ದ.ಕ. ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಧರ್ಮಪಾಲನಾಥ ಸ್ವಾಮೀಜಿ

ಮಂಗಳೂರು: ಲೋಕಸಭೆ ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದರು. ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಗಳು ಕ್ಯಾ.ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರನ್ನು ಆಶೀರ್ವದಿಸಿದ ಶ್ರೀ ಧರ್ಮಪಾಲನಾಥ ಸ್ವಾಮೀಜಿ Read More »

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ | ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಬಹುಮಾನ ಘೋಷಣೆ

ವಿಟ್ಲ : ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ನಲ್ಲಿ ನಡೆದ ನಗದು ಹಾಗೂ ಕೋಟ್ಯಾಂತರ ರೂ. ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಆರೋಪಿಗಳನ್ನು ಬಂಧಿಸಿದ್ದು, ಈ ಕುರಿತು ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಕಳ್ಳತನದ ಮಾಹಿತಿ ನೀಡಿ, ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್ ರಫೀಕ್ ಯಾನೆ ಗೂಡಿನ ಬಳಿ ರಫೀಕ್ (35), ಮಂಜೇಶ್ವರ ಬಿಂಗಿನಾನಿ ನಿವಾಸಿ ಇಬ್ರಾಹಿಂ ಕಲಂದರ್ (41), ಮಂಜೇಶ್ವರ ಗಾಳಿಯಡ್ಕ ನಿವಾಸಿ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ | ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ತನಿಖಾ ತಂಡಕ್ಕೆ ಬಹುಮಾನ ಘೋಷಣೆ Read More »

ನಾಳೆ ಚುನಾವಣಾ ವೇಳಾ ಪಟ್ಟಿ ಪ್ರಕಟ | ಚುನಾವಣಾ ಆಯುಕ್ತರ ಸುದ್ದಿಗೋಷ್ಠಿಯಲ್ಲಿ ದಿನಾಂಕ ನಿಗದಿ

ನವದೆಹಲಿ : ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಗೆ ಮುಹೂರ್ತ ನಿಗದಿಯಾಗಿದ್ದು, ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯುಕ್ತರು ಸುದ್ದಿಗೋಷ್ಠಿ ಆಯೋಜಿಸಿದ್ದು, ನಾಳೆಯೇ ಲೋಕಸಭಾ ಚುನಾವಣೆಗೆ ದಿನಾಂಕ ಫಿಕ್ಸ್ ಆಗಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ್ ಭವನದಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಲಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾ‌ರ್ ಅವರ ನೇತೃತ್ವದ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ ಮಾಡಲಿದೆ ಎನ್ನಲಾಗಿದೆ. ಇಂದು ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಸುಖಬೀ‌ರ್

ನಾಳೆ ಚುನಾವಣಾ ವೇಳಾ ಪಟ್ಟಿ ಪ್ರಕಟ | ಚುನಾವಣಾ ಆಯುಕ್ತರ ಸುದ್ದಿಗೋಷ್ಠಿಯಲ್ಲಿ ದಿನಾಂಕ ನಿಗದಿ Read More »

ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ

ಪುತ್ತೂರು: ಬೆಂಗಳೂರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಪಿಲಿಕುಳ ಅಭಿವೃದ್ದಿ ಪ್ರಾಧಿಕಾರ, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ, ಮಂಗಳೂರು ಇವರು ನಡೆಸಿದ ಇನ್ನೋವೇಶನ್ ಹಬ್ ವಿಜ್ಞಾನ ಮಾದರಿಗಳ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ದ್ವಿತೀಯ ಪ್ರಶಸ್ತಿ ಲಭಿಸಿದೆ. ಶಾಲೆಯ 9 ನೇ ತರಗತಿ ವಿದ್ಯಾರ್ಥಿಗಳಾದ ಚಿರಂತನ. ಕೆ. ವಿ. ಮತ್ತು ಸ್ಕಂದ ಬಳ್ಳಕ್ಕುರಾಯ ಸ್ಪರ್ಧೆಯನ್ನು ಪ್ರತಿನಿಧಿಸಿದ್ದು, ದ್ವಿತೀಯ ಬಹುಮಾನ ಪಡೆದುಕೊಂಡರು. ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ ಅಭಿನಂದಿಸಿದೆ. 

ವಿಜ್ಞಾನ ಮಾದರಿ ಸ್ಪರ್ಧೆ : ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಪ್ರಶಸ್ತಿ Read More »

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ವೈಭವದ ಚಾಲನೆ | ಹೊರೆಕಾಣಿಕೆ ಸಮರ್ಪಣೆ, ಶ್ರೀ ಮಹಾಮೃತ್ಯುಂಜಯ ಹೋಮ

ಪುತ್ತೂರು: ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ವೈಭವದ ಚಾಲನೆ ನೀಡಲಾಯಿತು. ಗುರುವಾರ ಬೆಳಿಗ್ಗೆ ಶ್ರೀ ದೇವರಿಗೆ ಹೊರೆಕಾಣಿಕೆ ಸಮರ್ಪಣೆಯಾಗಿ ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಜರಗಿತು. ಶುಕ್ರವಾರ ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ಥಿ ಪುಣ್ಯಾಹವಾಚನ, ಶ್ರೀ ಮಹಾಗಣಪತಿ ಹೋಮ ನಡೆದು ಬಳಿಕ ಶ್ರೀ ಮಹಾಮೃತ್ಯುಂಜಯ ಹೋಮ ಆರಂಭಗೊಂಡು 11.30 ಕ್ಕೆ ಹೋಮದ ಪೂರ್ಣಾಹುತಿ ನಡೆಯಿತು. ಮಧ್ಯಾಹ್ನ 12.30 ಕ್ಕೆ ರಕ್ತೇಶ್ವರಿ, ಗುಳಿಗ ದೈವಗಳಿಗೆ ತಂಬಿಲ

ಮುಂಡೂರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವಕ್ಕೆ ವೈಭವದ ಚಾಲನೆ | ಹೊರೆಕಾಣಿಕೆ ಸಮರ್ಪಣೆ, ಶ್ರೀ ಮಹಾಮೃತ್ಯುಂಜಯ ಹೋಮ Read More »

ಪಾಕ್ ಪರ ಘೋಷಣೆ | ಬಂಧಿತ ಮೂವರು ಆರೋಪಿಗಳಿಗೆ ಜಾಮೀನು

ಬೆಂಗಳೂರು: ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ವಿಧಾನ ಸೌಧದಲ್ಲೇ ಪಾಕಿಸ್ತಾನ್‌ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದ ಮೂವರು ಆರೋಪಿಗಳಿಗೆ ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ದೆಹಲಿಯ ಕಿಶನ್‌ ಗಂಜ್‌ನ ಮೊಹಮ್ಮದ್ ಇಲ್ತಾಜ್, ಹಾವೇರಿ ಜಿಲ್ಲೆ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿ, ಬೆಂಗಳೂರಿನ ಜಯಮಹಲ್‌ ನಿವಾಸಿ ಡಿ.ಎಸ್‌ ಮುನಾವರ್ ಅಹ್ಮದ್ ಅವರಿಗೆ ಜಾಮೀನು ಲಭಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಸಯ್ಯದ್ ನಾಸೀರ್ ರಾಜ್ಯಸಭಾ ಚುನಾವಣೆಯಲ್ಲಿ ಜಯಗಳಿಸಿದ ಬೆನ್ನಲ್ಲೇ ನಡೆಸಿದ ವಿಜಯೋತ್ಸವ ಸಂದರ್ಭ

ಪಾಕ್ ಪರ ಘೋಷಣೆ | ಬಂಧಿತ ಮೂವರು ಆರೋಪಿಗಳಿಗೆ ಜಾಮೀನು Read More »

ಮೋದಿ ನೇತೃತ್ವದ ಸದೃಢ ಸರಕಾರ ಆಡಳಿತಕ್ಕೆ ಬರಬೇಕು | ಬಿಜೆಪಿ ಮರು ಸೇರ್ಪಡೆ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ

ಪುತ್ತೂರು: ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರನ್ನು ನಾಲ್ಕು ಲಕ್ಷ ಅಂತರಗಳಿಂದ ಈ ಬಾರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಸಂಕಲ್ಪ ಮಾಡುವ ಮೂಲಕ ಮೋದಿ ನೇತೃತ್ವದ ಸದೃಢ ಸರಕಾರ ಆಡಳಿತಕ್ಕೆ ಬರಬೇಕಾದ ಅವಶ್ಯಕತೆಯಿದೆ  ಎಂದು ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಗುರುವಾರ ರಾತ್ರಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮರು ಸೇರ್ಪಡೆಗೊಂಡ ಬಳಿಕ ಪುತ್ತೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ ಇಂದು ಬೆಳಿಗ್ಗೆ ಮಾಧ್ಯಮದವರೊಂದಿಗೆ ಈ ವಿಷಯ ತಿಳಿಸಿದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಾವಿದ್ದು, ಈ ರಾಷ್ಟ್ರದಲ್ಲಿ

ಮೋದಿ ನೇತೃತ್ವದ ಸದೃಢ ಸರಕಾರ ಆಡಳಿತಕ್ಕೆ ಬರಬೇಕು | ಬಿಜೆಪಿ ಮರು ಸೇರ್ಪಡೆ ಬಳಿಕ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯೆ Read More »

ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ ಮಾಡಿ ಸರಕಾರ ಆದೇಶಿಸಿದೆ. ಅಧ್ಯಕ್ಷರಾಗಿ ನ್ಯಾಯವಾದಿ ಕೆ.ಭಾಸ್ಕರ ಕೋಡಿಂಬಾಳ, ಸದಸ್ಯರಾಗಿ ಉದ್ಯಮಿ ನಿಹಾಲ್ ಪಿ. ಶೆಟ್ಟಿ, , ಲ್ಯಾನ್ಸಿ ಮಸ್ಕರೇನಸ್, ಅನ್ವರ್ ಖಾಸಿಂ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತು ರಾಜ್ಯ ಸರಕಾರದ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಯೋಜನಾ ಸೇವೆ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಆದೇಶಿಸಿದ್ದಾರೆ.

ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ನಾಮನಿರ್ದೇಶನ Read More »

ಪೆಟ್ರೋಲ್‍, ಡೀಸೆಲ್ ದರ ಇಳಿಕೆ | ಇಂದಿನಿಂದ ಹೊಸ ದರ ಜಾರಿ

ನವದೆಹಲಿ: ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವೆ ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಸಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ತಲಾ 2 ರೂಪಾಯಿ ಇಳಿಕೆ ಮಾಡಿದ್ದು, ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ. ಕೇಂದ್ರ ಸರಕಾರ ಇತ್ತೀಚೆಗೆ ಎಲ್‍ ಪಿಜಿ ಗ್ಯಾಸ್ ಹಾಗೂ ಸಿಎನ್‍ ಜಿ ಇಂಧನ ದರವನ್ನು ಕಡಿಮೆಗೊಳಿಸಿತ್ತು. ಇದೀಗ ಪೆಟ್ರೋಲ್, ಡೀಸೆಲ್ ದರ ಇಳಿಕೆ ಮಾಡಿದೆ. ಪೆಟ್ರೋಲ್‍ ಮತ್ತು ಡೀಸೆಲ್‍ ಬೆಲೆ 2 ರೂಪಾಯಿ ಇಳಿಸುವ ಮೂಲಕ ಪ್ರಧಾನಿ ನರೇಂದ್ರ

ಪೆಟ್ರೋಲ್‍, ಡೀಸೆಲ್ ದರ ಇಳಿಕೆ | ಇಂದಿನಿಂದ ಹೊಸ ದರ ಜಾರಿ Read More »

ಬಿಜೆಪಿಗೆ ಮರು ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ | ಕೊನೆಗೂ ಮಾತುಕತೆ ಫಲಪ್ರದ

ಪುತ್ತೂರು: ಕೊನೆಗೂ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪುತ್ತೂರು ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ.ಜಗನ್ನಿವಾಸ ರಾವ್, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಬಿಜೆಪಿಗೆ ಮರು ಸೇರ್ಪಡೆಗೊಂಡ ಅರುಣ್ ಕುಮಾರ್ ಪುತ್ತಿಲ | ಕೊನೆಗೂ ಮಾತುಕತೆ ಫಲಪ್ರದ Read More »

error: Content is protected !!
Scroll to Top