3 ಕೋಟಿ ಇನ್ಶೂರೆನ್ಸ್‌ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

ಎಸ್‌ಐಟಿ ತನಿಖೆಯಲ್ಲಿ ಬಯಲಾದ ಆಕಸ್ಮಿಕ ಸಾವಿನ ಪ್ರಕರಣದ ರಹಸ್ಯ ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ಮಕ್ಕಳೇ ಇನ್ಶೂರೆನ್ಸ್ ಹಣಕ್ಕಾಗಿ ಹುಟ್ಟಿಸಿದ ತಂದೆಯನ್ನು ಹಾವು ಕಚ್ಚಿಸಿ ಕೊಂದಿರುವ ಆಘಾತಕಾರಿ ಘಟನೆ ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ಸಂಭವಿಸಿದೆ. ಎಸ್‌ಐಟಿ ತನಿಖೆಯಲ್ಲಿ ಮಕ್ಕಳಿಬ್ಬರು ಮಾಡಿದ ಹತ್ಯೆ ಸಂಚು ಬಯಲಾಗಿದೆ. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ ಅಂತ ಭಾವಿಸಲಾಗಿತ್ತು. ಆದರೆ ಇನ್ಶೂರೆನ್ಸ್ ಕಂಪನಿ ಹಣ ನೀಡುವ ಪ್ರಕ್ರಿಯೆ ವೇಳೆ ಅನುಮಾನ ವ್ಯಕ್ತವಾಯಿತು. ಬಳಿಕ ವಿಶೇಷ ತನಿಖಾ ತಂಡ ಪ್ರಕರಣ ಕೈಗೆತ್ತಿಕೊಂಡಿತು. […]

3 ಕೋಟಿ ಇನ್ಶೂರೆನ್ಸ್‌ ಹಣಕ್ಕಾಗಿ ತಂದೆಯನ್ನೇ ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು Read More »

ಸರ್ಕಾರಿ ನೌಕರರು ಕಚೇರಿಗೆ ಸಭ್ಯ ಉಡುಪು ಧರಿಸಿ ಬರಬೇಕು : ಸುತ್ತೋಲೆ

ಹರಿದ ಜೀನ್ಸ್‌, ಸ್ಲೀವ್‌ಲೆಟ್‌ ಡ್ರೆಸ್‌, ಬಿಗಿ ಬಟ್ಟೆ ಧರಿಸುವಂತಿಲ್ಲ ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಸಭ್ಯ ಬಟ್ಟೆಗಳನ್ನು ಧರಿಸಿಕೊಂಡು ಕಚೇರಿಗೆ ಬರಬೇಕು. ಸರ್ಕಾರದ ಖ್ಯಾತಿಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸಿ ಕಚೇರಿಗೆ ಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಟ್ಟುನಿಟ್ಟಿನ ಸೂತ್ತೋಲೆ ಹೊರಡಿಸಿದೆ. ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು

ಸರ್ಕಾರಿ ನೌಕರರು ಕಚೇರಿಗೆ ಸಭ್ಯ ಉಡುಪು ಧರಿಸಿ ಬರಬೇಕು : ಸುತ್ತೋಲೆ Read More »

ರಾಜ್ಯಸಭೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ

ಬೆಳಗ್ಗಿನ ತನಕ ಪ್ರತಿಭಟನೆ ನಡೆಸಿದ ವಿಪಕ್ಷಗಳು ನವದೆಹಲಿ: ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದ್ದ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ-2025 ಅನ್ನು ಶುಕ್ರವಾರ ಮಧ್ಯರಾತ್ರಿ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ತಡರಾತ್ರಿ 12.15ರ ಸುಮಾರಿಗೆ ಧ್ವನಿ ಮತದ ಮೂಲಕ ಮಸೂದೆಯನ್ನ ಅಂಗೀಕರಿಸಲಾಯಿತು. ಮಧ್ಯರಾತ್ರಿವರೆಗೆ ನಡೆದ ಚರ್ಚೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ (ಮನ್ರೇಗಾ) ಹೆಸರು ಬದಲಿಸಿ ಪರಿಚಯಿಸಲಾದ ಮಸೂದೆಗೆ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಗದ್ದಲ ಕೋಲಾಹಲ ಏರ್ಪಟ್ಟಿತು. ಕೊನೆಗೆ ಮಸೂದೆಯನ್ನ ವಿರೋಧಿಸಿ

ರಾಜ್ಯಸಭೆಯಲ್ಲಿ ಮಧ್ಯರಾತ್ರಿ ಜಿ ರಾಮ್‌ ಜಿ ಮಸೂದೆ ಅಂಗೀಕಾರ Read More »

ನಿರಾಶ್ರಿತರ ಪರಿಹಾರ ಕೇಂದ್ರದಿಂದ ಏಳು ಮಂದಿ ಪರಾರಿ

ಕಿಟಿಕಿಯ ಕಂಬಿ ಮುರಿದು ಪಲಾಯನ ಮಂಗಳೂರು : ನಗರ ಹೊರವಲಯದ ಪಚ್ಚನಾಡಿ ಗ್ರಾಮದ ನಿರಾಶ್ರಿತರ ಪರಿಹಾರ ಕೇಂದ್ರದಿಂದ ಏಳು ಮಂದಿ ತಪ್ಪಿಸಿಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ತಡರಾತ್ರಿ ಸುಮಾರು 1.30ಕ್ಕೆ ಕೇಂದ್ರದ ವಾಸದ ಕೊಠಡಿ ಸಂಖ್ಯೆ 3 ರಲ್ಲಿದ್ದವರ ಪೈಕಿ 7 ಮಂದಿ ಕಿಟಕಿಯ ಕಂಬಿ ಮುರಿದು ಪರಾರಿಯಾಗಿದ್ದಾರೆ. 5.2 ಅಡಿ ಎತ್ತರದ, ಗುಂಡುಮುಖದ, ಕನ್ನಡ ಮಾತನಾಡಬಲ್ಲ ದೇವರಾಜು (37), 5 ಅಡಿ ಎತ್ತರದ, ದುಂಡು ಮುಖದ, ಹಿಂದಿ ಮಾತನಾಡಬಲ್ಲ ದುರ್ಗಾಬಾಯಿ

ನಿರಾಶ್ರಿತರ ಪರಿಹಾರ ಕೇಂದ್ರದಿಂದ ಏಳು ಮಂದಿ ಪರಾರಿ Read More »

ನಾಲ್ಕು ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಸೆರೆ

ಸುಳ್ಯ : ವಂಚನೆ ಪ್ರಕರಣದಲ್ಲಿ ಸುಮಾರು ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಡೂರು ಗ್ರಾಮದ ನಿವಾಸಿ ನಾಗೇಶ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಡೂರು ಗ್ರಾಮದ ನಿವಾಸಿ ನಾಗೇಶ್ ಎಂಬಾತನನ್ನು, ಸುಳ್ಯ ಪೊಲೀಸ್ ಠಾಣಾ ಸಿಬ್ಬಂದಿಗಳಾದ ರಮೇಶ್ ಹಾಗೂ ಶ್ರೀಶೈಲ ಅವರು ಗುರುವಾರ ಬೆಂಗಳೂರಿನ ಚಿಕ್ಕಬಿದರಿಕಲ್ಲು ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ

ನಾಲ್ಕು ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಆರೋಪಿ ಸೆರೆ Read More »

ಸಿರಿಯಾದಲ್ಲಿ ಅಮೆರಿಕ ಉಗ್ರ ಬೇಟೆ : ಐಸಿಸ್‌ ವಿರುದ್ಧ ಆಪರೇಷನ್‌ ಹಾಕೈ ಸ್ಟ್ರೈಕ್‌ ಶುರು

ಸೈನಿಕರ ಮೇಲೆ ನಡೆಸಿದ ದಾಳಿಗೆ ಪ್ರತೀಕಾರ ಎಂದ ಅಮೆರಿಕ ವಾಷಿಂಗ್ಟನ್‌: ಇತ್ತೀಚೆಗೆ ನಡೆದ ಐಸಿಸ್‌ ಉುಗ್ರರ ದಾಳಿಯಲ್ಲಿ ಮೂವರು ಅಮೆರಿಕನ್ನರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಮೆರಿಕ ಪ್ರತೀಕಾರಕ್ಕೆ ಮುಂದಾಗಿದೆ. ಸಿರಿಯಾದಲ್ಲಿರುವ ಇಸ್ಲಾಮಿಕ್ ಸ್ಟೇಟ್ ಗುಂಪಿನ (ಐಸಿಸ್‌) ವಿರುದ್ಧ ಅಮೆರಿಕದ ಪಡೆಗಳು ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿವೆ. ಈ ಕುರಿತು ಮಾಹಿತಿ ನೀಡಿರುವ ಪೆಂಟಗನ್ ಮುಖ್ಯಸ್ಥ ಪೀಟ್ ಹೆಗ್ಸೆತ್, ʻಐಸಿಸ್‌ ವಿರುದ್ಧ ಆಪರೇಷನ್‌ ಹಾಕೈ ಸ್ಟ್ರೈಕ್‌ʼ ಶುರುವಾಗಿದೆ ಎಂದು ಘೋಷಿಸಿದ್ದಾರೆ. ಕಳೆದ ಡಿಸೆಂಬರ್ 13ರಂದು ಸಿರಿಯಾದ ಪಾಲ್ಮಿರಾದಲ್ಲಿ ಐಸಿಸ್‌ ನಡೆಸಿದ ದಾಳಿಗೆ

ಸಿರಿಯಾದಲ್ಲಿ ಅಮೆರಿಕ ಉಗ್ರ ಬೇಟೆ : ಐಸಿಸ್‌ ವಿರುದ್ಧ ಆಪರೇಷನ್‌ ಹಾಕೈ ಸ್ಟ್ರೈಕ್‌ ಶುರು Read More »

ಪಾಂಡ್ಯ, ತಿಲಕ್‌ ವರ್ಮ ಪರಾಕ್ರಮ : ಕೊನೆಯ ಟಿ20ಯಲ್ಲಿ ಭಾರತಕ್ಕೆ ಗೆಲುವು

3-1 ಅಂತರದಿಂದ ಸರಣಿ ಗೆದ್ದುಕೊಂಡು ಬೀಗಿದ ಟೀಂ ಇಂಡಿಯಾ ಅಹಮದಾಬಾದ್‌ : ಇಲ್ಲಿನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಟಿ20 ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಹಾರ್ದಿಕ್‌ ಪಾಂಡ್ಯ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 30 ರನ್‌ಗಳಿಂದ ಜಯಗಳಿಸಿದೆ. ಈ ಐದು ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಭಾರತ ಗೆದ್ದುಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಹಾರ್ದಿಕ್ ಹಾಗೂ ತಿಲಕ್

ಪಾಂಡ್ಯ, ತಿಲಕ್‌ ವರ್ಮ ಪರಾಕ್ರಮ : ಕೊನೆಯ ಟಿ20ಯಲ್ಲಿ ಭಾರತಕ್ಕೆ ಗೆಲುವು Read More »

ಎಕ್ಸ್ ಖಾತೆಯಲ್ಲೂ ಪ್ರಧಾನಿ ಮೋದಿ ಅವರದ್ದೇ ದರ್ಬಾರ್

ನವದೆಹಲಿ: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಖ್ಯಾತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ‌ಹೋಗುತ್ತಿದೆ. ಕಳೆದೊಂದು ‌ತಿಂಗಳ ಅಂಕಿ ಅಂಶಗಳ ಆಧಾರದಲ್ಲಿ ಹೇಳುವುದಾದರೆ, ಜಾಗತಿಕ ಮಟ್ಟದಲ್ಲೇ ಎಕ್ಸ್ ಖಾತೆಯಲ್ಲಿ ಅತೀ ಹೆಚ್ಚು ಲೈಕ್ಸ್ ಪಡೆದ ಹತ್ತು ಪೋಸ್ಟ್‌ಗಳ ಪೈಕಿ ಎಂಟು ಪೋಸ್ಟ್‌ಗಳು ಪ್ರಧಾನಿ ಮೋದಿ ಅವರದ್ದೇ ಆಗಿದೆ ಎನ್ನುವುದು ಗಮನಾರ್ಹ. ಇದು ಬೆಂಬಲಿಗರು, ಹಿಂಬಾಲಕರ ಜೊತೆಗೆ ಸಾರ್ವಜನಿಕರಿಗೆ ಪ್ರಧಾನಿ ಮೋದಿ ಬಗ್ಗೆ ಇರುವ ಆಸಕ್ತಿ ಮತ್ತು ಅವರ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎನ್ನಬಹುದು.

ಎಕ್ಸ್ ಖಾತೆಯಲ್ಲೂ ಪ್ರಧಾನಿ ಮೋದಿ ಅವರದ್ದೇ ದರ್ಬಾರ್ Read More »

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರವಿ ಪಾಂಬಾರ್ ಆಯ್ಕೆ

ಪುತ್ತೂರು: ಆರ್. ಪಿ. ಕಲಾ ಸೇವಾ ಟ್ರಸ್ಟ್ ( ರಿ) ಇದರ ಸಂಚಾಲಕ, ಸಂಘಟಕ, ಖ್ಯಾತ ಗಾಯಕ, ಯುವ ಸಾಹಿತಿ, ಕವಿ, ಜಾನಪದ ನೃತ್ಯಗಾರ ಕಲಾ ರತ್ನ ರವಿ ಪಾಂಬಾರು ಅವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆ ಮತ್ತು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ರವಿ ಪಾಂಬಾರ್ ಅವರ ಪ್ರತಿಭೆ ಕಲೆ ಸಂಸ್ಕೃತಿಯನ್ನು ಗುರುತಿಸಿ ಕನ್ನಡ ಫಿಲಂ ಚೇಂಬರ್ (ರಿ) ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ರಾಜ್ಯ ಪ್ರಶಸ್ತಿಗೆ ಆಯ್ಕೆ ಆಗಿರುತ್ತಾರೆ. ಬೆಂಗಳೂರಿನ

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರವಿ ಪಾಂಬಾರ್ ಆಯ್ಕೆ Read More »

ನಂದಿನಿ ನದಿ ಮಲಿನ : ಸರ್ಕಾರಿ ಇಲಾಖೆಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ಗ್ರಾಮಸ್ಥರು!

ಅಧಿಕಾರಿಗಳ ನಿರ್ಲಕ್ಷ್ಯದಿಂದ ಪವಿತ್ರ ನದಿ ಕಲುಷಿತ ಎಂದು ಆರೋಪ ಮಂಗಳೂರು : ಕಟೀಲಿನ ಮೂಲಕ ಹರಿದು ಹೋಗುತ್ತಿರುವ ಪವಿತ್ರ ನಂದಿನಿ‌ ನದಿ‌ ಕಲುಷಿತಗೊಳಿಸುತ್ತಿರುವ ಕುರಿತು ಸರ್ಕಾರಿ ಇಲಾಖೆಗಳು ವಿರುದ್ಧವೆ ಗ್ರಾಮಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಮಂಗಳೂರು ಮಹಾನಗರಪಾಲಿಕೆ, ಸಣ್ಣ ನೀರಾವರಿ ಇಲಾಖೆ, ಕೃಷಿ ಇಲಾಖೆ, ಆರೋಗ್ಯ ಇಲಾಖೆಯನ್ನು ಆರೋಪಿಗಳು ಎಂದು ಹೆಸರಿಸಿ ದೂರು ನೀಡಲಾಗಿದೆ. ಗ್ರಾಮಸ್ಥರು ನೀಡಿದ ದೂರಿನಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚೇಳಾಯರು ಗ್ರಾಮಸ್ಥರಾದ ನಿತಿನ್ ಶೆಟ್ಟಿ ಎಂಬವರು ಪೊಲೀಸರಿಗೆ ದೂರು ನೀಡಿದ್ದು,

ನಂದಿನಿ ನದಿ ಮಲಿನ : ಸರ್ಕಾರಿ ಇಲಾಖೆಗಳ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ ಗ್ರಾಮಸ್ಥರು! Read More »

error: Content is protected !!
Scroll to Top