ಚಿಪ್ಪು ಹೆಕ್ಕಲು ಹೋದ ಯುವಕ ಅಭಿಲಾಷ್ ನೀರು ಪಾಲು | ಮುಂದುವರಿದ ಶೋಧ ಕಾರ್ಯ

ಮಂಗಳೂರು: ಚಿಪ್ಪು ಹೆಕ್ಕಲು ಹೋದ ಯುವಕರ ತಂಡದ ಓರ್ವ ನೀರು ಪಾಲಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಷ್ (24) ನೀರು ಪಾಲಾದವರು. ಕೊಳಚಿ ಕಂಬಳ ಬೀಚ್ ಬಳಿಯಿಂದ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಸಮುದ್ರದ ಅಳಿವೆ ಬಾಗಿಲಿನಲ್ಲಿ ಯುವಕರ ತಂಡ ಚಿಪ್ಪು ಹೆಕ್ಕಲು ಹೋಗಿದ್ದು, ಈ ಸಂದರ್ಭ ಯುವಕ ನೀರು ಪಾಲಾಗಿದ್ದಾರೆ. ಭಾನುವಾರ ಬೆಳಗ್ಗೆ ಬಜಪೆಯ ಆದ್ಯಪಾಡಿಯ ಹಾಗೂ ಹತ್ತಿರದ ಪ್ರದೇಶದ ಸುಮಾರು 10 ಮಂದಿ […]

ಚಿಪ್ಪು ಹೆಕ್ಕಲು ಹೋದ ಯುವಕ ಅಭಿಲಾಷ್ ನೀರು ಪಾಲು | ಮುಂದುವರಿದ ಶೋಧ ಕಾರ್ಯ Read More »

ಭಾರೀ ಮಳೆಯಾಗುವ ಸಾಧ್ಯತೆ : ರಾಜ್ಯದ 13 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಣೆ

ಬೆಂಗಳೂರು: ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ರಾಜ್ಯದ 13 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ರಾಜ್ಯದಲ್ಲಿ ಮುಂದಿನ 5 ದಿನ ಬಿರುಗಾಳಿ, ಗುಡುಗು ಸಮೇತ ಮಳೆ ಆಗಲಿದೆ. ಈ ವರೆಗೆ ಧಾರವಾಡದಲ್ಲಿ 8cm ಮಳೆ, ದಕ್ಷಿಣ ಕನ್ನಡದಲ್ಲಿ 6 cm ಮಳೆ, ಬೆಳಗಾವಿ, ಚಿಕ್ಕಮಗಳೂರು 5 cm ಮಳೆ ಆಗಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ. ದಕ್ಷಿಣ

ಭಾರೀ ಮಳೆಯಾಗುವ ಸಾಧ್ಯತೆ : ರಾಜ್ಯದ 13 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಣೆ Read More »

ನಾಲ್ಕನೇ ಹಂತದ ಮತದಾನ ಆರಂಭ | ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆ

ಹೊಸದಿಲ್ಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು ಆರಂಭಗೊಂಡಿದೆ. ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆಯ ಆರಂಭಗೊಂಡಿದ್ದು, ಆಂಧ್ರಪ್ರದೇಶದಲ್ಲಿ ಎಲ್ಲ 25 ಲೋಕಸಭಾ ಸ್ಥಾನಗಳು ಮತ್ತು 175 ವಿಧಾನಸಭೆ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಒಡಿಶಾ ವಿಧಾನಸಭೆ ಚುನಾವಣೆಗೆ ಸಹ ಮತದಾನ ಆರಂಭವಾಗಿದೆ. 82 ದಿನಗಳ ಸುದೀರ್ಘ, ಏಳು ಹಂತಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದಲ್ಲಿ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 96

ನಾಲ್ಕನೇ ಹಂತದ ಮತದಾನ ಆರಂಭ | ತೆಲಂಗಾಣದ ಎಲ್ಲ 17 ಸ್ಥಾನಗಳು ಸೇರಿದಂತೆ 10 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಚುನಾವಣೆ Read More »

ಭಾರೀ ಗಾಳಿ ಮಳೆ : ಉರ್ಲಾಂಡಿಯಲ್ಲಿ ಮನೆ ಮೇಲೆ ಬಿದ್ದ ಮರ

ಪುತ್ತೂರು: ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಗೆ ನಗರದ ಬಪ್ಪಳಿಗೆ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಸೀಟು ಹಾರಿಹೋಗಿದ್ದು, ಶೋಭಾ ಹೆಗ್ಡೆ ಎಂಬವರ ಮನೆಯ ಮೇಲೆ ಮರ ಬಿದ್ದು ಜಖಂಗೊಂಡಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದ್ದು, ಸಿಂಗಾಣಿಯ ಕಮಲ ಅವರ ಮನೆಗೆ ತಾತ್ಕಾಲಿಕವಾಗಿ ಶಾಸಕರು ಟರ್ಪಾಲ್ ಹಾಕಿಸಿದ್ದಾರೆ. ಉರ್ಲಾಂಡಿಗೆ ಭೇಟಿ ನೀಡಿದ ಶಾಸಕರು ಮನೆ ಮೇಲೆ ಬಿದ್ದಿರುವ ಮರವನ್ನು ತಕ್ಷಣ ತೆರವು ಮಾಡುವಂತೆ ಸೂಚನೆ

ಭಾರೀ ಗಾಳಿ ಮಳೆ : ಉರ್ಲಾಂಡಿಯಲ್ಲಿ ಮನೆ ಮೇಲೆ ಬಿದ್ದ ಮರ Read More »

ಚಂದಳಿಕೆ ಯುವಕೇಸರಿ ಅಬೀರಿ- ಅತಿಕಾರಬೈಲು ಸಂಘಟನೆ ವತಿಯಿಂದ ಸಹಾಯಧನ ಹಸ್ತಾಂತರ

ವಿಟ್ಲ: ಕಷ್ಟದಲ್ಲಿರುವ ದಾಮೋದರ ಗೌಡರಿಗೆ ಚಂದಳಿಕೆ ಯುವಕೇಸರಿ ಅಬೀರಿ- ಅತಿಕಾರಬೈಲು ಸಂಘಟನೆ ವತಿಯಿಂದ 10,000 ರೂ. ಚೆಕ್‍ ಹಾಗೂ ದೈನಂದಿನ ಖರ್ಚಿಗಾಗಿ 26 ಕೆ. ಜಿ ಅಕ್ಕಿಯನ್ನು ಹಸ್ತಾಂತರಿಸಲಾಯಿತು. ವಿಟ್ಲ ಮೂಡ್ನೂರು ಗ್ರಾಮದ ಮಾಡತ್ತಾರು  ದರ್ಭೆ ನಿವಾಸಿ ದಾಮೋದರ ಗೌಡ ಅವರು  ಕೂಲಿ ಕೆಲಸ ಮಾಡಿಕೊಂಡು ಹೆಂಡತಿ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದರು, ವರ್ಷಗಳ ಹಿಂದೆ ಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಹೆಂಡತಿಯಲ್ಲೂ ಆರೋಗ್ಯ ಸಮಸ್ಯೆಯುಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಮನೆಯಲ್ಲಿ ಔಷಧಿ ಮಾಡುತ್ತಿದ್ದು,

ಚಂದಳಿಕೆ ಯುವಕೇಸರಿ ಅಬೀರಿ- ಅತಿಕಾರಬೈಲು ಸಂಘಟನೆ ವತಿಯಿಂದ ಸಹಾಯಧನ ಹಸ್ತಾಂತರ Read More »

ಶಂಕರ ಭಗವತ್ಪಾದರ ವಿಚಾರಗಳಿಂದ ನಮ್ಮ ಬದುಕು ಔನ್ನತ್ಯಕ್ಕೆ : ಅಂಬಿಕಾ ಕ್ಯಾಂಪಸ್‌ನಲ್ಲಿ ಶ್ರೀ ಶಂಕರ ಜಯಂತಿ ಕಾರ್ಯಕ್ರಮದಲ್ಲಿ ವಿದ್ವಾನ್ ಕೃಷ್ಣರಾಜ ಭಟ್

ಪುತ್ತೂರು: ಜಗದ್ಗುರು ಶಂಕರಾಚಾರ್ಯರ ವ್ಯಕ್ತಿತ್ವವನ್ನು ಮಾತಿನಲ್ಲಿ ಕಟ್ಟಿಕೊಡುವ ಶಕ್ತಿ ಸಾಮಾನ್ಯ ಮನುಷ್ಯರಲ್ಲಿಲ್ಲ. ಆದರೆ ಅವರ ಬಗೆಗೆ ತಿಳಿದುಕೊಂಡ ಅಲ್ಪಾತಿ ಅಲ್ಪ ವಿಚಾರಗಳನ್ನಾದರೂ ಮತ್ತೆ ಮತ್ತೆ ಪ್ರಸಾರ ಮಾಡುತ್ತಿದ್ದರೆ ನಮ್ಮ ವ್ಯಕ್ತಿತ್ವದಲ್ಲಿನ ದೋಷಗಳು ನಿವಾರಣೆಯಾಗುವಲ್ಲಿ ಸಹಕಾರಿಯಾಗುತ್ತದೆ. ಒಳ್ಳೆಯ ವಿಚಾರಗಳ ಅಧ್ಯಯನ, ಪ್ರಸರಣ ನಮ್ಮ ಮನಸ್ಸನ್ನು ಶುದ್ಧಗೊಳಿಸುತ್ತದೆ ಎಂದು ಶೃಂಗೇರಿಯ ಶ್ರೀ ಸದ್ವಿದ್ಯಾ ಸಂಜೀವಿನೀ ಸಂಸ್ಕೃತ ಪಾಠಶಾಲೆಯ ವ್ಯಾಕರಣ ಶಾಸ್ತ್ರ ವಿದ್ವಾಂಸ ವಿದ್ವಾನ್ ಕೃಷ್ಣರಾಜ ಭಟ್ಟ ಹೇಳಿದರು. ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಕ್ಯಾಂಪಸ್‌ನ ಶ್ರೀ ಶಂಕರ ಸಭಾಭವನದಲ್ಲಿ ಭಾನುವಾರ

ಶಂಕರ ಭಗವತ್ಪಾದರ ವಿಚಾರಗಳಿಂದ ನಮ್ಮ ಬದುಕು ಔನ್ನತ್ಯಕ್ಕೆ : ಅಂಬಿಕಾ ಕ್ಯಾಂಪಸ್‌ನಲ್ಲಿ ಶ್ರೀ ಶಂಕರ ಜಯಂತಿ ಕಾರ್ಯಕ್ರಮದಲ್ಲಿ ವಿದ್ವಾನ್ ಕೃಷ್ಣರಾಜ ಭಟ್ Read More »

ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಅನುದಾನ: ಅಶೋಕ್ ರೈ |ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಸಭೆ

ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ಧಿ ಸಮಿತಿ ಸಭೆ ಶನಿವಾರ ಕಾಲೇಜಿನಲ್ಲಿ ನಡೆಯಿತು. ಶಾಸಕ ಅಶೋಕ್ ರೈ ಸಭೆಯ ಅಧ್ಯಕ್ಷತೆ ವಹಿಸಿದ್ದು, ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. 100 ಪಲಿತಾಂಶ ಬಂದಿದ್ದು ಇದಕ್ಕಾಗಿ ಶಿಕ್ಷಕ ವೃಂದವನ್ನು, ಅಭಿವೃದ್ಧಿ ಸಮಿತಿಯವರನ್ನು ಶಾಸಕರು ಅಭಿನಂದಿಸಿದರು. ಕಾಲೇಜಿನಲ್ಲಿ ತರಗತಿ ಕೊಠಡಿ ಕೊರತೆ, ಪ್ರಯೋಗಾಲಯ ಕೊಠಡಿ ಕೊರತೆ, ಪೀಠೋಪಕರಣಗಳ ಕೊರತೆ, ಆಟದ ಮೈದಾನದ ಕೊರತೆ, ರಸ್ತೆ ಸಂಪರ್ಕ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಪ್ರಿನ್ಸಿಪಾಲರು ಶಾಸಕರ ಗಮನಕ್ಕೆ

ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಅನುದಾನ: ಅಶೋಕ್ ರೈ |ಮಹಿಳಾ ಕಾಲೇಜು ಅಭಿವೃದ್ಧಿ ಸಮಿತಿ ಸಭೆ Read More »

ಮೆಡಿಕಲ್ ಪ್ರತಿನಿಧಿಗಳು ಸಂಗ್ರಹಿಸಿದ ಮೊತ್ತ ಹಸ್ತಾಂತರ

ಪುತ್ತೂರು: ಇತ್ತೀಚೆಗೆ ಆಕಸ್ಮಿಕವಾಗಿ ಮರಣ ಹೊಂದಿದ ಸಂತೋಷ್ ಗೌಡ ಅವರಿಗೆ ಮೆಡಿಕಲ್ ಪ್ರತಿನಿಧಿಗಳು ಸೇರಿ ಸಂಗ್ರಹಿಸಲಾದ ಮೊತ್ತವನ್ನು ಹಸ್ತಾಂತರಿಸಲಾಯಿತು. ಸಂತೋಷ್ ಗೌಡ ನ ಮನೆಗೆ ತೆರಳಿ ಮೆಡಿಕಲ್ ಪ್ರತಿನಿಧಿಗಳು ಸಂಗ್ರಹಿಸಿದ ಒಟ್ಟು ಮೊತ್ತದಲ್ಲಿ 10000 ರೂಪಾಯಿ ನಗದು ಹಾಗೂ 1,53,277 ರೂಪಾಯಿಯ ಚೆಕ್ ನ್ನು ಅವರ ತಾಯಿಗೆ ಅಕ್ಕನ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಈ ಹಣವನ್ನು ಸಂತೋಷರ ತಾಯಿಯ ಹೆಸರಿನಲ್ಲಿ ಠೇವಣಿ ಇಡಲಾಗುವುದು ಎಂದು ಮನೆಯವರು ತಿಳಿಸಿದ್ದಾರೆ.

ಮೆಡಿಕಲ್ ಪ್ರತಿನಿಧಿಗಳು ಸಂಗ್ರಹಿಸಿದ ಮೊತ್ತ ಹಸ್ತಾಂತರ Read More »

ರಸ್ತೆ ಬದಿ ನಿಲ್ಲಿಸಿದ್ದ ಕಾರು ಚಲಾಯಿಸಿದ ಬುದ್ಧಿಮಾಂದ್ಯ ಯುವಕ : ನಾಲ್ಕೈದು ವಾಹನಗಳಿಗೆ ಡಿಕ್ಕಿ

ಪುತ್ತೂರು: ಯುವಕನೋರ್ವ ನಿಲ್ಲಿಸಿದ್ದ ಓಮ್ನಿ ಕಾರೊಂದನ್ನು ಚಲಾಯಿಸಿಕೊಂಡು ಬಂದು ರಸ್ತೆ ಮಧ್ಯೆ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಪ್ಯದಲ್ಲಿ ನಡೆದಿದೆ. ಕುಂಬ್ರ ಸೇತುವೆಯ ಬಳಿ ವಾಹನ ಚಾಲಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆಯೂ ನಡೆಯಿತು.. ಬುದ್ದಿಮಾಂದ್ಯ ಯುವಕ ಕೈಯ್ಯಲ್ಲಿ ಕೋಲೊಂದನ್ನು ಹಿಡಿದು ಮಧ್ಯಾಹ್ನದ ವೇಳೆ ಸಂಪ್ಯದಲ್ಲಿ ರಸ್ತೆ ಬದಿಯಲ್ಲಿ ಸುತ್ತಾಡುತ್ತಿದ್ದ. ಸಂಜೆ ವೇಳೆ ಈತ ಯಾರೋ ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು ಚಲಾಯಿಸಿಕೊಂಡು ಬಂದಿದ್ದಾನೆ. ಅಡ್ಡಾದಿಡ್ಡಿ ವಾಹನ ಚಲಾಯಿಸಿದ ಪರಿಣಾಮ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ರಸ್ತೆ ಬದಿ ನಿಲ್ಲಿಸಿದ್ದ ಕಾರು ಚಲಾಯಿಸಿದ ಬುದ್ಧಿಮಾಂದ್ಯ ಯುವಕ : ನಾಲ್ಕೈದು ವಾಹನಗಳಿಗೆ ಡಿಕ್ಕಿ Read More »

ದಕ್ಷಿಣ ಕನ್ನಡ ಸಹಕಾರಿ ಕೃಷಿ ಅಭಿವೃದ್ಧಿ ಸಂಘದ ಆಡಳಿತ ಮಂಡಳಿಗೆ ನಾಮನಿರ್ದೇಶಿತ ಸದಸ್ಯರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ನೇಮಕ

ಪುತ್ತೂರು: ದಕ್ಷಿಣ ಕನ್ನಡ ಸಹಕಾರಿ ಕೃಷಿ ಅಭಿವೃದ್ಧಿ ಸಂಘ (scads)ದ ಆಡಳಿತ ಮಂಡಳಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾಮನಿರ್ದೇಶಿತ ಸದಸ್ಯರಾಗಿ ಬ್ಯಾಂಕ್ ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಆಡಳಿತ ಮಂಡಳಿ ನೇಮಕ ಮಾಡಿದೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಆಡಳಿತ ಮಂಡಳಿ ಮಾ.25ರಂದು ಕೈಗೊಂಡ ನಿರ್ಣಯದಂತೆ ಶಶಿಕುಮಾರ್ ರೈ ಬಾಲ್ಯೊಟ್ಟು ಅವರನ್ನು ಸ್ಕ್ಯಾಡ್ಸ್ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಲಾಗಿದೆ. 2019 ಮೇ. 20 ರಂದು ನೇಮಕವಾಗಿದ್ದ ದ.ಕ.ಜಿಲ್ಲಾ

ದಕ್ಷಿಣ ಕನ್ನಡ ಸಹಕಾರಿ ಕೃಷಿ ಅಭಿವೃದ್ಧಿ ಸಂಘದ ಆಡಳಿತ ಮಂಡಳಿಗೆ ನಾಮನಿರ್ದೇಶಿತ ಸದಸ್ಯರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ನೇಮಕ Read More »

error: Content is protected !!
Scroll to Top