ಸ್ವರ್ಣ ಸಾಧನಾ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಆಯ್ಕೆ

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಕೊಡಮಾಡುವ ‘ಸ್ವರ್ಣ ಸಾಧನಾ ಪ್ರಶಸ್ತಿ’ಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿಯವರು ಆಯ್ಕೆಯಾಗಿದ್ದಾರೆ. ಸಂಘದ ವತಿಯಿಂದ 2022ರಲ್ಲಿ ಪ್ರಾರಂಭಗೊಂಡ ವಿವಿಧ ಕ್ಷೇತ್ರದ ಸಾಧಕರಿಗೆ ನೀಡುತ್ತಿರುವ ಪ್ರಶಸ್ತಿಗೆ ಈ ವರ್ಷ ಖ್ಯಾತ ಸಾಹಿತಿ, ಕವಿ ಸುಬ್ರಾಯ ಚೊಕ್ಕಾಡಿಯವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಮೇ 4 ರಂದು ಪುತ್ತೂರಿನ ‘ಜೈನ ಭವನ’ದಲ್ಲಿ ಜರಗಲಿದ್ದು, ಪ್ರಶಸ್ತಿ 15,000 ರೂಪಾಯಿ ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆಯೆಂದು ಸಂಘದ ಅಧ್ಯಕ್ಷ […]

ಸ್ವರ್ಣ ಸಾಧನಾ ಪ್ರಶಸ್ತಿಗೆ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಆಯ್ಕೆ Read More »

ಸೌದಿಯಲ್ಲಿ ಜೈಲು ಸೇರಿದ ಮಂಗಳೂರಿನ ವ್ಯಕ್ತಿ | ಬಿಡುಗಡೆಗೆ ಮನೆಯವರಿಂದ ವಿದೇಶಾಂಗ ಇಲಾಖೆಗೆ ಪತ್ರದ ಮೂಲಕ ಮನವಿ

ಸೌದಿ ಅರೇಬಿಯಾದಲ್ಲಿ ಉದ್ಯಮ ನಡೆಸುತ್ತಿದ್ದ ಮಂಗಳೂರಿನ ವ್ಯಕ್ತಿಯೊಬ್ಬರು ಕಳೆದ 9 ತಿಂಗಳಿನಿಂದ ಜೈಲು ಸೇರಿದ್ದು, ಅವರನ್ನು ಜೈಲಿನಿಂದ ಪಾರು ಮಾಡುವಂತೆ ಇದೀಗ ಕುಟುಂಬಸ್ಥರು ವಿದೇಶಾಂಗ ಇಲಾಖೆಗೆ ಪತ್ರ ಬರೆದಿದ್ದಾರೆ. ಮಂಗಳೂರಿನ ಜಪ್ಪಿನಮೊಗರು ನಿವಾಸಿ ಇಸ್ಮಾಯಿಲ್ ದಂಡರಕೋಲಿ (65) ಜೈಲು ಸೇರಿದವರಾಗಿದ್ದಾರೆ. ಈ ತನಕ ಅವರನ್ನು ಜೈಲಿನಿಂದ ಪಾರು ಮಾಡಲು ಪ್ರಯತ್ನಿಸಿದರೂ ವಿಫಲವಾಗಿದೆ. ಈ ನಿಟ್ಟಿನಲ್ಲಿ ವಿದೇಶಾಂಗ ಇಲಾಖೆಗೆ ಪತ್ರದ ಮೂಲಕ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಕಳೆದ 27 ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಉದ್ಯಮ ನಡೆಸುತ್ತಿದ್ದ ಅವರು 10

ಸೌದಿಯಲ್ಲಿ ಜೈಲು ಸೇರಿದ ಮಂಗಳೂರಿನ ವ್ಯಕ್ತಿ | ಬಿಡುಗಡೆಗೆ ಮನೆಯವರಿಂದ ವಿದೇಶಾಂಗ ಇಲಾಖೆಗೆ ಪತ್ರದ ಮೂಲಕ ಮನವಿ Read More »

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ಧ : ಸಂಸದ ನಳಿನ್ ಕುಮಾರ್ ಕಟೀಲ್‍ | ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ

ಪುತ್ತೂರು: ಜಗತ್ತಿನಲ್ಲಿ ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕರಾಗಿ ಹೊರಹೊಮ್ಮಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ, ರಾಜಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳವಾರ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಸ್ವಾಮಿ ಕಲಾಮಂದಿರದಲ್ಲಿ ಪುತ್ತೂರು ಬಿಜೆಪಿ ವಿಧಾನಸಭಾ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಪರಿವರ್ತನೆಯ ಗಾಳಿ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ಧ : ಸಂಸದ ನಳಿನ್ ಕುಮಾರ್ ಕಟೀಲ್‍ | ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ Read More »

ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಸ್ವಾಗತಿಸಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು : ಬಿಜೆಪಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಬೈಪಾಸ್ ಸ್ವಾಮಿ ಕಲಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ರನ್ನು ಮಾಜಿ ಶಾಸಕ ಸಂಜೀವ ಮಠಂದೂರು ಶಾಲು ಹಾಕಿ ಸ್ವಾಗತಿಸಿದರು. ಹಲವು ಗಣ್ಯರು ಈ ವೇಳೆ ಉಪಸ್ಥಿತರಿದ್ದರು.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಸ್ವಾಗತಿಸಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ಅನಾರೋಗ್ಯದಿಂದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು !

ಸುಳ್ಯ: ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರೊಬ್ಬರು ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದಲ್ಲಿ ನಡೆದಿದೆ. ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ ಮೇಲ್ಪಾಡಿ (35) ಮೃತಪಟ್ಟವರು. ಹೊಟ್ಟೆನೋವಿನಿಂದ ಬಳಲಿದ್ದ ಅವರನ್ನು ಕಾಣಿಯೂರು ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತರು ಐವತ್ತೊಕ್ಲು ಗ್ರಾಮದ ಒಂದನೇ ವಾರ್ಡ್‍ ಬೂತ್ ಅಧ್ಯಕ್ಷರಾಗಿ, ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು.

ಅನಾರೋಗ್ಯದಿಂದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ! Read More »

ಒಡಿಯೂರು ಶ್ರೀಗಳಿಂದ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ದ.ಕ. ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಬಳಿಕ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರಕ್ಕೆ ಭೇಟಿ ನೀಡಿ ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ಒಡಿಯೂರು ಶ್ರೀಗಳಿಂದ ಆಶೀರ್ವಾದ ಪಡೆದ ದ.ಕ. ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ Read More »

ಇಂದು ಮೈಸೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಮಿತ್ ಶಾ ರೋಡ್ ಶೋ | ಉಪಮುಖ್ಯಮಂತ್ರಿ ಭದ್ರಕೋಟೆಯಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ಭದ್ರಕೋಟೆಯಾದ ಹಳೆ ಮೈಸೂರು ಭಾಗದಲ್ಲೆ ಅಮಿತ್‍ ಶಾ ಇಂದು ಬಿಜೆಪಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಗೆ ರಣಕಹಳೆ ಮೊಳಗಿಸಲಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಪರ ಬೆಂಗಳೂರು ಗ್ರಾಮಾಂತರ ಕ್ಷೇತ್ರವಾದ ಚನ್ನಪಟ್ಟಣದಲ್ಲಿ ಅಮಿತ್ ಶಾ ಇಂದು ಬೃಹತ್ ರೋಡ್ ಶೋ ನಡೆಸಲಿದ್ದಾರೆ. ದಿಲ್ಲಿಯಿಂದ ಸೋಮವಾರ ರಾತ್ರಿ ಅಮಿತ್ ಶಾ ಅವರು ಬೆಂಗಳೂರಿಗೆ ಬರಲಿದ್ದಾರೆ ಎನ್ನಲಾಗಿದ್ದು, ಮಧ್ಯರಾತ್ರಿ 2.30 ಕ್ಕೆ ಎಚ್‍ ಎ ಎಲ್‍ ಏರ್‍

ಇಂದು ಮೈಸೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಮಿತ್ ಶಾ ರೋಡ್ ಶೋ | ಉಪಮುಖ್ಯಮಂತ್ರಿ ಭದ್ರಕೋಟೆಯಲ್ಲಿ ಲೋಕಸಭಾ ಚುನಾವಣೆಗೆ ರಣಕಹಳೆ Read More »

ಕರ್ನಾಟಕ ಫ್ಯಾಷನ್ ಸ್ಪರ್ಧೆ : ಗೂನಡ್ಕದ ಸಮೃದ್ಧಿಗೆ ರನ್ನರ್ ಆಫ್‍ ಪ್ರಶಸ್ತಿ

ಮೈಸೂರು: ಮೈಸೂರಿನ ಕರ್ನಾಟಕ ಸಾಂಸ್ಕೃತಿಕ ಹಾಗೂ ಸಾಹಿತ್ಯ ಪರಿಷತ್ತಿನ ಮೊದಲನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಕರ್ನಾಟಕ ಫ್ಯಾಷನ್ ಸ್ಪರ್ಧೆಯ 4 ರಿಂದ 9 ವರ್ಷದ ಮಕ್ಕಳ ವಿಭಾಗದಲ್ಲಿ ಕು. ಸಮೃದ್ಧಿ ಮೊದಲ ರನ್ನರ್ ಆಫ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾಳೆ. ಈಕೆ ಗೂನಡ್ಕ ಬೀಜದಕಟ್ಟೆ ನಿವಾಸಿ ಸದಾನಂದ ಮತ್ತು ಸುಳ್ಯ ನಗರ ಪಂಚಾಯತ್ ಉದ್ಯೋಗಿ ಆಶಾ ಬಿ.ಆರ್. ದಂಪತಿ ಪುತ್ರಿ. ಮಾರುತಿ ಐಪಿಎಸ್ ನಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ಕರ್ನಾಟಕ ಫ್ಯಾಷನ್ ಸ್ಪರ್ಧೆ : ಗೂನಡ್ಕದ ಸಮೃದ್ಧಿಗೆ ರನ್ನರ್ ಆಫ್‍ ಪ್ರಶಸ್ತಿ Read More »

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ ಸಾಧ್ಯತೆ !

ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ತಿಂಗಳ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ ಇದ್ದು, ಈ ಕುರಿತು ಶಿಕ್ಷಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾ.1 ರಿಂದ 22 ರ ತನಕ ರಾಜ್ಯದ 1120 ಕ್ಕೂ ಅಧಿಕ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಸುಮಾರು 7 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದಾರೆ. ಮಾ.25 ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಂಡಿದೆ. ಬಹುತೇಕ ಮೌಲ್ಯಮಾಪನ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್ ಎರಡನೇ ವಾರದಲ್ಲಿ ಸಾಧ್ಯತೆ ! Read More »

ಸ್ಪೋಟಕ ಬಳಸಿ ಕಲ್ಲು ಸ್ಪೋಟ | ಮನೆಗೆ ಹಾನಿ : ಠಾಣೆಗೆ ದೂರು

ಕಡಬ: ಸ್ಪೋಟಕ ಬಳಸಿ ಕಲ್ಲು ಒಡೆಯುತ್ತಿರುವ ಪರಿಣಾಮ ಮನೆಗಳಿಗೆ ಹಾನಿಯುಂಟಾಗುವುದರ ಜತೆ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಸ್ಪೋಟಕ ನಡೆಸುವವರ ವಿರುದ್ಧ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಕುಕ್ಕಿಪ್ಪನ ಮನೆ ನಿವಾಸಿ ಆನಂದ ಗೌಡ ಎಂಬವರು ಈ ಕುರಿತು ಠಾಣೆಗೆ ದೂರು ನೀಡಿದ್ದು, ಸಮೀಪದ ನಿವಾಸಿ ದಯಾನಂದ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಏನೆಕಲ್ಲು ಗ್ರಾಮದ ಅಜಿರುಪೊಲಿ ಎಂಬಲ್ಲಿ ಕಳೆದ ಎರಡು ತಿಂಗಳಿನಿಂದ ಅಕ್ರಮ ಸ್ಪೋಟಕಗಳನ್ನು ಬಳಸಿ ಕಲ್ಲುಗಳನ್ನು ಒಡೆದು ಸೈಜುಕಲ್ಲುಗಳನ್ನಾಗಿ

ಸ್ಪೋಟಕ ಬಳಸಿ ಕಲ್ಲು ಸ್ಪೋಟ | ಮನೆಗೆ ಹಾನಿ : ಠಾಣೆಗೆ ದೂರು Read More »

error: Content is protected !!
Scroll to Top