ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕುರಿತು ಪ್ರಧಾನಿಯಿಂದ ಪತ್ರದ ಮೂಲಕ ಮೆಚ್ಚುಗೆ ಮಾತುಗಳು

ಮಂಗಳೂರು : ಭಾರತೀಯ ಭೂ ಸೇನೆಯಲ್ಲಿ ಪ್ರತಿದಾಳಿ ಕಾರ್ಯಾಚರಣೆಗೆ ಹೆಸರಾಗಿರುವ “ಗೂರ್ಖಾ ರೆಜಿಮೆಂಟ್ ನಲ್ಲಿ ಸೇವೆ ಸಲ್ಲಿಸಿರುವುದು ಶ್ಲಾಘನೀಯ. ಅಲ್ಲದೆ, ‘ಮಂಗಳೂರು ಲಿಟ್ ಫೆಸ್ಟ್’ ಆಯೋಜಿಸುವ ಮೂಲಕ ಸಾಹಿತ್ಯ, ಸಂಸ್ಕೃತಿ ಕುರಿತ ಬದ್ಧತೆ ತೋರಿಸಿದ್ದೀರಿ. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಮತ್ತು ಜನರ ಕಲ್ಯಾಣಕ್ಕಾಗಿ ನೀವು ತೊಡಗಿಸಿಕೊಳ್ಳುತ್ತೀರಿ ಎಂದು ಖಚಿತವಾಗಿ ಹೇಳಬಲ್ಲೆ. ಹೀಗೆಂದು ಪ್ರಧಾನಿ ನರೇಂದ್ರ ಮೋದಿಯವರು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕುರಿತು ಪತ್ರದಲ್ಲಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಜಿಲ್ಲೆಯ ಜನರ ಆಶೀರ್ವಾದ ಪಡೆದು ನೀವು […]

ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕುರಿತು ಪ್ರಧಾನಿಯಿಂದ ಪತ್ರದ ಮೂಲಕ ಮೆಚ್ಚುಗೆ ಮಾತುಗಳು Read More »

ವರುಣ ಕೃಪೆಗಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರುಣನ ಕೃಪೆ ಹಾಗೂ ಲೋಕಕಲ್ಯಾಣಾರ್ಥವಾಗಿ ಸೀಯಾಳಾಭಿಷೇಕ ಸೋಮವಾರ ಬೆಳಿಗ್ಗೆ ನಡೆಯಿತು. ಸೀಯಾಳಾಭಿಷೇಕದ ಮೊದಲು ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ವಿ.ಎಸ್.ಭಟ್ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ.ಜಗನ್ನಿವಾಸ ರಾವ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ರವಿಪ್ರಸಾದ್ ಶೆಟ್ಟಿ, ದಿನೇಶ್ ಪಿ.ವಿ., ಅಮರನಾಥ ಗೌಡ ಬಪ್ಪಳಿಗೆ, ಮಹಾಲಿಂಗೇಶ್ವರ ಭಜನಾ ಮಂಡಳಿ ಸಂಚಾಲಕ ಗೋಪಾಲಕೃಷ್ಣ, ಜೊಹರಾ

ವರುಣ ಕೃಪೆಗಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ Read More »

“ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ | ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳದಲ್ಲಿ ಅಪರೂಪದ ಸಂಕಲ್ಪಕ್ಕೆ ಸಿದ್ಧತೆ | ಶಿವನ ಪ್ರೀತ್ಯರ್ಥ ಅತಿರುದ್ರ ಮಹಾಯಾಗ ಸೇವೆ ಕೈಗೊಳ್ಳಲು ಆನ್ಲೈನ್ ನೋಂದಣಿಗೂ ಅವಕಾಶ

ಕುಲ್ಕುಂದ: ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ. ಸುಮಾರು 800 ವರ್ಷಗಳ ಪ್ರಾಚೀನ ಇತಿಹಾಸವುಳ್ಳ, ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಲ್ಕುಂದ ‘’ಬಸವನಮೂಲ’’ ಎಂದೇ ಪ್ರಸಿದ್ಧಿಯಾಗಿರುವ ಬಸವೇಶ್ವರ ದೇವಸ್ಥಾನದಲ್ಲಿ ಶಿವನಿಗೆ ಅತಿ ಪ್ರಿಯ ಎನ್ನಲಾದ ಸಾಮೂಹಿಕ ಅತಿರುದ್ರ ಮಹಾಯಾಗ ನಡೆಸಲು

“ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ | ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳದಲ್ಲಿ ಅಪರೂಪದ ಸಂಕಲ್ಪಕ್ಕೆ ಸಿದ್ಧತೆ | ಶಿವನ ಪ್ರೀತ್ಯರ್ಥ ಅತಿರುದ್ರ ಮಹಾಯಾಗ ಸೇವೆ ಕೈಗೊಳ್ಳಲು ಆನ್ಲೈನ್ ನೋಂದಣಿಗೂ ಅವಕಾಶ Read More »

ಭವಿಷ್ಯದ ಭಾರತಕ್ಕಾಗಿ ಶಿಕ್ಷಕರ ಸಕ್ರಿಯತೆ – ಸಂವಾದ ಕಾರ್ಯಕ್ರಮ

ಪುತ್ತೂರು: ಶಿಕ್ಷಣವು ಯಶಸ್ವಿ ಸಮಾಜದ ಅಡಿಪಾಯವಾಗಿದೆ. ಸದೃಢ ರಾಷ್ಟ್ರ ನಿರ್ಮಾಣದ ಮೂಲವಾಗಿದೆ. ಆಧುನಿಕ ದಿನಮಾನದಲ್ಲಿ ಇರುವ ನಾವು ಸಮಾಜದಲ್ಲಿ ಸುಸ್ಥಿರ ಬದಲಾವಣೆಯತ್ತ ಗಮನ ಹರಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಾಹಪೂರ ಹೇಳಿದರು. ವಿದ್ಯಾಭಾರತಿ ಉಚ್ಛ ಶಿಕ್ಷಾ ಸಂಸ್ಥಾನ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಪುತ್ತೂರಿನ ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನಲ್ಲಿ ಆಯೋಜಿಸಿದ ಭವಿಷ್ಯದ ಭಾರತಕ್ಕಾಗಿ ಶಿಕ್ಷಕರ ಸಕ್ರಿಯತೆ ಎಂಬ ವಿಚಾರವಾಗಿ ಅಧ್ಯಾಪಕರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉತ್ತಮ ಶಿಕ್ಷಣ,

ಭವಿಷ್ಯದ ಭಾರತಕ್ಕಾಗಿ ಶಿಕ್ಷಕರ ಸಕ್ರಿಯತೆ – ಸಂವಾದ ಕಾರ್ಯಕ್ರಮ Read More »

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಮೃತ್ಯು

ಕಾರವಾರ: ಒಂದೇ ಕುಟುಂಬದ ಆರು ಮಂದಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಝೀರ್ ಅಹ್ಮದ್ (40),  ರೇಷಾ ಉನ್ನಿಸಾ (38), ಇಫ್ರಾ ಅಹ್ಮದ್ (15), ಅಬೀದ್ ಅಹ್ಮದ್(12), ಅಲ್ಲೀಯಾ ಅಹ್ಮದ್ (10) ಹಾಗೂ ಮೋಹಿನ್ (6)  ಮೃತಪಟ್ಟ ಒಂದೇ ಕುಟುಂಬದವರು. ಮೃತರು ಪ್ರವಾಸಕ್ಕೆ ತೆರಳಿದ್ದಾಗ ಅಹ್ಮದ್ ಕುಟುಂಬ ಊಟ ಮಾಡಿ ಕಾಳಿ ನದಿ ದಡದಲ್ಲಿ ವಿಶ್ರಾಂತಿ

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ಮೃತ್ಯು Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಭಕ್ತರಿಂದ ಸಮರ್ಪಣೆಯಾದ ಹೊರೆಕಾಣಿಕೆ

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವೈಭವದ ಬ್ರಹ್ಮಕಲಶೋತ್ಸವಕ್ಕೆ ಶನಿವಾರ ಸಂಜೆ ಹೊರೆ ಕಾಣಿಕೆ ಸಮರ್ಪಣೆ ಮೂಲಕ ಚಾಲನೆ ನೀಡಲಾಯಿತು. ಶನಿವಾರ ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಹೊರೆಕಾಣಿಕೆ ಮೆರವಣಿಗೆ ಶ್ರೀ ದೇವಸ್ಥಾನದಕ್ಕೆ ತೆರಳಿತು. ಮಾಣಿಲ ಶ್ರೀಧಾಮ ಕ್ಷೇತ್ರದ ಶ್ರೀ ಮೋಹನದಾಸ ಸ್ವಾಮೀಜಿ ತೆಂಗಿಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ, ಬ್ರಹ್ಮಕಲಶೋತ್ಸವ ಹಾಗೂ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮಕಲಶೋತ್ಸವಕ್ಕೆ ಚಾಲನೆ | ಭಕ್ತರಿಂದ ಸಮರ್ಪಣೆಯಾದ ಹೊರೆಕಾಣಿಕೆ Read More »

ವಿಳಂಬವಾಗಿ ಟಿಕೇಟ್ ನೀಡಿದ ವಿಚಾರ : ಪ್ರಯಾಣಿಕನ ಜತೆ ಅನುಚಿತವಾಗಿ ವರ್ತಿಸಿದ ಬಸ್ ಕಂಡಕ್ಟರ್

ಸುಬ್ರಹ್ಮಣ್ಯ: ಬಸ್ ಕಂಡಕ್ಟರ್ ಓರ್ವರು ವಿಳಂಬವಾಗಿ ಟಿಕೆಟ್ ನೀಡಿದ ಪರಿಣಾಮ ಪ್ರಯಾಣಿಕ ಹಾಗೂ ಕಂಡಕ್ಟರ್ ನಡುವೆ ವಾಗ್ವಾದ ನಡೆದು ಕಂಡಕ್ಟರ್ ಅನುಚಿತ ವರ್ತನೆ ತೋರಿದ ಘಟನೆ ಪಂಜದಿಂದ ವರದಿಯಾಗಿದೆ. ಪುತ್ತೂರು-ಕಾಣಿಯೂರು- ಸುಬ್ರಹ್ಮಣ್ಯ ಬಸ್ ನಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಬಾಳಿಲದ ಶೀನ ಎಂಬವರು ಸುಬ್ರಹ್ಮಣ್ಯಕ್ಕೆ ತೆರಳುವ ಸಲುವಾಗಿ ಪಂಜದಲ್ಲಿ ಮಂಬಾಗಿಲಿನಿಂದ ಬಸ್ ಏರಿದ್ದರು. ಬಸ್ ಹಿಂಬದಿ ಕುಳಿತ್ತಿದ್ದ ಕಂಡಕ್ಟರ್ ಹಲವು ಹೊತ್ತಾದರೂ ಬಾರದಿರುವುದನ್ನು ಗಮನಿಸಿ ಪ್ರಯಾಣಿಕ ಟಿಕೆಟ್ ನೀಡುವಂತೆ ಕರೆದು ತಿಳಿಸಿದ್ದರು. ಇದರಿಂದ ಕುಪಿತಗೊಂಡ

ವಿಳಂಬವಾಗಿ ಟಿಕೇಟ್ ನೀಡಿದ ವಿಚಾರ : ಪ್ರಯಾಣಿಕನ ಜತೆ ಅನುಚಿತವಾಗಿ ವರ್ತಿಸಿದ ಬಸ್ ಕಂಡಕ್ಟರ್ Read More »

ಏ.23-24 : ಕೆಮ್ಮಿಂಜೆ ಶ್ರೀರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನಾ ಮಹೋತ್ಸವ

ಪುತ್ತೂರು: 1964 ಪುತ್ತೂರಿನ ಕೆಮ್ಮಿಂಜೆಯಲ್ಲಿ ನಿರ್ಮಿಸಲಾದ ಶ್ರೀ ರಾಮ ಭಜನಾ ಮಂದಿರವನ್ನು ನವೀಕರಿಸಲಾಗಿದ್ದು, ಇದರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮಗಳು ಏ.23 ಹಾಗೂ 24 ರಂದು ನಡೆಯಲಿದೆ ಎಂದು ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕೆಮ್ಮಿಂಜೆ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 23 ರಂದು ಸಂಜೆ 7 ಗಂಟೆಯಿಂದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ,ಸ್ಥಳ ಶುದ್ಧಿö, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ನವಕ ಕಲಶ

ಏ.23-24 : ಕೆಮ್ಮಿಂಜೆ ಶ್ರೀರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನಾ ಮಹೋತ್ಸವ Read More »

“ನಮ್ಮ ನಡೆ ಮತಗಟ್ಟೆ ಕಡೆ” ಜಾಗೃತಿ ಅಭಿಯಾನಕ್ಕೆ ಚಾಲನೆ | ವಿವಿಧ ಮತಗಟ್ಟೆಗಳಲ್ಲಿ ಧ್ವಜಾರೋಹಣ

ಪುತ್ತೂರು: ಮತದಾರರಿಗೆ ಮತಗಟ್ಟೆಯನ್ನು ಪರಿಚಯಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ʼನಮ್ಮ ನಡೆ ಮತಗಟ್ಟೆ ಕಡೆʼ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತದಾನವಾಗಬೇಕೆಂಬ ಆಶಯ ಹೊಂದಿದೆ. 206 ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ 221 ಮತಗಟ್ಟೆಗಳಲ್ಲಿಯೂ ಈ ಕಾರ್ಯಕ್ರಮ ನಡೆದಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಹನಮ ರೆಡ್ಡಿ ಹೇಳಿದರು. ಅವರು ಇಂದು ಆಡಳಿತ ಸೌಧದ ಮುಂದೆ ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ ಸಮಿತಿ, ಪುತ್ತೂರು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುತ್ತೂರು

“ನಮ್ಮ ನಡೆ ಮತಗಟ್ಟೆ ಕಡೆ” ಜಾಗೃತಿ ಅಭಿಯಾನಕ್ಕೆ ಚಾಲನೆ | ವಿವಿಧ ಮತಗಟ್ಟೆಗಳಲ್ಲಿ ಧ್ವಜಾರೋಹಣ Read More »

ಏ.24 : ಕಲ್ಲಾರೆಯಲ್ಲಿ “ಶಿವಕೃಪಾ” ಸಭಾಭವನದ ಲೋಕಾರ್ಪಣೆ

ಪುತ್ತೂರು: ಸಮಾಜಕ್ಕೆ ಹಲವಾರು ಕೊಡುಗೆಯನ್ನು ನೀಡುತ್ತಾ ಬಂದಿರುವ ಶಿವಬ್ರಾಹ್ಮಣ ಸಮಾಜ ಸೇವಾ ಸಂಘದ ವತಿಯಿಂದ ನೂತನವಾಗಿ ಕಲ್ಲಾರೆಯಲ್ಲಿ ಸುಮಾರು 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ ಶಿವ ಕೃಪಾ ಸಭಾಭವನದ ಲೋಕಾರ್ಪಣೆ ಏ.24 ರಂದು ಸಂಜೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎನ್‍.ಕೆ.ಜಗನ್ನಿವಾಸ ರಾವ್ ತಿಳಿಸಿದ್ದಾರೆ. ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಜೆ 6.30 ಕ್ಕೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಂದ ಲೋಕಾರ್ಪಣೆ ನಡೆಯಲಿದೆ ಎಂದು ಹೇಳಿದರು. ಸಂಘ ದತ್ತಿ ವಿದ್ಯಾರ್ಥಿ ನಿಧಿಯನ್ನು ಸ್ಥಾಪಿಸಿಕೊಂಡು ಅರ್ಹ

ಏ.24 : ಕಲ್ಲಾರೆಯಲ್ಲಿ “ಶಿವಕೃಪಾ” ಸಭಾಭವನದ ಲೋಕಾರ್ಪಣೆ Read More »

error: Content is protected !!
Scroll to Top