ಕ್ರೂಸರ್‌- ಲಾರಿ ಡಿಕ್ಕಿ : ಒಂದೇ ಕುಟುಂಬದ ಐವರು ಸಾವು

ಕಲಬುರಗಿ: ಕ್ರೂಸರ್ ಮತ್ತು ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ಇಂದು ಮುಂಜಾನೆ ನಡೆದಿದೆ. ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ […]

ಕ್ರೂಸರ್‌- ಲಾರಿ ಡಿಕ್ಕಿ : ಒಂದೇ ಕುಟುಂಬದ ಐವರು ಸಾವು Read More »

ಮತ್ತೊಮ್ಮೆ ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆ ಬರೆ

ಪೆಟ್ರೋಲು 87 ಪೈಸೆ, ಡೀಸೆಲ್‌ 91 ಪೈಸೆ ಹೆಚ್ಚಳ ನವದೆಹಲಿ : ಹತ್ತೇ ದಿನದ ಅವಧಿಯಲ್ಲಿ ಮತ್ತೊಮ್ಮೆ ಪೆಟ್ರೋಲು ಮತ್ತು ಡೀಸೆಲ್‌ ದರ ಏರಿಕೆಯಾಗಿದೆ. ದೇಶದಲ್ಲಿ ದೀರ್ಘಕಾಲದವರೆಗೆ ಸ್ಥಿರವಾಗಿದ್ದ ಇಂಧನ ದರಗಳಿಗೆ ಈಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರದ ತೈಲ ಕಂಪನಿಗಳ ನಿರ್ಧಾರದಂತೆ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಆಗಿದ್ದು ಡೀಸೆಲ್ ಬೆಲೆ 95.04 ರೂ. ಆಗಿದೆ.

ಮತ್ತೊಮ್ಮೆ ಪೆಟ್ರೋಲು, ಡೀಸೆಲ್‌ ಬೆಲೆ ಏರಿಕೆ ಬರೆ Read More »

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ

ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‌ಗೆ ಸ್ಥಾನ ಪುತ್ತೂರು:ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಪುತ್ತೂರು ಸೇರಿದಂತೆ ಹಲವು ಕಡೆ ಶಾಖೆಗಳನ್ನು ಹೊಂದಿರುವ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದಿ ಆರ್ಟ್ ಆಫ್‌ ಜ್ಯುವೆಲ್ಲರಿ

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ Read More »

ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶ್ರೀ ಮಹಾಭಾರತ ಕಥಾವ್ಯಾಖ್ಯಾನ

ಗುರುವಾಯನಕೆರೆ: ಶ್ರೀ ಶಾರದಾ ಭಜನಾ ಮಂಡಳಿ ತಣ್ಣೀರು ಪಂತ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ವಲಯ ಸಹಯೋಗದಲ್ಲಿ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರವು ಭಜನಾ ಮಂಡಳಿಯ ವಠಾರದಲ್ಲಿ ಜರಗಿತು. ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಶಿಬಿರಾರ್ಥಿಗಳಿಗೆ ಶ್ರೀ ಮಹಾಭಾರತ ಕಥಾ ನಿರೂಪಣೆ ಮಾಡಿದರು. ಮಹಾಭಾರತವೂ ದಾಯಾದಿಗಳ ಕಲಹವಾದರೂ ಧರ್ಮ ಅಧರ್ಮಗಳ ಸಂಘರ್ಷವಾಗಿದೆ. ಶ್ರೀ ಕೃಷ್ಣನು ಪಾಂಡವರ ಮೂಲಕ ಧರ್ಮವನ್ನು ಉದ್ದರಿಸಿ ಸತ್ಯ

ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶ್ರೀ ಮಹಾಭಾರತ ಕಥಾವ್ಯಾಖ್ಯಾನ Read More »

ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು: ಕುಣಿಗಲ್ ಸಮೀಪ ಬೈಕ್ ಮತ್ತು ಕೋಳಿ ಸಾಗಾಟ ವಾಹನ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯವಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನನ್ನು ಬೆಳ್ಳಾರೆಯ ವಾಸುದೇವ ರೈ – ಶರ್ಮಿಳಾ ವಿ. ರೈ ದಂಪತಿ ಪುತ್ರ ಸೂರಜ್ ರೈ (27) ಎಂದು ಗುರುತಿಸಲಾಗಿದೆ. ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಸೂರಜ್ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ಅವರ ಬೈಕ್ ಮತ್ತು ಕೋಳಿ ಸಾಗಾಟದ ವಾಹನದ ನಡುವೆ ಕುಣಿಗಲ್ ಸಮೀಪ ಅಪಘಾತವಾಗಿತ್ತು. ಈ ದುರ್ಘಟನೆಯಲ್ಲಿ

ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು Read More »

ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರ ದಾರುಣ ಅಂತ್ಯ

ಮಂಡ್ಯ: ಶ್ರೀರಂಗಪಟ್ಟಣದ ಬಲಮುರಿಯ ಕಾವೇರಿ ನದಿಯಲ್ಲಿ ಈಜುವುದಕ್ಕೆಂದು ಹೋದ ಇಬ್ಬರು ಯುವಕರು ಮೃತಪಟ್ಚ ಘಟನೆ ವರದಿಯಾಗಿದೆ. ಮೃತರನ್ನು ಮೈಸೂರು ನಗರದ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್‌ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿಯ ತಮರವಾಡಿ ಗ್ರಾಮದ ಮೋಹನ್ ಕುಮಾರ್(21) ಮತ್ತು ಮೈಸೂರಿನ ಜಯಪುರದ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಎಂದು ಗುರುತಿಸಲಾಗಿದೆ. ಇಬ್ಬರೂ ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ಮತ್ತೊಬ್ಬ ಗೆಳೆಯ ವಿಕಾಸ್ ಜೊತೆಗೆ ಬಲಮುರಿ ಪ್ರವಾಸಿ ತಾಣಕ್ಕೆ ಬಂದಿದ್ದರು. ಈ ವೇಳೆ

ಕಾವೇರಿ ನದಿಯಲ್ಲಿ ಮುಳುಗಿ ಯುವಕರಿಬ್ಬರ ದಾರುಣ ಅಂತ್ಯ Read More »

ಹಳೆ ದ್ವೇಷದಿಂದ ಕೃಷಿಕನಿಗೆ ಹಲ್ಲೆ: ದೂರು ದಾಖಲು

ಕಡಬ: ಹಳೇ ದ್ವೇಷ ಮತ್ತು ಮನೆಯ ಹೆಂಚು ತೆಗೆಯುವ ವಿಷಯಕ್ಕೆ ಸಂಬಂಧಿಸಿದ ಹಾಗೆ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಜೀವ ಹೆದರಿಕೆ ಒಡ್ಡಿರುವ ಘಟನೆ ಕುಟ್ರುಪ್ಪಾಡಿಯ ಉಳಿಪುವಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಹಾಗೆ ಇಬ್ಬರು ಆರೋಪಿಗಳ ವಿರುದ್ದ ಕಡು ಪೊಲೀಸರು ಕೇಸು ದಾಖಲು ಮಾಡಿದ್ದಾರೆ. ಕೃಷಿಕ ಶೇಖರ ಗೌಡ (45) ಎಂಬವರೇ ಹಲ್ಲೆಗೆ ಒಳಗಾದವರು‌. ಗಾಯಗೊಂಡಿರುವ ಶೇಖರ ಅವರನ್ನು ಕಂಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳಾದ ಸುನೀಲ್ ಮತ್ತು

ಹಳೆ ದ್ವೇಷದಿಂದ ಕೃಷಿಕನಿಗೆ ಹಲ್ಲೆ: ದೂರು ದಾಖಲು Read More »

ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ನೂತನ ಸೇತುವೆಯ ಕೆಳಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿದೆ. ಮೃತನನ್ನು ಗೂಡಿನ ಬಳಿ ನಿವಾಸಿ ಇರ್ಫಾನ್ (36) ಎಂದು ಗುರುತಿಸಲಾಗಿದೆ. ಸೇತುವೆ ಕೆಳಭಾಗದಲ್ಲಿ ಇಂದು ಮುಂಜಾನೆ ಇರ್ಫಾನ್ ಶವ ಸಿಕ್ಕಿದೆ. ಬಂಟ್ವಾಳ ಪುರಸಭಾ ಪೌರ ಕಾರ್ಮಿಕರು ತ್ಯಾಜ್ಯ ನಿರ್ವಹಣೆ ಮಾಡುತ್ತಿದ್ದ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ಮೃತದೇಹ ಕಂಡಿದೆ. ಶವವನ್ನು ಸ್ಥಳೀಯರು ನದಿಯಿಂದ ಮೇಲಕ್ಕೆತ್ತಿ, ಗುರುತು ಪತ್ತೆಗಾಗಿ ಬಂಟ್ವಾಳ‌ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಬಳಿಕ ಮೃತ ವ್ಯಕ್ತಿಯ ಗುರುತು

ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ Read More »

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ಗೆ ಅವಕಾಶ: ರಾಜ್ಯ ಸರ್ಕಾರದ ವಿರುದ್ಧ ಮುತಾಲಿಕ್ ಕಿಡಿ

ದಾವಣಗೆರೆ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ. ಮುಸ್ಲಿಮರನ್ನು ಓಲೈಸುವ ದೃಷ್ಟಿಯಿಂದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಚುನಾವಣಾ ಬಳಿಕ ಮುಸಲ್ಮಾನರ ವಿರೋಧ ಸರಿಪಡಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ಸಂಬಂಧ ಮುಸ್ಲಿಂ ವಿದ್ಯಾರ್ಥಿನಿಯರೇ ಕೋರ್ಟ್‌ಗೆ ಹೋಗಿದ್ದರು. ಆದರೆ ಹಿಜಾಬ್ ಕಡ್ಡಾಯ ಎಂದು ಕುರಾನ್‌ನಲ್ಲಿ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಶಾಲೆಯ ಗೇಟಿನ

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ಗೆ ಅವಕಾಶ: ರಾಜ್ಯ ಸರ್ಕಾರದ ವಿರುದ್ಧ ಮುತಾಲಿಕ್ ಕಿಡಿ Read More »

error: Content is protected !!
Scroll to Top