ರಾಮೇಶ್ವರಂ ಕೆಫೆ ಸ್ಫೋಟ | ಎನ್‌ಐಎ ಅಧಿಕಾರಿಗಳ ತೆಕ್ಕೆಗೆ ಇಬ್ಬರು ಶಂಕಿತ ಆರೋಪಿಗಳು

ಬೆಂಗಳೂರು: ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಂಧಿತರಾದವರು ಸ್ಫೋಟದ ಶಂಕಿತ ಆರೋಪಿಗಳೊಂದಿಗೆ ಸ್ಪೋಟದ ಪ್ರಧಾನ ಆರೋಪಿಗಳಾದ ಮಝಾವೀರ್, ಅಬ್ದುಲ್ ಮತೀನ್ ತಾಹ್ಯಾ ಜತೆ ನಿರಂತದ ಸಂಪರ್ಕದಲ್ಲಿದ್ದು, ಅವರಿಬ್ಬರಿಗೆ ಜೊತೆಯಾಗಿ ಇವರು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಜತೆ ಶಂಕಿತ ಆರೋಪಿಗಳಿಗೆ ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲಗಳನ್ನು ಮಾಡಿಕೊಟ್ಟಿರುವ ಶಂಕೆ ಇದೆ. ರಾಮೇಶ್ವರಂ ಕೆಫೆಯಲ್ಲಿ ಸ್ಪೋಟಕವನ್ನು ಇಟ್ಟಿದ್ದವನ ಜೊತೆ ಮತ್ತೋರ್ವ ಪತ್ತೆಯಾಗಿದ್ದು, ತಮಿಳುನಾಡಿನಲ್ಲಿ […]

ರಾಮೇಶ್ವರಂ ಕೆಫೆ ಸ್ಫೋಟ | ಎನ್‌ಐಎ ಅಧಿಕಾರಿಗಳ ತೆಕ್ಕೆಗೆ ಇಬ್ಬರು ಶಂಕಿತ ಆರೋಪಿಗಳು Read More »

ಹೈ ಮಾಸ್ಕ್ ಲೈಟ್‍ ಉದ್ಘಾಟನೆ

ಪುತ್ತೂರು: ಕ್ಯಾಂಪ್ಕೋ ಸಂಸ್ಥೆಯು ತನ್ನ ಸಾರ್ವಜನಿಕ ಹಿತಾಸಕ್ತಿ ನಿಧಿಯಿಂದ  ದೇಂತಡ್ಕ ವನದುರ್ಗ ದೇವಸ್ಥಾನದ ವಠಾರಕ್ಕೆ ನೀಡಿದ ಹೈ ಮಾಸ್ಟ್ ಲೈಟ್ ನ್ನು ಉದ್ಘಾಟಿಸಲಾಯಿತು. ಕ್ಯಾಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೋಡ್ಗಿಯವರು ತೆಂಗಿನಕಾಯಿ ಒಡೆಯುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಇದನ್ನು ತರಿಸಿದ ಕ್ಯಾಂಪ್ಕೋ ನಿರ್ದೇಶಕರಾದ ರಾಘವೇಂದ್ರ ಭಟ್ ಕೆದಿಲ, ಮಹೇಶ್ ಚೌಟ, ಪಂಚಾಯತ್ ಅಧ್ಯಕ್ಷ ಹರೀಶ್, ವನದುರ್ಗ ದೇವಸ್ಥಾನದ ಆಡಳಿತ ಮಂಡಳಿ ಟ್ರಸ್ಟಿ ಜೆ. ಸುಂದರ ಭಟ್ ಜತ್ತನಕೋಡಿ, ಮಾಜಿ ಪಂಚಾಯತ್ ಸದಸ್ಯ ಕುಶಾಲಪ್ಪ

ಹೈ ಮಾಸ್ಕ್ ಲೈಟ್‍ ಉದ್ಘಾಟನೆ Read More »

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಆರಂಭ | ಪುತ್ತೂರು, ಕಡಬದಲ್ಲಿ ಮೊದಲ ದಿನವೇ 42 ವಿದ್ಯಾರ್ಥಿಗಳು ಗೈರು.

ಪುತ್ತೂರು: 2023-24ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯು ಇಂದಿನಿಂದ ಆರಂಭಗೊಂಡಿದ್ದು, ಮೊದಲ ದಿನವೇ ಪರೀಕ್ಷೆಗೆ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ 42 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪುತ್ತೂರು, ಕಡಬ ತಾಲೂಕಿನಲ್ಲಿ ಉಭಯ ತಾಲೂಕಿನಲ್ಲಿ ಒಟ್ಟು 4732 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಒಟ್ಟು 4690ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮೂಲಕ ಶೇ.99.11ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದಾರೆ. ಸೋಮವಾರ ಪ್ರಥಮ ಭಾಷಾ ಪರೀಕ್ಷೆ ನಡೆದಿದೆ. ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ತೆರೆಯಲಾಗಿರುವ 13 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಆರಂಭ | ಪುತ್ತೂರು, ಕಡಬದಲ್ಲಿ ಮೊದಲ ದಿನವೇ 42 ವಿದ್ಯಾರ್ಥಿಗಳು ಗೈರು. Read More »

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಜನಾರ್ದನ ದೇವರು ಸಹಿತ ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ

ಪುತ್ತೂರು: ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಪುತ್ತೂರು ತಾಲೂಕಿನ ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸೋಮವಾರ ಶ್ರೀ ಜನಾರ್ದನ ದೇವರ ಪುನಃ ಪ್ರತಿಷ್ಠೆ, ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ ನಡೆಯಿತು. ಸೋಮವಾರ ಮುಂಜಾನೆ 5 ರಿಂದ ತಂತ್ರಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮಹಾಗಣಪತಿ ಹೋಮ, ಅಲ್ಪಪ್ರಾಸಾದ ಶುದ್ದಿ, ಪ್ರಾಸಾದ ಪ್ರತಿಷ್ಠೆ, ನಾಂದೀಪುಣ್ಯಾಹ, ನಪುಂಸಕ ಶಿಲಾ ಪ್ರತಿಷ್ಠೆ, ರತ್ನನ್ಯಾಸಾದಿ ಪೀಠ ಪ್ರತಿಷ್ಠೆ, ಶಯ್ಯಾ ಮಂಟಪದಿಂದ ಜೀವಕಲಶ ಬಿಂಬ, ನಿದ್ರಾ ಕಲಶಾಧಿಗಳನ್ನು ಗರ್ಭಗೃಹದ ಒಳಗೆ ಒಯ್ಯುವುದು ನಡೆದ ಬಳಿಕ

ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರೀ ಜನಾರ್ದನ ದೇವರು ಸಹಿತ ಶ್ರೀ ಶಾಸ್ತಾರ ದೇವರ ಪುನಃ ಪ್ರತಿಷ್ಠೆ Read More »

ಮಾ.28 : ಶ್ರೀ ಭಗವತಿ ಸಹಕಾರ ಬ್ಯಾಂಕ್‍ ಲಿ. ನ ಪುತ್ತೂರು ಶಾಖೆ ಶುಭಾರಂಭ

ಪುತ್ತೂರು: ಕಳೆದ 48 ವರ್ಷಗಳಿಂದ ಸಹಕಾರಿ ಬ್ಯಾಂಕಿಂಗ್‍ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿರುವ ““ಶ್ರೀ ಭಗವತಿ ಸಹಕಾರ ಬ್ಯಾಂಕ್‍ಲಿ.”” 8ನೇ ಶಾಖೆ ಪುತ್ತೂರಿನ ಮಾ.28 ರಂದು ಏಳ್ಮುಡಿಯಲ್ಲಿರುವ ಮಹಾದೇವಿ ಸಂಕೀರ್ಣದ ಒಂದನೇ ಮಹಡಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಬ್ಯಾಂಕ್‍ಅಧ್ಯಕ್ಷ ಮಾಧವ ಬಿ.ಎಮ್‍. ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಂಗಳೂರಿನ ಮೋರ್ಗನ್ಸ್ ಗೇಟ್ ನಲ್ಲಿರುವ ಜಪ್ಪುನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಬಳಿಕ ತೊಕ್ಕೊಟ್ಟು, ಕಂಕನಾಡಿ, ಬಿ.ಸಿ.ರೋಡು, ಕೈಕಂಬ, ಮಂಗಳೂರು  ಮಾರ್ಕೆಟ್ ರೋಡ್, ವಿಟ್ಲ ಶಾಖೆಗಳನ್ನು ತೆರೆದಿದ್ದು ಇದೀಗ ಪುತ್ತೂರಿನಲ್ಲಿ 8ನೇ

ಮಾ.28 : ಶ್ರೀ ಭಗವತಿ ಸಹಕಾರ ಬ್ಯಾಂಕ್‍ ಲಿ. ನ ಪುತ್ತೂರು ಶಾಖೆ ಶುಭಾರಂಭ Read More »

ಮೇಲಿನ ಮುಕ್ಕೂರು ತರವಾಡು ಕ್ಷೇತ್ರ : ಜೀರ್ಣೋದ್ಧಾರದ ಪೂರ್ವಭಾವಿ ಸಭೆ | ಎ.18 : ಗಣಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ

ಮುಕ್ಕೂರು : ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಾರಣಿಕ ಶಕ್ತಿಯ ಐತಿಹ್ಯವುಳ್ಳ ದೇವಿ-ದೈವ ಶಕ್ತಿಗಳ ಸಾನಿಧ್ಯದ ನೆಲೆ ಮೇಲಿನ ಮುಕ್ಕೂರು ತರವಾಡು ಕ್ಷೇತ್ರದಲ್ಲಿ ಅಷ್ಟಮಂಗಲ ಚಿಂತನೆಯ ಪ್ರಕಾರ ಊರವರ ಸಹಕಾರದೊಂದಿಗೆ ಸ್ಥಳ ಸಾನಿಧ್ಯಗಳ ಜೀರ್ಣೋದ್ಧಾರ ಕಾರ್ಯಕ್ಕೆ ಸಂಕಲ್ಪ ತೊಡಲಾಗಿದ್ದು ಇದರ ಭಾಗವಾಗಿ ಶ್ರೀ ಕ್ಷೇತ್ರದಲ್ಲಿ ಎ.18 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಮೇಲಿನ ಮುಕ್ಕೂರು ತರವಾಡು ಕ್ಷೇತ್ರದ ಮುಖ್ಯಸ್ಥ ಮೋಹನ ಬೈಪಡಿತ್ತಾಯ, ವಸಂತ ಬೈಪಡಿತ್ತಾಯ, ಲಕ್ಷ್ಮೀಶ ಬೈಪಡಿತ್ತಾಯ ಅವರು  ದೈವ ಸಾನಿಧ್ಯಗಳ ಜೀರ್ಣೋದ್ಧಾರ ಕುರಿತಂತೆ ಮಾ.24

ಮೇಲಿನ ಮುಕ್ಕೂರು ತರವಾಡು ಕ್ಷೇತ್ರ : ಜೀರ್ಣೋದ್ಧಾರದ ಪೂರ್ವಭಾವಿ ಸಭೆ | ಎ.18 : ಗಣಹೋಮ, ಮೃತ್ಯುಂಜಯ ಹೋಮ, ಸತ್ಯನಾರಾಯಣ ಪೂಜೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಯಕ್ಷಕಲಾ ಕೇಂದ್ರ ಹಾಗೂ ಕೆದಂಬಾಡಿ ಎನ್‌ ಎಸ್‌ ಕಿಲ್ಲೆ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಯಕ್ಷ ಸಂವಾದ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಕೆದಂಬಾಡಿ ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಷ್‌ ರೈ ಕಾರ್ಯಕ್ರಮ ಉದ್ಘಾಟಿಸಿ, ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾಕೇಂದ್ರವು ಭಾರತೀಯ ಮಹಾ ಕಾವ್ಯ ಹಾಗೂ  ಕಲಾ ಶ್ರೀಮಂತಿಕೆಯನ್ನು ಯಕ್ಷಪ್ರೇಮಿಗಳಿಗೆ ಯಕ್ಷಸಂವಾದ ಸರಣಿ ಕಾರ್ಯಕ್ರಮಗಳ ಮೂಲಕ ಉಣಬಡಿಸುತ್ತಿದೆ.  ಯಕ್ಷ ಕಲಾ ಕೇಂದ್ರದ ವತಿಯಿಂದ ಇನ್ನಷ್ಟು ಒಳ್ಳೆಯ ಕಾರ್ಯಕ್ರಮಗಳು ಮೂಡಿಬರಲಿ. ಕೇಂದ್ರವು ಆಯೋಜಿಸುವ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಯಕ್ಷ ಸಂವಾದ ಕಾರ್ಯಕ್ರಮ Read More »

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಕ ಜನಾರ್ದನ ರೆಡ್ಡಿ ಮರಳಿ ಬಿಜೆಪಿಗೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿದ್ದ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿಗೆ ಮರಳಿದ್ದಾರೆ. ಈ  ಮೂಲಕ ಲೋಕಸಭೆ ಚುನಾವಣೆ ಮೊದಲು ಬಿಜೆಪಿಗೆ ಬರುವ ಮೂಲಕ ಬಲ ತುಂಬಿದ್ದಾರೆ. ಸೋಮವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜನಾರ್ದನ ರೆಡ್ಡಿ ಮತ್ತು ಮಾಜಿ ಸಚಿವ ಟಿ. ಜಾನ್‌ ಅವರ ಪುತ್ರ ಥಾಮಸ್‌ ಜಾನ್‌ ಅವರು ಪಕ್ಷ ಸೇರಿದರು. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹಿರಿಯ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಕ ಜನಾರ್ದನ ರೆಡ್ಡಿ ಮರಳಿ ಬಿಜೆಪಿಗೆ Read More »

ಇನ್ನು ಮುಂದೆ ಚಂದ್ರಯಾನ-3 ಲ್ಯಾಂಡಿಂಗ್ ಸೈಟ್ ನ ಹೆಸರು “ಶಿವಶಕ್ತಿ’ | ಪ್ರಧಾನಿ ಘೋಷಿಸಿದ 7 ತಿಂಗಳ ಬಳಿಕ ಅನುಮೋದನೆ

ಬೆಂಗಳೂರು: ಇನ್ನುಮುಂದೆ ಚಂದ್ರಯಾನ-3 ಲ್ಯಾಂಡಿಂಗ್ ಸೈಟ್ ನ್ನು ‘ಶಿವ ಶಕ್ತಿ’ ಎಂಬ ಹೆಸರಿನಿಂದ ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಬೆನ್ನಲ್ಲೇ ಇದೀಗ ಏಳು ತಿಂಗಳ ನಂತರ ಅಂತರರಾಷ್ಟ್ರೀಯ ಖಗೋಳ ಒಕ್ಕೂಟ ಮಾರ್ಚ್ 19 ರಂದು ಈ ಹೆಸರನ್ನು ಅನುಮೋದಿಸಿದೆ. ಅಂತರರಾಷ್ಟ್ರೀಯ ಖಗೋಳ ಒಕ್ಕೂಟ ಅನುಮೋದಿಸಿದ ಗ್ರಹಗಳ ಹೆಸರುಗಳ ಬಗ್ಗೆ ವಿವರವಾದ ಮಾಹಿತಿಯನ್ನು ಒದಗಿಸುವ ಗೆಜೆಟಿಯರ್ ಆಫ್ ಪ್ಲಾನೆಟರಿ ನಾಮಕರಣದ ಪ್ರಕಾರ  “ಐಎಯು ವರ್ಕಿಂಗ್ ಗ್ರೂಪ್ ಫಾರ್ ಪ್ಲಾನೆಟರಿ ಸಿಸ್ಟಮ್ ನಾಮಕರಣವು ಚಂದ್ರಯಾನ-3 ರ ವಿಕ್ರಮ್

ಇನ್ನು ಮುಂದೆ ಚಂದ್ರಯಾನ-3 ಲ್ಯಾಂಡಿಂಗ್ ಸೈಟ್ ನ ಹೆಸರು “ಶಿವಶಕ್ತಿ’ | ಪ್ರಧಾನಿ ಘೋಷಿಸಿದ 7 ತಿಂಗಳ ಬಳಿಕ ಅನುಮೋದನೆ Read More »

ನದಿ ನೀರಿನಲ್ಲಿ ಮುಳುಗಿ ಮೃತ್ಯು !

ಉಪ್ಪಿನಂಗಡಿ: ಉಪ್ಪಿನಂಗಡಿ ಹಳೆಗೇಟು ಎಂಬಲ್ಲಿ ವ್ಯಕ್ತಿಯೊಬ್ಬರು ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಸವಣೂರು ಅಂಕತ್ತಡ್ಕ ನಿವಾಸ ಮಂಜುನಾಥ್‍ (35) ಮೃತಪಟ್ಟವರು. ಬಿಳಿಯೂರು ಅಣೆಕಟ್ಟಿನಿಂದಾಗಿ ಹಳೆಗೇಟು ಬಳಿ ನೇತ್ರಾವತಿ ನದಿಯಲ್ಲಿ ನೀರು ತುಂಬಿಕೊಂಡಿದ್ದು, ಆಳ ತಿಳಿಯದೇ ನೀರಿಗೆ ಇಳಿದಿದ್ದು ಮುಳುಗಿದರು. ಬೊಬ್ಬೆ ಹಾಕಿದಾಗ ಅಕ್ಕಪಕ್ಕದಲ್ಲಿದ್ದವರು ಓಡಿ ಬಂದು ಅವರನ್ನು ನೀರಿನಿಂದ ಮೇಲಕ್ಕೆತ್ತಿ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

ನದಿ ನೀರಿನಲ್ಲಿ ಮುಳುಗಿ ಮೃತ್ಯು ! Read More »

error: Content is protected !!
Scroll to Top