ಅನಾರೋಗ್ಯದಿಂದ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಕೌಡಿಚ್ಚಾರಿನ ವಿನೋದ್ ಅಕಾಯಿ |  ಮನೆಯ ಆಧಾರಸ್ತಂಭವಾಗಿದ್ದ ಮನೆ ಮಗನ ಚಿಕಿತ್ಸೆಗೆ ದಾನಿಗಳ ನೆರವಿನ ನಿರೀಕ್ಷೆಯಲ್ಲಿ ಕುಟುಂಬ

ಪುತ್ತೂರು : ಪುತ್ತೂರು  ತಾಲೂಕಿನ ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ಸಮೀಪದ ಅಕಾಯಿಯ ವಿನೋದ್ ಎಂಬವರು ಮೆದುಳಿನ ರಕ್ತಸ್ರಾವ ತೊಂದರೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಕೆ. ಎಂ. ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇವರ ಚಿಕಿತ್ಸೆಗಾಗಿ ಸುಮಾರು 12 ಲಕ್ಷ ಖರ್ಚಾಗಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿರುತ್ತಾರೆ. ಅವರ ಕುಟುಂಬವು ಆರ್ಥಿಕ ಬಡ ಕುಟುಂಬವಾಗಿದ್ದು, ತಾಯಿ, ಚಿಕ್ಕಮ್ಮ, ಪತ್ನಿ ಹಾಗೂ ಒಂದು ವರುಷದ ಮಗುವಿನೊಂದಿಗೆ ಇರುವ ಇವರು ಕುಟುಂಬದ ಆಧಾರಸ್ತಂಭವಾಗಿದ್ದಾರೆ. ಇವರ ಈ ಅನಾರೋಗ್ಯದಿ೦ದ ಕುಟುಂಬಕ್ಕೆ ದಿಕ್ಕುತೋಚದಂತಾಗಿದ್ದಾರೆ. […]

ಅನಾರೋಗ್ಯದಿಂದ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಕೌಡಿಚ್ಚಾರಿನ ವಿನೋದ್ ಅಕಾಯಿ |  ಮನೆಯ ಆಧಾರಸ್ತಂಭವಾಗಿದ್ದ ಮನೆ ಮಗನ ಚಿಕಿತ್ಸೆಗೆ ದಾನಿಗಳ ನೆರವಿನ ನಿರೀಕ್ಷೆಯಲ್ಲಿ ಕುಟುಂಬ Read More »

ಏ.26 ರಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ | ಆದೇಶದಲ್ಲಿ ಏನಿದೆ ? | ಇಲ್ಲಿದೆ ಡಿಟೈಲ್ಸ್

ಮಂಗಳೂರು: ಏ.26ರಂದು ನಡೆಯಲಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಚಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.26 ರ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಯಾ ಬೆಂಬಲಿಗರು

ಏ.26 ರಂದು ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ | ಆದೇಶದಲ್ಲಿ ಏನಿದೆ ? | ಇಲ್ಲಿದೆ ಡಿಟೈಲ್ಸ್ Read More »

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಬಿಜೆಪಿ ಸೇರ್ಪಡೆ

ವಿಟ್ಲ: ಅಳಿಕೆ ಗ್ರಾಮದ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು. ಈ ದೇಶಕ್ಕೆ ಮೋದಿ ಅನಿವಾರ್ಯ ಮತ್ತು ಸ್ಥಳೀಯ ನಾಯಕರ ವರ್ತನೆಗೆ ಬೇಸತ್ತು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವಾ ಅವರ ಸಮ್ಮಖದಲ್ಲಿ ಬಿಜೆಪಿ ಸೇರಿದರು. ಈ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ಚುನಾವಣಾ ಉಸ್ತುವಾರಿ ಸುಲೋಚನಾ ಜಿ.ಕೆ.ಭಟ್, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಉಪಾಧ್ಯಕ್ಷ, ಪುಣಚ ಮಹಾಶಕ್ತೀ ಕೇಂದ್ರ ಅಧ್ಯಕ್ಷ

ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಬಿಜೆಪಿ ಸೇರ್ಪಡೆ Read More »

ಉಪ್ಪಿನಂಗಡಿ ವಿದ್ಯಾರ್ಥಿ ನಂದನ್ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಏ.19 ರಂದು ಸಂಜೆ ನಡೆದಿದೆ. ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ, ವಿದ್ಯಾರ್ಥಿ ನಂದನ್ (13) ಆತ್ಮಹತ್ಯೆ ಮಾಡಿಕೊಂಡವ. ತನ್ನ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪಂಜದ ದಿ.ರೋಹಿತ್ ಗೌಡ ಎಂಬವರ ಪುತ್ರನಾಗಿದ್ದು, ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಈತ ಏಳನೇ ತರಗತಿ ಉತ್ತೀರ್ಣನಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ 8ನೇ ತರಗತಿಗೆ

ಉಪ್ಪಿನಂಗಡಿ ವಿದ್ಯಾರ್ಥಿ ನಂದನ್ ನೇಣು ಬಿಗಿದು ಆತ್ಮಹತ್ಯೆ Read More »

ಸಿಡಿಲು ಬಡಿದು ಕರು ಮೃತ್ಯು

ಕಲ್ಲಡ್ಕ: ಸಿಡಿಲು ಬಡಿದು ಕರುವೊಂದು ಮೃತಪಟ್ಟ ಘಟನೆ ಬುಧವಾರ ರಾತ್ರಿ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ಗ್ರಾಮದ ಮುಚ್ಚಿಲ ಕಜೆ ಅಬ್ಬಾಸ್ ಎಂಬವರ ಹಟ್ಟಿಯಲ್ಲಿದ್ದ ಕರು ಸಿಡಿಲಿನ ಬಡಿತಕ್ಕೆ ಬಲಿಯಾಗಿದ್ದು, ಮನೆಯ ಸಂಪೂರ್ಣ ವಯರಿಂಗ್, ಸ್ವಿಚ್ ಬೋರ್ಡ್ ಗಳು ಹೊತ್ತಿ ಹೋಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಸಿಡಿಲಿನ ಬಡಿತದಿಂದಾಗಿ ಅಪಾರ ನಷ್ಟ ಸಂಭವಿಸಿದೆ.

ಸಿಡಿಲು ಬಡಿದು ಕರು ಮೃತ್ಯು Read More »

ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ !

ಕಡಬ: ಮನುಷ್ಯನ ತಲೆಬುರುಡೆಯೊಂದು ಕೊಳೆತ ಸ್ಥಿತಿಯಲ್ಲಿ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ. ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್ ಎಂಬವರು ಏ.19 ರಂದು ಬೆಳಿಗ್ಗೆ ನೆರೆ-ಕೆರೆಯ ನಿವಾಸಿಗಳೊಂದಿಗೆ, ಕಾಡಿನಲ್ಲಿ ಕಟ್ಟಿಗೆ ಯನ್ನು ತರಲು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ತೆರಳುತ್ತಿದ್ದಾಗ, ದಾರಿಯ ಬದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗು ಬ್ಯಾಗ್ ಕಂಡುಬಂದಿದೆ. ಸ್ವಲ್ಪ ದೂರದಲ್ಲಿ ಮರವೊಂದರಲ್ಲಿ

ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ ! Read More »

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ಥ

ಸುಳ್ಯ: ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಭಾರೀ ಗಾಳಿಗೆ ಬೃಹದಾಕಾರದ ದೂಪದ ಮರವೊಂದು ಮುಖ್ಯರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಇದೀಗ ಸ್ಥಳೀಯರು ಸೇರಿ ಮರ ತೆರವು ಕಾರ್ಯದಲ್ಲಿ ತೊಡಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ ಎಂದು ತಿಳಿದುಬಂದಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ಥ Read More »

ಟ್ಯಾಂಕರ್-ಕಂಟೈನರ್ ಡಿಕ್ಕಿ : ಕಂಟೈನರ್ ಚಾಲಕ ಗಂಭೀರ

ಉಪ್ಪಿನಂಗಡಿ: ಟ್ಯಾಂಕರ್ ಮತ್ತು ಕಂಟೆನರ್ ಮದ್ಯೆ ನಡೆದ ಭೀಕರ ಅಪಘಾತಕ್ಕೆ ಚಾಲಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪತ ಕಾಮಗಾರಿಯೇ ಕಾರಣ ಎಂದು ತಿಳಿದು ಬಂದಿದ್ದು, ಕಂಟೇನ‌ರ್ ಚಾಲಕ ಗಂಭೀರ ಗಾಯಗೊಂಡಿದ್ದು, ಅಪಘಾತ ಸಂಭವಿಸಿ ಒಂದು ಗಂಟೆಗಳು ಕಳೆದರೂ ಚಾಲಕನನ್ನು ಹೊರ ತೆಗೆಯಲು ಹರ ಸಾಹಸ ಪಡಲಾಯಿತು. ಸ್ಥಳೀಯ ಯುವಕರ ಶತ ಪ್ರಯತ್ನಗಳಿಂದ ಚಾಲಕನನ್ನು ಹೊರ ತೆಗೆದು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳೀಯ

ಟ್ಯಾಂಕರ್-ಕಂಟೈನರ್ ಡಿಕ್ಕಿ : ಕಂಟೈನರ್ ಚಾಲಕ ಗಂಭೀರ Read More »

ಏ.25 : ಅಂಬಿಕಾ ವಿದ್ಯಾಲಯದ “ದಶಾಂಬಿಕೋತ್ಸವ” ಸಮಾರೋಪ, ಸಾರ್ವಜನಿಕ ಗುರುವಂದನಾ ಕಾರ್ಯಕ್ರಮ | ಶ್ರೀ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ದಿವ್ಯ ಉಪಸ್ಥಿತಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯದ “ದಶಾಂಬಿಕೋತ್ಸವ”ದ ಸಮಾರೋಪ ಸಮಾರಂಭ ಹಾಗೂ ಸಾರ್ವಜನಿಕ ಗುರುವಂದನಾ ಏ.25 ರಂದು ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ನಡೆಯುವ ದಶಾಂಬಿಕೋತ್ಸವದ ಸಮಾರೋಪ ಸಮಾರಂಭದಲ್ಲಿ ಶೃಂಗೇರಿ ಮಠದ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಆಶೀರ್ವಚನ ನೀಡಲಿದ್ದಾರೆ

ಏ.25 : ಅಂಬಿಕಾ ವಿದ್ಯಾಲಯದ “ದಶಾಂಬಿಕೋತ್ಸವ” ಸಮಾರೋಪ, ಸಾರ್ವಜನಿಕ ಗುರುವಂದನಾ ಕಾರ್ಯಕ್ರಮ | ಶ್ರೀ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ದಿವ್ಯ ಉಪಸ್ಥಿತಿ Read More »

ನೇಹಾ ಬರ್ಬರ ಹತ್ಯೆ ಮೂಲಕ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪುತ್ತೂರು: ಹುಬ್ಬಳ್ಳಿ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಅವರನ್ನು ಬರ್ಬರವಾಗಿ ಹತ್ಯೆ ಮಾಡುವ ಮೂಲಕ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಘಟನೆಯ ನೈತಿಕ ಹೊಣೆ ಹೊತ್ತುರಾಜ್ಯ ಗೃಹ ಸಚಿವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮತಾಂಧನಾದ ಫಯಾಝ್ ಎಂಬ ವ್ಯಕ್ತಿ ಪ್ರೀತಿಯ

ನೇಹಾ ಬರ್ಬರ ಹತ್ಯೆ ಮೂಲಕ ಜಿಹಾದಿ ಮಾನಸಿಕತೆ ಮತ್ತೊಮ್ಮೆ ತಲೆ ಎತ್ತಿದೆ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ Read More »

error: Content is protected !!
Scroll to Top