ಆಭರಣದಂಗಡಿಯ ವ್ಯವಸ್ಥಾಪಕನಿಂದ ಮಕ್ಕಳ ಮೇಲೆ ಹಲ್ಲೆ : ದೂರು ದಾಖಲು

ಬೆಳ್ತಂಗಡಿ : ಇಲ್ಲಿನ ಸಂತೆಕಟ್ಟೆ ಜಯಶ್ರೀ ಕಾಂಪ್ಲೆಕ್ಸ್ ಕಟ್ಟಡದಲ್ಲಿರುವ ಆಭರಣ ಮಳಿಗೆಯ ವ್ಯವಸ್ಥಾಪಕ ಮಕ್ಕಳ ಮೇಲೆ ವಿನಾಕಾರಣ ಹಲ್ಲೆ ಮಾಡಿದ ಕುರಿತು ದೂರ ಉದಾಖಲಾಗಿದೆ. ಅಶೋಕ್ ಬಂಗೇರ ಹಾಗೂ ಇತರರು ಮೂವರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೆ ಒಳಗಾದ ವಿಧ್ಯಾರ್ಥಿಗಳು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಡಿ.16ರಂದು ಬಿಎನ್ ಎಸ್ u/s 126(2),115(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಡಿ.15ರಂದು […]

ಆಭರಣದಂಗಡಿಯ ವ್ಯವಸ್ಥಾಪಕನಿಂದ ಮಕ್ಕಳ ಮೇಲೆ ಹಲ್ಲೆ : ದೂರು ದಾಖಲು Read More »

ಇಂದು ನಾಲ್ಕನೇ ಟಿ20 ಪಂದ್ಯ : ಭಾರತ ಗೆದ್ದರೆ ಸರಣಿ ವಶ

ದಕ್ಷಿಣ ಆಫ್ರಿಕಾದ ಮೇಲೆ ಗೆಲ್ಲಲೇ ಬೇಕಾದ ಒತ್ತಡ ಲಖನೌ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಕ್ರಿಕೆಟ್ ಸರಣಿಯ ನಾಲ್ಕನೇ ಪಂದ್ಯ ಇಂದು ಉತ್ತರ ಪ್ರದೇಶದ ಲಖನೌ ಏಕನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2–1ರಿಂದ ಮುನ್ನಡೆಯಲ್ಲಿರುವ ಭಾರತಕ್ಕೆ ಸರಣಿ ಜಯಿಸಲು ಇಲ್ಲಿ ಉತ್ತಮ ಅವಕಾಶ ಒದಗಿಬಂದಿದೆ. ಅದಕ್ಕೆ ಈ ಪಂದ್ಯ ಗೆಲ್ಲಬೇಕಿದೆ. ಅತ್ತ ಸರಣಿ ಗೆಲುವಿನ ಆಸೆ ಜೀವಂತವಾಗಿ ಉಳಿಸಿಕೊಳ್ಳಲು ದಕ್ಷಿಣ ಆಫ್ರಿಕಾ ಕೂಡ ಈ ಪಂದ್ಯದಲ್ಲಿ ಜಯಿಸುವ ಒತ್ತಡದಲ್ಲಿದೆ. ಭಾರತ ತಂಡದ ನಾಯಕ

ಇಂದು ನಾಲ್ಕನೇ ಟಿ20 ಪಂದ್ಯ : ಭಾರತ ಗೆದ್ದರೆ ಸರಣಿ ವಶ Read More »

ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು

ನೀರು ಸೇದುವಾಗ ಕೈಯಿಂದ ಜಾರಿದ ಒಂದೂವರೆ ವರ್ಷದ ಮಗು ಉಡುಪಿ: ತಾಯಿಯ ಕೈಯಿಂದ ಜಾರಿ ಬಾವಿಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉಡುಪಿ ನಗರದ ಕಿನ್ನಿಮೂಲ್ಕಿ ಬಳಿ ಮಂಗಳವಾರ ನಡೆದಿದೆ. ಕೀರ್ತನ ಮೃತ ಮಗು. ನೀರು ಸೇದುತ್ತಿದ್ದ ವೇಳೆ ತಾಯಿಯ ಕೈಯಿಂದ ಜಾರಿ ಮಗು ಬಾವಿಯೊಳಗೆ ಬಿದ್ದಿದೆ. ಆಯತಪ್ಪಿ ಬಿದ್ದ ಮಗುವಿನ ರಕ್ಷಣೆಗೆ ತಕ್ಷಣವೇ ತಾಯಿ ಬಾವಿಗಿಳಿದಿದ್ದಾರೆ. ತಾಯಿ ನಯನ ಹಗ್ಗದ ಸಹಾಯದಿಂದ ಬಾವಿಗಿಳಿದಿದ್ದಾರೆ. ಆದರೆ ಅಷ್ಟು ಹೊತ್ತಿಗಾಗಲೇ ಮಗು ಕೊನೆಯುಸಿರೆಳೆದಿತ್ತು. ಘಟನಾ

ತಾಯಿ ಕೈಯಿಂದ ಜಾರಿ ಬಾವಿಗೆ ಬಿದ್ದು ಮಗು ಸಾವು Read More »

ಕಲಾಪದಲ್ಲಿ ಮಸೀದಿಗಳ ಆಜಾನ್‌ ಶಬ್ದಮಾಲಿನ್ಯದ ಕುರಿತು ಭಾರಿ ಚರ್ಚೆ

ಡೆಸಿಬಲ್‌ ಮಿತಿ ಉಲ್ಲಂಘಿಸಿದರೂ ಪ್ರಶ್ನಿಸುವ ದಮ್‌ ಸರ್ಕಾರಕ್ಕೆ ಇಲ್ಲ ಎಂದು ಬಿಜೆಪಿ ಆರೋಪ ಬೆಳಗಾವಿ : ಮಸೀದಿಗಳಲ್ಲಿ ಆಜಾನ್ ಕೂಗುವುದರಿಂದ ಆಗುವ ತೊಂದರೆಗಳ ಬಗ್ಗೆ ಮಂಗಳವಾರ ಅಧಿವೇಶನದಲ್ಲಿ ಭಾರಿ ಚರ್ಚೆ ನಡೆದಿದೆ. ಮಸೀದಿಗಳಲ್ಲಿ ಡೆಸಿಬಲ್ ಮಿತಿ ಮೀರಿ ಧ್ವನಿವರ್ಧಕಗಳನ್ನು ಬಳಸುವ ವಿಚಾರವಾಗಿ ವಿಧಾನ ಪರಿಷತ್​​ನಲ್ಲಿ ಬಿಜೆಪಿಯ ಡಿ.ಎಸ್ ಅರುಣ್ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಅರಣ್ಯ ಇಲಾಖೆ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ದೀಪಾವಳಿಯ ಸಮಯದಲ್ಲಿ ಪಟಾಕಿಗಳು ಮತ್ತು ಧ್ವನಿವರ್ಧಕಗಳು ಸಹ ಅತಿಯಾದ ಶಬ್ದವನ್ನು ಉಂಟುಮಾಡುತ್ತವೆ. ಈ

ಕಲಾಪದಲ್ಲಿ ಮಸೀದಿಗಳ ಆಜಾನ್‌ ಶಬ್ದಮಾಲಿನ್ಯದ ಕುರಿತು ಭಾರಿ ಚರ್ಚೆ Read More »

ನರೇಗಾ ಯೋಜನೆ ಹೆಸರು ಬದಲು : ಸಿದ್ದರಾಮಯ್ಯ ಕಿಡಿ

ಹೊಸ ರೂಪದಲ್ಲಿರುವ ಯೋಜನೆಯಲ್ಲಿ ಉದ್ಯೋಗ ಖಾತರಿಯಿಲ್ಲ ಎಂದು ಆಕ್ರೋಶ ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾವೇ ಬಯಲು ಮಾಡಿಕೊಂಡಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಇಪ್ಪತ್ತು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ನರೇಗಾ ಯೋಜನೆ ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗ ಮತ್ತು ಬಡತನ ನಿರ್ಮೂಲನೆಯಲ್ಲಿ

ನರೇಗಾ ಯೋಜನೆ ಹೆಸರು ಬದಲು : ಸಿದ್ದರಾಮಯ್ಯ ಕಿಡಿ Read More »

25ಕ್ಕೂ ಹೆಚ್ಚು ಕ್ರಿಮಿನಲ್‌ ಪ್ರಕರಣಗಳ ಕುಖ್ಯಾತ ಆರೋಪಿ ಬಂಧನ

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಾತಕಿ ಮಂಗಳೂರು: ಹಲವು ಬಾರಿ ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದರೂ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ನಿವಾಸಿ ದಿವಂಗತ ಹಸನ್ ಮಹಮ್ಮದ್ ಎಂಬವರ ಪುತ್ರ ಅಬ್ದುಲ್ ರವೂಫ್ ಅಲಿಯಾಸ್ ಮೀಸೆ ರವೂಫ್ (48) ಆರೊಪಿ. ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಸುಮಾರು 19 ಪ್ರಕರಣಗಳು, ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಮತ್ತು ಮಂಗಳೂರು

25ಕ್ಕೂ ಹೆಚ್ಚು ಕ್ರಿಮಿನಲ್‌ ಪ್ರಕರಣಗಳ ಕುಖ್ಯಾತ ಆರೋಪಿ ಬಂಧನ Read More »

ಜಾಗತಿಕ ವೇದಿಕೆಯಲ್ಲಿ ಭಾರತ ವಿರೋಧಿ ನಿಲುವು ವ್ಯಕ್ತಪಡಿಸಿದ ಪಾಕ್‌: ತಿರುಗೇಟು ನೀಡಿದ ಭಾರತ

ನವದೆಹಲಿ: ಭಾರತ ಮತ್ತು ಪಾಕ್ ನಡುವಿನ ಬಹುಕಾಲದ ಭಿನ್ನಾಭಿಪ್ರಾಯ ಮತ್ತೊಮ್ಮೆ ಜಾಗತಿಕ ವೇದಿಕೆಗೆ ಬಂದಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಡೆದ ‘ಶಾಂತಿಗಾಗಿ ನಾಯಕತ್ವ’ ಕುರಿತ ಮುಕ್ತ ಚರ್ಚೆಯಲ್ಲಿ ಭಾರತ ಈ ಬಗ್ಗೆ ಮಾತನಾಡಿದೆ. ಪಾಕ್ ಪ್ರತಿನಿಧಿಯ ಹೇಳಿಕೆಗಳಿಗೆ ಭಾರತ ಪ್ರತಿಕ್ರಿಯೆ ನೀಡಿದ್ದು, ತನ್ನ ಸ್ಪಷ್ಟ ನಿಲುವನ್ನು ಯಾವುದೇ ಗೊಂದಲಕ್ಕೆ ಅವಕಾಶ ಇಲ್ಲದಂತೆ ಹೇಳಿದೆ. ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಹರೀಶ್ ಪಿ. ಕಾಶ್ಮೀರ, ಲಡಾಕ್ ಭಾರತದ ಅವಿಭಾಜ್ಯ ಅಂಗ ಮತ್ತು ಅವುಗಳನ್ನು ಭಾರತದಿಂದ ಬೇರ್ಪಡಿಸಲು ಸಾಧ್ಯವಿಲ್ಲ

ಜಾಗತಿಕ ವೇದಿಕೆಯಲ್ಲಿ ಭಾರತ ವಿರೋಧಿ ನಿಲುವು ವ್ಯಕ್ತಪಡಿಸಿದ ಪಾಕ್‌: ತಿರುಗೇಟು ನೀಡಿದ ಭಾರತ Read More »

ವಿದ್ಯುತ್ ತಂತಿ ದುರಸ್ತಿ ವೇಳೆ ಶಾಕ್ ಹೊಡೆದು ಓರ್ವ ಸಾವು, ಮತ್ತೋರ್ವ ಗಂಭೀರ

ಹಾಸನ: ವಿದ್ಯುತ್ ತಂತಿ ದುರಸ್ತಿ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಬಿಹಾರ ಮೂಲದ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕಾಟೀಹಳ್ಳಿಯ ಟೀಚರ್ಸ್ ಕಾಲನಿಯಲ್ಲಿ ನಡೆದಿದೆ. ಬರಿಕುಲ್ (18) ಎಂಬವರೇ ಮೃತ ದುರ್ದೈವಿ. ಗಾಯಾಳುವನ್ನು ಸಲೀಂ(17) ಎಂದು ಗುರುತಿಸಲಾಗಿದೆ. ತಾಂತ್ರಿಕ ದೋಷದ ಕಾರಣ ಈ ಇಬ್ಬರು ಕಂಬ ಏರಿ ದುರಸ್ತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಇದೇ ಸಮಯದಲ್ಲಿ ತಂತಿಗಳಲ್ಲಿ ವಿದ್ಯುತ್ ಪ್ರವಹಿಸಿದ್ದು ಇಬ್ಬರಿಗೂ ತೀವ್ರ ಪ್ರಮಾಣದಲ್ಲಿ ಶಾಕ್ ಹೊಡೆದಿದೆ. ಬರೀಕುಲ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಸಲೀಂ ಪ್ರಜ್ಞಾಹೀನ

ವಿದ್ಯುತ್ ತಂತಿ ದುರಸ್ತಿ ವೇಳೆ ಶಾಕ್ ಹೊಡೆದು ಓರ್ವ ಸಾವು, ಮತ್ತೋರ್ವ ಗಂಭೀರ Read More »

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದ ಕ್ಷೇತ್ರ ಭೇಟಿ, ಸಭೆ

ಮೆಲ್ಕಾರ್: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ರಿ. ಬಂಟ್ವಾಳ ನೇತೃತ್ವದಲ್ಲಿ, ಪುತ್ತೂರು ಘಟಕದ ಸಹಯೋಗದೊಂದಿಗೆ ಒಂದು ದಿನದ ಕ್ಷೇತ್ರ ಭೇಟಿ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಿಂದ ಪ್ರಾರಂಭಗೊಂಡು ಶ್ರೀ ಕ್ಷೇತ್ರ ಪಾವಂಜೆ, ಸಿಗಂದೂರು, ಕೊಲ್ಲೂರು ಮತ್ತು ಕಾಪು ಮಾರಿಯಮ್ಮ ದೇವಸ್ಥಾನಗಳನ್ನು ಸಂದರ್ಶಿಸಲಾಯಿತು. ಕೊಲ್ಲೂರು ದೇವಳದ ಪ್ರಧಾನ ಅರ್ಚಕ ನರಸಿಂಹ ಅಡಿಗರ ಸಮಕ್ಷಮದಲ್ಲಿ ಪ್ರತಿಷ್ಠಾನದ ಮಾಸಿಕ ಸಭೆ ನಡೆಸಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಕೆಯ್ಯೂರು ನಾರಾಯಣ ಭಟ್ ಪ್ರತಿವರ್ಷ ನಡೆಯುವ ಕ್ಷೇತ್ರ ಭೇಟಿಯಂತೆ ಈ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವತಿಯಿಂದ ಕ್ಷೇತ್ರ ಭೇಟಿ, ಸಭೆ Read More »

ತುಮಕೂರಿನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ

ತುಮಕೂರು: ಬಾಂಬ್ ಬೆದರಿಕೆಯೊಂದು ಇ-ಮೇಲ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಇಂದು ಬಂದಿದ್ದು, ಇದರಿಂದಾಗಿ ಕೆಲಕಾಲ ಜಿಲ್ಲಾಡಳಿತ ಕಚೇರಿಯಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು. ಬೆಳಗ್ಗೆ ಸುಮಾರು 7 ಗಂಟೆಯ ಸಮಯಕ್ಕೆ ಈ ಬೆದರಿಕೆ ಇ-ಮೇಲ್ ಡಿಸಿ ಅವರ ಅಧಿಕೃತ ಮೇಲ್ ಐಡಿ‌ಗೆ ಬಂದಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಕಚೇರಿಗೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ, ಹಿರಿಯ ಪೊಲೀಸ್ ಅಧಿಕಾರಿಗಳ ದಳ ಧಾವಿಸಿ ಪರಿಶೀಲನೆ ನಡೆಸಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಸಮಯ ಕಚೇರಿ ಮತ್ತು ಆಸುಪಾಸಿನಲ್ಲಿ ಶೋಧ

ತುಮಕೂರಿನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ Read More »

error: Content is protected !!
Scroll to Top