ನಾಳೆ (ಮಾ.10): ಕೊಳ್ತಿಗೆ ಸೌಜನ್ಯ ನ್ಯಾಯಪರ ಹೋರಾಟ ಸಮಿತಿಯಿಂದ ಬೃಹತ್ ಜನಾಂದೋಲನಾ ಸಭೆ

ಪುತ್ತೂರು: ಕೊಳ್ತಿಗೆ ಸೌಜನ್ಯ ನ್ಯಾಯಪರ ಹೋರಾಟ ಸಮಿತಿ ವತಿಯಿಂದ ಬೃಹತ್ ಜನಾಂದೋಲನಾ ಸಭೆ ಮಾ.10 ಭಾನುವಾರ ಕೊಳ್ತಿಗೆ ಗ್ರಾಮದ ಮೊಗಪ್ಪೆಯಲ್ಲಿ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಭರತ್ ಕೆಮ್ಮಾರ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸೌಜನ್ಯ ಹತ್ಯೆ ನಡೆದು 12 ವರ್ಷಗಳು ಕಳೆದರೂ ಹಲವಾರು ಹೋರಾಟಗಳು ತಾಲೂಕು, ಜಿಲ್ಲೆ, ರಾಜ್ಯಮಟ್ಟಗಳಲ್ಲಿ ನಡೆದಿದೆ. ಆದರೆ ಯಾವುದೇ ಒಬ್ಬ ರಾಜಕೀಯ ನಾಯಕರು ಈ ಕುರಿತು ಈ ವರೆಗೂ ಸ್ಪಂದನೆ ನೀಡುತ್ತಿಲ್ಲ. ಈ ನಿಟ್ಟಿನಲ್ಲಿ ಸಮಿತಿ ರಚಿಸಿ ಬೃಹತ್ ಜನಾಂದೋಲನಾ […]

ನಾಳೆ (ಮಾ.10): ಕೊಳ್ತಿಗೆ ಸೌಜನ್ಯ ನ್ಯಾಯಪರ ಹೋರಾಟ ಸಮಿತಿಯಿಂದ ಬೃಹತ್ ಜನಾಂದೋಲನಾ ಸಭೆ Read More »

ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ನಾಲ್ವರು ವಿದ್ಯಾರ್ಥಿನಿಯರು ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳೆಯರ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ತೃತೀಯ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಸಿ.ಎಸ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮಂಜುಶ್ರೀ.ಎ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ ಹಾಗೂ ಡಾಟಾ ಸೈನ್ಸ್ ವಿಭಾಗದ ಅಶ್ವಿನಿ ಮಹಾರಾಷ್ಟ್ರದ ನಾಂದೇಡ್ ವಿಷ್ಣುಪುರಿಯ ರಮಾನಂದ ತೀರ್ಥ ಮರಾಠವಾಡ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಈ ಮೊದಲು

ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆ Read More »

ಖಾಸಗಿ ಬಸ್-ಕಂಟೈನರ್ ಲಾರಿ ಡಿಕ್ಕಿ : ಲಾರಿ ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ: ಖಾಸಗಿ ಬಸ್ ಹಾಗೂ ಕಂಟೈನರ್ ಲಾರಿ ಡಿಕ್ಕಿ ಹೊಡೆದುಕೊಂಡ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಿಂದ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಬಿ.ಸಿ.ರೋಡಿನಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಂಟೈನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದುಕೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಬಸ್-ಕಂಟೈನರ್ ಲಾರಿ ಡಿಕ್ಕಿ : ಲಾರಿ ಚಾಲಕನಿಗೆ ಗಂಭೀರ ಗಾಯ Read More »

ವಿಜೃಂಭಣೆಯಿಂದ ನಡೆದ ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ

ಪುತ್ತೂರು: ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ ಹಾಗೂ ನೇಮೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಶ್ರೀ ಸತ್ಯನಾರಾಯಣ ಪೂಜೆ, ನಾಗದೇವರಿಗೆ ತಂಬಿಲ ಸೇವೆ ಜರಗಿ ಮಧ್ಯಾಹ್ನ ಸಾವಿರಾರು ಭಕ್ತಾದಿಗಳಿಗೆ ಅನ್ನಸಂತರ್ಪಣೆ ಜರಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಅಶೋಕ್‍ ಕುಮಾರ್ ರೈ ಮಾತನಾಡಿ, ಆಧುನಿಕ ಯುಗದಲ್ಲಿ ನಮ್ಮ ಸಂಸ್ಕೃತಿಯನ್ನು ನಾವು ಮರೆಯುತ್ತಿದ್ದೇವೆ. ಇದು ಮುಂದಿನ ದಿನಗಳಲ್ಲಿ ಗಂಡಾಂತರಕ್ಕೆ ಕಾರಣವಾಗಲಿದೆ. ಈ ನಿಟ್ಟಿನಲ್ಲಿ ಯುವ ಜನಾಂಗ ಧಾರ್ಮಿಕ ಪ್ರಜ್ಞೆಯೊಂದಿಗೆ ನಡೆದಲ್ಲಿ ಗಂಡಾಂತರಗಳಿಂದ ಪಾರಾಗಬಹುದು

ವಿಜೃಂಭಣೆಯಿಂದ ನಡೆದ ಬೆದ್ರಾಳ ನಂದಿಕೇಶ್ವರ ಭಜನಾ ಮಂದಿರದ ವಾರ್ಷಿಕೋತ್ಸವ Read More »

ಕೆಎಸ್ ಆರ್‍ ಟಿಸಿ ಬಸ್ ಬ್ರೇಕ್‍ ಫೇಲ್ | ಸಮಯಪ್ರಜ್ಞೆ ಮೆರೆದ ಚಾಲಕ | ಪ್ರಯಾಣಿಕರು ಅಪಾಯದಿಂದ ಪಾರು

ಚಾರ್ಮಾಡಿ: ಬ್ರೇಕ್‍ ಫೇಲ್ ಆದ ಕೆಎಸ್‍ ಆರ್ ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ 40 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್‍ ನಲ್ಲಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಕಡಿದಾದ ರಸ್ತೆಯ ತಿರುವಿನಲ್ಲಿ ಬ್ರೇಕ್‍ ಫೇಲ್‍ ಆಗಿದೆ. ಇದು ಗಮನಕ್ಕೆ ಬರುತ್ತಿದ್ದಂತೆ ಚಾಲಕ ಸಂತೋಷ್ ತಡೆಗೋಡೆಗೆ ಗುದ್ದುವುದೇ ಸೂಕ್ತ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಈ ಸಂದರ್ಭ ಚಾಲಕ ಪ್ರಯಾಣಿಕರಿಗೆ ಧೈರ್ಯ ತುಂಬಿದ್ದಾರೆ. ಚಾರ್ಮಾಡಿ ಘಾಟ್‍ ನ 6ನೇ ತಿರುವಿನಲ್ಲಿದ್ದ ಕಿರು ಸೇತುವೆಗೆ ಡಿಕ್ಕಿ ಹೊಡೆಸಿ

ಕೆಎಸ್ ಆರ್‍ ಟಿಸಿ ಬಸ್ ಬ್ರೇಕ್‍ ಫೇಲ್ | ಸಮಯಪ್ರಜ್ಞೆ ಮೆರೆದ ಚಾಲಕ | ಪ್ರಯಾಣಿಕರು ಅಪಾಯದಿಂದ ಪಾರು Read More »

ಬೈಕ್ ಡಿಕ್ಕಿ : ಪಾದಾಚಾರಿ ಮಹಿಳೆ ಮೃತ್ಯು

ಪುತ್ತೂರು: ಬೈಕ್‍ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಬರೆಪ್ಪಾಡಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ (45) ಮೃತಪಟ್ಟವರು. ಹಾಲಿನ ಡೈರಿಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಬೈಕ್‍ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಬೈಕ್ ಡಿಕ್ಕಿ : ಪಾದಾಚಾರಿ ಮಹಿಳೆ ಮೃತ್ಯು Read More »

ಹಿಂದೂ ಮಹಿಳೆ ಹಾಗೂ ಮಕ್ಕಳ ಮೇಲೆ ಹಲ್ಲೆ | ಆರೋಪಿ ಸಿದ್ದೀಕ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಜೀವ ಮಠಂದೂರು ಸೂಚನೆ

ಪುತ್ತೂರು: ಅಕ್ರಮವಾಗಿ ಮನೆಗೆ ಪ್ರವೇಶಿಸಿ ಹಿಂದೂ ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಸಿದ್ದೀಕ್ ಎಂಬ ಅನ್ಯ ಕೋಮಿನ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಮಾಜಿ ಶಾಸಕ ಸಂಜೀವ ಮಠಂದೂರು ಪೋಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಆಸ್ಪತ್ರೆಗೆ ಭೇಟೀ ನೀಡಿ ಮಹಿಳೆಯ ಆರೋಗ್ಯ ವಿಚಾರಿಸಿದ ಅವರು ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ವಿನಾಕಾರಣ ಶಾಂತಿ ಕದಡುವ ವ್ಯಕ್ತಿಗಳ ಮೇಲೆ ನಿಷ್ಪಕ್ಷಪಾತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಹಿಂದೂ ಮಹಿಳೆ ಹಾಗೂ ಮಕ್ಕಳ ಮೇಲೆ ಹಲ್ಲೆ | ಆರೋಪಿ ಸಿದ್ದೀಕ್ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಜೀವ ಮಠಂದೂರು ಸೂಚನೆ Read More »

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್‍ ಬುಡ್ಲೆಗುತ್ತು ಆಯ್ಕೆ

ಮಂಗಳೂರು: 2024 ರ ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಆಕಾಂಕ್ಷಿ ಕಿರಣ್ ಬುಡ್ಲೆಗುತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕಿರಣ್ ಬುಡ್ಲೆಗುತ್ತು ಅವರು ದ.ಕ. ಜಿಲ್ಲಾ ಕಾಂಗ್ರೆಸ್‍ ನಿಂದ ಸಂಸದ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದು, ಒಕ್ಕಲಿಗ ಸಮುದಾಯದ ಯುವ ನಾಯಕರೂ ಆಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್‍ ಬುಡ್ಲೆಗುತ್ತು ಆಯ್ಕೆ Read More »

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದಿಂದ ಜನ ಸಂಪರ್ಕ ಅಭಿಯಾನ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ | ನಡೆಯಿತು ಮಹಿಳಾ ಪೌರ ಕಾರ್ಮಿಕರಿಗೆ ಸನ್ಮಾನ

ಪುತ್ತೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಮಹಿಳೆಯರಲ್ಲಿ ಉಳಿತಾಯ ಮನೋಭಾವನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ, ಪುತ್ತೂರಿನ ಮುಳಿಯ ಜ್ಯುವೆಲರ್ಸ್ ಸಹಯೋಗದೊಂದಿಗೆ ಜನ ಸಂಪರ್ಕ ಅಭಿಯಾನವನ್ನು ಮುಳಿಯ ಟ್ರೈನಿಂಗ್ ಹಾಲ್ ನಲ್ಲಿ ಏರ್ಪಡಿಸಲಾಯಿತು. ಮುಳಿಯ ಜ್ಯುವೆಲ್ಲರ್ಸ್ ನ ನೂರಕ್ಕೂ ಹೆಚ್ಚು ಮಂದಿ ಸಿಬ್ಬಂದಿಗಳು ಅಂಚೆ ಇಲಾಖೆಯ ವಿವಿಧ ಸೇವೆಗಳ ಖಾತೆಗಳನ್ನು ತೆರೆಯುವ ಮೂಲಕ ಈ ಕಾರ್ಯಕ್ರಮದ ಸದುಪಯೋಗ ಪಡೆದರು. ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪುತ್ತೂರು ಪ್ರಧಾನ ಅಂಚೆ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದಿಂದ ಜನ ಸಂಪರ್ಕ ಅಭಿಯಾನ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ | ನಡೆಯಿತು ಮಹಿಳಾ ಪೌರ ಕಾರ್ಮಿಕರಿಗೆ ಸನ್ಮಾನ Read More »

‘ಮೋದಿ ಪರಿವಾರ’ ಸ್ಟಿಕ್ಕರ್ ಅಳವಡಿಕೆಗೆ ಸಂಸದರಿಂದ ಚಾಲನೆ

ಬೆಳ್ಳಾರೆ : ಮೋದಿ ಪರಿವಾರ’ ಸ್ಟಿಕ‌ರ್ ಅಳವಡಿಕೆ ಕಾರ್ಯಕ್ರಮಕ್ಕೆ ಶುಕ್ರವಾರ ಬೆಳ್ಳಾರೆಯಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾ‌ರ್ ಕಟೀಲ್‌ ಬೆಳ್ಳಾರೆಯ ಪಂಚಾಯತ್ ಸದಸ್ಯ ದಿನೇಶ್ ಅವರ ನಿವಾಸದಲ್ಲಿ ಚಾಲನೆ ನೀಡಿದರು. ದೇಶದ ಜನತೆ ನರೇಂದ್ರ ಮೋದಿ ಅವರ ಜೊತೆಗಿದ್ದಾರೆ. ದೇಶವೇ ಒಂದು ಮೋದಿ ಪರಿವಾರ ಎಂಬುವುದನ್ನು ಸಾರಲು ವಾಹನಗಳಿಗೆ ‘ಮೋದಿ ಪರಿವಾರ’ ಸ್ಟಿಕ‌ರ್ ಅಳವಡಿಕೆ ಕಾರ್ಯಕ್ರಮಕ್ಕೆ ಸಂಸದರು ಚಾಲನೆ ನೀಡಿದರು. ಈ ಸಂದರ್ಭ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಹಾಗೂ

‘ಮೋದಿ ಪರಿವಾರ’ ಸ್ಟಿಕ್ಕರ್ ಅಳವಡಿಕೆಗೆ ಸಂಸದರಿಂದ ಚಾಲನೆ Read More »

error: Content is protected !!
Scroll to Top