ಎಸ್.ಬಿ.ಜಯರಾಮ ರೈ ಬಳಜ್ಜ 3ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆ

ಪುತ್ತೂರು : ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ  ಎಸ್.ಬಿ ಜಯರಾಮ ರೈ ಬಳಜ್ಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆ.ಎಮ್.ಎಫ್) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಸಹಕಾರಿ ಕ್ಷೇತ್ರದ ಹಿರಿಯ ಧುರೀಣರೂ, ಹಲವಾರು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಸಂಸ್ಥೆಗಳಲ್ಲಿ ಹಂತ-ಹಂತವಾಗಿ ಬೆಳೆದು ಸ್ಕ್ಯಾಡ್ಸ್ ನ ನಿರ್ದೇಶಕರೂ, ಶ್ರೀ ಕ್ಷೇತ್ರ ಕೆಯ್ಯೂರು ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರು, ಶ್ರೀ ಹೊಸಮ್ಮ […]

ಎಸ್.ಬಿ.ಜಯರಾಮ ರೈ ಬಳಜ್ಜ 3ನೇ ಬಾರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಆಯ್ಕೆ Read More »

ಬೈಕ್- ಗೂಡ್ಸ್ ನಡುವೆ ಡಿಕ್ಕಿ | ವಿದ್ಯಾರ್ಥಿ ಮೃತ್ಯು

ಉಪ್ಪಿನಂಗಡಿ : ಬೈಕ್‌ ಹಾಗೂ ಮಿನಿ ಗೂಡ್ಸ್‌ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಮೃತ ಯುವಕ. ಶ್ರೀಜಿಸ್ ರವರು ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಆಲಂಕಾರು ಸಮೀಪದ ನೆಕ್ಕರೆಯಲ್ಲಿರುವ ಪೆಟ್ರೋಲ್‌ ಪಂಪ್‌ನಲ್ಲಿ ಬೈಕ್‌ಗೆ ಪೆಟ್ರೋಲ್‌ ತುಂಬಿಸಿ

ಬೈಕ್- ಗೂಡ್ಸ್ ನಡುವೆ ಡಿಕ್ಕಿ | ವಿದ್ಯಾರ್ಥಿ ಮೃತ್ಯು Read More »

ರಾಜ್ಯ ಕಾಂಗ್ರೇಸ್ ಸರಕಾರದ ಹಿಂದೂ ವಿರೋಧಿ‌ ನೀತಿ ಖಂಡಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳದಿಂದ ಬೃಹತ್ ಪ್ರತಿಭಟನೆ

ಬಂಟ್ವಾಳ: ರಾಜ್ಯ ಕಾಂಗ್ರೇಸ್ ಸರಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆದು, ಬಳಿಕ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರನ್ನು ಬಂಟ್ವಾಳ ಪೋಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರವಾಗಿ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿ ಅಶಾಂತಿಯನ್ನು ಸೃಷ್ಟಿ

ರಾಜ್ಯ ಕಾಂಗ್ರೇಸ್ ಸರಕಾರದ ಹಿಂದೂ ವಿರೋಧಿ‌ ನೀತಿ ಖಂಡಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳದಿಂದ ಬೃಹತ್ ಪ್ರತಿಭಟನೆ Read More »

ಸಾಮೆತ್ತಡ್ಕ ನಿವಾಸಿ ಅನಿಲ್ ವಿಲ್ಸನ್ ಸೆಬಾಸ್ಟಿಯನ್ ಮಸ್ಕರೇನಸ್ ನಿಧನ

ಪುತ್ತೂರು: ಸಾಮೆತ್ತಡ್ಕ ಯವಕ ಮಂಡಲದ ಮಾಜಿ ಅಧ್ಯಕ್ಷ ಅನಿಲ್ ವಿಲ್ಸನ್ ಸೆಬಾಸ್ಟಿಯನ್ ಮಸ್ಕರೇನಸ್ (54) ಅಸೌಖ್ಯದಿಂದ ನಿಧನರಾದರು. ಸಾಮೆತ್ತಡ್ಕ ದಿ. ಜೋಸೆಫ್‍ ಝೇವಿಯರ್ ಮಸ್ಕರೇನಸ್ ಹಾಗೂ ಹಿಲ್ಡಾ ರೋಚ್ ಅವರ ಪುತ್ತರಾಗಿರುವ ಅನಿಲ್ ವಿಲ್ಸನ್‍ ಹಲವಾರು ವರ್ಷ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ವಿದೇಶದಿಂದ ಬಂದ ಬಳಿಕ ಪುತ್ತೂರಿನ ಸಾಮೆತ್ತಡ್ಕದಲ್ಲಿ ನೆಲೆಸಿದ್ದರು. ಮೃತರು ತಾಯಿ, ಪತ್ನಿ, ಪುತ್ರಿ, ಸಹೋದರಿಯರನ್ನು ಅಗಲಿದ್ದಾರೆ.

ಸಾಮೆತ್ತಡ್ಕ ನಿವಾಸಿ ಅನಿಲ್ ವಿಲ್ಸನ್ ಸೆಬಾಸ್ಟಿಯನ್ ಮಸ್ಕರೇನಸ್ ನಿಧನ Read More »

ಸುಳ್ಯ ಲಾರಿ ಚಾಲಕ ಇಸಾಕ್‍ ಆತ್ಮಹತ್ಯೆ !

ಸುಳ್ಯ: ವ್ಯಕ್ತಿಯೊಬ್ಬರು ಸುಳ್ಯದ ರೆಸಿಡೆನ್ಸಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಪೈಚಾರ್ ನಿವಾಸಿ ಲಾರಿ ಚಾಲಕ ಇಸಾಕ್‍ ಆತ್ಮಹತ್ಯೆ ಮಾಡಿಕೊಂಡವರು. ಸುಳ್ಯ ಜೂನಿಯರ್ ಕಾಲೇಜು ರಸ್ತೆ ಬಳಿ ಇರುವ ಸದರ್ನ್ ರೆಸಿಡೆನ್ಸಿಯಲ್ಲಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಈ ಕುರಿತು ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ ಲಾರಿ ಚಾಲಕ ಇಸಾಕ್‍ ಆತ್ಮಹತ್ಯೆ ! Read More »

ಕಾಂಗ್ರೇಸ್‍ನ ಅತಿಯಾದ ಅಲ್ಪಸಂಖ್ಯಾತ ಓಲೈಕೆಯೇ ಆ್ಯಸಿಡ್ ದಾಳಿಗೆ ಕಾರಣ : ಪುತ್ತಿಲ ಪರಿವಾರ ಆರೋಪ

ಪುತ್ತೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ಕಡಬದ ವಿದ್ಯಾರ್ಥಿನಿಗಳ ಮೇಲೆ ಅಬೀನ್ ಎಂಬಾತನಿಂದ ಆ್ಯಸಿಡ್ ದಾಳಿ ನಡೆದಿರುವುದು ನಾಗರಿಕ ಸಮಾಜವೇ ತಲೆತಗ್ಗಿಸುವ ವಿಷಯಾವಾಗಿದ್ದು ಈ ಕೃತ್ಯವನ್ನು ಪುತ್ತಿಲ ಪರಿವಾರ ಖಂಡಿಸುತ್ತದೆ. ಇಂದು ಬೆಳಗ್ಗೆ ಅಲೀನಾ, ಅರ್ಚನ, ಅಮೃತ ಎನ್ನುವ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಅಬೀನ್ ಎಂಬಾತ ಆ್ಯಸಿಡ್ ದಾಳಿ ನಡೆಸಿದ್ದಾನೆ. ಒಬ್ಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಅತಿಯಾದ ಅಲ್ಪಸಂಖ್ಯಾತ ಓಲೈಕೆಯಿಂದ ಭಯವೇ ಇಲ್ಲದಂತಾಗಿದೆ. ದಕ್ಷಿಣ ಕನ್ನಡದಲ್ಲಂತು ಗಾಂಜಾ, ಕಳ್ಳತನ, ಕೊಲೆ ಪ್ರಕರಣಗಳು, ತಲವಾರು ದಾಳಿಗಳು,

ಕಾಂಗ್ರೇಸ್‍ನ ಅತಿಯಾದ ಅಲ್ಪಸಂಖ್ಯಾತ ಓಲೈಕೆಯೇ ಆ್ಯಸಿಡ್ ದಾಳಿಗೆ ಕಾರಣ : ಪುತ್ತಿಲ ಪರಿವಾರ ಆರೋಪ Read More »

ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಗೊನೆ ಮುಹೂರ್ತ

ಕೆದಿಲ: ಮಾ.11 ರಂದು ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ನಡೆಯಲಿರುವ ವಾರ್ಷಿಕ ನೇಮೋತ್ಸವಕ್ಕೆ ಗೊನೆಮುಹೂರ್ತ ಸೋಮವಾರ ನಡೆಯಿತು. ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಜೈ ಕೃಷ್ಣ ಭಟ್ ಕೇಶವ ಕೃಪ ಮೀರಾವನರವರು ದೈವದ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಗೊನೆ ಮುಹೂರ್ತ ನಡೆಯಿತು. ಅರ್ಚಕ ಈಶ್ವರ ಪ್ರಕಾಶ್ ಪಂಜಿಬಲ್ಲೆ ವೈದಿಕ ವಿಧಿ ವಿಧಾನ ನೆರವೇರಿಸಿದರು ಈ ಸಂದರ್ಭದಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಜನಾರ್ಧನ ಕುಲಾಲ್ ಗಾನದಕೊಟ್ಯ, ಕುದುಂಬ್ಲಾಡಿ ಗುತ್ತು ಬಾಳಪ್ಪ ಗೌಡ,

ಕೆದಿಲ ಶ್ರೀ ಉಳ್ಳಾಕ್ಲು ಧೂಮಾವತಿ ಮಲರಾಯ ದೈವಸ್ಥಾನದಲ್ಲಿ ಗೊನೆ ಮುಹೂರ್ತ Read More »

ಈ ಬಾರಿ ದ.ಕ.ಜಿಲ್ಲೆಯಿಂದ ಲೋಕಸಭಾ ಟಿಕೇಟ್ ಒಕ್ಕಲಿಗ ಸಮುದಾಯದ  ಪ್ರಭಾವಿ ನಾಯಕ ಕಿರಣ್ ಬುಡ್ಲೆಗುತ್ತುಗೆ | ಕಿರಣ್ ಬುಡ್ಲೆಗುತ್ತು ಹೆಸರು ಮುಂಚೂಣಿಯಲ್ಲಿ

ಮಂಗಳೂರು : ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯ ಮೂಲದ ಯುವ ನಾಯಕ ಕಿರಣ್ ಬುಡ್ಲೆಗುತ್ತು ಅವರಿಗೆ ಲೋಕಸಭಾ ಟಿಕೇಟ್ ನೀಡುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆ. ಡಿಕೆಶಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿರುವ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಕಿರಣ್ ಬುಡ್ಲೆಗುತ್ತು ವಿಗೆ ಹೈಕಮಾಂಡ್ ಕೃಪಾಕಟಾಕ್ಷ ತೋರಿದೆ ಎಂಬುದು ಬಹಿರಂಗವಾಗಿದೆ. ಉಳಿದ ಆಕಾಂಕ್ಷಿಗಳಾದ ರಮಾನಾಥ ರೈ, ವಿನಯ್ ಕುಮಾರ್ ಸೊರಕೆ, ಪದ್ಮರಾಜ್ ಈ ಮೂವರ ನಡುವೆ ಕಿರಣ್ ಬುಡ್ಲೆಗುತ್ತು ಹೆಸರು ಮುಂಚೂಣಿಯಲ್ಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಿರಣ್

ಈ ಬಾರಿ ದ.ಕ.ಜಿಲ್ಲೆಯಿಂದ ಲೋಕಸಭಾ ಟಿಕೇಟ್ ಒಕ್ಕಲಿಗ ಸಮುದಾಯದ  ಪ್ರಭಾವಿ ನಾಯಕ ಕಿರಣ್ ಬುಡ್ಲೆಗುತ್ತುಗೆ | ಕಿರಣ್ ಬುಡ್ಲೆಗುತ್ತು ಹೆಸರು ಮುಂಚೂಣಿಯಲ್ಲಿ Read More »

ಅಪರಿಚಿತನಿಂದ ಆ್ಯಸಿಡ್ ದಾಳಿ  | ಮೂವರು ವಿದ್ಯಾರ್ಥಿನಿಯರು ಗಂಭೀರ

ಕಡಬ: ಅಪರಿಚಿತ ವ್ಯಕ್ತಿಯೋರ್ವ ಆ್ಯಸಿಡ್ ಎರಚಿದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಂಭಿರ ಗಾಯಗೊಂಡ ಘಟನೆ ಕಡಬ ಸರಕಾರಿ ಕಾಲೇಜು ಆವರಣದಲ್ಲಿ ನಡೆಯಿತು. ಘಟನೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಲಿನ ಸಿಬಿ, ಅರ್ಚನ, ಅಮೃತ ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆರೋಪಿ ಅಬೀನ್ ರನ್ನು ಪೊಲೀಸ್‌ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಅಪರಿಚಿತನಿಂದ ಆ್ಯಸಿಡ್ ದಾಳಿ  | ಮೂವರು ವಿದ್ಯಾರ್ಥಿನಿಯರು ಗಂಭೀರ Read More »

ಯುವತಿ ನೇಣು ಬಿಗಿದು ಆತ್ಮಹತ್ಯೆ !

ಕಾಣಿಯೂರು: ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಣಿಯೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರು ಗ್ರಾಮದ ಅನಿಲ ಮನೆಯ ಪದ್ಮಯ್ಯ ಗೌಡರ ಪುತ್ರಿ ದಿವ್ಯಾಶ್ರೀ (26) ಆತ್ಮಹತ್ಯೆ ಮಾಡಿಕೊಂಡವರು. ಅಪಪ್ರಚಾರಕ್ಕೆ ಮನನೊಂದು ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಯುವತಿ ಮೃತಪಟ್ಟರೆನ್ನಲಾಗಿದೆ. ಬೆಳ್ಳಾರೆ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

ಯುವತಿ ನೇಣು ಬಿಗಿದು ಆತ್ಮಹತ್ಯೆ ! Read More »

error: Content is protected !!
Scroll to Top