ಕೌಟುಂಬಿಕ ಕಲಹ : ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಮೂಡುಕೋಡಿ ಗ್ರಾಮದ ನಿವಾಸಿ ವೆಂಕಟ್ರಮಣ ಭಟ್ (71) ಎಂಬವರ ಸೊಸೆ  ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆ ತನ್ನ ತಾಯಿ ಹಾಗೂ ಸಹೋದರ […]

ಕೌಟುಂಬಿಕ ಕಲಹ : ಜೀವ ಬೆದರಿಕೆ Read More »

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಪ್ರವಾಸಿಗರಲ್ಲಿ ಆತಂಕ

ಚಾರ್ಮಾಡಿ :  ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರು ಆತಂಕಗೊಂಡ ಘಟನೆ ನಡೆದಿದೆ. ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲಿ ಅತ್ತಿದಿಂತ್ತ ತಿರುಗಾಡುತ್ತಿದ್ದರಿಂದ ವಾಹನ ಸಂಚಾರರು ಗಲಿಬಿಲಿಗೊಂಡು ಆತಂಕಕ್ಕೊಳಗಾದರು. ಪರಿಣಾಮ ವಾಹನಗಳು ಸಾಲುಗಟ್ಟಿ ನಿಂತಿದ್ದವು ಎನ್ನಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ | ಪ್ರವಾಸಿಗರಲ್ಲಿ ಆತಂಕ Read More »

ವಿದ್ಯಾಸಂಸ್ಥೆಗಳು ವಿದ್ಯಾರ್ಥಿ ಸುಪ್ತ ಪ್ರತಿಭೆ ಹೊರ ತರುವ ಕೆಲಸ ಮಾಡುತ್ತದೆ | ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಸವಣೂರು ಕೆ. ಸೀತಾರಾಮ ರೈ

ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭ ಮಂಗಳವಾರ ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾಸಂಸ್ಥೆಗಳು ಪ್ರತಿಯೊಬ್ಬ ವಿದ್ಯಾರ್ಥಿಯ ಸುಪ್ತ ಪ್ರತಿಭೆಯನ್ನು ಗುರುತಿಸಿ ಹೊರತರುವಂತಹ ಕೆಲಸವನ್ನು ಮಾಡುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಒಬ್ಬ ವ್ಯಕ್ತಿಯನ್ನು ಆದರ್ಶವಾಗಿ ಇಟ್ಟುಕೊಂಡು ತಮ್ಮ ಸಾಧನೆಯನ್ನು ಮಾಡಬೇಕು. ಹಾಗೆಯೇ ಮತ್ತೊಬ್ಬರಲ್ಲಿರುವ ಒಳ್ಳೆಯತನವನ್ನು ಅನುಸರಿಸಿ ಕಲಿಯಬೇಕು ಎಂದರು. ಮುಖ್ಯ ಅತಿಥಿಯಾಗಿ ವಿವೇಕಾನಂದ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವ, ನಿವೃತ್ತ ಉಪನ್ಯಾಸಕ ಡಾ.

ವಿದ್ಯಾಸಂಸ್ಥೆಗಳು ವಿದ್ಯಾರ್ಥಿ ಸುಪ್ತ ಪ್ರತಿಭೆ ಹೊರ ತರುವ ಕೆಲಸ ಮಾಡುತ್ತದೆ | ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಸವಣೂರು ಕೆ. ಸೀತಾರಾಮ ರೈ Read More »

ಹಿರಿಯ ವಿದ್ವಾಂಸ, ನಿವೃತ್ತ ಉಪನ್ಯಾಸಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

ಪುತ್ತೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ, ಹಿರಿಯ ಜಾನಪದ ವಿದ್ವಾಂಸ, ನಿವೃತ್ತ ಉಪನ್ಯಾಸಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಇಂದು ನಿಧನರಾದರು. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಇಂದು ಸಂಜೆ ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು. ಮೃತರು ಪತ್ನಿ ಸುಮಾ ಆರ್.ಆಚಾರ್, ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಸಹಾಯಕ ಪ್ರೊಫೆಸ್ಟರ್ ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆರ್., ಬೆಳ್ಳಾರೆ ಡಾ|ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ

ಹಿರಿಯ ವಿದ್ವಾಂಸ, ನಿವೃತ್ತ ಉಪನ್ಯಾಸಕ ಡಾ.ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ Read More »

ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಶಾಸಕರಿಗೆ ಮನವಿ

ಪುತ್ತೂರು: ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಪುತ್ತೂರು, ಕಡಬ, ಸುಳ್ಯ ತಾಲೂಕಿನ ವಾಹನ ಚಾಲನಾ ತರಬೇತಿ ಶಾಲೆಯ ಮುಖ್ಯಸ್ಥರು ಪುತ್ತೂರಿನ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ವಾಹನ ಚಾಲನೆಯ ಪರವಾನಿಗೆಗಾಗಿ ಚಾಲನಾ ಪರೀಕ್ಷೆಯನ್ನು ಇದುವರೆಗೆ ಪುತ್ತೂರಿನಲ್ಲಿಯೇ ನಡೆಲಾಗುತ್ತಿದ್ದು, ಸ್ಥಳಾವಕಾಶ ಕಡಿಮೆ ಇರುವ ಕಾರಣ ಇನ್ನು ಮುಂದೆ ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿ ಇರುವ ಹಿನ್ನಲೆಯಲ್ಲಿ ಮನವಿ ನೀಡಲಾಯಿತು. ಇದುವರೆಗೆ ಪುತ್ತೂರಿನ ಸಾರಿಗೆ ಇಲಾಖೆಯಲ್ಲಿಯೇ ಚಾಲನಾ ಪರೀಕ್ಷೆ ನಡೆಸಲಾಗುತ್ತಿತ್ತು. ಇದನ್ನು ಮಂಗಳೂರಿಗೆ ಬದಲಾಯಿಸಿದಲ್ಲಿ ಈ ಭಾಗದ ಜನರಿಗೆ ಮಂಗಳೂರಿಗೆ ಹೋಗಿ

ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಶಾಸಕರಿಗೆ ಮನವಿ Read More »

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ

ಬೆಂಗಳೂರು : ಡಿಕೆ ಶಿವಕುಮಾರರಂತಹ ಕಲಾಕಾರ ಕರ್ನಾಟಕದಲ್ಲೇ ಯಾರೂ ಇಲ್ಲ. ಹೀಗೆಂದು ಹೇಳಿದ್ದಾರೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ. ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಆ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಸರಿಯಾದ ಹಾದಿಯಲ್ಲಿ ಸಾಗುತ್ತಿದ್ದಂತೆ ಕಾಣ್ಣಿಲ್ಲ. ಕಾರು ಚಾಲಕ ಕಾರ್ತಿಕ್ ಹೇಗೆ ಹೊರಗೆ ಹೋದ್ರು ಅವರನ್ನು ಯಾಕೆ ವಶಕ್ಕೆ ಪಡೆದಿಲ್ಲ? ಚುನಾವಣೆ ಕೊನೆಯಲ್ಲಿ ಏನೋ ಪ್ರಯತ್ನ ಮಾಡಿದ್ರು. ಈ ಎಲ್ಲದರ ಸೂತ್ರದಾರ ಡಿಕೆ ಶಿವಕುಮಾರ ಎಂದು ಆರೋಪಿಸಿದರು. ಕಾಂಗ್ರೆಸ್ ವಿಧಾನಸಭಾ ಚುನಾವಣೆ

ಪ್ರಜ್ವಲ್ ರೇವಣ್ಣ ಪೆನ್‍ ಡ್ರೈವ್ ಪ್ರಕರಣ | ಎಲ್ಲದರ ಸೂತ್ರಧಾರ ಡಿ.ಕೆ.ಶಿವಕುಮಾರ್ : ಡಿ.ವಿ.ಸದಾನಂದ ಗೌಡ Read More »

ಹಿಂ.ಜಾ.ವೇ.ಮುಖಂಡ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ

ಪುತ್ತೂರು: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್‍ ತಡೆ ನೀಡಿದೆ. ವಿಟ್ಲ ಪೋಲಿಸರು ಚುನಾವಣೆಯ ಒಂದು ದಿನ ಮುಂಚಿತವಾಗಿ ನಡುರಾತ್ರಿ ಮನೆಗೆ ನುಗ್ಗಿ ರಜಪೂತ್‍ ರನ್ನು ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಹಿರಿಯ ವಕೀಲ ಅರುಣ್ ಶ್ಯಾಮ್ ಗಡಿಪಾರಿಗೆ ಹೈಕೋರ್ಟಿನಲ್ಲಿ ತಡೆ ತಂದಿದ್ದಾರೆ. ವಕೀಲರಾದ ಪ್ರಾಂತ ನ್ಯಾಯ ಜಾಗರಣ ಕಿಶೋರ್ ಕುಮಾರ್, ಜಿಲ್ಲಾ ನ್ಯಾಯಾ ಜಾಗರಣದ ರಾಜೇಶ್ ಬೊಲ್ಲುಕಲ್ಲು ಸಹಕರಿಸಿದ್ದರು.

ಹಿಂ.ಜಾ.ವೇ.ಮುಖಂಡ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ Read More »

ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ಬಿ.ಸಿ.ರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪ್ರಜ್ವಲ್ ಮೇ 5 ರಂದು ಬಿ.ಸಿರೋಡಿನ ಖಾಸಗಿ ಬಸ್‌ ನಿಲ್ದಾಣದ ಹತ್ತಿರವಿರುವ ಹೋಟೆಲ್ ಕೃಷ್ಣಿ ಮಾದಲ್ಲಿ ರೂಮ್ ಮಾಡಿದ್ದ, ಮೇ 6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಇಂದು ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಕಾರಣ ಹೋಟೆಲ್

ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಎರಡನೇ ಹಂತದ ಲೋಕಸಭೆ ಚುನಾವಣೆ | ರಾಜ್ಯದಲ್ಲಿ ಮಧ್ಯಾಹ್ನ ಶೇ.41.59 ರಷ್ಟು ಮತದಾನ

ಬೆಂಗಳೂರು : 2024ನೇ ಸಾಲಿನ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದ ಪ್ರಕ್ರಿಯೆ ಪ್ರಗತಿಯಲ್ಲಿ ಸಾಗಿದೆ. ಬೆಳಗ್ಗೆ ಗಂಟೆ 7 ರಿಂದ ಮತದಾನ ಶುರುವಾಗಿದ್ದು, ಮತದಾರರು ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ದೇಶದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ದೇಶದಲ್ಲಿ ಶೇಕಡಾ 40ರಷ್ಟು ಮತ್ತು ಕರ್ನಾಟಕದಲ್ಲಿ ಶೇ. 41.59ರಷ್ಟು ಮತದಾನವಾಗಿದೆ. ಚಿಕ್ಕೋಡಿಯಲ್ಲಿ ಶೇ 45 ರಷ್ಟು, ಉತ್ತರ ಕನ್ನಡದಲ್ಲಿ ಶೇ 44.22 ರಷ್ಟು, ಶಿವಮೊಗ್ಗದಲ್ಲಿ ಶೇ 44.98 ರಷ್ಟು, ಬೆಳಗಾವಿಯಲ್ಲಿ ಶೇ.40.57 ರಷ್ಟು, ಬಳ್ಳಾರಿಯಲ್ಲಿ ಶೇ 44.36ರಷ್ಟು,

ಎರಡನೇ ಹಂತದ ಲೋಕಸಭೆ ಚುನಾವಣೆ | ರಾಜ್ಯದಲ್ಲಿ ಮಧ್ಯಾಹ್ನ ಶೇ.41.59 ರಷ್ಟು ಮತದಾನ Read More »

ಮೇ 10 ರಿಂದ ಕೇದಾರನಾಥ ದೇವಾಲಯ ಭಕ್ತರ  ದರ್ಶನಕ್ಕೆ ಮುಕ್ತ

ಕೇದಾರನಾಥ : ಕೇದಾರನಾಥ ಧಾಮದಲ್ಲಿ ಭಾನುವಾರದಿಂದ ವಿಶೇಷ ಪೂಜೆಗಳು ಆರಂಭವಾಗಿದೆ. ಮೇ 10 ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಾನುವಾರ ಸಂಜೆ ಉಖಿಮಠದ ಓಂಕಾರೇಶ್ವರ ದೇವಸ್ಥಾನದಲ್ಲಿ ಭೈರವನಾಥ ದೇವರಿಗೆ ಅರ್ಚಕರು ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರ ಉಖಿಮಠದ  ಓಂಕಾರೇಶ್ವರ ದೇವಸ್ಥಾನದಿಂದ  ಪಂಚಮುಖಿ ಭೋಗಮೂರ್ತಿ ಪಲ್ಲಕಿ ಯಾತ್ರೆ ಆರಂಭವಾಯಿತು. ಇದೇ ತಿಂಗಳ 9ರಂದು ಕೇದಾರನಾಥ ಧಾಮ ತಲುಪಲಿದೆ. ಈ ತಿಂಗಳ 10 ರಂದು ಬೆಳಿಗ್ಗೆ 7 ಗಂಟೆಗೆ ಕೇದಾರನಾಥ ಧಾಮದ ಬಾಗಿಲು ಭಕ್ತರಿಗೆ ಪೂಜೆಗಾಗಿ ತೆರೆಯಲಾಗುತ್ತದೆ. ರುದ್ರಪ್ರಯಾಗದಲ್ಲಿರುವ 

ಮೇ 10 ರಿಂದ ಕೇದಾರನಾಥ ದೇವಾಲಯ ಭಕ್ತರ  ದರ್ಶನಕ್ಕೆ ಮುಕ್ತ Read More »

error: Content is protected !!
Scroll to Top