ಎ.6 : ಪಾದೆಬಂಬಿಲ ಶ್ರೀ ದುರ್ಗಾಭಜನಾ ಮಂದಿರದಲ್ಲಿ 24ನೇ ವರ್ಷದ ಶನೈಶ್ಚರ ಪೂಜೆ | ಆಮಂತ್ರಣ ಬಿಡುಗಡೆ

ಸವಣೂರು : ಪಾಲ್ತಾಡಿ ಗ್ರಾಮದ ಪಾದೆಬಂಬಿಲ ಶಕ್ತಿ ನಗರ ಶ್ರೀ ದುರ್ಗಾಭಜನಾ ಮಂಡಳಿಯ ವತಿಯಿಂದ ಎ.6ರಂದು ನಡೆಯಲಿರುವ 24ನೇ ವರ್ಷದ ಶನೈಶ್ಚರ ಪೂಜೆ ಹಾಗೂ ಭಗವದ್ಗೀತೆ ಪಾರಾಯಣ ,ಅರ್ಧ ಏಕಾಹ ಭಜನೆಯ ಆಮಂತ್ರಣ ಬಿಡುಗಡೆ ಶ್ರೀದುರ್ಗಾ ಭಜನಾ ಮಂದಿರದಲ್ಲಿ ನಡೆಯಿತು. ಆಮಂತ್ರಣವನ್ನು ಭಜನಾ ಮಂದಿರದ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಹಾಗೂ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಅವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಎ.6 : ಪಾದೆಬಂಬಿಲ ಶ್ರೀ ದುರ್ಗಾಭಜನಾ ಮಂದಿರದಲ್ಲಿ 24ನೇ ವರ್ಷದ ಶನೈಶ್ಚರ ಪೂಜೆ | ಆಮಂತ್ರಣ ಬಿಡುಗಡೆ Read More »

ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ | ಚುನಾವಣಾ ಆಯೋಗದಿಂದ ನೋಟೀಸ್

ಮಂಗಳೂರು: ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆಯೋಜಕರಿಗೆ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ. ಮಂಗಳೂರಿನ ಮುಡಿಪು ನಲ್ಲಿ ಒಂದು ಬದಿಯ ರಸ್ತೆಯನ್ನು ತಡೆಮಾಡಿ ಚಯರ್‍ ಗಳನ್ನು ಅಳವಡಿಸಿ ಇಫ್ತಾರ್ ಕೂಟ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಹಿಜಾಂವೇ ಆಯೋಜಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಅದರಂತೆ ಇದೀಗ ಚುನಾವಣಾ ಆಯೋಗ ನೋಟೀಸ್ ಜಾರಿ ಮಾಡಿದೆ.

ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜನೆ | ಚುನಾವಣಾ ಆಯೋಗದಿಂದ ನೋಟೀಸ್ Read More »

ಪಡುಮಲೆ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸೋಮವಾರ ಗೆಜ್ಜೆಗಿರಿ ನಂದನ ಬಿತ್ತ್’ಲ್ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಳಿಕ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದರು. ಕ್ಷೇತ್ರದ ಆದಿದೈವ ದೂಮಾವತಿ ನಡೆಯಲ್ಲಿ ಪ್ರಾರ್ಥಿಸಿ, ಸತ್ಯಧರ್ಮ ಚಾವಡಿಯಲ್ಲಿ ದೇಯಿ ಬೈದೆತಿ ಸಾನಿಧ್ಯದಲ್ಲಿ ಪ್ರಸಾದ ಸ್ವೀಕರಿಸಿದರು. ಪಡುಮಲೆ ಪೂಮಾಣಿ, ಕಿನ್ನಿಮಾಣಿ, ವ್ಯಾಘ್ರ ಚಾಮುಂಡಿ ಕ್ಷೇತ್ರಕ್ಕೆ ತೆರಳಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಪಡುಮಲೆ ನಾಗ ಬೆರ್ಮೆರ್ ಗುಡಿ, ನಾಗ ಸಾನಿಧ್ಯಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು. ಈ

ಪಡುಮಲೆ ಗೆಜ್ಜೆಗಿರಿ ನಂದನ ಬಿತ್ತಿಲ್ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆಮುಹೂರ್ತ ಸೋಮವಾರ ನಡೆಯಿತು. ಏ.10 ರಿಂದ 17 ರ ತನಕ ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ ನಡೆಯಲಿದ್ದು, ಪೂರ್ವಭಾವಿಯಾಗಿ ಇಂದು ಬೆಳಿಗ್ಗೆ ಪೂರ್ವ ಶಿಷ್ಟ ಸಂಪ್ರದಾಯದಂತೆ ದೇವಸ್ಥಾನದ ಗರ್ಭಗುಡಿ ಎದುರು ಪ್ರಾರ್ಥನೆ ಸಲ್ಲಿಸಿದ ಬಳಿ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಿ.ಎಸ್‍. ಭಟ್ ಗೊನೆ ಮುಹೂರ್ತ ನೆರವೇರಿಸಿದರು. ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ಈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ Read More »

ಕಾಪು ಮಹಿಳಾ ಪಿಸಿ ಆತ್ಮಹತ್ಯೆ : ಪತಿ ಬಂಧನ

ಕಾಪು: ಪೋಲಿಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಅವರ ಪತಿ ರವಿಕುಮಾರ್ (35) ಅವರನ್ನು  ಕಾಪು ಪೋಲಿಸರು ಬಂಧಿಸಿದ್ದಾರೆ. ಆತ್ಮಹತ್ಯೆಗೈದ ಬಳಿಕ ಜ್ಯೋತಿ ಅವರ ಕೊಠಡಿಯಲ್ಲಿ ಡೈರಿಯೊಂದು ಸಿಕ್ಕಿದ್ದು  ಅದರಲ್ಲಿ ಆಕೆ  ತನ್ನ ಆತ್ಮಹತ್ಯೆಗೆ ನನ್ನ ಗಂಡನ ಸಂಶಯ ಪ್ರವೃತ್ತಿಯೇ ಕಾರಣ ಎಂದು ಬರೆದುಕೊಂಡಿದ್ದಾಗಿ ಆಕೆಯ ತಾಯಿ ದೇವಮ್ಮ ವಿಟ್ಲಾಪುರ ಪೋಲಿಸರಿಗೆ ದೂರು ನೀಡಿದ್ದಾರೆ. ಈ  ಹಿನ್ನಲೆಯಲ್ಲಿ ಪೋಲೀಸರು ಶನಿವಾರ ತಡರಾತ್ರಿ ಆಕೆಯ ಪತಿಯನ್ನು ಬಂಧಿಸಿದ್ದಾರೆ.

ಕಾಪು ಮಹಿಳಾ ಪಿಸಿ ಆತ್ಮಹತ್ಯೆ : ಪತಿ ಬಂಧನ Read More »

ಉಪ್ಪಿನಂಗಡಿ ಕಂಬಳದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. | ಕನ್ನಡ ಸಿನಿಮಾ ‘ಕಲಹ’ದ ಪೋಸ್ಟರ್ ಬಿಡುಗಡೆ

ಉಪ್ಪಿನಂಗಡಿ: ವಿಜಯ – ವಿಕ್ರಮ ಜೋಡುಕರೆ ಕಂಬಳೋತ್ಸವದಲ್ಲಿ ಪಾಲ್ಗೊಂಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು, ಕಲಹ ಕನ್ನಡ ಸಿನಿಮಾದ ಪೋಸ್ಟರ್ ಅನಾವರಣಗೊಳಿಸಿದರು. ಪುತ್ತೂರು ಶಾಸಕ, ಉಪ್ಪಿನಂಗಡಿ ವಿಜಯ – ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು. ಕಂಬಳಕ್ಕೆ ತನ್ನದೇ ಆದ ವಿಶೇಷ ಕೊಡುಗೆ ನೀಡಿರುವ ವಲೇರಿಯನ್ ಡಯಾಸ್ (ಅಪ್ಪಣ್ಣ) ಅವರನ್ನು ಈ ಸಂದರ್ಭ ಸನ್ಮಾನಿಸಿ, ಗೌರವಿಸಲಾಯಿತು. ವೇದಿಕೆಯಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಾಪನಾ

ಉಪ್ಪಿನಂಗಡಿ ಕಂಬಳದಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. | ಕನ್ನಡ ಸಿನಿಮಾ ‘ಕಲಹ’ದ ಪೋಸ್ಟರ್ ಬಿಡುಗಡೆ Read More »

ಉಡುಪಿ ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಉಡುಪಿ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರನ್ನು ಭೇಟಿ ಮಾಡಿದರು. ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು ಪ್ರದೀಪ್ ಕುಮಾರ್ ಕಲ್ಕೂರ ಅವರ ನಿವಾಸದಲ್ಲಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಪ್ರದೀಪ್ ಕುಮಾರ್ ಕಲ್ಕೂರ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಉಡುಪಿ ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದ ಕ್ಯಾ.ಬ್ರಿಜೇಶ್ ಚೌಟ Read More »

ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ | ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇಯಿಂದ ಚುನಾವಣಾ ಆಯುಕ್ತರಿಗೆ ದೂರು

ಮಂಗಳೂರು: ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದನ್ನು ಹಿಂದೂ ಜಾಗರಣ ವೇದಿಕೆ ಖಂಡಿಸಿದ್ದು, ಈ ಕುರಿತು ಚುನಾವಣಾ ಆಯೋಗ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿ ಮುಡಿಪು ರಸ್ತೆಯಲ್ಲಿ ಒಂದು ಭಾಗವನ್ನು ತಡೆಮಾಡಿ ಒಂದು ಸಮುದಾಯ ಅನ್ಯರಾಜ್ಯಗಳ ವ್ಯಕ್ತಿಗಳನ್ನು ಸೇರಿಸಿ ಇಫ್ತಾರ್ ಕೂಟ ಮಾಡಿರುವುದು ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ಇದರಿಂದ ಚುನಾವಣಾ ನೀತಿ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ತಕ್ಷಣ ಈ ಕುರಿತು ಮೊಕದ್ದಮೆ ದಾಖಲಿಸಿ

ಮುಡಿಪು ರಸ್ತೆಯಲ್ಲಿ ಇಫ್ತಾರ್ ಕೂಟ | ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂಜಾವೇಯಿಂದ ಚುನಾವಣಾ ಆಯುಕ್ತರಿಗೆ ದೂರು Read More »

ರಸ್ತೆಯಲ್ಲೇ ಇಫ್ತಾರ್ ಕೂಟ ಆಯೋಜನೆ | ವಿವಾದಕ್ಕೆಡೆ ಮಾಡಿದ ಇಫ್ತಾರ್ ಕೂಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಂಗಳೂರು: ಸೌಹಾರ್ದತೆಯ ಹೆಸರಿನಲ್ಲಿ ಇಫ್ತಾರ್ ಕೂಟವೊಂದನ್ನು ರಸ್ತೆಯಲ್ಲೇ ಆಯೋಜಿಸಿ ವಿವಾದಕ್ಕೆ ಕಾರಣವಾದ ಘಟನೆ ಉಳ್ಳಾಲ ತಾಲೂಕಿನ ಮುಡಿಪುವಿನಲ್ಲಿ ನಡೆದಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗುತ್ತಿದೆ. ಸೌಹಾರ್ದತೆಯ ಹೆಸರಿನಲ್ಲಿ  ಮುಡಿಪುವಿನ ಮುಖ್ಯರಸ್ತೆಯ ಒಂದು ಬದಿಯಲ್ಲಿ ಬ್ಲಾಕ್ ಇಫ್ತಾರ್ ಕೂಟ ನಡೆಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗಿದ್ದು, ನಾನಾ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮುಡಿಪು ಜಂಕ್ಷನ್‌ನಲ್ಲಿ ಆಟೋ ರಾಜಕನ್ಮಾರ್ ಎಂಬ ಸಂಘಟನೆ ಈ ಇಫ್ತಾರ್ ಕೂಟ ಆಯೋಜಿಸಿದೆ ಎನ್ನಲಾಗಿದೆ. ರಿಕ್ಷಾ ಚಾಲಕರೆಲ್ಲರೂ ಒಟ್ಟಾಗಿ ಸೇರಿಕೊಂಡು

ರಸ್ತೆಯಲ್ಲೇ ಇಫ್ತಾರ್ ಕೂಟ ಆಯೋಜನೆ | ವಿವಾದಕ್ಕೆಡೆ ಮಾಡಿದ ಇಫ್ತಾರ್ ಕೂಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ನ್ಯೂಸ್ ಪುತ್ತೂರು ವ್ಯವಸ್ಥಿತ ರೀತಿಯಲ್ಲಿ ಕಾರ್ಯಾಚರಿಸುತ್ತಿದೆ | ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿಂದ ಸನ್ಮಾನ ಸ್ವೀಕರಿಸಿ ಕೆ.ರಾಧಾಕೃಷ್ಣ ನಾಯ್ಕ್  

ಪುತ್ತೂರು: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ರಾಧಾಕೃಷ್ಣ ನಾಯ್ಕ್ ಏಳ್ನಾಡುಗುತ್ತು ಅವರನ್ನು ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನ್ಯೂಸ್ ಪುತ್ತೂರು ಕಚೇರಿಯಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ರಾಧಾಕೃಷ್ಣ ನಾಯ್ಕ್, ಪ್ರಾಮಾಣಿಕತೆಗೆ ಯಾವತ್ತೂ ಬೆಲೆ ಇದೆ. ಜಗತ್ತು ನಾವು ನೋಡಿದ ಹಾಗೆ ಇಲ್ಲ. ಜಗತ್ತನ್ನು ವಾಸ್ತವಾಂಶವಾಗಿ ನಾವು ಕಾಣುವುದು ಬೇರೆಯೇ. ನಾವು ನೋಡುತ್ತಿರುವ ಜಗತ್ತು ಬೇರೆಯೇ. ನ್ಯೂಸ್ ಪುತ್ತೂರು ಇಷ್ಟೊಂದು ವ್ಯವಸ್ಥಿತವಾಗಿ ಇದೆ ಎಂಬುದು ನನಗೆ ಇಂದು ಗೊತ್ತಾಗಿದೆ

ನ್ಯೂಸ್ ಪುತ್ತೂರು ವ್ಯವಸ್ಥಿತ ರೀತಿಯಲ್ಲಿ ಕಾರ್ಯಾಚರಿಸುತ್ತಿದೆ | ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ನಿಂದ ಸನ್ಮಾನ ಸ್ವೀಕರಿಸಿ ಕೆ.ರಾಧಾಕೃಷ್ಣ ನಾಯ್ಕ್   Read More »

error: Content is protected !!
Scroll to Top