ನಾಳೆ (ಮೇ1) : ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಮಳೆಗಾಗಿ ವಿಶೇಷ ಪೂಜೆ

ಪುತ್ತೂರು: ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಶೀಘ್ರ ಮಳೆಗಾಗಿ ವಿಶೇಷ ಪೂಜೆ ಮೇ1 ರಂದು ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಬ್ರಹ್ಮಶ್ರೀ ಕೆಮ್ಮಿಂಜೆ ಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ 12 ಕಾಯಿ ಗಣಪತಿ ಹವನ, ಆಶ್ಲೇಷ ಬಲಿ, ಶತ ರುದ್ರಾಭಿಷೇಕ, ಸೀಯಾಳ ಅಭಿಷೇಕ, ಕಲಶಾಭಿಷೇಕ ಸೇವೆಗಳೊಂದಿಗೆ ಶೀಘ್ರ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ. ಸೀಯಾಳ ಅಭಿಷೇಕ ಹಾಗೂ ಶತರುದ್ರ ಅಭಿಷೇಕ ಸೇವೆಗೆ ಸೀಯಾಳ ಅಗತ್ಯವಿದ್ದು ಆದಷ್ಟು ಸೀಯಾಳವನ್ನು ಇಂದು (ಏ.30) ದೇವಳಕ್ಕೆ […]

ನಾಳೆ (ಮೇ1) : ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಮಳೆಗಾಗಿ ವಿಶೇಷ ಪೂಜೆ Read More »

ಬನ್ನೂರು ನಿವಾಸಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಬನ್ನೂರಿನ ಮೇಲ್ಮಜಿಲು ನಿವಾಸಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಸೋಮವಾರ ನಡೆದಿದೆ. ಸೀತಾರಾಮ ಶೆಟ್ಟಿ (45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಡವರು. ಖಾಸಗಿ ಗ್ಯಾಸ್ ಕಂಪೆನಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದ ಇವರು, ಮನೆಮನೆಗೆ ಗ್ಯಾಸ್ ಪೂರೈಕೆ ಮಾಡುತ್ತಿದ್ದರು. ಮನೆಯ ಒಳಗಡೆ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮಂಗಳೂರು ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಪತ್ನಿ

ಬನ್ನೂರು ನಿವಾಸಿ ನೇಣು ಬಿಗಿದು ಆತ್ಮಹತ್ಯೆ Read More »

ಮಾಜಿ ಸಿಎಂ ಎಸ್‌ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 22ರಂದು ಎಸ್‌ಎಂ ಕೃಷ್ಣ ಅವರು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಟಾರ್ಜ್ ಆಗಿದ್ದರು. ಇದೀಗ ಇಂದು (ಏಪ್ರಿಲ್ 29) ಎಸ್‌ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಎಸ್‌ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದರಿಂದ ಅವರು

ಮಾಜಿ ಸಿಎಂ ಎಸ್‌ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು Read More »

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

ಪುತ್ತೂರು: ಕಲಿತು ಹೊರಬಂದ ಪ್ರತಿಯೊಬ್ಬ ಹಿರಿಯ ವಿದ್ಯಾರ್ಥಿಯೂ ಆ ವಿದ್ಯಾ ಸಂಸ್ಥೆಯ ರಾಯಭಾರಿಯಾಗುವುದರ ಜತೆಯಲ್ಲಿ ಅಲ್ಲಿನ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾ ಸಂಸ್ಥೆಯ ಬೆಳವಣಿಗೆಗೆ ಸಹಾಯಕರಾಗಬೇಕು ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಶ್ರೀರಾಮ ಸಭಾಭವನದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತಾಡಿದರು. ಸಂಸ್ಥೆಯಲ್ಲಿ ಕಲಿಯುವ ಕಿರಿಯ ವಿದ್ಯಾರ್ಥಿಗಳ ಹಿತಕ್ಕಾಗಿ ಕ್ಯಾಂಪಸ್

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ Read More »

ನೆಹರುನಗರ ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಕಾಮಗಾರಿ ಸಂಪೂರ್ಣಗೊಂಡಿದ್ದು, ಇದೀಗ ಪಾದಚಾರಿಗಳ, ವಾಹನ ಸಂಚಾರಕ್ಕೆ ತೆರದುಕೊಂಡಿದೆ. ಕಳೆದ ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಈ ಸೇತುವೆ ಅಗಲ ಕಿರಿದಾಗಿತ್ತು. ಒಂದು ಬಾರಿಗೆ ಒಂದೇ ನಾಲ್ಕು ಚಕ್ರದ ವಾಹನ ಚಲಿಸುವಂತಿತ್ತು. ಇದೀಗ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಆದರೆ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಯಾವುದೇ ಕಾರ್ಯಕ್ರಮದ ಮೂಲಕ ಉದ್ಘಾಟನೆ ಮಾಡುವ ಹಾಗಿಲ್ಲ. ಅಂತೂ ವಾಹನಗಳು, ಪಾದಚಾರಿಗಳು ಇದೀಗ ಸಂಚರಿಸುವಂತಾಗಿದೆ.

ನೆಹರುನಗರ ವಿವೇಕಾನಂದ ಕಾಲೇಜು ಸಂಪರ್ಕ ರೈಲ್ವೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ Read More »

ಗುರು ಪರಂಪರೆ ಅತ್ಯಂತ ಶ್ರೇಷ್ಠ ಪರಂಪರೆ : ಡಾ. ಶ್ರೀಧರ ಹೆಚ್.ಜಿ | ವಿವೇಕಾನಂದ ಕಾಲೇಜಿನಲ್ಲಿ ಭವಿಷ್ ಶಿಬಿರ ಉದ್ಘಾಟನೆ

ಪುತ್ತೂರು: ಭಾರತೀಯ ಸಂಸ್ಕೃತಿಯಲ್ಲಿ ಗುರು ಪರಂಪರೆ ಎನ್ನುವುದು ಅತ್ಯಂತ ಶ್ರೇಷ್ಠವಾದ ಪರಂಪರೆ. ರಾಮಾಯಣ, ಮಹಾಭಾರತ, ವೈದಿಕ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರವಾದ ಸ್ಥಾನವಿದೆ. ಜ್ಞಾನದ ದಾರಿಯಲ್ಲಿ ಪ್ರವೇಶ ಮಾಡಲು ಮೊದಲು ಮನಸ್ಸನ್ನು ನಿಗ್ರಹಿಸಬೇಕು. ನಮ್ಮ ಜ್ಞಾನದ ಹಾದಿಯನ್ನು ನಾವೇ ಹುಡುಕಿ ಅದರಲ್ಲಿ ಮುನ್ನುಗ್ಗಬೇಕು. ಜೀವನದಲ್ಲಿ ಅಧ್ಯಯನವಿಲ್ಲದೆ ಯಾವುದು ಪರಿಪೂರ್ಣವಾಗುವುದಿಲ್ಲ. ಅಧ್ಯಯನ ಮಾಡಲು ಆಸಕ್ತಿ ಮುಖ್ಯ ಎಂದು ವಿವೇಕಾನಂದ ಕಾಲೇಜಿನ ಪರೀಕ್ಷಾಂಗ ಕುಲ ಸಚಿವ ಡಾ.ಶ್ರೀಧರ್ ಹೆಚ್.ಜಿ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)

ಗುರು ಪರಂಪರೆ ಅತ್ಯಂತ ಶ್ರೇಷ್ಠ ಪರಂಪರೆ : ಡಾ. ಶ್ರೀಧರ ಹೆಚ್.ಜಿ | ವಿವೇಕಾನಂದ ಕಾಲೇಜಿನಲ್ಲಿ ಭವಿಷ್ ಶಿಬಿರ ಉದ್ಘಾಟನೆ Read More »

ಭೋಜ್ ಪುರಿ ನಟಿ ಅಮೃತಾ ಪಾಂಡೆ ನೇಣಿಗೆ ಶರಣು !

ಬಿಹಾರ್ :  ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಮೃತಾ ಪಾಂಡೆ ಅವರು ತನ್ನ ಪತಿಯೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಸಂಬಂಧಿಕರ ಮದುವೆಯ ಹಿನ್ನೆಲೆಯಲ್ಲಿ ಬಿಹಾರದ ಭಾಗಲ್‌ಪುರಕ್ಕೆ ಭೇಟಿ ನೀಡಿದ್ದರು. ಆದರೆ ಭಾಗಲ್‌ಪುರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ಕೆಲವೇ ಗಂಟೆ ಮುಂಚೆ ಅಮೃತಾ ಪಾಂಡೆ ವಾಟ್ಸ್‌

ಭೋಜ್ ಪುರಿ ನಟಿ ಅಮೃತಾ ಪಾಂಡೆ ನೇಣಿಗೆ ಶರಣು ! Read More »

ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಬಿಳಿಯೂರು ಶಾಲೆಯಲ್ಲಿ ಚಾಲನೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರ ಏ.28 ರಿಂದ ಮೇ4 ರ ತನಕ ನಡೆಯಲಿದ್ದು, ಬಿಳಿಯೂರು ಹಿ. ಪ್ರಾ ಶಾಲೆಯಲ್ಲಿ ಭಾನುವಾರ ಚಾಲನೆ ನೀಡಲಾಯಿತು. ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ಸಶಕ್ತ ಭಾರತಕ್ಕಾಗಿ ಯುವಜನತೆ ಎಂಬ ಘೋಷಣೆಯೊಂದಿಗೆ ಏಳು ದಿನಗಳ ಕಾಲ ನಡೆಯಲಿರುವ ಕಾಲೇಜಿನ ಎನ್ ಎಸ್ ಎಸ್ ಘಟಕಗಳ ವಾರ್ಷಿಕ ವಿಶೇಷ ಶಿಬಿರವನ್ನು ಬಿಳಿಯೂರು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಳಿನಿ ಉದ್ಘಾಟಿಸಿ, ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು

ಸಂತ ಫಿಲೋಮಿನಾ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಬಿಳಿಯೂರು ಶಾಲೆಯಲ್ಲಿ ಚಾಲನೆ Read More »

ಕೆರೆಮೂಲೆ ದಿವಾಕರ ನಾಪತ್ತೆ !

ಪುತ್ತೂರು: ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆರೆಮೂಲೆ ದಿ.ಸಂಖಪ್ಪ ಪೂಜಾರಿ ಅವರ ಪುತ್ರ ದಿವಾಕರ (38) ನಾಪತ್ತೆಯಾದವರು. ಅರಿಯಡ್ಕ ಗ್ರಾಮದ ಕೆರೆಮೂಲೆಯವರಾದ ದಿವಾಕರ ಅಡುಗೆ ಕೆಲಸಕ್ಕೆ ಸಹಾಯಕರಾಗಿ ಹೋಗುತ್ತಿದ್ದು, ಏ.27 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ದಿವಾಕರ ಅವರ ಮೊಬೈಲ್ ಸ್ವಿಚ್ ಆಫ್‍ ಆಗಿದೆ ಎಂದು ಅವರ ಚಿಕ್ಕಪ್ಪ ಸೀತಾರಾಮ ಪೂಜಾರಿಯವರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಕೆರೆಮೂಲೆ ದಿವಾಕರ ನಾಪತ್ತೆ ! Read More »

ಸುಳ್ಯ ಶ್ರೀ ಚೆನ್ನಕೇಶವ ದೇವರಿಗೆ ಬ್ರಹ್ಮರಥ ನಿರ್ಮಾಣ | ವೀಳ್ಯ ಪ್ರದಾನ

ಸುಳ್ಯ:  ಶ್ರೀ ಚನ್ನಕೇಶವ ದೇವರಿಗೆ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆ ಡಾ.ಕೆ.ವಿ ಚಿದಾನಂದ ರವರು ಸಮರ್ಪಿಸುವ ನೂತನ ಬ್ರಹ್ಮ ರಥ ನಿರ್ಮಾಣಕ್ಕೆ ವೀಳ್ಯ ಪ್ರದಾನ ಮಾಡಲಾಯಿತು. ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥಿಸಿ ರಥ ಶಿಲ್ಪಿ ಕೋಟೇಶ್ವರ ರಾಜಗೋಪಾಲ ಆಚಾರ್ಯ ರಿಗೆ ವೀಳ್ಯಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರ ಹರಪ್ರಸಾದ ತುದಿಯಡ್ಕ. ಡಾ .ಕೆ.ವಿ ಚಿದಾನಂದ ದಂಪತಿ, ಲಿಂಗಪ್ಫ ಗೌಡ ಕೇರ್ಪಳ, ಡಾ.ಲೀಲಾಧರ, ಹರಿರಾಯ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಸುಳ್ಯ ಶ್ರೀ ಚೆನ್ನಕೇಶವ ದೇವರಿಗೆ ಬ್ರಹ್ಮರಥ ನಿರ್ಮಾಣ | ವೀಳ್ಯ ಪ್ರದಾನ Read More »

error: Content is protected !!
Scroll to Top