ಮಾ.8 : ಕಜೆಮೂಲೆ ಕುಟುಂಬಸ್ಥರ ಶ್ರೀ ನಾಗದೇವರು ಹಾಗೂ ಭೂಮಿ ದೈವಗಳ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ | ನೇಮೋತ್ಸವ

ಸುಳ್ಯ: ಕಜೆಮೂಲೆ ಕುಟುಂಬಸ್ಥರ ಭೂಮಿ ದೈವಗಳ ದೈವಸ್ಥಾನದಲ್ಲಿ ಶ್ರೀ ನಾಗದೇವರು ಹಾಗೂ ಭೂಮಿ ದೈವಗಳಾದ ಕುಪ್ಪೆ ಪಂಜುರ್ಲಿ, ಪಾಷಾಣಮೂರ್ತಿ, ಗುಳಿಗ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ನೇಮೋತ್ಸವ ಮಾ.8 ಶುಕ್ರವಾರ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ 7.30 ರಿಂದ ಗಣಪತಿ ಹೋಮ, ಶುದ್ಧಕಲಶ, ನಾಗ ತಂಬಿಲ, ದೈವಗಳಿಗೆ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ರಾತ್ರಿ 7 ಕ್ಕೆ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8.30 […]

ಮಾ.8 : ಕಜೆಮೂಲೆ ಕುಟುಂಬಸ್ಥರ ಶ್ರೀ ನಾಗದೇವರು ಹಾಗೂ ಭೂಮಿ ದೈವಗಳ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ | ನೇಮೋತ್ಸವ Read More »

ಮಾ.7: ಪುತ್ತೂರಿನಲ್ಲಿ ಗ್ಯಾರಂಟಿ ಸಮಾವೇಶ | ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಶೋಕ್‍ ರೈ

ಪುತ್ತೂರು: ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ಸಮಾವೇಶದ ಮೂಲಕ ಅವಲೋಕನ ನಡೆಸಲಾಗುತ್ತಿದ್ದು, ದ.ಕ. ಜಿಲ್ಲೆಯಲ್ಲಿ ಮಾ. 6 ರಿಂದ 10 ರ ವರೆಗೆ ಆಯಾ ತಾಲೂಕು ವ್ಯಾಪ್ತಿಯಲ್ಲಿ ನಡೆಯಲಿದೆ. ಪುತ್ತೂರಿನಲ್ಲಿ ಮಾ. 7 ರಂದು ಗ್ಯಾರಂಟಿ ಸಮಾವೇಶ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಪೂರ್ವಾಹ್ನ 11 ಗಂಟೆಗೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್

ಮಾ.7: ಪುತ್ತೂರಿನಲ್ಲಿ ಗ್ಯಾರಂಟಿ ಸಮಾವೇಶ | ಪತ್ರಿಕಾಗೋಷ್ಠಿಯಲ್ಲಿ ಶಾಸಕ ಅಶೋಕ್‍ ರೈ Read More »

ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ-2024”

ಪುತ್ತೂರು: ನಿತ್ಯ ದೈನಂದಿನ ಚಟುವಟಿಕೆಗಳ ನಡುವೆಯೂ ನಾವು ಯಾವುದಾದರೊಂದು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಾಗ ಎದುರಾಗುವ ಯಶಸ್ಸು ಹಾಗೂ ಸೋಲನ್ನು ಸಮನಾಗಿ ಸ್ವೀಕರಿಸಿ ಮುಂದಡಿಯಿಟ್ಟಾಗ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ನಗರಸಭಾ ಪೌರಾಯುಕ್ತ ಮಧು ಎಸ್.ಮನೋಹರ್ ಹೇಳಿದರು. ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಸಂಪ್ಯ ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ ,2024″ನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಪಥ ಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿ, ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಪುತ್ತೂರು ತಾಲೂಕು ನಿವೃತ್ತ ಸಹಾಯಕ

ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ “ಸ್ಪೈರೋ-2024” Read More »

ಪ್ರಗತಿ ಬಂಧು ಕೇಂದ್ರ ಒಕ್ಕೂಟ ಸಮಿತಿ ಸಭೆ

ಕಡಬ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಪ್ರಗತಿಬಂಧು ಕೇಂದ್ರ ಒಕ್ಕೂಟ ಸಮಿತಿ ಸಭೆ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಡಬ ತಾಲೂಕು ಅಧ್ಶಕ್ಷರು ಮಹೇಶ್ ಕೆ ಸವಣೂರು ಸಭೆಯನ್ನು ಉಧ್ಘಾಟಿಸಿ ಮಾತನಾಡಿ, ಕಡಬ ತಾಲೂಕಿನ 63 ಒಕ್ಕೂಟದ ಅಧ್ಶಕ್ಷರುಗಳು ಸೇರಿ ಒಕ್ಕೂಟದ ಬಲವರ್ಧನೆಯನ್ನು ನಿಸ್ವಾರ್ಥತೆಯಿಂದ ಮಾಡುತ್ತಿರುವುದು ಅಭಿನಂದನಾರ್ಹ. ಅಧ್ಶಕ್ಷ ಒಬ್ಬ ನಾಯಕನಾಗಿ ತಮ್ಮ ವ್ಶಾಪ್ತಿಯ ಒಕ್ಕೂಟದ ಸದಸ್ಶರ ಕಷ್ಟಗಳಿಗೆ ಸ್ಪಂದಿಸಿ ಗ್ರಾಮಾಭಿವೃಧ್ಧಿ ಯೋಜನೆಯ ಸೌಲಭ್ಶಗಳ ಒದಗಿಸಿಕೊಟ್ಟಲ್ಲಿ ಒಕ್ಕೂಟವು ಸಮರ್ಥವಾಗಿ

ಪ್ರಗತಿ ಬಂಧು ಕೇಂದ್ರ ಒಕ್ಕೂಟ ಸಮಿತಿ ಸಭೆ Read More »

ಪುತ್ತೂರು ಶಿವಳ್ಳಿ ಕ್ರಿಕೆಟರ್ಸ್ ನಿಂದ ನಡೆದ ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್ 4 ಸಂಪನ್ನ

ಪುತ್ತೂರು: ಶಿವಳ್ಳಿ ಕ್ರಿಕೆಟರ್ಸ್ ಸತತ 4ನೇ ವರ್ಷ ಅದ್ದೂರಿಯಾಗಿ ಆಯೋಜಿಸಿರುವ ಶಿವಳ್ಳಿ ಬ್ರಾಹ್ಮಣರ ಆಹ್ವಾನಿತ 13ತಂಡಗಳ ಅಂತರ್ ರಾಜ್ಯ ಮಟ್ಟದ ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್ 4 ಓವರ್ ಅರ್ಮ್ ಕ್ರಿಕೆಟ್ ಪಂದ್ಯಾಕೂಟವು, ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪಂದ್ಯಕೂಟವನ್ನು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಿ, ಹಿಂದೂ ಸಮಾಜ ಒಗ್ಗಟ್ಟಾಗಿ ಮುಂದೆ ಸಾಗುವಲ್ಲಿ ವಿಪ್ರ ಸಮಾಜ ಮುಖ್ಯ ಪಾತ್ರವಹಿಸಲಿದೆ ಎಂದರು. ಹೃದ್ರೋಗ ತಜ್ಞ ಡಾ. ಸುರೇಶ ಪುತ್ತೂರಾಯರು, ಬಿ.ಜೆ.ಪಿ ನಗರ ಮಂಡಲ ಅಧ್ಯಕ್ಷ

ಪುತ್ತೂರು ಶಿವಳ್ಳಿ ಕ್ರಿಕೆಟರ್ಸ್ ನಿಂದ ನಡೆದ ಶಿವಳ್ಳಿ ಕ್ರಿಕೆಟ್ ಲೀಗ್- ಸೀಸನ್ 4 ಸಂಪನ್ನ Read More »

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗ, ಸಯನ್ಸ್‌ ಫಾರಮ್‌, ಆಂತರಿಕ ಗುಣಮಟ್ಟ ಭರವಸೆ ಕೋಶ, ಹಾಗೂ ಐಐಸಿಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ ವಿಜ್ಞಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ| ಡಾ| ಆಂಟೊನಿ ಪ್ರಕಾಶ್ ಮೊಂತೆರೋ, ವಿದ್ಯಾರ್ಥಿಗಳು ವಿಜ್ಞಾನದ ಮಹತ್ವವನ್ನು ಅರಿತುಕೊಂಡು ವೈಜ್ಞಾನಿಕ ಮನೋಭಾವವನ್ನು ಅಳವಡಿಸಿಕೊಳ್ಳಬೇಕು. ವೈಜ್ಞಾನಿಕ ಅನ್ವೇಷಣೆಗಳಲ್ಲಿ ಶ್ರದ್ಧೆ, ಉತ್ಸಾಹ ಮತ್ತು ಸಮರ್ಪಣೆಯ ಪ್ರಾಮುಖ್ಯತೆಯನ್ನು ತಿಳಿದುಕೊಂಡು ಯುವ ಪೀಳಿಗೆಯು ತಮ್ಮ ಆಲೋಚನೆಗಳು, ಮಾತುಗಳು ಮತ್ತು ಕಾರ್ಯಗಳನ್ನು

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ Read More »

ಲೋಕಸಭೆ ಚುನಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಮೂರು ಲಕ್ಷಕ್ಕೂ ಅಧಿಕ ಮತಗಳ ಲೀಡ್‍ ನಿಂದ ಗೆಲುವು | ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ಬಿಜೆಪಿ ದ..ಕ.ಜಿಲ್ಲೆಯಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಮಂಡಲ ವತಿಯಿಂದ ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ನಡೆದ ಗ್ರಾಮ ಚಲೋ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ 195 ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದು, 3-4 ದಿನಗಳಲ್ಲಿ ದ.ಕ. ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗಬಹುದು. ನರೇಂದ್ರ ಮೋದಿಯವರು 10 ವರ್ಷ ಪ್ರಧಾನಿಯಾಗಿ

ಲೋಕಸಭೆ ಚುನಾವಣೆಯಲ್ಲಿ ದ.ಕ.ಜಿಲ್ಲೆಯಲ್ಲಿ ಮೂರು ಲಕ್ಷಕ್ಕೂ ಅಧಿಕ ಮತಗಳ ಲೀಡ್‍ ನಿಂದ ಗೆಲುವು | ಜಿಲ್ಲಾಧ್ಯಕ್ಷ ಸತೀಶ್ ಕುಂಪಲ Read More »

ಬೆಳ್ಳಾರೆಯಲ್ಲಿ ಮನೆಯೊಂದಕ್ಕೆ ಎನ್.ಐ.ಎ ದಾಳಿ !

ಬೆಳ್ಳಾರೆ : ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪ ಕುಲಾಯಿತೋಡು ಎಂಬಲ್ಲಿ ಮನೆಯೊಂದಕ್ಕೆ  ಎನ್.ಐ.ಎ ಅಧಿಕಾರಿಗಳ ತಂಡ ದಾಳಿ ನಡೆಸಿದ ಘಟನೆ   ನಡೆದಿದೆ. ಮನೆಯೊಂದಕ್ಕೆ ದಿಢೀರ್ ದಾಳಿ ನಡೆಸಿದ ಎನ್‌.ಐ.ಎ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿದೆ. ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನಡೆದ ದಾಳಿ ಇದಾಗಿದೆ ಎಂದು ತಿಳಿದು ಬಂದಿದೆ.

ಬೆಳ್ಳಾರೆಯಲ್ಲಿ ಮನೆಯೊಂದಕ್ಕೆ ಎನ್.ಐ.ಎ ದಾಳಿ ! Read More »

ಆ್ಯಸಿಡ್ ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿನಿಯರು ದಾಖಲಾದ ಆಸ್ಪತ್ರೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಮಂಗಳೂರು : ಕಡಬದಲ್ಲಿ ಅಬೀನ್ ಎಂಬ ಯುವಕ ಆ್ಯಸಿಡ್ ದಾಳಿ ನಡೆಸಿದ ಹಿನ್ನೆಲೆ ಗಾಯಗೊಂಡ ವಿದ್ಯಾರ್ಥಿನಿಯರಾದ ಅಲೀನಾ, ಅರ್ಚನ, ಅಮೃತ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರುಣ್ ಕುಮಾ‌ರ್ ಪುತ್ತಿಲ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಾಖಲಾಗಿರುವ ಮೂವರು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಕುಟುಂಬಸ್ಥರ ಜೊತೆ ಮಾತನಾಡಿದರು. ಆದಷ್ಟು ಶೀಘ್ರವಾಗಿ ಗುಣಮುಖರಾಗಿ ಬರಲೆಂದು ಹಾರೈಸಿದರು. ಮಂಗಳೂರಿನ ಹಿಂದೂ ಸಂಘಟನೆಯ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆ್ಯಸಿಡ್ ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿನಿಯರು ದಾಖಲಾದ ಆಸ್ಪತ್ರೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ Read More »

ವಿಷ ಸೇವಿಸಿ ವಿದ್ಯಾರ್ಥಿನಿ ಮೃತ್ಯು !

ಪುತ್ತೂರು : ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರು ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆರತಿ ಮೃತ ಯುವತಿ. ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದು,ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ಅಲ್ಲಿ ಚಿಕಿತ್ಸೆಕೊಡಿಸಲಾಗುತ್ತಿತ್ತು. ಅಲ್ಲದೇ ವೈದ್ಯರ ಸಲಹೆ ಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ಕೊಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ.

ವಿಷ ಸೇವಿಸಿ ವಿದ್ಯಾರ್ಥಿನಿ ಮೃತ್ಯು ! Read More »

error: Content is protected !!
Scroll to Top