ಯುವಕ ನೇಣು ಬಿಗಿದು ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಳ ಗ್ರಾಮದ ಕರ್ಗಲ್ಲು ಎಂಬಲ್ಲಿ ಇಂದು ನಡೆದಿದೆ. ವಿಟ್ಲ ಕರ್ಗಲ್ಲು ನಿವಾಸಿ ವೆಂಕಪ್ಪ ಎಂಬವರ ಪುತ್ರ ಮಿಥುನ್ (34) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ,.

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು

ಪುತ್ತೂರು: ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು ಅವರು ನೇಮಕಗೊಂಡಿದ್ದಾರೆ. ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ನಡೆದ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು. ವಿವಿಧ ವಿಭಾಗಗಳ ಹೆಸರನ್ನು ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಬೆಳ್ತಂಗಡಿ ಘೋಷಣೆ ಮಾಡಿದರು.

ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಚನಿಲ ತಿಮ್ಮಪ್ಪ ಶೆಟ್ಟಿ, ಸಹಸಂಚಾಲಕರಾಗಿ ಉಮೇಶ್ ಕೋಡಿಬೈಲು Read More »

ನಿನ್ನೆ ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ / ಮಹಿಳೆ ಪೊಲೀಸರ ವಶಕ್ಕೆ! ವಿಚಾರಣೆ ವೇಳೆ ರಾಜಸ್ಥಾನ್ ಮೂಲ ಎಂಬುದು ಬಹಿರಂಗ

ಸುಳ್ಯ:  ಸುಳ್ಯ ತಾಲೂಕಿನ ಕೂಜಿಮಲೆಯಲ್ಲಿ ಅಪರಿಚಿತ ಮಹಿಳೆ ನಿನ್ನೆ ಪತ್ತೆಯಾಗಿದ್ದು ಈಕೆ ನಕ್ಸಲ್ ಗುಂಪಿಗೆ ಸೇರಿದವರು ಎಂದು ಸುದ್ದಿಯಾಗಿತ್ತು. ಆದರೆ ಈಕೆ ನಕ್ಸಲ್ ಗುಂಪಿಗೆ ಸೇರಿದವರಲ್ಲ ಬದಲಾಗಿ ಈಕೆ ರಾಜಸ್ಥಾನ್ ಮೂಲದವಳಾಗಿದ್ದು ಆಕೆಯನ್ನು ಪೊಲೀಸರು ವಶಪಡಿಸಿಕೊಂಡು ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿ ಇದೀಗ ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಆಶ್ರಮಕ್ಕೆ ಸೇರ್ಪಡೆಗೊಳಿಸಲಾಗುವುದೆಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.              ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಎಂಬ ಸುದ್ದಿ ತಿಳಿದ ಎ.ಎನ್.ಎಫ್

ನಿನ್ನೆ ಕೂಜಿಮಲೆ ಎಸ್ಟೇಟ್ ನಲ್ಲಿ ಕಾಣಿಸಿಕೊಂಡ ಮಹಿಳೆ ನಕ್ಸಲ್ ಅಲ್ಲ / ಮಹಿಳೆ ಪೊಲೀಸರ ವಶಕ್ಕೆ! ವಿಚಾರಣೆ ವೇಳೆ ರಾಜಸ್ಥಾನ್ ಮೂಲ ಎಂಬುದು ಬಹಿರಂಗ Read More »

ಅಸ್ಪೃಶ್ಯರಲ್ಲದ ಮೀನುಗಾರ ಮೊಗೇರರಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ಹುನ್ನಾರ | ನೈಜ ಪರಿಶಿಷ್ಟ ಜಾತಿಯವರಿಂದ ರಾಜ್ಯವ್ಯಾಪಿ ಉಗ್ರ ಹೋರಾಟದ ಎಚ್ಚರಿಕೆ

ಪುತ್ತೂರು: ಅಸ್ಪೃಶ್ಯರಲ್ಲದ ಮೀನುಗಾರ ಮೊಗೇರರು ರಾಜಕೀಯ ಒತ್ತಡದಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ಹುನ್ನಾರ ನಡೆಸುತ್ತಿದ್ದು, ಈ ಕುರಿತು ಜೆ.ಸಿ.ಪ್ರಕಾಶ್ ನೀಡಿದ ವರದಿಯನ್ನು ತಿರಸ್ಕರಿಸಬೇಕು. ರಾಜ್ಯ ಸರಕಾರ ಮೀನುಗಾರ ಮೊಗೇರರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಮುಂದಾದಲ್ಲಿ ನಾವು ರಾಜ್ಯವ್ಯಾಪಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ಅಶೋಕ್ ಕೊಂಚಾಡಿ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಅಸ್ಪೃಶ್ಯರಲ್ಲದ ಮೀನುಗಾರ ಮೊಗೇರರಿಗೆ ಪರಿಶಿಷ್ಟ ಜಾತಿಯ ಪ್ರಮಾಣ ಪತ್ರ ನೀಡುವ ಪ್ರಯತ್ನ

ಅಸ್ಪೃಶ್ಯರಲ್ಲದ ಮೀನುಗಾರ ಮೊಗೇರರಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ಹುನ್ನಾರ | ನೈಜ ಪರಿಶಿಷ್ಟ ಜಾತಿಯವರಿಂದ ರಾಜ್ಯವ್ಯಾಪಿ ಉಗ್ರ ಹೋರಾಟದ ಎಚ್ಚರಿಕೆ Read More »

ಲೋಕಸಭೆ ಚುನಾವಣೆ : 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ |

ಬೆಂಗಳೂರು: ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂಡ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಕೆ ಮಾಡಬಹುದು. ಚುನಾವಣಾಧಿಕಾರಿಯ ಅನುಪಸ್ಥಿತಿಯಲ್ಲಿ ಹೆಚ್ಚುವರಿ ಚುನಾವಣಾಧಿಕಾರಿ ಮೂಲಕ ನಾಮಪತ್ರ ಸಲ್ಲಿಸಬಹುದು. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ.

ಲೋಕಸಭೆ ಚುನಾವಣೆ : 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ | Read More »

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಗೊನೆ ಮುಹೂರ್ತ

ಕಾಣಿಯೂರು: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಎ.3 ಹಾಗೂ 4ರಂದು ನಡೆಯಲಿರುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಅಂಗವಾಗಿ ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಹಾಗೂ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಪ್ರಾರ್ಥನೆ ನಡೆಸಿ ಬಳಿಕ ಗೊನೆ ಮುಹೂರ್ತ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮೊಕ್ತಸರ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ

ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಗೊನೆ ಮುಹೂರ್ತ Read More »

ವಿಧಾನಸಭೆ ಚುನಾವಣೆ | ವಿರೋಧ ಪಕ್ಷದಿಂದ ಅಭ್ಯರ್ಥಿಯಿಲ್ಲದೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

ಇಟಾನಗರ: ವಿಧಾನಸಭೆ ಚುನಾವಣೆ ಇಲ್ಲದೆ ಬಿಜೆಪಿಯ ಐವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದ ವಿದ್ಯಮಾನ ನಡೆದಿರುವುದು ಅರುಣಾಚಲ ಪ್ರದೇಶದಲ್ಲಿ. ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಐವರು ಬಿಜೆಪಿ ಅಭ್ಯರ್ಥಿಗಳು ವಿಧಾನಸಭೆಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಬುಧವಾರ ಕೊನೆಯ ದಿನವಾಗಿತ್ತು. ಆದರೆ ಕೊನೇ ಗಳಿಗೆ ತನಕ ಐದು ಕ್ಷೇತ್ರಗಳಿಗೆ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ. ಹೀಗಾಗಿ 5 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅರುಣಾಚಲ ಪ್ರದೇಶದ ಎರಡು ಲೋಕಸಭಾ ಕ್ಷೇತ್ರಗಳು

ವಿಧಾನಸಭೆ ಚುನಾವಣೆ | ವಿರೋಧ ಪಕ್ಷದಿಂದ ಅಭ್ಯರ್ಥಿಯಿಲ್ಲದೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧ ಆಯ್ಕೆ Read More »

‘ಮೌನ ದೊಳಗಿನ ಮಾತು ‘ ಕವನ ಸಂಕಲನ ಬಿಡುಗಡೆ

ಪುತ್ತೂರು: ಅಮೃತ ಪ್ರಕಾಶನ ಪತ್ರಿಕೆಯಿಂದ ಸರಣಿ ಕೃತಿ ಬಿಡುಗಡೆ 39ನೇ ಕೃತಿ ಸಪ್ನ ದಿನಕರ್ ಅವರ ‘ಮೌನದೊಳಗಿನ ಮಾತು ‘ ಕವನ ಸಂಕಲನವನ್ನು  ಲೇಖಕಿ, ವಿಮರ್ಶಕಿ ವಿದ್ಯಾ ನಾಯಕ್ ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ ವಹಿಸಿದರು. ಮುಖ್ಯ ಅತಿಥಿಗಳಾಗಿ ಯುಗ ಪುರುಷ ಪತ್ರಿಕೆ ಸಂಪಾದಕ ಕುಡೆತ್ತೂರು ಭುವನಾಭಿರಾಮ ಉಡುಪ, ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಲೇಖಕಿ ವೀಣಾ ಟಿ. ಶೆಟ್ಟಿ, ಕವಿಯತ್ರಿ, ಶಿಕ್ಷಕಿ ಸುಧಾ ನಾಗೇಶ್ 

‘ಮೌನ ದೊಳಗಿನ ಮಾತು ‘ ಕವನ ಸಂಕಲನ ಬಿಡುಗಡೆ Read More »

ಲೋಕಸಭೆ ಚುನಾವಣೆ | ಬಿಜೆಪಿಯಿಂದ ಚುನಾವಣಾ ಪ್ರಭಾರಿಗಳ ನೇಮಕ

ಪುತ್ತೂರು: ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಪ್ರಭಾರಿಗಳನ್ನು ನೇಮಿಸಲಾಗಿದೆ.ಆಯ್ಕೆಯಾದ ಬಿಜೆಪಿ ಚುನಾವಣಾ ಪ್ರಭಾರಿಗಳ ವಿವರ ಈ ಕೆಳಗಿನಂತಿದೆ. ಹರಿಕೃಷ್ಣ ಬಂಟ್ವಾಳ (ಬೆಳ್ತಂಗಡಿ), ಚಂದ್ರಶೇಖರ ರಾವ್ ಬಪ್ಪಳಿಗೆ (ಮೂಡುಬಿದಿರೆ), ರೂಪ ಡಿ. ಬಂಗೇರ (ಮಂಗಳೂರು ನಗರ ಉತ್ತರ), ರವಿಶಂಕರ ಮಿಜಾರ್ (ಮಂಗಳೂರು ನಗರ ದಕ್ಷಿಣ), ರಾಧಾಕೃಷ್ಣ ರೈ ಬೂಡಿಯಾರ್ (ಮಂಗಳೂರು), ಜಗದೀಶ ಶೇಣವ (ಬಂಟ್ವಾಳ), ಸುಲೋಚನಾ ಜಿ.ಕೆ.ಭಟ್ (ಪುತ್ತೂರು), ಅಪ್ಪಯ್ಯ ಮಣಿಯಾಣಿ (ಸುಳ್ಯ)

ಲೋಕಸಭೆ ಚುನಾವಣೆ | ಬಿಜೆಪಿಯಿಂದ ಚುನಾವಣಾ ಪ್ರಭಾರಿಗಳ ನೇಮಕ Read More »

ವಿವೇಕಾನಂದ ಕಾಲೇಜಿನ ನವೀಕೃತ ಜಾಲತಾಣ ಲೋಕಾರ್ಪಣೆ

ಪುತ್ತೂರು: ಆಧುನಿಕ ಯುಗದಲ್ಲಿ ಸಂಸ್ಥೆಯ ಬೆಳವಣಿಗೆಗೆ ವೆಬ್ಸೈಟ್ ತುಂಬಾ ಪ್ರಾಮುಖ್ಯತೆಯನ್ನು ವಹಿಸುತ್ತದೆ. ಬಹಳ ವೇಗವಾಗಿ ಬದಲಾಗುವ ತಂತ್ರಜ್ಞಾನವನ್ನು ನಾವು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಮತ್ತು ಸಮಾಜಕ್ಕೆ ಪರೀಕ್ಷೆಯ ವೇಳಾಪಟ್ಟಿಗಳು, ಶೈಕ್ಷಣಿಕ ನೆರವು, ಕೋರ್ಸ್ ವಿವರಣೆಗಳು ಮತ್ತು ಇತರ ಪ್ರಮುಖ ಪ್ರಕಟಣೆಗಳ ವಿವರಗಳನ್ನು ನೀಡಬಹುದು. ಈ ಮೂಲಕ ಕಾಲೇಜಿನ ಎಲ್ಲಾ ಮಾಹಿತಿ ಅಂಗೈ ಅಂಗಳದಲ್ಲೆ ದೊರಕುವುದು ಎಂದು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ  ಡಾ ಶ್ರೀಪತಿ ಕಲ್ಲೂರಾಯ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಐಕ್ಯೂಎಸಿ ಇದರ

ವಿವೇಕಾನಂದ ಕಾಲೇಜಿನ ನವೀಕೃತ ಜಾಲತಾಣ ಲೋಕಾರ್ಪಣೆ Read More »

error: Content is protected !!
Scroll to Top