ಮೇ 23 : ವಿವಾ ಕಿಸಾನ್ ಕಿಂಗ್ ಸಾವಯವ ಗೊಬ್ಬರ ಹಾಗೂ ಸಾವಯವ ಕೃಷಿ ಮಾಹಿತಿ ಕಾರ್ಯಗಾರ

ಪುತ್ತೂರು: ಕೆಯ್ಯೂರು ಡಾ.ಪಿ.ಬಿ.ರೈ ಪ್ರತಿಷ್ಥಾನ ಹಾಗೂ ಪವಿತ್ರ ನೆಲ್ಯಾಡಿ ವಿವಾ ಎಂಟರ್ ಪ್ರೈಸಸ್ ಜಂಟಿ ಆಶ್ರಯದಲ್ಲಿ ವಿವಾ ಕಿಸಾನ್ ಕಿಂಗ್ ಸಾವಯವ ಗೊಬ್ಬರ ಹಾಗೂ ಸಾವಯವ ಕೃಷಿ ಮಾಹಿತಿ ಕಾರ್ಯಗಾರ ಮೇ 23 ಗುರುವಾರ ಬೆಳಿಗ್ಗೆ 10 ಕ್ಕೆ ಪುತ್ತೂರು ಬಂಟರ ಭವನದಲ್ಲಿ ನಡೆಯಲಿದೆ ಎಂದು ಪಿ.ಬಿ.ರೈ ಪ್ರತಿಷ್ಠಾನದ ಗೌರವಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿವಾ ಕಿಸಾನ್ ಕಿಂಗ್ ಅಡಕೆ, ತೆಂಗು ಸೇರಿದಂತೆ ಪ್ರತಿಯೊಂದು ಬೆಳೆಗಳಿಗೆ ಉತ್ತಮ ಸಾವಯವ ಔಷಧಿಯ […]

ಮೇ 23 : ವಿವಾ ಕಿಸಾನ್ ಕಿಂಗ್ ಸಾವಯವ ಗೊಬ್ಬರ ಹಾಗೂ ಸಾವಯವ ಕೃಷಿ ಮಾಹಿತಿ ಕಾರ್ಯಗಾರ Read More »

ಪತಿಯಿಂದ ಪತ್ನಿಯ ಹತ್ಯೆ

ಮೈಸೂರು: ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರದ ತುರಗನೂರು ಗ್ರಾಮದಲ್ಲಿ ನಡೆದಿದೆ. ಮೈಸೂರು  ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿದ್ಯಾ ಕೊಲೆಯಾದ ದುರ್ದೈವಿಯಾಗಿದ್ದು, ಕೌಟುಂಬಿಕ ಕಲಹ ಹಿನ್ನೆಲೆ ಗಂಡನೇ ವಿದ್ಯಾಳ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ ಮೃತ ವಿದ್ಯಾ ಅವರು ಭಜರಂಗಿ, ವಜ್ರಕಾಯ ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಕಾಂಗ್ರೆಸ್‌ ಪಕ್ಷದಲ್ಲೂ ಸಕ್ರೀಯವಾಗಿದ್ದರು. ಸೋಮವಾರ ರಾತ್ರಿ ಗಂಡ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು

ಪತಿಯಿಂದ ಪತ್ನಿಯ ಹತ್ಯೆ Read More »

155 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರು ನಗರದ ಅತೀ ಪ್ರಾಚೀನ ನೆಲ್ಲಿಕಟ್ಟೆ ಶಾಲೆಗೆ ಬೇಕಿದೆ ಮೂಲಭೂತ ಸೌಕರ್ಯ| ಪ್ರಮುಖ ಬೇಡಿಕೆಗಳಲ್ಲಿ ಒಂದಾದ ನೂತನ ಕಟ್ಟಡದ ಅವಶ್ಯಕತೆ ಹೊಂದಿರುವ ಶಾಲೆ

ಪುತ್ತೂರು:  ನಗರದಲ್ಲಿ 155 ವರ್ಷಗಳ ಇತಿಹಾಸ ಹೊಂದಿರುವ ಶಾಲೆಯೊಂದು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಎಲ್ಲಾ ವಿಧದಲ್ಲೂ ಅಭಿವೃದ್ಧಿಯಾಗಬೇಕಿದೆ. ನಗರದ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪುತ್ತೂರಿನ ಪ್ರಾಚೀನ ಶಾಲೆಗಳ ಪೈಕಿ ಮೊದಲ ಶಾಲೆಯಾಗಿದೆ. ಸುಮಾರು 3.5 ಎಕ್ರೆ ಜಾಗದ ಒಂದು ಬದಿಯಲ್ಲಿ ಈ ಶಾಲೆಯಿದ್ದು, ನೆಲ್ಲಿಕಟ್ಟೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯೆಂದೇ ಪ್ರಸಿದ್ಧಿ ಪಡೆದಿದೆ. ಒಂದು ಕಾಲದಲ್ಲಿ ವಿದ್ಯಾರ್ಜನೆಗೆ ಹೆಸರುವಾಸಿಯಾಗಿತ್ತು. ಅದೆಷ್ಟೋ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ವಿದ್ಯಾರ್ಜನೆ

155 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರು ನಗರದ ಅತೀ ಪ್ರಾಚೀನ ನೆಲ್ಲಿಕಟ್ಟೆ ಶಾಲೆಗೆ ಬೇಕಿದೆ ಮೂಲಭೂತ ಸೌಕರ್ಯ| ಪ್ರಮುಖ ಬೇಡಿಕೆಗಳಲ್ಲಿ ಒಂದಾದ ನೂತನ ಕಟ್ಟಡದ ಅವಶ್ಯಕತೆ ಹೊಂದಿರುವ ಶಾಲೆ Read More »

ಮೇ 24,25,26 : ಪುತ್ತೂರಿನಲ್ಲಿ ಮೇಳೈಸಲಿದೆ ಹಲಸು ಮತ್ತು ಹಣ್ಣುಗಳ ಮೇಳ

ಪುತ್ತೂರು: ನವತೇಜ ಟ್ರಸ್ಟ್, ಜಿ.ಎಲ್‍.ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ 7ನೇ ವರ್ಷದ ಹಲಸು ಮತ್ತು ಹಣ್ಣುಗಳ ಮೇಳ ಮೇ. 24, 25 ಹಾಗೂ 26 ರಂದು ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ನ ಅನಂತ ಕುಮಾರ್ ನೈತಡ್ಕ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೇಳದ ಮೂಲಕ ಯಾರಿಗೂ ಬೇಡವಾದ ಹಲಸಿನ ಹಣ್ಣು ಜತೆಗೆ ಮೌಲ್ಯವರ್ಧಿತ ಉತ್ಪನ್ನಗಳಿಗೆ ಬೇಡಿಕೆ ಬರಬೇಕು ಈ ಮೂಲಕ ಆರ್ಥಿಕ ಶಕ್ತಿಯಾಗಿ ದೇಶ-ವಿದೇಶಗಳಲ್ಲಿ ಹೊರಹೊಮ್ಮುವ ನಿಟ್ಟಿನಲ್ಲಿ

ಮೇ 24,25,26 : ಪುತ್ತೂರಿನಲ್ಲಿ ಮೇಳೈಸಲಿದೆ ಹಲಸು ಮತ್ತು ಹಣ್ಣುಗಳ ಮೇಳ Read More »

ಮೇ 25 : ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ | ಮೇಳೈಸಲಿದೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು

ಕಡಬ: ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ ಮೇ 25 ಶನಿವಾರ ಮಧ್ಯಾಹ್ನ 2 ರಿಂದ ಕಡಬ ತಾಲೂಕಿನ ಕೊಯಿಲದ ಕಲಾಯಿಗುತ್ತುವಿನಲ್ಲಿ ನಡೆಯಲಿದೆ. ಮಧ್ಯಾಹ್ನ ಗಂಟೆ 2 ರಿಂದ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿ ತಂಡದಿಂದ ಕುಣಿತ ಭಜನೆ, ಮಧ್ಯಾಹ್ನ 2.30 ರಿಂದ ಮಂಗಳೂರು ಶ್ರೀ ಶಬರಿ ಸಿಂಗಾರಿ ಮೇಳದಿಂದ ಚೆಂಡೆ ವಾದನ, ಮಧ್ಯಾಹ್ನ 3 ರಿಂದ ಶೃತಿ ಗಾಯನ ಮೆಲೋಡೀಸ್ ತಂಡದಿಂದ ಸಂಗೀತ ರಸಮಂಜರಿ, ಸರಿಗಮಪ ಖ್ಯಾತಿಯ ಕುಮಾರಿ ಪ್ರಜ್ಞ ಮರಾಠೆ

ಮೇ 25 : ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ರಜತ ಸಂಭ್ರಮದ ಸಮಾರೋಪ ಸಮಾರಂಭ | ಮೇಳೈಸಲಿದೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು Read More »

ಕಂಟೈನರ್ ಹಾಗೂ ಇನ್ನೋವಾ ಡಿಕ್ಕಿ :  ತಾಯಿ, ಮಗ ಮೃತ್ಯು

ನೆಲ್ಯಾಡಿ : ಕಾರು ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ದಾರುಣವಾಗಿ ಮೃತಪಟ್ಟು, ನಾಲ್ಕೈದು ಮಂದಿ ಗಂಭೀರವಾದ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನಲ್ಲಿ ನಡೆದಿದೆ. ತಾಯಿ ಸಪೀಯಾ, ಮಗ ಸಫೀಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮದುವೆ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ತೆರಳಿದ್ದ ಬಂಟ್ವಾಳ ತಾಲೂಕಿನ ಬೊಂಡಾಲದ ಕುಟುಂಬವೊಂದು ಬೆಂಗಳೂರಿನಿಂದ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಕಾರು ಶಿರಾಡಿ ಘಾಟ್ ನ

ಕಂಟೈನರ್ ಹಾಗೂ ಇನ್ನೋವಾ ಡಿಕ್ಕಿ :  ತಾಯಿ, ಮಗ ಮೃತ್ಯು Read More »

ಭಾರೀ ಮಳೆಗೆ ಕುಸಿದ ಹಟ್ಟಿ: ಹಸು, ಕರು ಮೃತ್ಯು

ಪುತ್ತೂರು: ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದರ ದನದ ಹಟ್ಟಿಯ ಗೋಡೆ ಕುಸಿದು ಹಸು, ಕರು ಮೃತಪಟ್ಟ ಘಟನೆ ಪಡೂರು ಗ್ರಾಮದ ನೆಲಪ್ಪಾಲು ಎಂಬಲ್ಲಿ ನಡೆದಿದೆ. ಪಡೂರು ಗ್ರಾಮದ ನೆಲಪ್ಪಾಲು ಎಂಬಲ್ಲಿ ವಸಂತ ಎಂಬವರ ಮನೆ ಸಮೀಪದ ಹಟ್ಟಿಯ ಗೋಡೆ ಮಳೆಗೆ ಬಿದ್ದು ಹಟ್ಟಿಯಲ್ಲಿದ್ದ ಹಸುಗಳ ಪೈಕಿ ಒಂದು ಹಸು ಮತ್ತು ಕರು ಮೃತಪಟ್ಟಿದೆ. ಸ್ಥಳಕ್ಕೆ ಪುತ್ತೂರು ತಹಸೀಲ್ದಾರ್ ಕುಂಞಿ ಅಹಮ್ಮದ್, ಉಪ್ಪಿನಂಗಡಿ ಕಂದಾಯ ನಿರೀಕ್ಷಕ ಚಂದ್ರು, ನಗರಸಭಾ ಸದಸ್ಯ ಕೆ ಜೀವಂಧರ್ ಜೈನ್ ಭೇಟಿ ನೀಡಿದ್ದಾರೆ.

ಭಾರೀ ಮಳೆಗೆ ಕುಸಿದ ಹಟ್ಟಿ: ಹಸು, ಕರು ಮೃತ್ಯು Read More »

ವರ್ಗಾವಣೆ ಪತ್ರ ನೀಡದ ಮುಖ್ಯ ಶಿಕ್ಷಕರು | ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು

ಉಡುಪಿ : ವರ್ಗಾವಣೆ ಪ್ರಮಾಣ ಪತ್ರ ನೀಡಿಲ್ಲ ಎಂದು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ನಿತಿನ್ ಆಚಾರಿ ಆತ್ಮಹತ್ಯೆ ಮಾಡಿಕೊಂಡವ. ವರ್ಗಾವಣೆ ಪ್ರಮಾಣ ಪತ್ರ ಟಿಸಿ ಕೊಡದೆ ಮುಖ್ಯ ಶಿಕ್ಷಕರು ಬೈದಿದ್ದಾರೆ ಎಂದು ಡೆತ್‍ ನೋಟ್ ಬರೆದಿಟ್ಟು ನಿತಿನ್ ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿತಿನ್ ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದಾನೆ. ಆದರೆ ಮುಖ್ಯ ಶಿಕ್ಷಕ

ವರ್ಗಾವಣೆ ಪತ್ರ ನೀಡದ ಮುಖ್ಯ ಶಿಕ್ಷಕರು | ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣು Read More »

ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವ

ಪುತ್ತೂರು : ಶಿಕ್ಷಣ ಶಿಲ್ಪಿ ಮೊ| ಪತ್ರಾವೋರವರ ದೂರದರ್ಶಿತ್ವದಿಂದ ಪುತ್ತೂರಿನಲ್ಲಿ ಅಂದು ಶಿಕ್ಷಣ ಸಂಸ್ಥೆಗಳು ಸ್ಥಾಪನೆಗೊಂಡು ಅನೇಕ ವಿದ್ಯಾರ್ಥಿಗಳಿಗೆ ದಾರಿದೀಪವಾಗಿ ಪರಿಣಮಿಸಿವೆ ಮಾತ್ರವಲ್ಲದೆ ಸಮಾಜದ ಪ್ರತಿಯೊಂದು ರಂಗದಲ್ಲೂ ಫಿಲೋಮಿನಾದ ವಿದ್ಯಾರ್ಥಿಗಳು ಪ್ರಜ್ವಲಿಸಿರುತ್ತಾರೆ. ಇದೇ ಸಂಪ್ರದಾಯ ಮುಂದಿನ ದಿನಗಳಲ್ಲೂ ಮುಂದುವರಿಯಲಿ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಜಿ ಎಲ್ ಸಮೂಹ ಸಂಸ್ಥೆಗಳ ಚೇರ್ ಮ್ಯಾನ್ ಜಿ ಬಲರಾಮ ಆಚಾರ್ಯ ಹೇಳಿದರು. ಫಿಲೋಮಿನಾ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ಜರುಗಿದ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವದಲ್ಲಿ

ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕೋತ್ಸವ Read More »

ಕಂಪೌಂಡ್ ಕುಸಿದು ಬಿದ್ದು ಶಾಲಾ ವಿದ್ಯಾರ್ಥಿನಿ ಮೃತ್ಯು

ಕೊಣಾಜೆ : ಶಾಲಾ ಕಂಪೌಂಡ್ ಕುಸಿದು ಬಿದ್ದ ಪರಿಣಾಮ ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ನ್ಯೂಪಡ್ಪು ನಿವಾಸಿ ಸಿದ್ದೀಖ್ ಹಾಗೂ ಜಮೀಲಾ ದಂಪತಿ ಪುತ್ರಿ ಶಾಝಿಯಾ ಬಾನು (7) ಮೃತಪಟ್ಟ ಬಾಲಕಿ. ಸಂಜೆ ವೇಳೆ ಸುರಿದ ಮಳೆಯಿಂದಾಗಿ ದುರ್ಘಟನೆ ಸಂಭವಿಸಿದೆ. ಹರೇಕಳ ಹಾಜಬ್ಬರ ಶಾಲೆಯಲ್ಲಿ ಕಳೆದ ಎರಡು ದಿನಗಳಿಂದ ಮುಡಿಪು ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳ ಶಿಬಿರ ನಡೆಯುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ

ಕಂಪೌಂಡ್ ಕುಸಿದು ಬಿದ್ದು ಶಾಲಾ ವಿದ್ಯಾರ್ಥಿನಿ ಮೃತ್ಯು Read More »

error: Content is protected !!
Scroll to Top