ಧಾರ್ಮಿಕ ಕೇಂದ್ರ ಧರ್ಮ ಶಿಕ್ಷಣ ನೀಡುವ ಕೇಂದ್ರವಾಗಬೇಕು : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ದೇವಸ್ಥಾನ ಆಡಂಬರ ಭಕ್ತಿ ಪ್ರದರ್ಶನ ಕೇಂದ್ರವಾಗಬಾರದು : ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ |ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ

ಪುತ್ತೂರು: ದೇವಸ್ಥಾನದ ಜೀರ್ಣೋದ್ಧಾರದ ಮೂಲಕ ನಮ್ಮ ಆತ್ಮೋದ್ದಾರದ ಕಾರ್ಯವಾಗುತ್ತಿದೆ. ಧಾರ್ಮಿಕ ಕೇಂದ್ರಗಳು ಶಿಕ್ಷಣ ನೀಡುವ ಕೇಂದ್ರವಾಗಬೇಕು. ಜನರಿಗೆ ಧಾರ್ಮಿಕ ಕೇಂದ್ರಗಳಲ್ಲಿ ಧರ್ಮ ಶಿಕ್ಷಣ ನೀಡಬೇಕಾದ ಅವಶ್ಯಕತೆಯಿದೆ ಎಂದು ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಜಿಯವರು ಹೇಳಿದರು. ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಏ.25 ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ವಿಜ್ಞಾನದಲ್ಲಿ ಆವಿಷ್ಕಾರವಿದೆ. ಪರಿವರ್ತನೆಯೇ ವಿಜ್ಞಾನ. ಆದರೆ ಆಧ್ಯಾತ್ಮಿಕ ಅವಿಷ್ಕಾರ ಇಲ್ಲ. ಯುವಕರ ಶಕ್ತಿಯಿಂದ ಜಗತ್ತು ಬದಲಾಯಿಸಲು ಸಾಧ್ಯ. […]

ಧಾರ್ಮಿಕ ಕೇಂದ್ರ ಧರ್ಮ ಶಿಕ್ಷಣ ನೀಡುವ ಕೇಂದ್ರವಾಗಬೇಕು : ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ | ದೇವಸ್ಥಾನ ಆಡಂಬರ ಭಕ್ತಿ ಪ್ರದರ್ಶನ ಕೇಂದ್ರವಾಗಬಾರದು : ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ |ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ಸುಬ್ರಹ್ಮಣ್ಯ, ಗಣಪತಿ, ದುರ್ಗಾದೇವಿ ಪ್ರತಿಷ್ಠೆ

ಪುತ್ತೂರು : ಕಳೆದ ಆರು ದಿನಗಳಿಂದ ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಶ್ರೀ ದೇವರ ಪ್ರತಿಷ್ಠಾಪನೆ ವೈಭವದಿಂದ ಇಂದು ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ 9.24 ರಿಂದ 10.15 ರ ಮಿಥುನ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಪುನಃ ಪ್ರತಿಷ್ಠೆ, ಶ್ರೀ ಗಣಪತಿ ಹಾಗೂ ದುರ್ಗಾದೇವಿ ಪ್ರತಿಷ್ಠೆ ನಡೆಯಿತು. ಮಧ್ಯಾಹ್ನ 12 ರಿಂದ ಪ್ರತಿಷ್ಠಾ ಬಲಿ, ಬ್ರಾಹ್ಮಣ ಹಸ್ತೋದಕ,  ಮಹಾಪೂಜೆ, ಪ್ರಸಾದ

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ | ಶ್ರೀ ಸುಬ್ರಹ್ಮಣ್ಯ, ಗಣಪತಿ, ದುರ್ಗಾದೇವಿ ಪ್ರತಿಷ್ಠೆ Read More »

ಲೋಕಸಭಾ ಚುನಾವಣೆ: ಸುಳ್ಯ ದಲ್ಲಿ 3 ಗಂಟೆ ವೇಳೆಗೆ 64.46%  ಮತದಾನ

ಸುಳ್ಯ : ಲೋಕಸಭಾ ಚುನಾವಣೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 3 ಗಂಟೆಯ ವೇಳೆಗೆ ಸುಮಾರು ಶೇ.64.46 ಮತದಾನವಾಗಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 233 ಬೂತ್ ಗಳಲ್ಲಿ ಮತದಾನ ನಡೆಯುತ್ತಿದೆ.  ಒಟ್ಟು 2 ಲಕ್ಷದ 8 ಸಾವಿರದ 853 ಮಂದಿ ಮತದಾರರಿದ್ದಾರೆ.

ಲೋಕಸಭಾ ಚುನಾವಣೆ: ಸುಳ್ಯ ದಲ್ಲಿ 3 ಗಂಟೆ ವೇಳೆಗೆ 64.46%  ಮತದಾನ Read More »

ಕರ್ನಾಟಕದಲ್ಲಿ  ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ | ದಕ್ಷಿಣ ಕನ್ನಡ , ಉಡುಪಿ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ ನಡೆದಿದೆ. ಬೆಂಗಳೂರು ನಗರದಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದರೆ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ ನಡೆದಿದೆ. ಬೆಂಗಳೂರು ಕೇಂದ್ರ 30.10%, ಬೆಂಗಳೂರು ಉತ್ತರ 32.25%, ಬೆಂಗಳೂರು ಗ್ರಾಮಾಂತರ 36.09%, ಬೆಂಗಳೂರು ದಕ್ಷಿಣ 31.51% ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ 48.10%, ಉಡುಪಿ- ಚಿಕ್ಕಮಗಳೂರಿನಲ್ಲಿ 46.43% ಮತದಾನ ದಾಖಲಾಗಿದೆ.

ಕರ್ನಾಟಕದಲ್ಲಿ  ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ | ದಕ್ಷಿಣ ಕನ್ನಡ , ಉಡುಪಿ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ Read More »

ಏ.26 -30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಳ

ಮಂಗಳೂರು: ಬೇಸಿಗೆಯ ತಾಪಮಾನ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹೆಚ್ಚುತ್ತಲೇ ಇದ್ದು, ಏ.26ರಿಂದ 30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆರೆಂಜ್ ಅಲರ್ಟ್ ಹೊರಡಿಸಿದೆ. ಭಾರತೀಯ ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ವರದಿ ಮಾಡಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ  ವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಸಿದೆ. ಕಲಬುರ್ಗಿ, ವಿಜಯಪುರ, ಯಾದಗಿರಿ,

ಏ.26 -30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಳ Read More »

ತಾಲೂಕು ದಂಢಾಧಿಕಾರಿಗಳಿಗೆ ಅವಾಚ್ಯ ಶಬ್ಧಗಳ ನಿಂದನೆ , ದೂರು ದಾಖಲು ಪ್ರಕರಣ ಇತ್ಯರ್ಥ

ಸುಳ್ಯ: ತಾಲೂಕು ದಂಢಾಧಿಕಾರಿಗಳಾದ ಜಿ ಮಂಜುನಾಥ್ ರವರಿಗೆ ಸಂಪಾಜೆ ಮೂಲದ ವ್ಯಕ್ತಿಯೋರ್ವರು ದೂರವಾಣಿ ಮೂಲಕ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಪೋಲಿಸ್ ಇಲಾಖೆಗೆ ದೂರು ನೀಡಿ ಪ್ರಕರಣ ಠಾಣೆಯಲ್ಲೆ ಇತ್ಯರ್ಥವಾದ ಘಟನೆ ವರದಿಯಾಗಿದೆ.  ಸಂಪಾಜೆ ಮೂಲದ ಧೀರಜ್ ಎಂಬುವ ವ್ಯಕ್ತಿ ತಮ್ಮ ಜಮೀನಿನ ಕುರಿತಾದ ವಿಚಾರದಲ್ಲಿ ದೂರವಾಣಿ ಕರೆ ಮಾಡಿದ್ದು ಈ ಸಂದರ್ಭದಲ್ಲಿ ತಾಲೂಕು ದಂಢಾಧಿಕಾರಿಗಳು ಚುನಾವಣಾ ಕರ್ತವ್ಯದ  ಹಿನ್ನಲೆ ಸಭೆಯಲ್ಲಿ ಭಾಗವಹಿಸಿದ್ದರು. ತಾವು ಸಭೆಯಲ್ಲಿರುವುದಾಗಿ ದೂರವಾಣಿ ಕರೆದಾರರಿಗೆ ತಿಳಿಸಿದ್ದರು ನಿರಂತರವಾಗಿ ಹಲವಾರು ಭಾರಿ ಕರೆ ಮಾಡತೊಡಗಿದರು

ತಾಲೂಕು ದಂಢಾಧಿಕಾರಿಗಳಿಗೆ ಅವಾಚ್ಯ ಶಬ್ಧಗಳ ನಿಂದನೆ , ದೂರು ದಾಖಲು ಪ್ರಕರಣ ಇತ್ಯರ್ಥ Read More »

ದ.ಕ ಕ್ಷೇತ್ರದಲ್ಲಿ ಮೊದಲ 4 ಗಂಟೆಯ ವೇಳೆಗೆ ಶೇ 30.96  ಮತದಾನ

ಸುಳ್ಯ: ಲೋಕಸಭಾ ಚುನಾವಣೆಯಲ್ಲಿ ದ.ಕ.ಲೋಕಸಭಾ ಕ್ಷೇತ್ರದಲ್ಲಿ ಮೊದಲ 4 ಗಂಟೆಯಲ್ಲಿ ಶೇ.30.96 ಮತದಾನವಾಗಿದೆ. 7 ಗಂಟೆಗೆ ಮತದಾನ ಆರಂಭಗೊಂಡಿದ್ದು 11 ಗಂಟೆಯ ವೇಳೆಗೆ ಶೇ.30.96 ಮತದಾರರು ಮತ ಚಲಾಯಿಸಿದ್ದಾರೆ. ಸುಳ್ಯದಲ್ಲಿ ಅತೀ ಹೆಚ್ಚು ಅಂದರೆ ಶೇ. 35.05 ಮತದಾನ ಆಗಿದೆ. ಬೆಳ್ತಂಗಡಿ 32.39, ಮೂಡಬಿದ್ರೆ 27.46, ಮಂಗಳೂರು ಉತ್ತರ 30.39, ಮಂಗಳೂರು ದಕ್ಷಿಣ 26.54, ಮಂಗಳೂರು 31.63, ಬಂಟ್ವಾಳ 32.28, ಪುತ್ತೂರು 32.98 ಶೇಖಡಾ ಮತದಾನ ಆಗಿದೆ. ಸುಳ್ಯದಲ್ಲಿ 73,209 ಮಂದಿ ಮತ ಚಲಾಯಿಸಿ ಶೆ.35.05 ಮತದಾನ ಆಗಿದೆ.

ದ.ಕ ಕ್ಷೇತ್ರದಲ್ಲಿ ಮೊದಲ 4 ಗಂಟೆಯ ವೇಳೆಗೆ ಶೇ 30.96  ಮತದಾನ Read More »

ಮತದಾನ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ ಮತದಾನ ಮಾಡಿದರು. ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು ಮತ ಚಲಾಯಿಸಿದರು.

ಮತದಾನ ಮಾಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್. ಪೂಜಾರಿ Read More »

ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ

ಮಂಗಳೂರು : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್‍ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಕ್ಕು ಚಲಾಯಿಸಿದರು. ಅವರು ಮಂಗಳೂರಿನ ರಥಬೀದಿಯ ಮತಗಟ್ಟೆಯಲ್ಲಿ ಮತದಾನ  ಮಾಡಿದರು.

ಮತದಾನಕ್ಕಾಗಿ ಸರದಿ ಸಾಲಿನಲ್ಲಿ ನಿಂತ ಬ್ರಿಜೇಶ್ ಚೌಟ Read More »

ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಮಾಜಿ ಶಾಸಕ ಸಂಜೀವ ಮಠಂದೂರು

ಉಪ್ಪಿನಂಗಡಿ : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರತೀ ಬೂತ್‍ ಗಳಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ. ಹಿರೇಬಂಡಾಡಿ ಬೂತ್ 49 ರಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರವರು ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತರು.

ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಮಾಜಿ ಶಾಸಕ ಸಂಜೀವ ಮಠಂದೂರು Read More »

error: Content is protected !!
Scroll to Top