ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಚಾಲನೆ | ಇಂದು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಇಂದು ಚಾಲನೆ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಯಾಣಿಸುವ ಮೂಲಕ ಮೆಟ್ರೋಗೆ ಚಾಲನೆ ನೀಡಿದರು. 2003 ಏಪ್ರಿಲ್‍ ನಲ್ಲಿ ಹೂಗ್ಲಿ ನದಿಯ ನೀರೊಳಗೆ ನಿರ್ಮಿಸಿದ ಸುರಂಗದಡಿಯಲ್ಲಿ ಮೆಟ್ರೋ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಇದೀಗ ಉದ್ಘಾಟನೆಗೊಂಡ ಮೆಟ್ರೋ ಕೆಲ ದಿನಗಳ ಬಳಿಕ ಅಧಿಕೃತವಾಗಿ ಆರಂಭಗೊಳ್ಳಲಿದೆ ಎಂದು ಮೆಟ್ರೋ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೌಶಿಕ್‍ ಮಿತ್ರಾ ತಿಳಿಸಿದ್ದಾರೆ.

ದೇಶದ ಮೊದಲ ನೀರೊಳಗಿನ ಮೆಟ್ರೋಗೆ ಚಾಲನೆ | ಇಂದು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ Read More »

ಆಳ್ವಾಸ್ ನ್ಯಾಚುರೋಪತಿ & ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕ

ಪುತ್ತೂರು: ಜಿಲ್ಲೆಯ ಪ್ರತಿಷ್ಟಿತ ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕಗೊಂಡಿದ್ದಾರೆ. ಇದೇ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಭಡ್ತಿ ಹೊಂದಿ ಈ ಹುದ್ದೆಗೆ ನೇಮಕಗೊಂಡಿದ್ದಾರೆ. ಇವರು ತಿಂಗಳಾಡಿ ರಾಮಯ್ಯ ರೈ ಹಾಗೂ ಲಕ್ಷ್ಮೀ ದಂಪತಿ ಪುತ್ರಿ , ಮಾಜಿ ಜಿಪಂ ಸದಸ್ಯೆ ಅ‌ನಿತಾ ಹೇಮನಾಥ ಶೆಟ್ಟಿ ಅವರ ಸಹೋದರಿ.

ಆಳ್ವಾಸ್ ನ್ಯಾಚುರೋಪತಿ & ಯೋಗಿಕ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ವನಿತಾ ಶೆಟ್ಟಿ ನೇಮಕ Read More »

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ.

ಪುತ್ತೂರು: ಪ್ರಸಿದ್ಧ ಚಿನ್ನಾಭರಣ ಮಳಿಗೆಗಳಲ್ಲೊಂದಾದ  ಜಿ ಎಲ್ ಆಚಾರ್ಯ ಜ್ಯುವೆಲರ್ಸ್ ನವರು ಬೇರೆ ಬೇರೆ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ವರ್ಷ ಮಹಿಳಾ ದಿನಾಚರಣೆ ಪ್ರಯುಕ್ತ  ತಾಲೂಕಿನ ಸಾಧಕ ಮಹಿಳೆಯರನ್ನು  ಗುರುತಿಸಿ  “ಜಿ ಎಲ್ ವುಮನ್ ಆಫ್ ಗೋಲ್ಡ್” ಎಂದು ತಮ್ಮೆಲ್ಲಾ ಶಾಖೆಗಳಿಂದ ಈರ್ವರನ್ನು ಆಯ್ಕೆ ಮಾಡಿದ್ದು ಸುಳ್ಯ ಶಾಖೆಯಿಂದ ಸುಳ್ಯದ ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿ ಹಾಗೂ ಸಂಪಾಜೆಯ ಗೃಹಿಣಿ, ಸಾಹಿತಿ ಸಹನಾ ಕಾಂತಬೈಲು 2024 ರ ಮಹಿಳಾ ದಿನಾಚರಣೆಯ  “ಜಿ

ಡಾ. ಅನುರಾಧಾ ಕುರುಂಜಿ ಮತ್ತು ಸಹನಾ ಕಾಂತಬೈಲು “ಜಿ ಎಲ್ ವುಮನ್ ಆಫ್ ಗೋಲ್ಡ್ “ ಆಗಿ ಆಯ್ಕೆ. Read More »

ಮುರಳೀಕೃಷ್ಣ ಹಸಂತಡ್ಕ ಬಂಧನ : ಬಜರಂಗದಳ ಖಂಡನೆ

ಪುತ್ತೂರು: ಭಯೋತ್ಪಾದನೆ ವಿರುದ್ಧ ಭಾಷಣ ಮಾಡಲು ತುಮಕೂರಿಗೆ ತೆರಳಿದ ಬಜರಂಗಳದ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕರನ್ನು ತುಮಕೂರು ಪೊಲೀಸರು ಬಂಧಿಸಿರುವ ಘಟನೆಯನ್ನು ಬಜರಂಗದಳ ಖಂಡಿಸಿದೆ. ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯಿಂದ ನಡೆಯಬೇಕಾಗಿರುವ ಸಭೆಗೆ ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹ ಸಂಯೋಜಕರಾದ ಮುರಳಿ ಕೃಷ್ಣ ಹಸಂತಡ್ಕ ಇವರನ್ನು ಬಂಧಿಸಿರುವುದು ಖಂಡನೀಯ ಸರಕಾರದ ಈ ಹೇಯ ಕೃತ್ಯವನ್ನು ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲೆ ಉಗ್ರವಾಗಿ ಖಂಡಿಸುತ್ತದೆ. ಭಯೋತ್ಪಾದನೆಯ ವಿರುದ್ಧ ನಡೆಯುತ್ತಾ ಇದ್ದಂತಹ ಈ ಸಭೆಯನ್ನ ಹತ್ತಿಕ್ಕಲು ನೋಡುತ್ತಿರುವಂತಹ ಈ ಸರಕಾರ

ಮುರಳೀಕೃಷ್ಣ ಹಸಂತಡ್ಕ ಬಂಧನ : ಬಜರಂಗದಳ ಖಂಡನೆ Read More »

ಮುರಳೀಕೃಷ್ಣ ಹಸಂತಡ್ಕ ತುಮಕೂರಿನಲ್ಲಿ ಪೊಲೀಸ್ ವಶ !

ಪುತ್ತೂರು: ತುಮಕೂರಿನಲ್ಲಿ ಭಾಷಣ ಮಾಡಲು ತೆರಳುತ್ತಿದ್ದ ಬಜರಂಗದಳದ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಅವರನ್ನು ತುಮಕೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬಯೋತ್ಪಾದಕ ಚಟುವಟಿಕೆ ವಿರುದ್ಧ ತುಮಕೂರಿನಲ್ಲಿ ನಡೆಯಲಿದ್ದ ಪ್ರತಿಭಟಣೆಗೆ ಮುರಳೀಕೃಷ್ಣ ಹಸಂತಡ್ಕ ತೆರಳುತ್ತಿದ್ದರು. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.      

ಮುರಳೀಕೃಷ್ಣ ಹಸಂತಡ್ಕ ತುಮಕೂರಿನಲ್ಲಿ ಪೊಲೀಸ್ ವಶ ! Read More »

ಇಂದು ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಮಹತ್ವದ ಸಭೆ | ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಸುತ್ತಿನ ಪಟ್ಟಿ ಬಿಡುಗಡೆ ಹಿನ್ನಲೆಯಲ್ಲಿ ದಿಲ್ಲಿಯಲ್ಲಿ ಮಹತ್ವದ ಸಭೆ ಇಂದು ನಡೆಯಲಿದೆ. ಈಗಾಗಲೇ 195 ಮಂದಿ ಪ್ರಥಮ ಪಟ್ಟಿ ಬಿಡುಗಡೆಗೊಂಡಿದ್ದು, ಇಂದಿನ ಸಭೆಯಲ್ಲಿ ಕರ್ನಾಟಕದ 28 ಅಭ್ಯರ್ಥಿಗಳ ಹೆಸರು ಘೊಷಣೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇರಲಿಲ್ಲ. ಆದರೆ ಬುಧವಾರ ಬಿಡುಗಡೆಯಾಗುವ ಎರಡನೇ ಪಟ್ಟಿಯಲ್ಲಿ ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳ ಹೆಸರು ಇರಲಿದೆ

ಇಂದು ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಮಹತ್ವದ ಸಭೆ | ಎರಡನೇ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

ಸರಕಾರಿ ವಾಹನ ಡಿಕ್ಕಿ : ಪಾದಾಚಾರಿ ಮೃತ್ಯು !

ಬಂಟ್ವಾಳ: ಪಾದಚಾರಿಗೆ ಸರಕಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಮೃತಪಟ್ಟ ಘಟನೆ ಮಂಗಳವಾರ ಪರಂಗಿಪೇಟೆಯಲ್ಲಿ ತಡರಾತ್ರಿ ನಡೆದಿದೆ. ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪಾದಚಾರಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬೀಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸರಕಾರಿ ವಾಹನ ಡಿಕ್ಕಿ : ಪಾದಾಚಾರಿ ಮೃತ್ಯು ! Read More »

ಇಂದು ಮೊಗಪ್ಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ, ಶ್ರೀ ಕೊರಗಜ್ಜ ದೈವಗಳ ನೇಮೋತ್ಸವ

ಪುತ್ತೂರು: 3ನೇ ವರ್ಷದ ಶ್ರೀ ಕಲ್ಲುರ್ಟಿ ಹಾಗೂ ಶ್ರೀ ಕೊರಗಜ್ಜ ದೈವದ ನೇಮೋತ್ಸವ ಇಂದು ಮೊಗಪ್ಪೆ ಮನೆಯಲ್ಲಿ ನಡೆಯಲಿದೆ. ಸಂಜೆ 6 ಗಂಟೆಗೆ ಭಂಡಾರ ತೆಗೆದು ಬಳಿಕ ವಿಜೃಂಭಣೆಯ ನೇಮೋತ್ಸವ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ದೈವಗಳ ಗಂಧಪ್ರಸಾದ ಸ್ವೀಕರಿಸಿ, ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಕುಟುಂಬದ ಮುಖ್ಯಸ್ಥರು ತಿಳಿಸಿದ್ದಾರೆ. ಪ್ರತೀ ಸಂಕ್ರಮಣದಂದು ಅಗೇಲು ಸೇವೆ ಮಾಡಿಸುವವರು ಮೊ: 9740487418 ನಂಬರ್ ಕರೆ ಮಾಡಿ ತಿಳಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಇಂದು ಮೊಗಪ್ಪೆ ಮನೆಯಲ್ಲಿ ಶ್ರೀ ಕಲ್ಲುರ್ಟಿ, ಶ್ರೀ ಕೊರಗಜ್ಜ ದೈವಗಳ ನೇಮೋತ್ಸವ Read More »

ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ

ಪುತ್ತೂರು: ಕಾರ್ಪೋರೇಟ್ ಸಂಸ್ಥೆಗಳು ಬಯಸುವ ತಂತ್ರಜ್ಞಾನಗಳು ಪಠ್ಯಕ್ರಮದ ಮೂಲಕ ತಮ್ಮನ್ನು ತಲಪಲು ಒಂದೆರಡು ವರ್ಷಗಳು ಬೇಕಾಗುತ್ತದೆ. ಈ ಅಂತರವನ್ನು ಕಡಿಮೆ ಮಾಡಲು ವಿದ್ಯಾರ್ಥಿಗಳು ಪೂರಕ ವಿಷಯಗಳನ್ನು ಕಲಿಯುವುದು ಅತೀ ಅಗತ್ಯ ಎಂದು ಪುತ್ತೂರಿನ ವೆಬ್ ಪೀಪಲ್ ಸಂಸ್ಥೆಯ ಸಹ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಶ್ರೀನಿವಾಸ್ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ ನಡೆದ ರಾಷ್ಟ್ರ ಮಟ್ಟದ ತಂತ್ರಜ್ಞಾನ ಮೇಳ ಅಂತರ್ಯ-2024 ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ

ರಾಷ್ಟ್ರಮಟ್ಟದ ತಂತ್ರಜ್ಞಾನ ಮೇಳ ‘ಅಂತರ್ಯ-2024’ ಸಮಾರೋಪ Read More »

ಮಾ.7 : ಮಂಚಿ ಪುಚ್ಚೆಕೆರೆ ಮನೆಯಲ್ಲಿ ನೇಮೋತ್ಸವ

ಬಂಟ್ವಾಳ: ತಾಲೂಕಿನ ಮಂಚಿ ಗ್ರಾಮದ ಪುಚ್ಚೆಕೆರೆ ಮನೆಯಲ್ಲಿ ಶ್ರೀ ರುದ್ರಾಂಡಿ ಧರ್ಮದೈವ, ಕಲ್ಲುರ್ಟಿ, ಪಂಜುರ್ಲಿ ಹಾಗೂ ರಾಹುಗುಳಿಗ ದೈವಗಳಿಗೆ ನೇಮೋತ್ಸವ ಸೇವೆ ಮಾ.7 ಗುರುವಾರ ರಾತ್ರಿ 8:30ಕ್ಕೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕುಟುಂಬಸ್ಥರು ಪಾಲ್ಗೊಂಡು ಗಂಧ ಪ್ರಸಾದ ಸ್ವೀಕರಿಸಿ, ಶ್ರೀ ದೈವಗಳ ಪೂರ್ಣಾನುಗ್ರಹಕ್ಕೆ ಪಾತ್ರರಾಗಬೇಕಾಗಿ ಪುಚ್ಚೆಕೆರೆ ಮನೆಯ ಸೀತಾರಾಮ ಗೌಡ ತಿಳಿಸಿದ್ದಾರೆ.

ಮಾ.7 : ಮಂಚಿ ಪುಚ್ಚೆಕೆರೆ ಮನೆಯಲ್ಲಿ ನೇಮೋತ್ಸವ Read More »

error: Content is protected !!
Scroll to Top