2024-25ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣೆ | ಪಠ್ಯ ಕ್ರಮದಲ್ಲಿ ಬದಲಾವಣೆ

ಬೆಂಗಳೂರು: ಸರಕಾರ 2024-25ನೇ ಸಾಲಿನ ಪಠ್ಯಪುಸ್ತಕಗಳನ್ನು ಕೊನೆಗೂ ಪರಿಷ್ಕರಿಸಿದೆ. ಡಾ ಮಂಜುನಾಥ್ ಹೆಗಡೆ ನೇತೃತ್ವದ ಸಮಿತಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಕುರಿತು ಶಾಲಾ ಶಿಕ್ಷಣ ಇಲಾಖೆ ಈ ಸಂಬಂಧ ಪ್ರಕಟಣೆ ಹೊರಡಿಸಿದ್ದು, ಪಠ್ಯಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಈ ಹಿಂದೆಯೇ ಕಾಂಗ್ರೆಸ್ ಸರ್ಕಾರ ತಿಳಿಸಿತ್ತು. 2023-24 ಸಾಲಿನಲ್ಲೂ ಹಲವು ತಿದ್ದುಪಡಿ ಮಾಡಿತ್ತು. ಇದರಂತೆ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಲ್ಲೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005ರ ಮಾರ್ಗಸೂಚಿಯಂತೆ ರಾಜ್ಯ ಪಠ್ಯಕ್ರಮದಲ್ಲಿ ಬದಲಾವಣೆ ಮಾಡಿದೆ. 1 ರಿಂದ 10 ನೇ ತರಗತಿವರೆಗಿನ […]

2024-25ನೇ ಸಾಲಿನ ಪಠ್ಯಪುಸ್ತಕ ಪರಿಷ್ಕರಣೆ | ಪಠ್ಯ ಕ್ರಮದಲ್ಲಿ ಬದಲಾವಣೆ Read More »

ಮಾ.9 : ಪಾಲ್ತಾಡು ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ, ಶ್ರೀ ರಾಜಗುಳಿಗ ದೈವದ ಕೋಲ

ಪುತ್ತೂರು : ಪೆರುವಾಜೆ -ಪಾಲ್ತಾಡಿ-ಕೊಳ್ತಿಗೆ ಗ್ರಾಮದ ವ್ಯಾಪ್ತಿಗೆ ಸಂಬಂಧಪಟ್ಟ  ಕಾಪುತಕಾಡು ಶ್ರೀರಾಜಗುಳಿಗ ಸಾನಿಧ್ಯದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವದಕೋಲವು ಮಾ.9 ರಂದು ನಡೆಯಲಿದೆ. ಮಾ.9 ರಂದು ಬೆಳಿಗ್ಗೆ 8ಕ್ಕೆ ದೇವತಾ ಪ್ರಾರ್ಥನೆ, ಸ್ಥಳ ಶುದ್ದಿ, ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. ಸಂಜೆ 6 ಗಂಟೆಗೆ ದೈವಕ್ಕೆ ಎಣ್ಣೆ ವೀಳ್ಯ ಕೊಡುವುದು, ರಾತ್ರಿ 7 ರಿಂದ ಶ್ರೀರಾಜಗುಳಿಗ ದೈವದ ನರ್ತನ ಸೇವೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಜಗುಳಿಗ ಸೇವಾ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಮಾ.9 : ಪಾಲ್ತಾಡು ಕಾಪುತಕಾಡು ಶ್ರೀ ರಾಜಗುಳಿಗ ಸಾನಿಧ್ಯ ಪ್ರತಿಷ್ಠಾ ವಾರ್ಷಿಕೋತ್ಸವ, ಶ್ರೀ ರಾಜಗುಳಿಗ ದೈವದ ಕೋಲ Read More »

ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷಗೊಳಪಡಿಸಿ | ಭಯೋತ್ಪಾದಕ ವಿರೋಧಿ ಹೋರಾಟ ಸಮಿತಿಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ನ್ಯಾಯವಾದಿ ಅನಿಲ್ ಕುಮಾರ್ ದಡ್ಡು ಆಗ್ರಹ

ಪುತ್ತೂರು: ಶತ್ರುದೇಶ ಪಾಕಿಸ್ತಾನಕ್ಕೆ ಜೈಕಾರ ಹಾಕುವುದರ ಜತೆಗೆ ಭಯೋತ್ಪಾದನಾ ಕೃತ್ಯದಲ್ಲಿ ತೊಡಗಿಕೊಂಡವರ ಪರವಾಗಿರುವ ರಾಜ್ಯ ಸರಕಾರ ಕ್ಷಮೆಗೆ ಅನರ್ಹರು. ತಕ್ಷಣ ಪಾಕಿಸ್ತಾನಕ್ಕೆ ಜೈಕಾರ ಹಾಕಿದ  ರಾಷ್ಟ್ರದ್ರೋಹಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ಒಳಪಡಿಸಬೇಕು ಎಂದು ನ್ಯಾಯವಾದಿ ಅನಿಲ್ ಕುಮಾರ್ ದಡ್ಡು ಆಗ್ರಹಿಸಿದರು. ಅವರು ಬುಧವಾರ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿ ವತಿಯಿಂದ ಪಾಕಿಸ್ತಾನದ ಪರ ಜೈಕಾರ ಹಾಕಿದವರನ್ನು, ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಕೊಂಡವರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ದರ್ಬೆ ವೃತ್ತದ ಬಳಿ ನಡೆದ ಬೃಹತ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ

ಪಾಕಿಸ್ತಾನಕ್ಕೆ ಜೈಕಾರ ಹಾಕಿದವರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷಗೊಳಪಡಿಸಿ | ಭಯೋತ್ಪಾದಕ ವಿರೋಧಿ ಹೋರಾಟ ಸಮಿತಿಯಿಂದ ನಡೆದ ಬೃಹತ್ ಪ್ರತಿಭಟನೆಯಲ್ಲಿ ನ್ಯಾಯವಾದಿ ಅನಿಲ್ ಕುಮಾರ್ ದಡ್ಡು ಆಗ್ರಹ Read More »

ಮಾ.8-9-10 : ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು

ಪುತ್ತೂರು: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಶಾಂತಿಗೋಡು ಗ್ರಾಮದ ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಶ್ರೀ ಸತ್ಯನಾರಾಯಣ ಪೂಜೆ, ಬಲಿವಾಡು ಕೂಟ ಹಾಗೂ ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು ಮಾ.8, 9 ಹಾಗೂ 10 ರಂದು ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಗೌರವ ಸಲಹೆಗಾರ ರತ್ನಾಕರ ಪಿ.ಎಸ್‍. ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 800 ವರ್ಷಗಳ ಹಿಂದೆ ಈ ದೇವಸ್ಥಾನಕ್ಕೆ ಬೆಂಕಿ ಬಿದ್ದಿದ್ದು, ಸಂಪೂರ್ಣ ನಾಶಗೊಂಡಿತ್ತು. ಬಳಿಕ ಮೊದಲು ದೇವಸ್ಥಾನ ಇದ್ದ

ಮಾ.8-9-10 : ಮರಕ್ಕೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ರಂಗಪೂಜೆ, ಜೀರ್ಣೋದ್ಧಾರ ಪ್ರಯುಕ್ತ ಪ್ರಾಯಶ್ಚಿತ್ತ ಕಾರ್ಯಕ್ರಮಗಳು Read More »

ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಬಿರ್ಮನಕಜೆ ಪ್ರಸಾದ್ ನಿಧನ

ಪುತ್ತೂರು: ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬಿರ್ಮನಕಜೆ ಪ್ರಸಾದ್ (25) ಪ್ರತ್ತೂರು ಬೈಪಾಸ್ ರಸ್ತೆಯಲ್ಲಿ ಬೈಕ್ ಚಲಾಯಿಸುತ್ತಿರುವಾಗ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್ ಆಗಿ ತಲೆಗೆ ಭೀಕರವಾಗಿ ಏಟು ಆಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ. 6 ರಂದು ನಿಧನರಾಗಿದ್ದಾರೆ.  ಮೃತರು ತಂದೆ ತಾಯಿ ತಂಗಿ ಹಾಗೂ ಬಂದು ಮಿತ್ರರನ್ನು

ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಬಿರ್ಮನಕಜೆ ಪ್ರಸಾದ್ ನಿಧನ Read More »

ಸಂಘ ಪರಿವಾರದ ಮುಖಂಡ ಮುರಳೀಕೃಷ್ಣ ಹಸಂತಡ್ಕ ಬಂಧನ ಖಂಡನೀಯ : ಸಾಜ ರಾಧಾಕೃಷ್ಣ ಆಳ್ವ

ಪುತ್ತೂರು: ತುಮಕೂರಿನಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಷಣ ಮಾಡಲು ತೆರಳಿದ ಸಂಘ ಪರಿವಾರದ ಮುಖಂಡ ಮುರಳೀಕೃಷ್ಣ ಹಸಂತಡ್ಕ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೇಸ್ ರಾಜ್ಯದಲ್ಲಿ ಅಡಳಿತಕ್ಕೆ ಬಂದ ಮೇಲೆ ಭಯೋತ್ಪಾದನೆಯ ಕರಿನೆರಳು ದಟ್ಟವಾಗಿರುವುದಕ್ಕೆ ಸಾಕ್ಷಿಯಾಗಿದ್ದು, ಇತ್ತೀಚೆಗೆ ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸಭೆಯಲ್ಲಿ ಪಾಕ್ ಪರವಾಗಿ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಇವೆಲ್ಲಾ ಘಟನೆಯಿಂದ ರಾಜ್ಯದ ಜನತೆ ಭಯಭೀತರಾಗುವಂತೆ ಮಾಡಿದೆ. ಆದ್ದರಿಂದ

ಸಂಘ ಪರಿವಾರದ ಮುಖಂಡ ಮುರಳೀಕೃಷ್ಣ ಹಸಂತಡ್ಕ ಬಂಧನ ಖಂಡನೀಯ : ಸಾಜ ರಾಧಾಕೃಷ್ಣ ಆಳ್ವ Read More »

ಮಾ.9 : ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾ.9 ಶನಿವಾರ ಮಧ್ಯಾಹ್ನ 1.45 ಕ್ಕೆ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಮಧ್ಯಾಹ್ನ 1.45 ರಿಂದ ಹೂ ಜೋಡಣೆ ಸ್ಪರ್ಧೆ (ಪರಿಕರಗಳನ್ನು ಸ್ಪರ್ಧಾಳುಗಳು ತರತಕ್ಕದ್ದು), 2 ರಿಂದ ಲಕ್ಕಿ ಗೇಮ್ ಸ್ಪರ್ಧೆ ನಡೆಯಲಿದೆ. 2.30 ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ವಚನ ಜಯರಾಮ ದಿಕ್ಸೂಚಿ ಭಾಷಣ ಮಾಡುವರು.

ಮಾ.9 : ತಾಲೂಕು ಒಕ್ಕಲಿಗ ಗೌಡ ಮಹಿಳಾ ಸಂಘದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ Read More »

ಓಜಾಲ ನಿವಾಸಿ ಉಸ್ಮಾನ್ ನಿಧನ

ಪುತ್ತೂರು : ಕಬಕ ಸಮೀಪದ ಓಜಾಲ ನಿವಾಸಿ ಉಸ್ಮಾನ್  ಹೃದಯಾಘಾತದಿಂದ ಇಂದು ನಿಧನರಾದರು. ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಉಸ್ಮಾನ್ ಅವರು ಹಲವಾರು ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ವಾಹನ ವ್ಯಾಪಾರಸ್ಥರಾಗಿದ್ದು, ಪುತ್ತೂರಿನ ಜೆ.ಎಂ.ಕಟ್ಟಡದಲ್ಲಿ ಯುನೈನ್ ಅಟೋ ಲಿಂಕ್ಸ್ ಶಾಫ್ ಹೊಂದಿದ್ದರು.

ಓಜಾಲ ನಿವಾಸಿ ಉಸ್ಮಾನ್ ನಿಧನ Read More »

ಮುರಳೀಕೃಷ್ಣ ಹಸಂತಡ್ಕರ ಬಂಧನ | ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯ ಮುಖ – ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಭಯೋತ್ಪಾದಕ ಚಟುವಟಿಕೆಯ ವಿರುದ್ಧ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟನೆಗೆ ಭಾಷಣ ಮಾಡಲೆಂದು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕರನ್ನು ತುಮಕೂರು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ಎಲ್ಲಿಯವರೆಗೆ ತಲುಪಿದೆ ಎಂದರೆ ಭಯೋತ್ಪಾದನೆಯ ವಿರುದ್ಧ ಕೂಡ ಮಾತನಾಡದ ಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಯಾವೂದೇ ಹಿಂದುವಿಗೆ ಅನ್ಯಾಯವಾದರೂ ನಾವು ಅವರ ಜೊತೆಗಿರುತ್ತೇವೆ ಎಂದು ಅರುಣ್ ಪುತ್ತಿಲ ತಿಳಿಸಿದ್ದಾರೆ.

ಮುರಳೀಕೃಷ್ಣ ಹಸಂತಡ್ಕರ ಬಂಧನ | ಸಿದ್ದರಾಮಯ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯ ಮುಖ – ಅರುಣ್ ಕುಮಾರ್ ಪುತ್ತಿಲ Read More »

ಭರದಿಂದ ಸಾಗುತ್ತಿರುವ ಜಟ್ಟಿ ಮನೆತನದ ಶ್ರೀ ದುರ್ಗಾಮಲ್ಲಿಕಾರ್ಜುನ ತರವಾಡು ಮನೆ | ಪ್ರಥಮ ಹಂತದ ನಾಗ ಪ್ರತಿಷ್ಠೆ ವೈದಿಕ ವಿಧಿವಿಧಾನಗಳೊಂದಿಗೆ ಸಂಪನ್ನ

ಪುತ್ತೂರು: ಕೇರಳ ರಾಜ್ಯದ ಕಾಂಞಗಾಡ್ ಚಿತ್ತಾರಿ ಕೊಟ್ಲಂಗಾಡ್ ಜಟ್ಟಿ ಮನೆತನದ ಶ್ರೀ ದುರ್ಗಾಮಲ್ಲಿಕಾರ್ಜುನ ತರವಾಡು ಮನೆಯ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಪ್ರಥಮ ಹಂತದ ಕಾರ್ಯಕ್ರಮವಾಗಿ ನಾಗ ಪ್ರತಿಷ್ಠೆ ಪೂಜಾ ಕಾರ್ಯಕ್ರಮ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಮಂಗಳವಾರ ನಡೆಯಿತು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕವಲೇದುರ್ಗ ಮಠದ ರಾಜಗುರು ಶ್ರೀ ಮರುಳಸಿದ್ಧ ಶಿವಾಚಾರ್ಯ ಮಹಾಸ್ವಾಮೀಜಿಗಳ ಶುಭಾಶೀರ್ವಾದಗಳೊಂದಿಗೆ ಬ್ರಹ್ಮಶ್ರೀ ಪಿ.ಎಸ್‍.ಶಂಕರನಾರಾಯಣನ್ ನಂಬೂರಿ ಅವರ ನೇತೃತ್ವದಲ್ಲಿ ಬೆಳಗ್ಗೆ 12.30 ರ ಶುಭ ಮುಹೂರ್ತದಲ್ಲಿ ನಾಗ ಪ್ರತಿಷ್ಠೆ ನಡೆಯಿತು. ಬಳಿಕ ಮಹಾಪೂಜೆ

ಭರದಿಂದ ಸಾಗುತ್ತಿರುವ ಜಟ್ಟಿ ಮನೆತನದ ಶ್ರೀ ದುರ್ಗಾಮಲ್ಲಿಕಾರ್ಜುನ ತರವಾಡು ಮನೆ | ಪ್ರಥಮ ಹಂತದ ನಾಗ ಪ್ರತಿಷ್ಠೆ ವೈದಿಕ ವಿಧಿವಿಧಾನಗಳೊಂದಿಗೆ ಸಂಪನ್ನ Read More »

error: Content is protected !!
Scroll to Top