ಶ್ರೀ ಆದಿಚುಂಚನಗಿರಿ ಮಠಕ್ಕೆ ದ.ಕ.ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಮಂಗಳೂರು: ದ.ಕ.ಜಿಲ್ಲೆ ಒಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಸಂಘದ ಪದಾಧಿಕಾರಿಗಳನ್ನು ಶ್ರೀಗಳು ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಡಾ. ಧರ್ಮ ಪಾಲನಾಥ ಸ್ವಾಮೀಜಿಯವರು ಉಪಸ್ಥಿತರಿದ್ದರು.

ಶ್ರೀ ಆದಿಚುಂಚನಗಿರಿ ಮಠಕ್ಕೆ ದ.ಕ.ಜಿಲ್ಲಾ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಭೇಟಿ | ಆಶೀರ್ವಾದ ನೀಡಿದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ Read More »

ಪುತ್ತೂರು ತಾಲೂಕು ತುಳುವೆರೆ ಮೇಳೊ-2024 ಉದ್ಘಾಟನೆ

ಪುತ್ತೂರು: ತುಳು ಭಾಷೆಯ ಉಳಿವಿಗಾಗಿ ಜಾಗೃತಿಯ ಕೆಲಸ ನಿರಂತರವಾಗಿ ನಡೆಯುತ್ತಿದೆ. ತುಳುಲಿಪಿಯ ಬಗ್ಗೆ ಯಾವುದೇ ಅನುಮಾನಗಳು ಬೇಡ. ವಿಧಾನ ಸೌಧದ ಒಳಗೂ ತುಳು ಭಾಷೆ ಕೇಳುತ್ತಿದ್ದು, ರಾಜ್ಯ ಎರಡನೇ ಭಾಷೆಯಾದ ಬಳಿಕ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಮಂಜಲ್ಪಡು ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ಪುತ್ತೂರು ತುಳುಕೂಟದಿಂದ ನಡೆದ ಪುತ್ತೂರು ತಾಲೂಕು ತುಳುವೆರೆ ಮೇಳೊ-2024 ನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಳಸೆಗೆ ಭತ್ತವನ್ನು

ಪುತ್ತೂರು ತಾಲೂಕು ತುಳುವೆರೆ ಮೇಳೊ-2024 ಉದ್ಘಾಟನೆ Read More »

ರಿಕ್ಷಾ ಪಲ್ಟಿ : ಚಾಲಕ ಮೃತ್ಯು

ಸುಬ್ರಹ್ಮಣ್ಯ: ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ. ರಿಕ್ಷಾ ಚಾಲಕ ವಿವೇಕಾನಂದ ದೇವರಗದ್ದೆ ಮೃತಪಟ್ಟವರು. ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಅವರು ಭಾನುವಾರ ರಾತ್ರಿ ಗಂಟೆ 9ರ ಸುಮಾರಿಗೆ ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿತ್ತು. ಚಾಲಕ ವಿವೇಕಾನಂದ ಅವರು ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ. ತಕ್ಷಣ ಅವರನ್ನು

ರಿಕ್ಷಾ ಪಲ್ಟಿ : ಚಾಲಕ ಮೃತ್ಯು Read More »

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಆಡಳಿತ ಮಂಡಳಿಗೆ ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧ ಆಯ್ಕೆ | ಸತತ ಮೂರನೇ ಬಾರಿಗೆ ಆಯ್ಕೆ

ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಆಡಳಿತ ಮಂಡಳಿಗೆ ಪುತ್ತೂರಿನಿಂದ ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ಒಟ್ಟು 16 ಸ್ಥಾನಗಳಿಗೂ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದೆ. ಈ ಪೈಕಿ 15 ಮಂದಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಉಳಿದಂತೆ ಸುಳ್ಯದಿಂದ ಎಸ್‍.ಎನ್‍.ಮನ್ಮಥ, ಬೆಳ್ತಂಗಡಿಯಿಂದ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳದಿಂದ ಟಿ.ಜಿ.ರಾಜಾರಾಮ್ ಭಟ್, ಮಂಗಳೂರಿನಿಂದ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಭಾಸ್ಕರ ಕೋಟ್ಯಾನ್, ವಾದಿರಾಜ ಶೆಟ್ಟಿ, ವಿನಯಕುಮಾರ್ ಸೂರಿಂಜೆ, ಉಡುಪಿಯಿಂದ ದೇವಿಪ್ರಸಾದ್ ಶೆಟ್ಟಿ,

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ ಆಡಳಿತ ಮಂಡಳಿಗೆ ಶಶಿಕುಮಾರ್ ರೈ ಬಾಲ್ಯೊಟ್ಟು ಅವಿರೋಧ ಆಯ್ಕೆ | ಸತತ ಮೂರನೇ ಬಾರಿಗೆ ಆಯ್ಕೆ Read More »

ಲೋಕಸಭೆ ಚುನಾವಣೆ | ಕಾಸರಗೋಡು ಕ್ಷೇತ್ರದಿಂದ ಸಮರ್ಥ ಅಭ್ಯರ್ಥಿ, ವಿದ್ಯಾವಂತೆ ಅಶ್ವಿನಿ ಎಂ.ಎಲ್.ಗೆ ಟಿಕೇಟ್

ಕಾಸರಗೋಡು ಲೋಕಸಭಾ ಕ್ಷೇತ್ರದ‌ ಸಮರ್ಥ ಅಭ್ಯರ್ಥಿಯಾಗಿ‌ ಅಶ್ವಿನಿ ಎಂ.ಎಲ್ ಅವರ ಹೆಸರು ಘೋಷಣೆ ಆಗಿದೆ.. ಈ ಮೂಲಕ ಒಂದು ವಿದ್ಯಾವಂತ, ಚುರುಕಾದ ಅಭ್ಯರ್ಥಿಯೊಬ್ಬರು ಕಾಸರಗೋಡಿಗೆ ಸಿಕ್ಕಿದ್ದಾರೆ. ಬೆಂಗಳೂರಿನಲ್ಲಿ ಬೆಳೆದು ಮಂಜೇಶ್ವರದ ಸೊಸೆಯಾಗಿ ಬಂದು, ಮಂಜೇಶ್ವರ ವರ್ಕಾಡಿಯ ಖಾಸಗಿ ಶಾಲೆಯಲ್ಲಿ ಅಧ್ಯಾಪಕಿ ವೃತ್ತಿಯಲ್ಲಿ ತೊಡಗಿಸಿಕೊಂಡು ಮಂಜೇಶ್ವರದ ಹಿಂದುಳಿದ ಸಾಮಾಜಿಕ ಸ್ಥಿತಿಗತಿಗಳನ್ನು ಮನಗಂಡು ‌ಸಮಾಜ ಸೇವೆಗೆ ಇಳಿಯಬೇಕೆಂಬ ತುಡಿತದಿಂದ ಸಮಾಜ ಸೇವೆಗೆ ರಾಜಕೀಯ ಶಕ್ತಿಯೂ ಜೊತೆಗಿರಬೇಕು ಎಂಬ ಆಲೋಚನೆಯಿಂದ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಪಡೆದು ಜನರ ಬಳಿಗೆ ತೆರಳಿದವರು

ಲೋಕಸಭೆ ಚುನಾವಣೆ | ಕಾಸರಗೋಡು ಕ್ಷೇತ್ರದಿಂದ ಸಮರ್ಥ ಅಭ್ಯರ್ಥಿ, ವಿದ್ಯಾವಂತೆ ಅಶ್ವಿನಿ ಎಂ.ಎಲ್.ಗೆ ಟಿಕೇಟ್ Read More »

ನಿರ್ಮಾಣ ಹಂತದ ಮನೆ ಮೇಲಿನಿಂದ ಬಿದ್ದು ಮೃತ್ಯು !

ಉಪ್ಪಿನಂಗಡಿ: ವ್ಯಕ್ತಿಯೋರ್ವರು ನಿರ್ಮಾಣ ಹಂತದ ಮನೆ ಮೇಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕರ್ವೇಲು ಎಂಬಲ್ಲಿ ಇಂದು ನಡೆದಿದೆ. ಕರ್ವೇಲು ನಿವಾಸಿ ಮುಹಮ್ಮದ್ ಮುಸ್ತಾಫ (35) ಮೃತಪಟ್ಟವರು. ಮುಹಮ್ಮದ್ ಅವರು ಮನೆಯೊಂದನ್ನು ನಿರ್ಮಿಸುತ್ತಿದ್ದು, ಕಾರ್ಮಿಕರೊಂದಿಗೆ ಸೇರಿ ಮನೆ ಕೆಲಸದಲ್ಲಿ ತೊಡಗಿದ್ದರು. ಇಂದು ಮನೆ ಮೇಲೆ ನೀರು ಹಾಕುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಬಿದ್ದಿದ್ದು ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಮೃತರು ಪತ್ನಿ, ಗಂಡು, ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರ್ಮಾಣ ಹಂತದ ಮನೆ ಮೇಲಿನಿಂದ ಬಿದ್ದು ಮೃತ್ಯು ! Read More »

ಚಾರ್ವಾಕ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದಿಂದ ಮೇಳೈಸಿದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ, ಮನೋರಂಜನಾ ಕ್ರೀಡೆ

ಚಾರ್ವಾಕ: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದ ನೇತೃತ್ವದಲ್ಲಿ ಪುತ್ತೂರು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಕಾರದೊಂದಿಗೆ 4ನೇ ವರ್ಷದ ಅಂತರಾಜ್ಯ ಮತ್ತು ಕಾಲೇಜು ವಿಭಾಗ ಹಾಗೂ ವಲಯ ಮಟ್ಟದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ ಮತ್ತು ಮನೋರಂಜನಾ ಕ್ರೀಡೆ ಶನಿವಾರ ನಡೆಯಿತು. ಮುಖ್ಯ ಅತಿಥಿಯಾಗಿ ಚಾರ್ವಾಕ ಕುಮಾರಧಾರ ಫಾರ್ಮ್ಸ ನ ವಿಜಯಕುಮಾರ್ ಸೊರಕೆ ವಿಜಯ ಕುಮಾರ್ ಸೊರಕೆ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ದೈಪಿಲ ಕ್ರೀಡಾ ಸೇವಾ

ಚಾರ್ವಾಕ ಶ್ರೀ ಕ್ಷೇತ್ರ ದೈಪಿಲ ಕ್ರೀಡಾ ಸೇವಾ ಸಂಘದಿಂದ ಮೇಳೈಸಿದ ಹೊನಲು ಬೆಳಕಿನ ಮಹಾ ಹಗ್ಗಜಗ್ಗಾಟ, ಮನೋರಂಜನಾ ಕ್ರೀಡೆ Read More »

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ “ಕಂಬಳ”ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡುವ ನಿಟ್ಟಿನಲ್ಲಿ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ ಬಂಟ್ವಾಳದಲ್ಲಿ ನಡೆದ  ಹದಿಮೂರನೇ ವರ್ಷದ ಹೊನಲು ಬೆಳಕಿನ “ಮೂಡೂರು- ಪಡೂರು” ಜೋಡುಕರೆ ಬಯಲು ಕಂಬಳವನ್ನು ವೀಕ್ಷಿಸಲು ಕಾಲೇಜಿನ  ಪ್ರಥಮ ಬಿ ಎ,  ಬಿ ಎಸ್ ಡಬ್ಲ್ಯೂ 

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ Read More »

ಸಾಹಿತ್ಯಿಕವಾಗಿ ಪುತ್ತೂರು ಒಂದು ಸಾಹಿತ್ಯಕಾಶಿ : ಪುತ್ತೂರು ಉಮೇಶ್ ನಾಯಕ್

ಪುತ್ತೂರು: ಸಾಹಿತ್ಯಿಕವಾಗಿ ಬಹಳ ಸಮೃದ್ಧ ಮತ್ತು ಫಲ ಭರಿತವಾದ ಕ್ಷೇತ್ರ ಪುತ್ತೂರು. ಇದಕ್ಕೆ ಬಹಳ ಹಿಂದಿನ ಒಂದು ಸಾಕ್ಷಿ ಅಥವಾ ಎಲ್ಲರೂ ತಿಳಿದಿರುವಂತಹ ಹಾಗೂ ನೋಡಿರುವಂತಹ ಹಿರಿಯ ಸಾಹಿತಿಗಳು ಇಲ್ಲಿ ಮಾಡಿರುವಂತಹ ಕೃಷಿ ಇದಕ್ಕೆ ಪೂರಕವಾದ ಅಂಶವಾಗಿದೆ. ಅನೇಕ ಸಾಹಿತಿಗಳು ಇಲ್ಲಿಗೆ ಬಂದು ಸಾಹಿತ್ಯ ಕೃಷಿಯನ್ನು ಮಾಡಿ ಪ್ರಶಸ್ತಿಯನ್ನು ಪಡೆದು ಪುತ್ತೂರಿಗೆ ಗೌರವವನ್ನು ತಂದಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕಿನ ಅಧ್ಯಕ್ಷ ಉಮೇಶ್ ನಾಯಕ್ ಹೇಳಿದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು

ಸಾಹಿತ್ಯಿಕವಾಗಿ ಪುತ್ತೂರು ಒಂದು ಸಾಹಿತ್ಯಕಾಶಿ : ಪುತ್ತೂರು ಉಮೇಶ್ ನಾಯಕ್ Read More »

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ರಫೀಕ್‍ ನಿಧನ

ಪುತ್ತೂರು : ಹಲವು ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೂರ್ನಡ್ಕ ಮರೀಲ್ ನಿವಾಸಿ ರಫೀಕ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟವರು. ರಫೀಕ್ ಅವರು ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದ ಬಳಿ ಎ.ಎಂ. ಕಾಂಪ್ಲೆಕ್ಸ್ ನಲ್ಲಿ SKY ಮೊಬೈಲ್ ಅಂಗಡಿಯನ್ನು ಹೊಂದಿದ್ದರು. ಜತೆಗೆ ರಿಕ್ಷಾ ಚಾಲಕರಾಗಿ ದುಡಿಯುತಿದ್ದರು. ಹಲವು ದಿನಗಳ ಹಿಂದೆ ಕೂರ್ನಡ್ಕ ಸಮೀಪ ಅಟೋರಿಕ್ಷಾ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ

ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ರಫೀಕ್‍ ನಿಧನ Read More »

error: Content is protected !!
Scroll to Top