮಾಡಿದ ಸಹೋದರರು ಎನ್ ಐ ಎ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಹುಬ್ಬಳ್ಳಿಯಲ್ಲಿ ಇಬ್ಬರು ಸಹೋದರರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿಯ ಗೌಸಿಯಾ ಟೌನ್ ನಿವಾಸಿ ಸಾಫ್ಟ್ವೇರ್ ಇಂಜಿನಿಯರ್ ಶೋಯೆಬ್ ಮಿರ್ಜಾ ಹಾಗೂ ಆತನ ಸಹೋದರ ಅಜೀಬ್ ಸದ್ಯ ಎನ್ಐಎ ವಶದಲ್ಲಿದ್ದು, ಇವರಿಬ್ಬರೂ ವಿದೇಶಿ ಹ್ಯಾಂಡ್ಲರ್ಗಳ ಸೂಚನೆಯಂತೆ ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಹಾಗೂ ಮುಸಾವೀರ್ ಹುಸೇನ್ ಗೆ ಹಣ ಸಹಾಯ ಮಾಡಿದ್ದಾರೆ ಎಂಬ ಮಾಹಿತಿ ಎನ್ಐಎ ಅಧಿಕಾರಿಗಳಿಗೆ

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ | ಪ್ರಮುಖ ಆರೋಪಿಗಳಿಗೆ ಹಣ ಸಹಾಯ ಮಾಡಿದ ಸಹೋದರರು ಎನ್ ಐ ಎ ವಶಕ್ಕೆ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಬೆಳ್ತಂಗಡಿ: ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ತಾಲೂಕು ಕಚೇರಿ ಎದುರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಅರೆಸ್ಟ್ ಆಗಿರುವ ಕಾರ್ಯಕರ್ತರಿಗಾಗಿ ಪೊಲೀಸರ ಕಾಲರ್ ಹಿಡಿಯಲು ಸಿದ್ದ, ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯ ಪೊಲೀಸ್ ಠಾಣೆಗೆ ಆದ ಗತಿಯನ್ನು ಬೆಳ್ತಂಗಡಿ ಠಾಣೆಗೂ ಕಾಣಿಸುತ್ತೇನೆಂದು ಬೆದರಿಕೆ ಹಾಕಿದ್ದರು. ಇದೀಗ ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಮತ್ತೊಂದು ಪ್ರಕರಣ ದಾಖಲು Read More »

ಹೃದಯಾಘಾತದಿಂದ  ಮೃತ್ಯು : ಸಿಡಿಲಾಘಾತ ಶಂಕೆ

ಪುತ್ತೂರು : ಹೃದಯಾಘಾತದಿಂದ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕ ನಿವಾಸಿ ಪಿ.ಬಾಬು (55) ಮೃತಪಟ್ಟಿದ್ದಾರೆ. ಬಾಬು ಅವರು ಮನೆಯ ಹೊರಗೆ ಮಳೆಯಲ್ಲಿ ಕೆಲಸ ಮಾಡಿ ಬಳಿಕ ಒಳ ಹೋದವರು ನೀರು ಕುಡಿದ ತಕ್ಷಣ ಹೃದಯಾಘಾತವಾಗಿ ಮೃತಪಟ್ಟರು ಎನ್ನಲಾಗಿದೆ. ಸಿಡಿಲಾಘಾತ ಶಂಕೆ : ಬಾಬು ಅವರು ಮನೆಯ ಹೊರಗೆ ಮಳೆಯಲ್ಲಿ ಕೆಲಸ ಮಾಡುತ್ತಿದ್ದು, ಸಿಡಿಲಾಘಾತದಿಂದ ಮೃತಪಟ್ಟಿದ್ದರು ಎಂದು ಮೊದಲು ಸುದ್ದಿಯಾಗಿತ್ತು. ವೈದ್ಯಕೀಯ ರಿಪೋರ್ಟ್ ಬಂದ ಬಳಿಕವಷ್ಟೇ  ತಿಳಿದುಬರಬೇಕಿದೆ ಎಂದು ತಹಶೀಲ್ದಾರ್ ಕುಂಞಿ ಅಹಮ್ಮದ್ ತಿಳಿಸಿದ್ದಾರೆ.

ಹೃದಯಾಘಾತದಿಂದ  ಮೃತ್ಯು : ಸಿಡಿಲಾಘಾತ ಶಂಕೆ Read More »

ಕಾರಿನ ಮೇಲೆ ಮರ ಬಿದ್ದು ಕಾರು ಜಖಂ : ಇಬ್ಬರಿಗೆ ಗಾಯ

ವಿಟ್ಲ: ಚಲಿಸುತ್ತಿದ್ದಕಾರಿಮ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕುಕ್ಕರಬಟ್ಟುವಿನಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಂಗಳೂರು ಮೂಲಕ ಕಾರು ಇದಾಗಿದ್ದು, ನಾಲ್ವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮೈಸೂರು ಕಡೆಗೆ ತೆರಳುತ್ತಿದ್ದಾಗ ಈ ಮರ ಕಾರಿನ ಮೇಲೆ ಬಿದ್ದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನ ಮೇಲೆ ಮರ ಬಿದ್ದು ಕಾರು ಜಖಂ : ಇಬ್ಬರಿಗೆ ಗಾಯ Read More »

ಪುತ್ತೂರಿನಲ್ಲಿ ಯಶಸ್ವಿಯಾಗಿ ನಡೆದ ಕೆ-ಸಿಇಟಿ ವಿದ್ಯಾಮೃತ ತರಬೇತಿ ಕಾರ್ಯಾಗಾರ

ಪುತ್ತೂರು: ಪುತ್ತೂರಿನ ರೈ ಎಸ್ಟೇಟ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬೆಂಗಳೂರಿನ ಬಿಎಸ್‍ ಎಂ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ, ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ವಿದ್ಯಾರ್ಥಿ ಮಂದಿರಂ, ವಿಕಸನ ಫೌಂಡೇಶನ್, ಟಿಸಿಹೆಚ್‍ ಆರ್‍ ಆ್ಯಪ್‍, ವಿವೇಕ ವಿದ್ಯಾವಾಹಿನಿ ಟ್ರಸ್ಟ್ ಹಾಗೂ ಸ್ವಾಮಿ ವಿವೇಕಾನಂದ ಶ್ರೇಷ್ಠ ಭಾರತ ಪ್ರತಿಷ್ಠಾನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಕೆ-ಸಿಇಟಿ ವಿದ್ಯಾಮೃತ ತರಬೇತಿ ಕಾರ್ಯಾಗಾರ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಹತ್ತು ದಿನಗಳ ಆಫ್‍ ಲೈನ್ ಅಂಡ್ ಹಾಗೂ 15

ಪುತ್ತೂರಿನಲ್ಲಿ ಯಶಸ್ವಿಯಾಗಿ ನಡೆದ ಕೆ-ಸಿಇಟಿ ವಿದ್ಯಾಮೃತ ತರಬೇತಿ ಕಾರ್ಯಾಗಾರ Read More »

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ  ಸಿದ್ಧರಾಮಯ್ಯ

ಬೆಳ್ತಂಗಡಿ: ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಮಂಗಳವಾರ ಮಾಜಿ ಸಚಿವ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು. ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದರು. ಸತ್ಯ,

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿ.ಎಂ  ಸಿದ್ಧರಾಮಯ್ಯ Read More »

error: Content is protected !!
Scroll to Top