ಮತದಾನ ಜಾಗೃತಿ ಬೀದಿ ನಾಟಕ | ಸ್ವಾಭಿಮಾನದಿಂದ ತಮ್ಮ ಹಕ್ಕು ಚಲಾಯಿಸುವಂತೆ ನಾಟಕದ ಮೂಲಕ ಕರೆ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು, ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮತದಾನ ಜಾಗೃತಿ ಬೀದಿ ನಾಟಕವನ್ನು ಆಯೋಜಿಸಲಾಗಿತ್ತು. ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಸಂಸಾರ ಜೋಡು ಮಾರ್ಗ ನಿರ್ದೇಶಕ ಹಾಗೂ ಪತ್ರಕರ್ತ ಮೌನೇಶ್ ವಿಶ್ವಕರ್ಮ ಅವರ ನಿರ್ದೇಶನದಲ್ಲಿ ಬೀದಿನಾಟಕವನ್ನು ಸೊಗಸಾಗಿ ಪ್ರಸ್ತುತಪಡಿಸಿದರು. ಬೀದಿನಾಟಕದ ಮೂಲಕ ವಿದ್ಯಾರ್ಥಿಗಳು ಪ್ರಜಾ ಪ್ರಭುತ್ವದ ಮಹತ್ವದ ಬಗ್ಗೆ, ಯೋಗ್ಯ ಅಭ್ಯರ್ಥಿಯನ್ನು […]

ಮತದಾನ ಜಾಗೃತಿ ಬೀದಿ ನಾಟಕ | ಸ್ವಾಭಿಮಾನದಿಂದ ತಮ್ಮ ಹಕ್ಕು ಚಲಾಯಿಸುವಂತೆ ನಾಟಕದ ಮೂಲಕ ಕರೆ Read More »

ಲೋಕಸಭೆ ಚುನಾವಣೆ : ಏ.24-26 ರ ವರೆಗೆ ಮದ್ಯದಂಗಡಿ ಬಂದ್

ಮಂಗಳೂರು: ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.24. ಸಂಜೆ 6 ಗಂಟೆಯಿಂದ 26ರ ವರೆಗೆ ಮದ್ಯಪಾನ ನಿಷೇಧ ಘೋಷಣೆ ಮಾಡಲಾಗಿದೆ. ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ. ಈ ದಿನಗಳಂದು ಎಲ್ಲಾ

ಲೋಕಸಭೆ ಚುನಾವಣೆ : ಏ.24-26 ರ ವರೆಗೆ ಮದ್ಯದಂಗಡಿ ಬಂದ್ Read More »

ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ

ಪುತ್ತೂರು: ಕೋಡಿಂಬಾಡಿ ಮಠಂತಬೆಟ್ಟು ಗುಲಾಬಿ ಅನಂತ ರೈ (88) ವಯೋಸಹಜ, ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳವಾರ ನಿಧನರಾದರು. ಮೃತರು ಮಠಂತಬೆಟ್ಟು ಕೀರ್ತಿಶೇಷ ಪಟೇಲ್ ಅನಂತ ರೈಯವರ ಧರ್ಮಪತ್ನಿಯಾಗಿದ್ದು, ಆ ಕಾಲದ ಕೋಡಿಂಬಾಡಿ ಪಂಚಾಯಿತಿ ಪ್ರತಿನಿಧಿಯಾಗಿದ್ದರು. ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯರಾಗಿದ್ದು, ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಕ್ಷೇತ್ರದಲ್ಲಿ ಜನಾನುರಾಗಿಯಾಗಿದ್ದರು. ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಮಠಂತಬೆಟ್ಟು ಗುಲಾಬಿ ಅನಂತ ರೈ ನಿಧನ Read More »

ಬಸ್ಸಿನಿಂದ ಬಿದ್ದು ಪ್ರಯಾಣಿಕ ಮೃತ್ಯು

ಸುಬ್ರಹ್ಮಣ್ಯ: ಕೆಎಸ್‌ಆರ್‌ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಬೆಂಗಳೂರಿನ ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬೆಂಗಳೂರು ಸುಂಕದಕಟ್ಟೆಯ ಮಂಜುನಾಥ ಮೃತಪಟ್ಟವರು. ಮಂಜುನಾಥ ಅವರು ಪತ್ನಿ ಜೊತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದ್ದು, ಬಸ್ಸು ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ತಲುಪುವಾಗ ಬಸ್ಸಿನ ಚಾಲಕ ನಿರ್ಲಕ್ಷತೆ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ್ದು, ಬಸ್ಸಿನ ನಿರ್ವಾಹಕ ಬಸ್ಸಿನ ಬಾಗಿಲನ್ನು ಸರಿಯಾಗಿ ಹಾಕದೇ ಇದ್ದುದರಿಂದ ಮಂಜುನಾಥ ಅವರು ಬಸ್ಸಿನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸುಳ್ಯದ ಖಾಸಗಿ

ಬಸ್ಸಿನಿಂದ ಬಿದ್ದು ಪ್ರಯಾಣಿಕ ಮೃತ್ಯು Read More »

ಆಕ್ಸಿಜನ್ ಕೊರತೆ : ಬಾವಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಮೃತ್ಯು

ಕೇಪು: ಆಕ್ಸಿಜನ್ ಸಿಗದೆ ಬಾವಿಗೆ ರಿಂಗ್ ಹಾಕಲು ಇಳಿದಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ಇಂದು ನಡೆದಿದೆ. ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ (40) ಮತ್ತು ಮಲಾರ್ ನಿವಾಸಿ ಆಲಿ(24) ಮೃತಪಟ್ಟ ಕಾರ್ಮಿಕರು. ಸುಮಾರು 30 ಫೀಟ್ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು ಮೇಲಕ್ಕೆ ಬಾರದೇ ಇದ್ದಾಗ ಅವನನ್ನು ನೋಡಲು ಇನ್ನೊಬ್ಬ ಕಾರ್ಮಿಕ ಇಳಿದಿದ್ದ.

ಆಕ್ಸಿಜನ್ ಕೊರತೆ : ಬಾವಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಮೃತ್ಯು Read More »

ಕೇರಳದಲ್ಲಿ ಹಕ್ಕಿ ಜ್ವರ | ದಕ್ಷಿಣ ಕನ್ನಡ ಜಿಲ್ಲೆ- ಕೇರಳದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ

ಮಂಗಳೂರು : ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಶೇಷ ಕಟ್ಟೆಚ್ಚರ ವಹಿಸಲಾಗಿದೆ. ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್‌ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್‌ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಸೈಟಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ

ಕೇರಳದಲ್ಲಿ ಹಕ್ಕಿ ಜ್ವರ | ದಕ್ಷಿಣ ಕನ್ನಡ ಜಿಲ್ಲೆ- ಕೇರಳದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ Read More »

ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋಗೆ ಚಾಲನೆ

ಪುತ್ತೂರು: ಅಣ್ಣಾಮಲೈ ಅವರ ಬೃಹತ್ ರೋಡ್ ಶೋಗೆ ದರ್ಬೆ ವೃತ್ತದ‌ ಬಳಿ ಚಾಲನೆ ನೀಡಲಾಯಿತು. ಅಣ್ಣಾಮಲೈ ಜತೆ ದ.ಕ.ಲೋಕಸಭೆ ಬಿಜೆಪಿ ಅಭ್ಯರ್ಥಿ‌ ಕ್ಯಾ.ಬ್ರಿಜೇಶ್ ಚೌಟ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ ಮತ್ತಿತರು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು. ರೋಡ್ ಶೋ ದರ್ಬೆಯಿಂದ ಮುಖ್ಯ ರಸ್ತೆಯಾಗಿ ಬಸ್ ನಿಲ್ದಾಣದ ಬಳಿ‌ ಸಮಾಪನೆಗೊಳ್ಳಲಿದೆ

ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋಗೆ ಚಾಲನೆ Read More »

ಸಮಾಜದಲ್ಲಿ ಸಕಲ ಜೀವರಾಶಿಗಳಿಗೂ ಬದುಕಲು ಅವಕಾಶ ನೀಡುವುದೇ ಧರ್ಮ  | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

ಪುತ್ತೂರು: ಸಮಾಜದಲ್ಲಿ ನಿಯತ್ತಿನಿಂದ ಬದುಕಲು ಧರ್ಮ ಹುಟ್ಟಿಕೊಂಡಿದೆ. ಜಗತ್ತಿನ ಸಕಲ‌ ಜೀವ ರಾಶಿಗಳಿಗೂ ಬದುಕುವ ಆಸೆಯಿದೆ. ಎಲ್ಲರೊಂದಿಗೆ ಸೇರಿಕೊಂಡು ಉತ್ತಮ ಬದುಕು ಸಾಗಿಸುವುದೇ, ಇನ್ನೊಬ್ಬರ ಹಿತವಾಗಿ ಬದುಕುವುದು, ಸ್ವಾರ್ಥ ರಹಿತವಾಗಿ ಬದುಕುವುದೇ ಧರ್ಮ. ಸಮಾಜದಲ್ಲಿ ಸಕಲ ಜೀವರಾಶಿಗಳಿಗೂ ಬದುಕಲು ಅವಕಾಶ ನೀಡುವುದೇ ಧರ್ಮ ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ನುಡಿದರು. ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಏ.22 ರಂದು ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ದೇವರಲ್ಲಿ

ಸಮಾಜದಲ್ಲಿ ಸಕಲ ಜೀವರಾಶಿಗಳಿಗೂ ಬದುಕಲು ಅವಕಾಶ ನೀಡುವುದೇ ಧರ್ಮ  | ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ, ಧಾರ್ಮಿಕ ಸಭೆಯಲ್ಲಿ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ Read More »

ಇಂದು ಪುತ್ತೂರಿಗೆ ಅಣ್ಣಾಮಲೈ | ಮೆಘ ಫ್ರೂಟ್ ಪ್ರೊಸೆಸಿಂಗ್ ಸಂಸ್ಥೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ಮಾತುಕತೆ

ಪುತ್ತೂರು: ಇಂದು ಪುತ್ತೂರಿಗೆ ಸಿಂಗಂ ಅಣ್ಣಾಮಲೈ ಆಗಮಿಸಲಿರುವ ಹಿನ್ನಲೆಯಲ್ಲಿ ಮೇಘ ಫ್ರೂಟ್ ಪ್ರೊಸೆಸಿಂಗ್ ಸಂಸ್ಥೆಗೆ ಮಾಜಿ ಶಾಸಕ ಸಂಜೀವ ಮಠoದೂರು ಭೇಟಿ ನೀಡಿದರು. ಸಂಸ್ಥೆಯ ಮಾಲಕ ಸತ್ಯಶಂಕರ ಭಟ್ ಅವರ ಜೊತೆ ಮಾಜಿ ಶಾಸಕರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಚುನಾವಣಾ ಸಮಿತಿ ಸಂಚಾಲಕ ಅಧ್ಯಕ್ಷ ಚಣಿಲ ತಿಮಪ್ಪ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಪ್ರಮುಖರಾದ ಯತೀಶ್ ಅರುವಾರ, ಹರೀಶ್ ಬೀಜತ್ರೆ,

ಇಂದು ಪುತ್ತೂರಿಗೆ ಅಣ್ಣಾಮಲೈ | ಮೆಘ ಫ್ರೂಟ್ ಪ್ರೊಸೆಸಿಂಗ್ ಸಂಸ್ಥೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ಮಾತುಕತೆ Read More »

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶಿಲಾನ್ಯಾಸ | ಮೂರು ದಿನಗಳ ಕಾಲ ನಡೆಯಿತು ವಿವಿಧ ವೈದಿಕ ಕಾರ್ಯಕ್ರಮಗಳು

ಬೆಳ್ತಂಗಡಿ: ತಾಲೂಕಿನ ದೇವರಗುಡ್ಡೆ ಭಟ್ರಬೈಲು ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ, ಭೂಖನನಾದಿ ಸಪ್ತಶುದ್ಧಿ, ದ್ವಾದಶಮೂರ್ತಿ ಆರಾಧನೆ ಹಾಗೂ ಗೋಪೂಜೆ ಏ.19, 20 ಹಾಗೂ 22 ರಂದು ಮೂರು ದಿನಗಳ ಕಾಲ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಿತು. ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏ.19 ರಂದು ಸಂಜೆ 7 ಗಂಟೆಗೆ ಸುದರ್ಶನ ಹೋಮ ನಡೆಯಿತು. ಏ.20 ಶನಿವಾರ ಬೆಳಿಗ್ಗೆ 8 ರಿಂದ ಸಪ್ತಶುದ್ಧಿ, ಗಣಹೋಮ, ಗೋಪೂಜೆ, ದ್ವಾದಶಮೂರ್ತಿ ಆರಾಧನೆ, ಮಧ್ಯಾಹ್ನ 12.30 ಕ್ಕೆ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶಿಲಾನ್ಯಾಸ | ಮೂರು ದಿನಗಳ ಕಾಲ ನಡೆಯಿತು ವಿವಿಧ ವೈದಿಕ ಕಾರ್ಯಕ್ರಮಗಳು Read More »

error: Content is protected !!
Scroll to Top