ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿ ನಿವೃತ್ತ ಸೇನಾಧಿಕಾರಿ, ಯುವ ನಾಯಕ ಬ್ರಿಜೇಶ್ ಚೌಟ | ರಾಜ್ಯದಿಂದ ಇದೇ ಮೊದಲ ಬಾರಿಗೆ ಸೇನೆಯಲ್ಲಿ ದುಡಿದ ವ್ಯಕ್ತಿಗೆ ಸಂಸತ್ ಸ್ಪರ್ಧೆಗೆ ಟಿಕೇಟ್
ಮಂಗಳೂರು: ನಿವೃತ್ತ ಸೇನಾಧಿಕಾರಿ, ಮಂಗಳೂರಿನ ಯುವ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂ ನಿವೃತ್ತಿ ಪಡೆದು ಸಮಾಜ ಸೇವೆಗೆ ಇಳಿದ ಯುವ ನಾಯಕನನ್ನು ಬಿಜೆಪಿ ಸಂಸತ್ತಿಗೆ ಆಯ್ದುಕೊಂಡಿದೆ. ರಾಜ್ಯದಿಂದ ಇತ್ತೀಚಿನ ದಿನಗಳಲ್ಲಿ ಇದೇ ಮೊದಲ ಬಾರಿಗೆ ಭಾರತೀಯ ಸೇನೆಯಲ್ಲಿ ದೇಶಕ್ಕಾಗಿ ದುಡಿದು ಬಂದ ವ್ಯಕ್ತಿಯೊಬ್ಬರಿಗೆ ಸಂಸತ್ ಸ್ಪರ್ಧೆಯ ಟಿಕೆಟ್ ಕೊಡಲಾಗಿದೆ. ಮಂಗಳೂರಿನ ರಥಬೀದಿಯಲ್ಲಿ […]










