ಕೆರೆಗೆ ಬಿದ್ದು ಮೃತ್ಯು !

ಪುತ್ತೂರು: ಈಜಲು ಕೆರೆಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೆದಂಬಾಡಿ ಗ್ರಾಮದ ತಿಂಗಳಾಡಿಯ ಪಟ್ಟೆಯಲ್ಲಿ ಮಾ.11ರಂದು ಸಂಜೆ ನಡೆದಿದೆ. ಕಡಬ ಕರ್ಮಾಯಿ ನಿವಾಸಿ ಕಿರಣ್ ರೈ (40) ಎಂಬವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ಸಂಜೀವ ರೈ ಎಂ.ರವರ ಪುತ್ರಿ ಮಮತಾರವರನ್ನು ವಿವಾಹವಾಗಿದ್ದು ಪ್ರಸ್ತುತ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಮಾ.11ರಂದು ಸಂಜೆ ತೋಟದ ಕೆರೆಗೆ ನೀರು ತರಲೆಂದು ಹೆಂಡತಿಯೊಂದಿಗೆ ತೆರಳಿದ್ದು, ಆ ಬಳಿಕ ನಾನು ಕೆರೆಯಲ್ಲಿ ಈಜಾಡುತ್ತೇನೆ ಎಂದು ಹೇಳಿ ಕೆರೆಗೆ ಇಳಿದವರು ನೀರಲ್ಲಿ ಮುಳುಗಿ […]

ಕೆರೆಗೆ ಬಿದ್ದು ಮೃತ್ಯು ! Read More »

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆಯಾಗಿದ್ದಾರೆ. ಕಿರಣ್ ಬುಡ್ಲೆಗುತ್ತು ಅವರು ದ.ಕ. ಜಿಲ್ಲಾ ಕಾಂಗ್ರೆಸ್‍ನಿಂದ ಸಂಸದ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದು, ಒಕ್ಕಲಿಗ ಸಮುದಾಯದ ಯುವ ನಾಯಕರೂ ಆಗಿದ್ದಾರೆ. ಡಿಕೆಶಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿರುವ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿಯಲ್ಲಿದ್ದುಕೊಂಡು ಹಲವಾರು ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಒಕ್ಕಲಿಗ ಸಮುದಾಯದ ಜತೆಗೆ ಜಿಲ್ಲೆಯ ಗಮನ ಸೆಳೆದಿದ್ದರು. ದಕ್ಷಿಣ ಕನ್ನಡದ ಬಹು ಸಂಖ್ಯಾತ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು Read More »

ಹಾಸ್ಟೇಲ್ ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು !

ಬೆಂಗಳೂರು: ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿಯೋರ್ವರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೇರಳದ ಎಲ್ಲಂಪ್ಲಾಕಲ್ ನ ಅನಿಲ (19) ಮೃತಪಟ್ಟ ವಿದ್ಯಾರ್ಥಿನಿ. ಬಿಜು ಹಾಗೂ ಉಡುಂಬಂಜೋಳ ಪಂಚಾಯತ್‍ ಉಪಾಧ್ಯಕ್ಷೆ ಬೀನಾ ಅವರ ಪುತ್ರಿಯಾಗಿರುವ ಅನಿಲ ಹಾಸ್ಟೇಲ್ ಕಟ್ಟಡದಿಂದ ಬಿದ್ದು ಶವವಾಗಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನಲ್ಲಿ ಫಿಸಿಯೋಥೆರಪಿ ವಿದ್ಯಾರ್ಥಿನಿಯಾಗಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಯಿತು.

ಹಾಸ್ಟೇಲ್ ಕಟ್ಟಡದಿಂದ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು ! Read More »

ಮಾ.14: ನಮೋ ಭಾರತದಿಂದ ಶ್ರೇಷ್ಠ ಭಾರತದ ಕುರಿತು ಕಾರ್ಯಕ್ರಮ

ಪುತ್ತೂರು: ಭಾರತದ ಇತಿಹಾಸದ ಇತ್ತೀಚಿನ 10 ವರ್ಷಗಳಲ್ಲಿ ಶ್ರೇಷ್ಠ ಭಾರತ ಪೂರಕವಾಗಿ ದೇಶಾದ್ಯಂತ ಯುವ ಸಮುದಾಯದಿಂದ ಪಸರಿಸುವ ನಿಟ್ಟಿನಲ್ಲಿ ಪುತ್ತೂರು ನಮೋ ಭಾರತ ವತಿಯಿಂದ ಕಾರ್ಯಕ್ರಮವೊಂದನ್ನು ಮಾ.14 ರಂದು ಸಂಜೆ 5 ಗಂಟೆಗೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಹಿಂದಿನ ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಮೋ ಭಾರತದ ಕಾರ್ಯಕರ್ತ ರಾಜೇಶ್ ಬನ್ನೂರು ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ದೇಶಾದ್ಯಂತ, ರಾಜ್ಯಾದ್ಯಂತ 50 ಕಾರ್ಯಕ್ರಮಗಳನ್ನು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ನಡೆಸಲಾಗಿದೆ. ಪುತ್ತೂರಿನಲ್ಲಿ

ಮಾ.14: ನಮೋ ಭಾರತದಿಂದ ಶ್ರೇಷ್ಠ ಭಾರತದ ಕುರಿತು ಕಾರ್ಯಕ್ರಮ Read More »

ಕಡಬ ಕಾಲೇಜಿನಲ್ಲಿ ಆ್ಯಸಿಡ್ ದಾಳಿ | ಇನ್ನಿಬ್ಬರು ಪೊಲೀಸ್ ವಶಕ್ಕೆ

ಕಡಬ: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಇನ್ನಿಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ತಂಡ ತಮಿಳುನಾಡು, ಎರ್ನಾಕುಲಂ ಮತ್ತಿತರ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಿದ್ದು, ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಆರೋಪಿ ಕೇರಳ ಮೂಲದ ಅಬಿನ್ ಎಂಬಾತನನ್ನು ಬಂಧಿಸಲಾಗಿದ್ದು, ಆತನಿಗೆ ಸಮವಸ್ತ್ರ ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆ್ಯಸಿಡ್ ನೀಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  

ಕಡಬ ಕಾಲೇಜಿನಲ್ಲಿ ಆ್ಯಸಿಡ್ ದಾಳಿ | ಇನ್ನಿಬ್ಬರು ಪೊಲೀಸ್ ವಶಕ್ಕೆ Read More »

ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ

ಪುತ್ತೂರು: ಬೆಂಕಿ ಇಲ್ಲದೆ ಬದುಕಿಲ್ಲ. ಆದರೆ ಬಳಕೆಯಲ್ಲಿ ವ್ಯತ್ಯಯ ಉಂಟಾದರೆ ಅದರಿಂದಾಗುವ ಅನಾಹುತ ಅಪಾರ ಎಂದು ಪುತ್ತೂರು ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ರುಕ್ಮಯ ಗೌಡ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಲಾದ ಅಗ್ನಿ ಸುರಕ್ಷತೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಹುಲ್ಲು ಕಟ್ಟಿಗೆಗಳಿಂದ, ಎಣ್ಣೆಯಿಂದ, ಅನಿಲದಿಂದ, ವಿದ್ಯುತ್ತಿನಿಂದ ಹಾಗೂ ಇನ್ನಿತರ ವಿಧಗಳಿಂದ ಬೆಂಕಿ ಸಂಭವಿಸಬಹುದು. ಎಲ್ಲಾ ಬಗೆಯ ಬೆಂಕಿ ಅನಾಹುತಗಳಿಗೆ ನೀರು ಹಾಯಿಸುವುದೇ ಪರಿಹಾರವಲ್ಲ ಬದಲಿಗೆ ವಿವಿಧ ರೀತಿಯ

ಅಗ್ನಿ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ Read More »

ನೇಣು ಬಿಗಿದು ಆತ್ಮಹತ್ಯೆ !

ಕಡಬ: ತಾಲೂಕಿನ ಏಣಿತ್ತಡ್ಕದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಏಣಿತ್ತಡ್ಕ ದಿ.ಈಶ್ವರ ನಾಯ್ಕರ ಪುತ್ರ ಉಮೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ಮಧ್ಯಾಹ್ನ ಊಟ ಮಾಡಿ ಮನೆಯಿಂದ ಹೊರ ಹೋದವರು ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಜೆ ಅವರ ತಾಯಿ ತೋಟಕ್ಕೆ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಉಮೇಶ್ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ತಾಯಿ, ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಈ ಕುರಿತು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದು ಆತ್ಮಹತ್ಯೆ ! Read More »

ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ ನಿಧನ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್‍ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ (93) ಇಂದು ಬೆಳಿಗ್ಗೆ ವಯೋ ಸಹಜವಾಗಿ ನಿಧನರಾದರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ಅವರು ಪ್ರಗತಿಪರ ಕೃಷಿಕರೂ ಆಗಿದ್ದರು. ವಿಶ್ವ ಹಿಂದೂ ಪರಿಷತ್‍ ನ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಮೃತರು ಅಂಬಿಕಾ ವಿದ್ಯಾಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಶಿವಾನಂದ ರಾವ್ ನಿಧನ Read More »

ವಿಶ್ವ ಮಹಿಳಾ ದಿನಾಚರಣೆ | ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಮಹಿಳಾ ಘಟಕದಿಂದ ವಿಶೇಷವಾಗಿ ಆಚರಣೆ

ಮಂಗಳೂರು: ಮಂಗಳೂರು ಒಕ್ಕಲಿಗರ ಯಾನೆ  ಗೌಡರ ಸೇವಾ ಸಂಘದ ಮಹಿಳಾ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಂಗಳೂರಿನ ಕೊಡಿಯಾಲ್ ಬೈಲ್ ವಾತ್ಸಲ್ಯಧಾಮ ವೃದ್ಧಾಶ್ರಮಕ್ಕೆ ಭೇಟಿ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ವೃದ್ಧಾಶ್ರಮದಲ್ಲಿರುವ ನಿರಾಶ್ರಿತರಿಗೆ ಅಗತ್ಯ ವಸ್ತುಗಳಾದ ಸೋಪು, ಹಣ್ಣು ಹಂಪಲು, ಬಾತ್ ಟವಲ್ ವಿತರಿಸಿ ಆ ದಿನದ ಭೋಜನ ವ್ಯವಸ್ಥೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಕೆಎಂ, ಕಾರ್ಯದರ್ಶಿ ಸಾರಿಕಾ ಸುರೇಶ್, ಉಪಾಧ್ಯಕ್ಷೆ ಸುನಂದ ಜಿ.

ವಿಶ್ವ ಮಹಿಳಾ ದಿನಾಚರಣೆ | ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಮಹಿಳಾ ಘಟಕದಿಂದ ವಿಶೇಷವಾಗಿ ಆಚರಣೆ Read More »

ಇಂದು ದೇಶಾದ್ಯಂತ ಸಿಎಎ ಜಾರಿ ಮಾಡಲು ಕೇಂದ್ರ ಸರಕಾರದಿಂದ ಅಧಿಸೂಚನೆ ಪ್ರಕಟ

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿ ಮಾಡಲು ಇಂದು ರಾತ್ರಿ ಕೇಂದ್ರ ಸರಕಾರದ ಅಧಿಸೂಚನೆ ಪ್ರಕಟವಾಗುವ ಸಾಧ್ಯತೆಯಿದ್ದು, ಖಾಸಗಿ ಸುದ್ದಿ ಸಂಸ್ಥೆಗಳು ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಮೂಲಗಳನ್ನು ಆಧರಿಸಿ ವರದಿ ಮಾಡಿದೆ. ಈ ಕುರಿತು ಕೇಂದ್ರ ಸರಕಾರದ ಅಧಿಸೂಚನೆ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂಬ ಮಾಹಿತಿಗಳೂ ಲಭ್ಯವಾಗಿದೆ. ಸಿಎಎ ಜಾರಿ ಬಗ್ಗೆ ಪ್ರಧಾನಿ ಮೋದಿ ಅವರೇ ಅಧಿಕೃತ ಘೋಷಣೆ ಹೊರಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಲೋಕಸಭಾ ಚುನಾವಣೆ ಮುನ್ನವೇ

ಇಂದು ದೇಶಾದ್ಯಂತ ಸಿಎಎ ಜಾರಿ ಮಾಡಲು ಕೇಂದ್ರ ಸರಕಾರದಿಂದ ಅಧಿಸೂಚನೆ ಪ್ರಕಟ Read More »

error: Content is protected !!
Scroll to Top