ಲೋಕಸಭಾ ಅಭ್ಯರ್ಥಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರು: ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಭೇಟಿ ನೀಡಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ವಿಶ್ವೇಶ್ವರ ಹೆಗಡೆ ಆಪ್ತರು ಉಪಸ್ಥಿತರಿದ್ದರು.

ಲೋಕಸಭಾ ಅಭ್ಯರ್ಥಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ Read More »

ಎ.ಆರ್.ವಾರಿಯರ್ಸ್‍ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆಗೆ ಗಡಿಪಾರು ಆದೇಶ

ಪುತ್ತೂರು: ಎ. ಆರ್ ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಅವರಿಗೆ ಗಡಿಪಾರು ಆದೇಶ ಹೊರಡಿಸಿ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು ಆದೇಶಕ್ಕೆ ಶಿಪಾರಸ್ಸು ಮಾಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 55ರಂತೆ ಬಳ್ಳಾರಿಯ ಬ್ರೂಸ್ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಅವರನ್ನು ಗಡಿಪಾರು ಮಾಡಲು ಶಿಪಾರಸ್ಸು ಮಾಡಲಾಗಿದೆ. ರಾಜಕೀಯ ಪಕ್ಷವೊಂದರಲ್ಲಿ ಗುರುತಿಸಿಕೊಂಡಿರುವ ಪ್ರಜ್ವಲ್ ರೈ ವಿರುದ್ದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಾನೂನು ಉಲ್ಲಂಘನೆ ಮಾಡಿರುವ

ಎ.ಆರ್.ವಾರಿಯರ್ಸ್‍ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆಗೆ ಗಡಿಪಾರು ಆದೇಶ Read More »

ಕಡಬ ತಾಲೂಕಿನ ಬಿಳಿನೆಲೆಗೆ ನಕ್ಸಲರ ತಂಡ ಭೇಟಿ

ಕಡಬ: ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರ ಹೆಜ್ಜೆ ಮತ್ತೆ ಕಾಣಿಸಿಕೊಂಡಿದೆ. ಎಎನ್‌ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆ ಮತ್ತೆ ನಕ್ಸಲರು ಪ್ರತ್ಯಕ್ಷವಾಗಿದ್ದಾರೆ. ಶುಕ್ರವಾರ ರಾತ್ರಿ ವೇಳೆ ಬಿಳಿನೆಲೆ ಚೇರು ಎಂಬಲ್ಲಿ ನಕ್ಸಲರ ತಂಡ ಕಾಣಿಸಿಕೊಂಡಿದೆ. ಚೇರು ಗ್ರಾಮದ ಮನೆಯೊಂದಕ್ಕೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಭೇಟಿ ನೀಡಿದೆ. ಮನೆಗೆ ಬಂದು ಊಟ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಅಷ್ಟು ಮಾತ್ರವಲ್ಲದೆ, ನಕ್ಸಲರು ಮನೆಯಿಂದ ಅಕ್ಕಿ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಮೋಸ್ಟ್ ವಾಂಡೆಟ್ ನಕ್ಸಲ್ ವಿಕ್ರಮ ಗೌಡ,

ಕಡಬ ತಾಲೂಕಿನ ಬಿಳಿನೆಲೆಗೆ ನಕ್ಸಲರ ತಂಡ ಭೇಟಿ Read More »

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ | ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ

ಸುಳ್ಯ: ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರೆ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನದವರು ನಡೆಸಲಿರುವ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕೋತ್ಸವ 2024ರಲ್ಲಿ ಕೊಡ ಮಾಡಲಿರುವ ಶತಶೃಂಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕೊಡಲ್ಪಡುವ ಈ ಪ್ರಶಸ್ತಿಗೆ  ಕೇರಳದ ನಾಲ್ವರು ಮತ್ತು ಕರ್ನಾಟಕದ ಇಬ್ಬರು ಆಯ್ಕೆಯಾಗಿದ್ದು, ಸುಳ್ಯದ ಡಾ. ಅನುರಾಧಾ ಕುರುಂಜಿಯವರನ್ನು ಸಾಹಿತ್ಯಕ, ಶೈಕ್ಷಣಿಕ  ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಮಾಡಿರುವ  ಸಾಧನೆಗಾಗಿ ಈ ಪ್ರಶಸ್ತಿಗೆ

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ | ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ Read More »

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು – ಪ್ರಾಚೀನ ಕನ್ನಡ ಶಾಸನಗಳ ಶೋಧನ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆಗೆ ಚಾಲನೆ

ಪುತ್ತೂರು: ಪ್ರಾಚೀನ ಕಾಲದ ಶಾಸನಗಳನ್ನು ಸಂರಕ್ಷಿಸುವ  ಹಾಗೂ ಅದನ್ನು ಬೆಳಕಿಗೆ ತರುವ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ  ಹಮ್ಮಿಕೊಳ್ಳಲಾದ  ಪ್ರಾಚೀನ ಕನ್ನಡ ಶಾಸನಗಳ ಶೋಧನ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆಗೆ ಶನಿವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯ ದೇವಸ್ಥಾನದ ಒಳಾಂಗಣದಲ್ಲಿ ಇರುವ 14ನೇ ಶತಮಾನದಲ್ಲಿ ವಿಜಯನಗರ ಅರಸರಿಂದ ಸ್ಥಾಪಿತ ಶಾಸನದ ಮುಂಭಾಗದಲ್ಲಿ ಮಾಹಿತಿ ಪತ್ರವನ್ನು ಅನಾವರಣಗೊಳಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು – ಪ್ರಾಚೀನ ಕನ್ನಡ ಶಾಸನಗಳ ಶೋಧನ ಅಧ್ಯಯನ ಮತ್ತು ಸಂರಕ್ಷಣಾ ಯೋಜನೆಗೆ ಚಾಲನೆ Read More »

ತೆಂಗಿನಕಾಯಿ ಗೆರಟೆಯಲ್ಲಿ ನೀರು ತುಂಬಿಸಿ ಮರದ ಕೊಂಬೆಗಳಿಗೆ ಕಟ್ಟಿ ಹಕ್ಕಿಗಳ ದಾಹ ತೀರಿಸುವ ವಿನೂತನ ಕಾರ್ಯ  | ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಿಂದ ಈ ವಿನೂತನ ಅಭಿಯಾನ

ಪುತ್ತೂರು: ಬೇಸಿಗೆಯ ಬೇಗೆಗೆ ದಣಿದ ಪಕ್ಷಿಗಳ ನೀರಡಿಕೆ ನೀಗಿಸುವ  ವಿನೂತನ ಕಾರ್ಯಕ್ಕೆ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಕೈ ಹಾಕಿದ್ದು, ತೆಂಗಿನಕಾಯಿಯ ಗೆರಟೆಯಲ್ಲಿ ನೀರು ತುಂಬಿಸಿ ಅದನ್ನು ಮರದ ಕೊಂಬೆಗಳಿಗೆ ಕಟ್ಟುವ ಮೂಲಕ ಹಕ್ಕಿಗಳ ದಾಹವನ್ನು ನೀಗಿಸುವ ವಿಶೇಷ ಅಭಿಯಾನ ಇದಾಗಿದೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಉದ್ಘಾಟಿಸಿ ಮಾತನಾಡಿ, ಬಿಸಿಲ ಝಳ ಇಡೀ ಜೀವಸಂಕುಲವನ್ನೇ ಕಾಡುತ್ತಿದೆ. ಇಂತಹ ಅಭಿಯಾನವನ್ನು ಮಾಡುವ ಅವಶ್ಯಕತೆಯಿದ್ದು, ಇದು ಒಂದು ದಿನಕ್ಕೆ ಸೀಮಿತವಾಗಿರದೆ ಪ್ರತೀ

ತೆಂಗಿನಕಾಯಿ ಗೆರಟೆಯಲ್ಲಿ ನೀರು ತುಂಬಿಸಿ ಮರದ ಕೊಂಬೆಗಳಿಗೆ ಕಟ್ಟಿ ಹಕ್ಕಿಗಳ ದಾಹ ತೀರಿಸುವ ವಿನೂತನ ಕಾರ್ಯ  | ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದಿಂದ ಈ ವಿನೂತನ ಅಭಿಯಾನ Read More »

ಮಂಗಳೂರಿನಲ್ಲಿ “ತುಳುನಾಡ ಅಮರ ಸುಳ್ಯ ಸಮರ-1837” ಸಂಸ್ಮರಣೆ ಹಾಗೂ ವಿಜಯ ದಿನಾಚರಣೆ

ಮಂಗಳೂರು: ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನಾ ಸಮಿತಿ ಹಾಗೂ ಮಂಗಳೂರು ತುಳುನಾಡ ರಕ್ಷಣಾ ವೇದಿಕೆ ಸಹಭಾಗಿತ್ವದಲ್ಲಿ ತುಳುನಾಡಿನ ವೀರ ರೈತರಿಂದ ನಡೆದ ಸ್ವಾತಂತ್ರ್ಯ ಸಂಗ್ರಾಮ “ತುಳುನಾಡ ಅಮರ ಸುಳ್ಯ ಸಮರ-1837” ಸಂಸ್ಮರಣೆ ಹಾಗೂ ವಿಜಯ ದಿನಾಚರಣೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ ನಡೆಯಿತು. ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ. ಡಾ.ಧರ್ಮಪಾಲನಾಥ ಸ್ವಾಮೀಜಿಯವರು ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಡಿ.ಬಿ.ಬಾಲಕೃಷ್ಣ, ಕಿರಣ್‍ ಬುಡ್ಲೆಗುತ್ತು, ಯೋಗೀಶ್

ಮಂಗಳೂರಿನಲ್ಲಿ “ತುಳುನಾಡ ಅಮರ ಸುಳ್ಯ ಸಮರ-1837” ಸಂಸ್ಮರಣೆ ಹಾಗೂ ವಿಜಯ ದಿನಾಚರಣೆ Read More »

ಏ.23-24 : ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನೆ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶ್ರೀ ರಾಮ ಭಜನಾ ಮಂದಿರ ಟ್ರಸ್ಟ್ ವತಿಯಿಂದ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿರುವ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನೆ ಏ.23 ಹಾಗೂ 24 ರಂದು ನಡೆಯಲಿದ್ದು, ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಮೊದಲಿಗೆ ದೇವಸ್ಥಾನ ಗರ್ಭಗುಡಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯರು ಕಾರ್ಯಕ್ರಮದ ಯಶಸ್ಸಿಗಾಗಿ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು. ಬಳಿಕ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಏ.23-24 : ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಪುನರ್ ಪ್ರತಿಷ್ಠಾಪನೆ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಪುತ್ತೂರು: ಬಿಜೆಪಿ ಸ್ಥಾಪನಾ ದಿನವನ್ನು ಬಿಜೆಪಿ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ದ. ಕನ್ನಡ ಬಿಜೆಪಿ ಉಪಾಧ್ಯಕ್ಷ, ಪುತ್ತೂರು ಬಿಜೆಪಿ ಪ್ರಭಾರಿ ಸುನೀಲ್ ಆಳ್ವಾ ಈ ಸಂದರ್ಭದಲ್ಲಿ ಮಾತಾನಾಡಿ, ಜನಸಂಘದ ಹಿರಿಯರ ತ್ಯಾಗ ಬಲಿದಾನ ಮತ್ತು 1980ರ ನಂತರ ಬಿಜೆಪಿಯ ಏಳುಬೀಳುಗಳ ಬಗ್ಗೆ ಮಾಹಿತಿ ನೀಡಿದರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವಾ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ಪ್ರಭಾರಿ ಸುಲೋಚನಾ ಜಿ. ಕೆ ಭಟ್, ನಗರ ಮಂಡಲ ಅಧ್ಯಕ್ಷ ಪಿ.ಜಿ ಜಗನ್ನೀವಾಸ್ ರಾವ್, ಬಿಜೆಪಿ ಪ್ರಮುಖ್

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಏ.24-ಮೇ.2 : ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹ | ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಮಂತ್ರಣದೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ

ಕಡಬ: ತಾಲೂಕಿನ ಕುದ್ಮಾರು ಗ್ರಾಮದ ಈರ್ವೆರ್ ಉಳ್ಳಾಕುಲು, ಕೆಡೆಂಜೋಡಿತ್ತಾಯ, ವ್ಯಾಘ್ರ ಚಾಮುಂಡಿ ಮತ್ತು ಕುಟುಂಬ ಸಂಬಂಧಪಟ್ಟ ಧರ್ಮದೈವ ಧೂಮಾವತಿ ಹಾಗೂ ಪರಿವಾರ ದೈವಗಳ ಸಾನಿಧ್ಯ ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಏ.24 ರಿಂದ ಮೇ 2 ರ ತನಕ ನಡೆಯುವ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ ಹಾಗೂ ಶ್ರೀ ಮದ್ಭಾಗವತ ಸಪ್ತಾಹದ ಆಮಂತ್ರಣದೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಪ್ರತಿಷ್ಠಾ ಕಲಶೋತ್ಸವ ಸಮಿತಿ ಅಧ್ಯಕ್ಷ ವೆಂಕಟೇಶ್ ಭಟ್ ಕೊಯಕ್ಕುಡೆ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ

ಏ.24-ಮೇ.2 : ಕೆಡೆಂಜಿಗುತ್ತು ಧರ್ಮಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹ | ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಆಮಂತ್ರಣದೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಪ್ರಾರ್ಥನೆ Read More »

error: Content is protected !!
Scroll to Top