ಭಾರತೀಯ ದಂಡ ಸಂಹಿತೆಯ ಹೊಸ ಕ್ರಿಮಿನಲ್ ಕಾಯಿದೆಗಳು ಜಾರಿಗೆ | ಮುಂದಿನ ಜುಲೈ 1 ರಂದು ಜಾರಿಗೆ

ಹೊಸದಿಲ್ಲಿ: ಇಂಡಿಯನ್ ಪೀನಲ್ ಕೋಡ್ ಅಥವಾ ಭಾರತೀಯ ದಂಡ ಸಂಹಿತೆಯ ಸ್ಥಾನವನ್ನು ತುಂಬಲಿರುವ ಹೊಸ ಕ್ರಿಮಿನಲ್ ಕಾಯಿದೆಗಳು ಜಾರಿಗೆ ಬರಲಿವೆ.. ಈ ವರ್ಷದ ಜುಲೈ 1 ರಂದು ಜಾರಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ಇಂದು ಘೋಷಿಸಿದೆ. ಭಾರತೀಯ ನ್ಯಾಯ ಸಂಹಿತ, ಭಾರತೀಯ ನಾಗರಿಕ ಸುರಕ್ಷಾ ಸಂಹಿತ ಮತ್ತು ಭಾರತೀಯ ಸಾಕ್ಷ್ಯ ಮಸೂದೆಗಳು ಇಂಡಿಯನ್ ಪೀನಲ್ ಕೋಡ್ 1860, ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜ‌ರ್ 1973 ಮತ್ತು ಭಾರತೀಯ ಪುರಾವೆ ಕಾಯ್ದೆ 1872 ಇವುಗಳ ಸ್ಥಾನದಲ್ಲಿ ಜಾರಿಗೆ […]

ಭಾರತೀಯ ದಂಡ ಸಂಹಿತೆಯ ಹೊಸ ಕ್ರಿಮಿನಲ್ ಕಾಯಿದೆಗಳು ಜಾರಿಗೆ | ಮುಂದಿನ ಜುಲೈ 1 ರಂದು ಜಾರಿಗೆ Read More »

ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು

ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಭಾನುವಾರ ಮುಂಜಾನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೂಲತಃ ಫರಂಗಿಪೇಟೆ ಸಮೀಪದ ಅಮ್ಮೆಮಾ‌ರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು – ಆಲಡ್ಕ ವಾಸ್ತವ್ಯವಿರುವ ಆಶ್ರಫ್ (32) ಮೃತಪಟ್ಟ ಯುವಕ. ಆಲಡ್ಕ ನಿವಾಸಿ ತಸ್ವೀ‌ರ್ ಆಶ್ರಫ್‌ ಅವರ ಸ್ನೇಹಿತರಾಗಿದ್ದು, ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಸ್ನೇಹಿತನಿಗೆ ಡ್ರಾಫ್ ಕೊಡುವ ಉದ್ದೇಶದಿಂದ ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡಿಗೆ ತೆರಳಿದ್ದು ಬೆಳಿಗ್ಗೆ ಸುಮಾರು 5.30

ಲಾರಿ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತ್ಯು Read More »

ಗುಜರಾತಿನಲ್ಲಿ ಸುದರ್ಶನ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ | ಭಾರತದ ಅತೀ ಉದ್ದದ ಕೇಬಲ್ ಸೇತುವೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ತನ್ನ ತವರು ರಾಜ್ಯವಾದ ಗುಜರಾತಿನಲ್ಲಿ ಇಂದು ಸುದರ್ಶನ ಕೇಬಲ್ ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈ 2.5 ಕಿ.ಮೀ ಉದ್ದದ ಸೇತುವೆ ಭಾರತದಅತಿ ಉದ್ದದ ಕೇಬಲ್ ಸೇತುವೆಯಾಗಿದೆ. ಸುದರ್ಶನ ಸೇತುವೆಯನ್ನು ಸುಮಾರು 980 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಓಖಾ-ಬೆಟ್ ದ್ವಾರಕಾ ಸಿಗ್ನಚರ್‌ ಸೇತುವೆ ಎಂದೂ ಕರೆಯಲಾಗುತ್ತದೆ. ಈ ಸೇತುವೆಯು ದ್ವಾರಕಾಧೀಶ ದೇವಸ್ಥಾನಕ್ಕೆ ಭೇಟಿ ನೀಡುವವರಿಗೆ ಅನುಕೂಲಕರವಾಗಿದೆ. ಓಖಾ ಮುಖ್ಯ ಭೂಭಾಗವನ್ನು ಬೆಟ್‌ ದ್ವಾರಕಾ ದ್ವೀಪಕ್ಕೆ ಸಂಪರ್ಕಿಸುವ ಸುದರ್ಶನ್ ಸೇತುವೆ ಈ ಪ್ರದೇಶದ ಸಂಪರ್ಕಕ್ಕೆ

ಗುಜರಾತಿನಲ್ಲಿ ಸುದರ್ಶನ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ | ಭಾರತದ ಅತೀ ಉದ್ದದ ಕೇಬಲ್ ಸೇತುವೆ Read More »

ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ತುಳಸಿಕಟ್ಟೆ ಪ್ರತಿಷ್ಠೆ | ಎಸ್.ಕೆ.ಜಿ.ಐ. ಸೊಸೈಟಿಯ ವಜ್ರ ಮಹೋತ್ಸವ ಅಂಗವಾಗಿ ಕೊಡುಗೆಯಾಗಿ ನೀಡಿದ ಸ್ಟೈನ್’ಲೆಸ್ ಸ್ಟೀಲ್ ಸಿಂಕ್ ಉದ್ಘಾಟನೆ

ಪುತ್ತೂರು: ಬೊಳುವಾರು ವಿಶ್ವಕರ್ಮ ಸಭಾಭವನಕ್ಕೆ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಸುಮಾರು 1.5 ಲಕ್ಷ ರೂ. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ ಸ್ಟೈನ್’ಲೆಸ್ ಸ್ಟೀಲ್ ಸಿಂಕ್’ನ ಉದ್ಘಾಟನೆ ಹಾಗೂ ಸ್ಥಳಾಂತರಗೊಂಡ ತುಳಸಿ ಕಟ್ಟೆಯ ಪ್ರತಿಷ್ಠಾಪನಾ ಕಾರ್ಯಕ್ರಮ ಶನಿವಾರ ನಡೆಯಿತು. ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಆನಂದ ಆಚಾರ್ಯ ಅಜ್ಜಿನಡ್ಕ ಮಾತನಾಡಿ, ಸೊಸೈಟಿ ಇಂದು ವಜ್ರ ಮಹೋತ್ಸವದ ಸಂಭ್ರಮದಲ್ಲಿದೆ. ಹಾಗಾಗಿ ಈ ವರ್ಷ

ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ತುಳಸಿಕಟ್ಟೆ ಪ್ರತಿಷ್ಠೆ | ಎಸ್.ಕೆ.ಜಿ.ಐ. ಸೊಸೈಟಿಯ ವಜ್ರ ಮಹೋತ್ಸವ ಅಂಗವಾಗಿ ಕೊಡುಗೆಯಾಗಿ ನೀಡಿದ ಸ್ಟೈನ್’ಲೆಸ್ ಸ್ಟೀಲ್ ಸಿಂಕ್ ಉದ್ಘಾಟನೆ Read More »

ಸಂತ ಫಿಲೋಮಿನಾ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಗಣೇಶ್‌ಭಟ್‌ರವರಿಗೆ ಬೀಳ್ಕೊಡುಗೆ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ 36 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಸೇವಾನಿವೃತ್ತಿ ಹೊಂದಿದ ಉಪಪ್ರಾಂಶುಪಾಲ ಪ್ರೊ| ಗಣೇಶ್‌ಭಟ್‌ರವರಿಗೆ ಕಾಲೇಜಿನ ಸ್ಟಾಫ್‌ಅಸೋಸಿಯೇಶನ್‌ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ ಅತಿ ವಂ| ಲಾರೆನ್ಸ್‌ಮಸ್ಕರೇನಸ್‌ಮಾತನಾಡಿ, ನಿವೃತ್ತಿಯು ಹೊಸ ಜೀವನದ ಬಾಗಿಲನ್ನು ತೆರೆದಿಡುತ್ತದೆ. ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಂತೃಪ್ತ ಜೀವನ ನಡೆಸಲು ಸೇವಾ ನಿವೃತ್ತಿಯು ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಕಾಲೇಜಿನ ಪ್ರಿನ್ಸಿಪಾಲ್ ವಂ| ಡಾ| ಆಂಟೊನಿ ಪ್ರಕಾಶ್‌ಮೊಂತೆರೋರ ಮಾತನಾಡಿ,

ಸಂತ ಫಿಲೋಮಿನಾ ಕಾಲೇಜಿನ ಉಪಪ್ರಾಂಶುಪಾಲ ಪ್ರೊ| ಗಣೇಶ್‌ಭಟ್‌ರವರಿಗೆ ಬೀಳ್ಕೊಡುಗೆ Read More »

ಪುತ್ತೂರು: ಎಸ್‌ಡಿಪಿ ರೆಮಿಡೀಸ್ & ರಿಸರ್ಚ್ ಸೆಂಟರ್‌ ಅರ್ಪಿಸುವ ಕಲೋಪಾಸನಾ’ ಸಾಂಸ್ಕೃತಿಕ ಕಲಾ ಸಂಭ್ರಮಕ್ಕೆ ಚಾಲನೆ

ಪುತ್ತೂರು: ಪರ್ಲಡ್ಕ ಎಸ್‌ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್‌ನ ಆವಣದಲ್ಲಿ ಮೂರು ದಿನಗಳ ಕಾಲ ಸಂಭ್ರಮಿಸಲಿರುವ 20 ನೇ ವರ್ಷದ ಎಸ್‌ಡಿಪಿ ‘ಕಲೋಪಾಸನಾ -2024’ ಸಾಂಸ್ಕೃತಿಕ ಕಲಾ ಸಂಭ್ರಮಕ್ಕೆ ಶನಿವಾರ ಸಂಜೆ ಚಾಲನೆ ನೀಡಲಾಯಿತು. ವಿದ್ವಾನ್ ಸಂದೀಪ್ ನಾರಾಯಣ್ ಚೆನ್ನೈ ಹಾಗೂ ಪಂಡಿತ್ ಜಯತೀರ್ಥ ಮೇವುಂಡಿ ಬೆಂಗಳೂರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಚಾಲನೆ ನೀಡಿದರು. ವಿದ್ವಾನ್ ಸಂದೀಪ್ ನಾರಾಯಣ್ ಚೆನ್ನೈ ಮಾತನಾಡಿ, ಕಳೆದ ಇಪ್ಪತ್ತು ವರ್ಷಗಳಿಂದ ನಿರಂತರವಾಗಿ ಸಂಗೀತದ ಉತ್ತಮ ಕಾರ್ಯಕ್ರಮ ನೀಡುತ್ತಿದ್ದಾರೆ. ಪ್ರತಿ ವರ್ಷ

ಪುತ್ತೂರು: ಎಸ್‌ಡಿಪಿ ರೆಮಿಡೀಸ್ & ರಿಸರ್ಚ್ ಸೆಂಟರ್‌ ಅರ್ಪಿಸುವ ಕಲೋಪಾಸನಾ’ ಸಾಂಸ್ಕೃತಿಕ ಕಲಾ ಸಂಭ್ರಮಕ್ಕೆ ಚಾಲನೆ Read More »

ಅಜಾತಶತ್ರು ಅರಿಯಡ್ಕ ಚಿಕ್ಕಪ್ಪ ನಾಯ್ಕ್ ನವತಿ ಸಂಭ್ರಮಾಚರಣೆ | ಅರಿಯಡ್ಕ ಚಿಕ್ಕಪ್ಪ ನಾಯ್ಕ್ ರಿಗೆ ಸೇವಾರತ್ನ ಬಿರುದಿನೊಂದಿಗೆ ಗೌರವಾರ್ಪಣೆ

ಪುತ್ತೂರು: ಪರಿಪೂರ್ಣ ಜೀವನವನ್ನು ಮೌಲ್ಯಾಧಾರಿತವಾಗಿ ಸಮಾಜದಲ್ಲಿನ ಹಲವಾರು ಸಂಕಷ್ಟಗಳ ನಡುವೆ ನಡೆಸುವುದು ಸುಲಭದ ಕೆಲಸವಲ್ಲ. ಆದರೆ ಅಜಾತಶತ್ರು ಚಿಕ್ಕಪ್ಪ ನಾಯ್ಕ್ ರವರು ಇದಕ್ಕೆ ಹೊರತು ಎಂಬಂತೆ ತನ್ನ ಜೀವನದಲ್ಲಿ ಒಂದು ಸಿದ್ಧಾಂತ ಇಟ್ಟುಕೊಂಡು, ಸಮುದಾಯದ ಬಗ್ಗೆ ಚಿಂತನೆ ಇಟ್ಟುಕೊಂಡು ಬದುಕು ಸಾಗಿಸಿದವರು ಎಂದು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ ಹೇಳಿದರು. ಅವರು ಶನಿವಾರ ಕೊಂಬೆಟ್ಟು ಸುಂದರ ರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಅಜಾತಶತ್ರು ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಸಂಭ್ರಮಾಚರಣೆ ಸಮಿತಿ ವತಿಯಿಂದ

ಅಜಾತಶತ್ರು ಅರಿಯಡ್ಕ ಚಿಕ್ಕಪ್ಪ ನಾಯ್ಕ್ ನವತಿ ಸಂಭ್ರಮಾಚರಣೆ | ಅರಿಯಡ್ಕ ಚಿಕ್ಕಪ್ಪ ನಾಯ್ಕ್ ರಿಗೆ ಸೇವಾರತ್ನ ಬಿರುದಿನೊಂದಿಗೆ ಗೌರವಾರ್ಪಣೆ Read More »

ಹೆಣ್ಣು ಗಂಡಿನ ನಡುವೆ ಲಿಂಗಾನುಪಾತ ಅಪಾಯಕಾರಿಯಾಗಿದೆ | ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ದೇಶದಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳ ನಡುವಿನ ನಡುವೆ ಅನುಪಾತ ಹೆಚ್ಚಾಗಿದ್ದು ಇದು ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪುತ್ತೂರಿನ ಸಂತ ವಿಕ್ಟರನ ಬಾಲಿಕಾ ಪ್ರೌಢ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ದಿ ಯೋಜನೆ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ ಆಶ್ರಯದಲ್ಲಿ ನಡೆದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ವಿದ್ಯಾವಂತ ಹೆಣ್ಣು ಮಕ್ಕಳು ಅಧಿಕವಾದರೆ ಮಾತ್ರ ನಮ್ಮ ದೇಶ ಅಭಿವೃದ್ದಿಯತ್ತ

ಹೆಣ್ಣು ಗಂಡಿನ ನಡುವೆ ಲಿಂಗಾನುಪಾತ ಅಪಾಯಕಾರಿಯಾಗಿದೆ | ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ Read More »

ಜಡ್ಜ್ ಹುದ್ದೆಗೇರಿದ ಮಂಗಳೂರಿನ ವಕೀಲೆ ಗೀತಾ ಡಿ. | 2023 ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆ

ಮಂಗಳೂರು: ಮಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟಿಸ್ ಮಾಡುತ್ತಿದ್ದ ಗೀತಾ ಡಿ. 2023ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಜಡ್ಜ್ ಹುದ್ದೆಗೇರಿದ್ದಾರೆ. ಮೂಲತಃ ತುಮಕೂರು ಜಿಲ್ಲೆ ನಿವಾಸಿಯಾದ ಗೀತಾ ಅವರು, ಚಿಕ್ಕಮಗಳೂರಿನಲ್ಲಿ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಜಡ್ಜ್ ಆಗಿ ನಿವೃತ್ತರಾಗಿದ್ದ ಡಿ. ಕಂಬೇಗೌಡ ಅವರ ಪುತ್ರಿ. ಮೂಡುಬಿದ್ರೆ  ಆಳ್ವಾಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಗೀತಾ ಅವರು, ಮಂಗಳೂರಿನ ಎಸ್ ಡಿ ಎಂ ಕಾನೂನು ಕಾಲೇಜಿನಲ್ಲಿ ಎಲ್ ಎಲ್ ಬಿ ಪದವಿ ಗಳಿಸಿದ್ದರು.

ಜಡ್ಜ್ ಹುದ್ದೆಗೇರಿದ ಮಂಗಳೂರಿನ ವಕೀಲೆ ಗೀತಾ ಡಿ. | 2023 ನೇ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ತೇರ್ಗಡೆ Read More »

ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ತೇಜಸ್ವಿನಿ ಕಟ್ಟಪುಣಿ

ಸುಳ್ಯ: ಭಾರತೀಯ ಜನತಾ ಪಾರ್ಟಿ – ಸುಳ್ಯ ಮಂಡಲದ ನೂತನ ಕಾರ್ಯದರ್ಶಿಯಾಗಿ ತೇಜಸ್ವಿನಿ ಕಟ್ಟಪುಣಿ ಆಯ್ಕೆಯಾಗಿದ್ದಾರೆ. ತಾಲೂಕು ಪಂಚಾಯಿತಿ ಮಾಜಿ ಸದಸ್ಯೆಯಾಗಿರುವ ತೇಜಸ್ವಿನಿ ಸುಳ್ಯ ಮಂಡಲದ ಮಾಹಿಳಾ ಮೋರ್ಚದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ತೇಜಸ್ವಿನಿ ಕಟ್ಟಪುಣಿಯವರಿಗೆ ಸುಳ್ಯ ಬಿಜೆಪಿ ಅಭಿನಂದನೆ ಸಲ್ಲಿಸಿದೆ.

ಸುಳ್ಯ ಬಿಜೆಪಿ ಮಂಡಲ ಕಾರ್ಯದರ್ಶಿಯಾಗಿ ತೇಜಸ್ವಿನಿ ಕಟ್ಟಪುಣಿ Read More »

error: Content is protected !!
Scroll to Top