ಪ್ರಪಂಚದ ಆಧ್ಯಾತ್ಮಿಕ ಗುರು ಸ್ವಾಮಿ ವಿವೇಕಾನಂದರು – ಕೃಷ್ಣ ಪ್ರಸಾದ್ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ

ಪುತ್ತೂರು: ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೆ ಪ್ರಪಂಚದ ಮೂಲೆ ಮೂಲೆಗೂ ಅವರ ತತ್ವ ಹಾಗೂ ಯುವಪೀಳಿಗೆಗೆ ನೀಡಿದ ಸ್ಪೂರ್ತಿಯ ಕರೆಗಳಿಂದಾಗಿ ಇಡೀ ಪ್ರಪಂಚಕ್ಕೇ ಆಧ್ಯಾತ್ಮಿಕ ಗುರುವಾಗಿ ಮಾರ್ಪಟ್ಟವರು.  ಭಾರತೀಯ ತತ್ವ ಹಾಗೂ ಮಹತ್ವವನ್ನು ಪಾಶ್ಚಿಮಾತ್ಯ ದೇಶಗಳಿಗೆ ಪರಿಚಯಿಸುವಲ್ಲಿ ಮೊದಲಿಗರೆಂದರೆ ತಪ್ಪಾಗುವುದಿಲ್ಲ. ಜೊತೆಗೆ ನುಡಿದಂತೆ ನಡೆದವರು ಸ್ವಾಮಿ ವಿವೇಕಾನಂದರು ಎಂದು ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಲ್ಲಡ್ಕ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ನಡೆದ ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ […]

ಪ್ರಪಂಚದ ಆಧ್ಯಾತ್ಮಿಕ ಗುರು ಸ್ವಾಮಿ ವಿವೇಕಾನಂದರು – ಕೃಷ್ಣ ಪ್ರಸಾದ್ | ವಿವೇಕ ಸ್ಮೃತಿ ಉಪನ್ಯಾಸ ಮಾಲಿಕೆ Read More »

ಸುಟ್ಟು ಕರಕಲಾದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಪತ್ತೆ !

ತುಮಕೂರು: ಸುಟ್ಟುಹೋದ ಕಾರಿನಲ್ಲಿ ಮೂವರ ಮೃತದೇಹ ಪತ್ತೆಯಾದ ಘಟನೆ ತುಮಕೂರಿನಲ್ಲಿ ಕೆರೆಯೊಂದರ ಬಳಿ ಪತ್ತೆಯಾಗಿದೆ. ಬೆಳ್ತಂಡಗಡಿ ತಾಲೂಕಿನ ಟಿ.ಬಿ.ಕ್ರಾಸ್ ಬಳಿಯ ನಿವಾಸಿಗಳಾದ ಆಟೋ ಚಾಲಕ ಸಾಹುಲ್ (45), ಮದ್ದಡ್ಕ ನಿವಾಸಿ ಇಸಾಕ್‍ (56) ಹಾಗೂ ಶಿರ್ಲಾಲ್‍ ನಿವಾಸಿ ಇಮ್ತಿಯಾಝ್ (34) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ. ಈ ಮೂವರು ತುಮಕೂರು ಕಡೆಗೆ ಯಾಕೆ ತೆರಳಿದ್ದಾರೆ ಎಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಸುಟ್ಟು ಕರಕಲಾದ ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಪತ್ತೆ ! Read More »

ಟೆಂಪೋ- ಕಾರು ಅಪಘಾತ | ವಾಹನಗಳು ಜಖಂ

ಪುತ್ತೂರು: ಕಾರು ಹಾಗೂ ಟೆಂಪೋ ಡಿಕ್ಕಿ ಹೊಡೆದುಕೊಂಡ ಘಟನೆ ಕೋಡಿಂಬಾಡಿಯ ಅರ್ಬಿಯಲ್ಲಿ ಇಂದು ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಟೆಂಪೋ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಿಂದ ಎರಡೂ ವಾಹನಗಳು ಜಖಂಗೊಂಡಿದ್ದು, ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಟೆಂಪೋ- ಕಾರು ಅಪಘಾತ | ವಾಹನಗಳು ಜಖಂ Read More »

ಲೋಕಸಭೆ ಚುನಾವಣೆ | ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ

ನವದೆಹಲಿ: ಬಿಜೆಪಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಅದರಲ್ಲೂ, ಬಹುಭಾಷಾ ನಟಿ, ನಟ ಶರತ್‌ಕುಮಾರ್‌ ಅವರ ಪತ್ನಿ ರಾಧಿಕಾ ಶರತ್‌ ಕುಮಾರ್‌ ಅವರಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ. ರಾಧಿಕಾ ಶರತ್‌ ಕುಮಾರ್‌ ಅವರು ತಮಿಳುನಾಡಿನ ವಿರುಧುನಗರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪುದುಚೇರಿಯ ಹಾಗೂ ತಮಿಳುನಾಡಿನ 14 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯು ಬಿಡುಗಡೆ ಮಾಡಿದೆ. ತಮಿಳುನಾಡಿನಲ್ಲಿ ಬಿಜೆಪಿ ಬಿಡುಗಡೆ ಮಾಡುತ್ತಿರುವ ಎರಡನೇ ಪಟ್ಟಿ ಇದಾಗಿದೆ.

ಲೋಕಸಭೆ ಚುನಾವಣೆ | ಬಿಜೆಪಿ ನಾಲ್ಕನೇ ಪಟ್ಟಿ ಬಿಡುಗಡೆ Read More »

ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ನೇಮಕ

ಪುತ್ತೂರು: ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನಾಗಿ ನೇಮಿಸಿ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ಸದಸ್ಯರುಗಳಾಗಿ ಆಸ್ಕರ್ ಆನಂದ್ ಬೊಳುವಾರು, (ಸಾಮಾನ್ಯ ) ಮುಖೇಶ್ ಕೆಮ್ಮಿಂಜೆ( ಪ. ಜಾತಿ) ಅರುಣಾ ಡಿ ರೈ ಪುತ್ತೂರು( ಮಹಿಳಾ) ಸುದೇಶ್ ಆರ್ ಶೆಟ್ಟಿ( ಸಾಮಾನ್ಯ) ಅನ್ವರ್ ಖಾಲಿದ್ ಕಬಕ (ಸಾಮಾನ್ಯ) ಸಿದ್ದಿಕ್ ಸುಲ್ತಾನ್ ಸರ್ವೆ( ಸಾಮಾನ್ಯ)  ಶೇಖರ್ ನಾಯ್ಕ ಕಬಕ( ಪ.ಪಂಗಡ) ಮತ್ತು ವಿಕ್ಟರ್ ಪಾಯಸ್ ನೆಹರೂನಗರ ಸಾಮಾನ್ಯ ಇವರನ್ನು ನೇಮಕಗೊಳಿಸಿ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. 

ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ನೇಮಕ Read More »

ಆಶೀರ್ವಾದ್ ಎಂಟರ್ ಪ್ರೈಸಸ್‍ ಲಕ್ಕೀ ಸ್ಕೀಂನ ಮೊದಲ ಡ್ರಾ | ವಿಜೇತರ ಮನೆಗೆ ತೆರಳಿ ಬಹುಮಾನ ಹಸ್ತಾಂತರ

ಪುತ್ತೂರು: ದರ್ಬೆ ಮೊಯಿದೀನ್ ಕಾಂಪ್ಲೆಕ್ಸ್   ನಲ್ಲಿ ಕಾರ್ಯಾಚರಿಸುತ್ತಿರುವ ಆಶೀರ್ವಾದ ಎಂಟರ್ ಪ್ರೈಸಸ್‍ ನ ಲಕ್ಕಿ ಸ್ಕೀಂನ ಮೊದಲ ಡ್ರಾ ಮಾ.15 ರಂದು ನಡೆದಿದ್ದು, ಮೊದಲ ಲಕ್ಕಿ ವಿನ್ನರ್ ಆಗಿ ಹರೀಶ್ ಚಿಕ್ಕಮಗಳೂರು ಆ್ಯಕ್ಸೆಸ್ 125 ಸ್ಕೂಟಿ ತಮ್ಮದಾಗಿಸಿಕೊಂಡರು. 2ನೇ ಬಹುಮಾನ 1 ಲಕ್ಷ ನಗದು ಬಹುಮಾನವನ್ನು ಶ್ರುತಿ ನೆಲ್ಯಾಡಿ ಪಡೆದುಕೊಂಡರು. ಮಾ.16 ರಂದು ಆಶೀರ್ವಾದ ಲಕ್ಕಿ ಸ್ಕೀಂ ತಂಡ ಬಹುಮಾನವನ್ನು ನಗದು ವಿಜೇತೆ ಶ್ರುತಿ ಅವರ ಮನೆಗೆ ತೆರಳಿ ಹಸ್ತಾಂತರಿಸಿದರು. ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ

ಆಶೀರ್ವಾದ್ ಎಂಟರ್ ಪ್ರೈಸಸ್‍ ಲಕ್ಕೀ ಸ್ಕೀಂನ ಮೊದಲ ಡ್ರಾ | ವಿಜೇತರ ಮನೆಗೆ ತೆರಳಿ ಬಹುಮಾನ ಹಸ್ತಾಂತರ Read More »

ಈ ಬಾರಿಯ ಲೋಕಸಭೆ ಚುನಾವಣೆ ರಾಷ್ಟ್ರಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆ : ಕ್ಯಾ.ಬ್ರಿಜೇಶ್ ಚೌಟ | ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣೆ ರಾಷ್ಟ್ರ ಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆಯಾಗಿದ್ದು, ರಾಷ್ಟ್ರದಲ್ಲಿ ಹಿಂದುತ್ವವನ್ನು ಪ್ರತಿಷ್ಠಾಪನೆ ಮಾಡಲು 2024ರ ಚುನಾವಣೆ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ದ.ಕ.ಜಿಲ್ಲಾ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್‍ ಚೌಟ ಹೇಳಿದರು. ಪುತ್ತೂರಿನ ಜೈನ ಭವನ ದಲ್ಲಿ ಭಾರತೀಯ ಜನತಾ ಪಾರ್ಟಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ರಾಷ್ಟ್ರದ ಚಿಂತನೆ ಇಲ್ಲದೆ ಆಡಳಿತ ಮಾಡಬೇಕೆಂಬ ಕಲ್ಪನೆಯನ್ನು ಕಾಂಗ್ರೆಸ್ ಹೊಂದಿದ್ದು, ವ್ಯಕ್ತಿ ಮುಖ್ಯವಾಗಿರದೆ ಸಮಾಜದ ಕೆಲಸವನ್ನು

ಈ ಬಾರಿಯ ಲೋಕಸಭೆ ಚುನಾವಣೆ ರಾಷ್ಟ್ರಭಕ್ತರ ಹಾಗೂ ದೇಶ ದ್ರೋಹಿಗಳ ನಡುವಿನ ಚುನಾವಣೆ : ಕ್ಯಾ.ಬ್ರಿಜೇಶ್ ಚೌಟ | ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ Read More »

ತಡೆಹಿಡಿಯಲ್ಪಟ್ಟ 5,8 ಹಾಗೂ 9ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ರಾಜ್ಯ ಹೈಕೋರ್ಟ್ ನಿಂದ ಗ್ರೀನ್‍ ಸಿಗ್ನಲ್

ಬೆಂಗಳೂರು: ತಡೆಹಿಡಿಯಲ್ಪಟ್ಟ 5,8, ಹಾಗೂ 9 ನೇ ತರಗತಿಗೆ ನಡೆಸಿದ ಪಬ್ಲಿಕ್ ಪರೀಕ್ಷೆಯನ್ನು ಮತ್ತೆ ನಡೆಸುವಂತೆ ರಾಜ್ಯ ಹೈಕೋರ್ಟ್ ಮುಂದುವರಿಸಲು ಗ್ರೀನ್ ಸಿಗ್ನಲ್ ನೀಡಿದೆ. ಪಬ್ಲಿಕ್‌ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆಯ ಸುತ್ತೋಲೆಯನ್ನು ರದ್ದುಗೊಳಿಸಿದ್ದ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಹೈಕೋರ್ಟ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠ ಎತ್ತಿಹಿಡಿದಿದೆ. ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರನ್ನು ಒಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಎಕ್ಸಾಂಗೆ ಅಸ್ತು ಎಂದಿರುವ ಜತೆಗೇ

ತಡೆಹಿಡಿಯಲ್ಪಟ್ಟ 5,8 ಹಾಗೂ 9ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸುವಂತೆ ರಾಜ್ಯ ಹೈಕೋರ್ಟ್ ನಿಂದ ಗ್ರೀನ್‍ ಸಿಗ್ನಲ್ Read More »

ಅಭಿವೃದ್ಧಿ ಹಾಗೂ ಹಿಂದುತ್ವವೇ ಕ್ಯಾ.ಬ್ರಿಜೇಶ್ ಚೌಟ ಮೂಲಮಂತ್ರ

ಹಿಂದುತ್ವಕ್ಕೆ ಬದ್ದತೆ ಅಭಿವೃದ್ಧಿಗೆ ಆದ್ಯತೆ ಎಂಬ ವಿಚಾರಧಾರೆಯಡಿಯಲ್ಲಿ ದ.ಕ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಈ ಬಾರಿ ಚುನಾವಣಾ ಅಖಾಡಕ್ಕೆ ಸಜ್ಜುಗೊಂಡಿದ್ದಾರೆ. ಪಕ್ಷ, ಸಂಘಟನೆ, ಜಾನಪದ ಕ್ರೀಡೆ, ರಾಷ್ಟ್ರೀಯತೆ, ಸಾಹಿತ್ಯ ಕ್ಷೇತ್ರದ ಸಂಘಟನೆಗಳ ಮೂಲಕ ಇಷ್ಟು ವರ್ಷಗಳ ಕಾಲ ಗುರುತಿಸಿಕೊಂಡಿದ್ದ ಇವರು ದ.ಕ ಲೋಕಸಭಾ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಬಹುದೊಡ್ಡ ಕನಸು, ದೂರದೃಷ್ಟಿತ್ವದ ಕನಸುಗಳನ್ನು ಹೊತ್ತವರು ಕೂಡ. ಸುಶಿಕ್ಷಿತ ಜಿಲ್ಲೆಗೆ ಉತ್ತಮ ಜ್ಞಾನವುಳ್ಳ ಒಳ್ಳೆಯ ಸುಶಿಕ್ಷಿತ ಅಭ್ಯರ್ಥಿಯ ಕೂಗು ಇಂದು ನಿನ್ನೆಯದಲ್ಲ.ಈ ಕಾರಣಕ್ಕಾಗಿ ಭಾಜಾಪ ಈ ಬಾರಿ

ಅಭಿವೃದ್ಧಿ ಹಾಗೂ ಹಿಂದುತ್ವವೇ ಕ್ಯಾ.ಬ್ರಿಜೇಶ್ ಚೌಟ ಮೂಲಮಂತ್ರ Read More »

ಪೆಟ್ರೋಲಿಯಂ ಪೈಪ್ ಲೈನಿಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ

ಬೆಳ್ತಂಗಡಿ; ಪುದುವೆಟ್ಟುವಿನಲ್ಲಿ ಪೆಟ್ರೋಲಿಯಂ ಪೈಫ್ ಲೈನ್ ಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಕಂಪೆನಿಯವರು ನೀಡಿರುವ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೆಟ್ರೋನೆಟ್ ಎಂ ಹೆಚ್ ಬಿ ಲಿಮಿಟೆಡ್ ನ ನೆರಿಯದ ಸ್ಟೇಶನ್ ಇನ್ ಚಾರ್ಜ್ ರಾಜನ್  ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.  ಮಂಗಳೂರು ಹಾಸನ ಬೆಂಗಳೂರು ಪೆಟ್ರೋನೆಟ್ ಪೈಪ್ ಮೂಲಕ ಪೆಟ್ರೋಲಿಯಂ  ವಸ್ತುಗಳು ಸಾಗಾಟವಾಗುತ್ತಿದ್ದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಆಲಡ್ಕ

ಪೆಟ್ರೋಲಿಯಂ ಪೈಪ್ ಲೈನಿಗೆ ಕನ್ನ ಕೊರೆದು ಲಕ್ಷಾಂತರ ಮೌಲ್ಯದ ಪೆಟ್ರೋಲ್ ಕಳ್ಳತನ Read More »

error: Content is protected !!
Scroll to Top