ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂದು ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯು ವಿಧಾನಸೌಧದಲ್ಲಿ ನಡೆದಿದು, ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ 20 ಗ್ರೇಸ್‌ ಮಾರ್ಕ್‌ ನೀಡಿದ್ದರ ಕುರಿತು, ಯಾವ ಕಾರಣ ಮತ್ತು ಉದ್ದೇಶದಿಂದ ಗ್ರೇಸ್‌ ಮಾರ್ಕ್‌ ನೀಡಲಾಗಿದ. ಈ ಕುರಿತು ತರಾಟೆ ತೆಗೆದುಕೊಳ್ಳಲಾಗಿದೆ. ಶಿಕ್ಷಣ ಇಲಾಖೆ ಈ ಸಂದರ್ಭದಲ್ಲಿ ಕೋವಿಡ್‌ ಸಂದರ್ಭದಲ್ಲಿ 5-10 ಗ್ರೇಸ್‌ ಮಾರ್ಕ್ಸ್‌ ನೀಡಿದ್ದಾಗಿಯೂ, ಈಗ ಅದನ್ನು ಹೆಚ್ಚಳ […]

ಮುಂದಿನ ವರ್ಷದಿಂದ ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್‌ ರದ್ದು: ಸಿಎಂ ಸಿದ್ದರಾಮಯ್ಯ Read More »

ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ

ಪುತ್ತೂರು : ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ರಾಂಗ್ ಸೈಡ್ ನಿಂದ ಬಂದು ಕಾರುಗಳಿಗೆ ಡಿಕ್ಕಿ ಹೊಡೆದ ಘಟನೆ ದರ್ಬೆ ಸಮೀಪ ನಡೆದಿದೆ. ಆಕ್ಟಿವಾದಲ್ಲಿ ಮೂವರು ವಿದ್ಯಾರ್ಥಿಗಳು ಹೆಲ್ಮಟ್ ಧರಿಸದೆ ರಾಂಗ್ ಸೈಡ್ ನಿಂದ ಬಂದಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ. ಘಟನೆಯಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ರಾಂಗ್ ಸೈಡ್ ನಲ್ಲಿ ಬಂದ ವಿದ್ಯಾರ್ಥಿಗಳ ಬೈಕ್ : ಕಾರಿಗೆ ಡಿಕ್ಕಿ Read More »

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಿಂದ ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣೆ ‘ವಿವೇಕ ಚೇತನ-2024’

ಪುತ್ತೂರು: ಇಂದು ಇಡೀ ವಿಶ್ವದಲ್ಲಿಯೇ  ಭಾರತ ಅದ್ಭುತ ಸ್ಥಾನಕ್ಕೆ ಏರುತಿದೆ. ಹೀಗಿರುವಾಗ ಮಾಧ್ಯಮಗಳಿಗೆ ದೇಶದಲ್ಲಿ ಕಂಡುಬರುವ ಎಲ್ಲಾ ಒಳ್ಳೆಯ ವಿಚಾರಗಳನ್ನು ಜಗತ್ತಿಗೆ ಪರಿಚಯಿಸಿ ರಾಷ್ಟ್ರವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಜವಾಬ್ದಾರಿ ಇದೆ. ಪತ್ರಕರ್ತರು ಯಾರ ಪರವಾಗಿಯೂ ನಿಲ್ಲದೆ, ಸತ್ಯದ ಪರ, ರಾಷ್ಟ್ರದ ಪರ ನಿಲ್ಲಬೇಕು. ಸಮಾಜದಲ್ಲಿ ಕಂಡುಬರುವ ಒಳ್ಳೆತನವನ್ನು ಗಮನಿಸಿ ಅವುಗಳನ್ನು ಗುರುತಿಸುವ ಜವಾಬ್ದಾರಿ ಪತ್ರಕರ್ತರಿಗಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗದಿಂದ ರಾಷ್ಟ್ರೀಯ ಮಟ್ಟದ ಪ್ರತಿಭಾನ್ವೇಷಣೆ ‘ವಿವೇಕ ಚೇತನ-2024’ Read More »

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ | ಹಿಂದೂ ದಮನ ನೀತಿ, ವಿದ್ಯಾರ್ಥಿನಿಯರು, ಮಹಿಳೆಯರ ಕಗ್ಗೊಲೆ ಮೂಲಕ ಜನತೆಗೆ ಭಯದ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಒಂದು ವರ್ಷದ ಸಾಧನೆ : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರ, ಮಹಿಳೆಯರ ಕಗ್ಗೊಲೆ, ಹಿಂದೂಗಳ ದಮನ ನೀತಿ ರಾಜ್ಯ ಸರಕಾರದ ಒಂದು ವರ್ಷದ ಸಾಧನೆಯಾಗಿದ್ದು, ಜನತೆ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಒಂದು ವರ್ಷದಲ್ಲಿ ಒಂದೇ ಒಂದು ಶೌಚಾಲಯ ಕಟ್ಟಲು, ಅಂಗಡಿವಾಡಿಗಳಿಗೆ ಅನುದಾನ ಬಿಡಿ ದುರಸ್ತಿ ಕಾರ್ಯವನ್ನೂ ಮಾಡಲು ಆಗದ ಸರಕಾರಕ್ಕೆ ಇಚ್ಛಾಶಕ್ತಿಯ ಕೊರೆತ ಎದ್ದು ಕಾಣುತ್ತಿದೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ | ಹಿಂದೂ ದಮನ ನೀತಿ, ವಿದ್ಯಾರ್ಥಿನಿಯರು, ಮಹಿಳೆಯರ ಕಗ್ಗೊಲೆ ಮೂಲಕ ಜನತೆಗೆ ಭಯದ ವಾತಾವರಣ ನಿರ್ಮಿಸುವುದು ರಾಜ್ಯ ಸರಕಾರದ ಒಂದು ವರ್ಷದ ಸಾಧನೆ : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು Read More »

ಉಗ್ರ ಸಂಘಟನೆ ಐಸಿಸ್ ಜತೆ ನಂಟು | ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟ ಶಾಸಕ ದಿ.ಇದಿನಬ್ಬ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್ ಗೆ ಜಾಮೀನು ಮಂಜೂರು

ಮಂಗಳೂರು: ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಪ್ರಕರಣದಲ್ಲಿ ಮೂರು ವರ್ಷಗಳ ಹಿಂದೆ ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟಿದ್ದ ಮಾಜಿ ಶಾಸಕ ದಿವಂಗತ ಇದಿನಬ್ಬ ಮೊಮ್ಮಗ ಅಮ‌ರ್ ಅಬ್ದುಲ್ ರೆಹಮಾನ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಐಸಿಸ್ ಬಾವುಟ, ಕರಪತ್ರ ಮೊಬೈಲ್ ನಲ್ಲಿದ್ದರೆ ಉಗ್ರ ಎನ್ನಲು ಪೂರಕ ಸಾಕ್ಷ್ಯವಲ್ಲ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಐಸಿಸ್ ನಂಟಿನ ಆರೋಪದಡಿ ಯುಎಪಿಎ ಕಾಯ್ದೆಯಡಿ ಅಮ‌ರ್ ಅಬ್ದುಲ್ ರೆಹಮಾನ್ ನನ್ನು ಅಗಸ್ಟ್ 21,

ಉಗ್ರ ಸಂಘಟನೆ ಐಸಿಸ್ ಜತೆ ನಂಟು | ರಾಷ್ಟ್ರೀಯ ತನಿಖಾ ದಳದಿಂದ ಬಂಧಿಸಲ್ಪಟ್ಟ ಶಾಸಕ ದಿ.ಇದಿನಬ್ಬ ಮೊಮ್ಮಗ ಅಮರ್ ಅಬ್ದುಲ್ ರೆಹಮಾನ್ ಗೆ ಜಾಮೀನು ಮಂಜೂರು Read More »

ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಸನ್ಮಾನ

ಪುತ್ತೂರು: ನಮ್ಮ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅವರ ಭವಿಷ್ಯಕ್ಕೆ ನಾವು ದಾರಿಯಾಗಬೇಕು. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುತ್ತಿದ್ದೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ತಾಲೂಕಿನ 6 ಮಂದಿ ವಿದ್ಯಾರ್ಥಿಗಳನ್ನು ಪುತ್ತೂರು ರೈ ಎಸ್ಟೇಟ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ಅವರು ಸನ್ಮಾನಿಸಿ ಗೌರವಿಸಿದರು. ಪುತ್ತೂರಿನ ಕೀರ್ತಿಗೆ ಭಾಜನರಾದ ವಿದ್ಯಾರ್ಥಿಗಳನ್ನು ಗೌರವಿಸುವುದು, ಅವರಿಗೆ ಅವರ ಮುಂದಿನ ಶೈಕ್ಷಣಿಕ

ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ ಸನ್ಮಾನ Read More »

ಕೆ.ರಾಜೇಂದ್ರ ಆರಿಗ ನಿಧನ

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ರಾಜೇಂದ್ರ ಆರಿಗ (61) ಗುರುವಾರ ನಿಧನರಾದರು. ಕೆಲ ದಿನಗಳ ಹಿಂದೆ ಅಸ್ವಸ್ಥರಾದ ಅವರು ಗುರುವಾರ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿಯರನ್ನು ಅಗಲಿದ್ದಾರೆ.

ಕೆ.ರಾಜೇಂದ್ರ ಆರಿಗ ನಿಧನ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಗೋಕಳ್ಳತನ | ತನಿಖೆ ನಡೆಸಿ ಗೋ ಕಳ್ಳರನ್ನು ಬಂಧಿಸುವಂತೆ ನಗರ ಠಾಣೆಗೆ ದೂರು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮೇ ಒಂದರಂದು ರಾತ್ರಿ  ನಡೆದ ಗೋ ಕಳ್ಳತನವಾದ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು. ದೇವಸ್ಥಾನದ ವಠಾರದಿಂದ ಎರಡು ಗೋ ಕಳ್ಳತನವಾಗಿದ್ದು ಈ ಕುರಿತು ತನಿಖೆ ನಡೆಸಿ ಗೋಕಳ್ಳರನ್ನು ಬಂಧಿಸುವಂತೆ ದೂರು ನೀಡಲಾಯಿತು. ಈ ಸಂದರ್ಭ ಬಜರಂಗದಳ ನಗರ ಪ್ರಖಂಡ ಸಂಯೋಜಕ ಜಯಂತ್ ಕುಂಜೂರುಪಂಜ , ಸಹ ಸಂಯೋಜಕ ಪ್ರವೀಣ್ ಕಲ್ಲೇಗ, ಗ್ರಾಮಾಂತರ ಸಂಯೋಜಕ ವಿಶಾಖ್ ಸಸಿಹಿತ್ಲು, ಹರ್ಷಿತ್ ಬಲ್ನಾಡ್,

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಗೋಕಳ್ಳತನ | ತನಿಖೆ ನಡೆಸಿ ಗೋ ಕಳ್ಳರನ್ನು ಬಂಧಿಸುವಂತೆ ನಗರ ಠಾಣೆಗೆ ದೂರು Read More »

ಶಿಕ್ಷಕ ಕುಶಾಲಪ್ಪ ಗೌಡ ನಿಧನ

ಕುದ್ಮಾರು: ಬೆಳಂದೂರು ಗ್ರಾಮದ ಪಳ್ಳತ್ತಾರು ಶಾಲಾ ಶಿಕ್ಷಕ ಕುಶಾಲಪ್ಪ ಗೌಡ (58) ಇಂದು ನಿಧನರಾದರು. ಅವರು ಬೆಳಂದೂರು ಗ್ರಾಮದ ತುಂಬ್ಯ ನಿವಾಸಿಯಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಶಿಕ್ಷಕ ಕುಶಾಲಪ್ಪ ಗೌಡ ನಿಧನ Read More »

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದ್ವಿಚಕ್ರ ವಾಹನ ಕಳವು ಪ್ರಕರಣ | ಸಾರ್ವಜನಿಕರಿಗೆ ಭಯದ ವಾತಾವರಣದಲ್ಲಿ ನಿಲುಗಡೆ ಮಾಡುವ ಪರಿಸ್ಥಿತಿ

ಪುತ್ತೂರು: ಪುತ್ತೂರು ನಗರದಲ್ಲಿ ಕಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅದರಲ್ಲೂ ದ್ವಿಚಕ್ರ ವಾಹನ ಕಳ್ಳರ ಹಾವಳಿ ಜಾಸ್ತಿಯಾಗಿದೆ. ಪರಿಣಾಮ ನಗರದಲ್ಲಿ ಪಾರ್ಕ್ ಮಾಡಲು ವಾಹನ ಸವಾರರು ಹಿಂದೆ-ಮುಂದೆ ನೋಡುವಂತಾಗಿದೆ. ನಗರದಲ್ಲಿ ಅಂಗಡಿ ಮುಂಗಟ್ಟು, ರೈಲ್ವೇ ನಿಲ್ದಾಣ ಹೀಗೆ ಪ್ರಮುಖ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಕಾರ್ಯಾಚರಿಸುತ್ತಿದ್ದರೂ ಕ್ಯಾಮರಾ ಕಣ್ತಪ್ಪಿಸಿ ಕಳವು ಮಾಡುವ ಚಾಣಕ್ಯವನ್ನು ಕಳ್ಳರು ಹೊಂದಿದ್ದು, ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಮತ್ತಷ್ಟು ಸಿಸಿ ಕ್ಯಾಮರಾ ಅಳವಡಿಸುವಂತೆ ಸಾರ್ವಜನಿಕರು ಮಾಹಿತಿ ಮನವಿ ಮಾಡಿದರೂ ಸಿಸಿ ಟಿವಿ ಅಳವಡಿಸದೇ

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದ್ವಿಚಕ್ರ ವಾಹನ ಕಳವು ಪ್ರಕರಣ | ಸಾರ್ವಜನಿಕರಿಗೆ ಭಯದ ವಾತಾವರಣದಲ್ಲಿ ನಿಲುಗಡೆ ಮಾಡುವ ಪರಿಸ್ಥಿತಿ Read More »

error: Content is protected !!
Scroll to Top