ಫೆ.22-28 : ‘ಇರ್ದೆ-ಪಳ್ಳಿತ್ತಡ್ಕ’ ದರ್ಗಾ ಶರೀಫ್‍ನಲ್ಲಿ 48ನೇ ಉರೂಸ್ ಮುಬಾರಕ್

ಪುತ್ತೂರು: ಸುಮಾರು 400 ವರ್ಷಗಳ ಇತಿಹಾಸ ಹೊಂದಿರುವ, ಶಾಂತಿ ಸೌಹಾರ್ದತೆಯ ಶ್ರದ್ಧಾ ಕೇಂದ್ರ ‘ಇರ್ದೆ-ಪಳ್ಳಿತ್ತಡ್ಕ’ ದರ್ಗಾ ಶರೀಫ್‍ನಲ್ಲಿ 48ನೇ ಉರೂಸ್ ಮುಬಾರಕ್ ಫೆ. 22 ರಿಂದ 28 ರ ತನಕ ನಡೆಯಲಿದೆ ಎಂದು ದರ್ಗಾ ಶಾರೀಫ್‍ನ ಆಲಿ ಕುಂಞಿ ಕೊರಿಂಗಿಲ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಲಿಯುಲ್ಲಾಗಿ ಅವರ ಹೆಸರಿನಲ್ಲಿ ನಡೆಸಿಕೊಂಡು ಬರುತ್ತಿರುವ ಉರೂಸ್ ಆಚರಣೆಯಲ್ಲಿ ದೇಶದ ನಾನಾ ಭಾಗದ ಜನರು ಮೇಳೈಸುತ್ತಾರೆ. ದಕ್ಷಿಣ ಭಾರತದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದ್ದು, ಹಿಂದೂ ಮತ್ತು ಮುಸಲ್ಮಾನ ಸೌಹಾರ್ದತೆಯ […]

ಫೆ.22-28 : ‘ಇರ್ದೆ-ಪಳ್ಳಿತ್ತಡ್ಕ’ ದರ್ಗಾ ಶರೀಫ್‍ನಲ್ಲಿ 48ನೇ ಉರೂಸ್ ಮುಬಾರಕ್ Read More »

ಬಿಜೆಪಿ ಒಬಿಸಿ ಮೋರ್ಚಾದ ಪದಗ್ರಹಣ | ನೂತನ ಪದಾಧಿಕಾರಿಗಳಿಗೆ ಘೋಷಣ ಪತ್ರ ಹಸ್ತಾಂತರಿಸಿದ ರಘು ಕೌಟಿಲ್ಯ

ಬೆಂಗಳೂರು: ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು. ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ರಾಜ್ಯ ಬಿಜೆಪಿ  ಕಾರ್ಯದರ್ಶಿ ಆರ್. ಸಿ. ನಾರಾಯಣ್ ಸೇರಿದಂತೆ ಪದಾಧಿಕಾರಿಗಳಿಗೆ ಘೋಷಣಾ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ಬಿಜೆಪಿ ರಾಜ್ಯಾಧ್ಯಕ್ಷರಾದ  ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಹೊಸ ಶಕೆಯನ್ನು ಆರಂಭ ಮಾಡಿದೆ. ಕಾರ್ಯಕರ್ತರಲ್ಲಿ

ಬಿಜೆಪಿ ಒಬಿಸಿ ಮೋರ್ಚಾದ ಪದಗ್ರಹಣ | ನೂತನ ಪದಾಧಿಕಾರಿಗಳಿಗೆ ಘೋಷಣ ಪತ್ರ ಹಸ್ತಾಂತರಿಸಿದ ರಘು ಕೌಟಿಲ್ಯ Read More »

ಫೆ.21-22 : ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ, ಪರಿವಾರ ದೈವಗಳ ನೇಮ ನಡಾವಳಿ

ಪುತ್ತೂರು: ಬನ್ನೂರು ಗ್ರಾಮದ ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ ಮತ್ತು ಪರಿವಾರ ದೈವಗಳ ನಡಾವಳಿ ಫೆ.21 ಹಾಗೂ 22 ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಧರ್ಮ ನಡಾವಳಿ ಅಂಗವಾಗಿ ಫೆ.21 ರಂದು ಬೆಳಿಗ್ಗೆ 8 ಕ್ಕೆ ಗಣಹೋಮ, ಸಂಜೆ 4 ಕ್ಕೆ ದುಗಲಾಯ, ಧರ್ಮದೈವ ಹಾಗೂ ಪರಿವಾರ ದೈವಗಳ ಭಂಡಾರ ತೆಗೆಯುವುದು. ಸಂಜೆ 6 ಕ್ಕೆ ದುಗಲಾಯ ದೈವದ ನೇಮ, ರಾತ್ರಿ 9 ಕ್ಕೆ ಅನ್ನಸಂತರ್ಪಣೆ, ವರ್ಣಾರ ಪಂಜುರ್ಲಿ, ಜಾವತೆ, ಕಲ್ಲುರ್ಟಿ, ಕುಪ್ಪೆ ಪಂಜುರ್ಲಿ,

ಫೆ.21-22 : ಕುಂಟ್ಯಾನ ಕುಟುಂಬದ ದುಗಲಾಯ, ಧರ್ಮದೈವ ರುದ್ರಾಂಡಿ, ಪರಿವಾರ ದೈವಗಳ ನೇಮ ನಡಾವಳಿ Read More »

ಯುವಕ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ | ಪಾರು ಮಾಡಿದ ಸ್ಥಳೀಯರು

ಬಂಟ್ವಾಳ: ಪುತ್ತೂರಿನ ಯುವಕನೋರ್ವ ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ. ಆನಂದ ಎಂಬವರ ಪುತ್ರ ನಿಶ್ಚಿತ್ (25) ಆತ್ಮಹತ್ಯೆಗೆ ಯತ್ನಿಸಿದಾತ. ಪದವೀಧರನಾಗಿದ್ದರೂ ನಿರುದ್ಯೋಗಿಯಾಗಿರುವ ಆತ ಸೂಕ್ತ ಉದ್ಯೋಗ ಸಿಗದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಸೋಮವಾರ ದ್ವಿಚಕ್ರದಲ್ಲಿ ಬಂದಾತ ನದಿಗೆ ಹಾರುವ ಸಿದ್ಧತೆಯಲ್ಲಿದ್ದಾಗ ಸ್ಥಳೀಯ ನಿವಾಸಿಗಳಾದ  ಹನೀಫ್, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್, ತಸ್ಲಿಂ, ಮುಖ್ತಾರ್, ಪಿ.ಎಂ.ಆರೀಫ್ ಎಂಬವರು ಗಮನಿಸಿ ಆತ್ಮಹತ್ಯೆ ಯತ್ನವನ್ನು ಮೊಟಕುಗೊಳಿಸಿ ಪಾರು ಮಾಡಿದ್ದಾರೆ. ಬಳಿಕ

ಯುವಕ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ | ಪಾರು ಮಾಡಿದ ಸ್ಥಳೀಯರು Read More »

ಮುಂದಿನ ಲೋಕಸಭಾ ಚುನಾವಣೆಗೆ ದೇಶದ 60 ಕಡೆಗಳಲ್ಲಿ ಸ್ಪರ್ಧೆ | ಪತ್ರಿಕಾಗೋಷ್ಠಿಯಲ್ಲಿ ಎಸ್‍. ಡಿ. ಪಿ. ಐ. ಪಕ್ಷದ ಇಬ್ರಾಹಿಂ ಸಾಗರ್

ಪುತ್ತೂರು: ಎಸ್‍.ಡಿ.ಪಿ.ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಾರ್ಯಕರ್ತರ ಸಮಾವೇಶ ಫೆ.20 ರಂದು ಸಂಜೆ 7 ಗಂಟೆಗೆ ಪುತ್ತೂರು ಲಯನ್ಸ್ ಕ್ಲಬ್‍ ಸಭಾಂಗಣದಲ್ಲಿ ನಡೆಯಲಿದೆ ಎಂದು ಎಸ್‌. ಡಿ. ಪಿ. ಐ. ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಬ್ರಾಹಿಂ ಸಾಗ‌ರ್ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಸಕ್ತ ದೇಶದಲ್ಲಿ ಸಂವಿಧಾನ ವಿರೋಧಿ ಆಡಳಿತದಿಂದಾಗಿ ಪ್ರಜಾಪ್ರಭುತ್ವವು ಅಪಾಯದತ್ತ ಸಾಗುತ್ತಿರುವುದಲ್ಲದೆ ಪ್ರಸಕ್ತ ರಾಜ್ಯ ಸರಕಾರವು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಸಮಾಜದಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುತ್ತಾ ಬರುತ್ತಿದ್ದು ಪಕ್ಷದ ಕಾರ್ಯಕರ್ತರನ್ನು

ಮುಂದಿನ ಲೋಕಸಭಾ ಚುನಾವಣೆಗೆ ದೇಶದ 60 ಕಡೆಗಳಲ್ಲಿ ಸ್ಪರ್ಧೆ | ಪತ್ರಿಕಾಗೋಷ್ಠಿಯಲ್ಲಿ ಎಸ್‍. ಡಿ. ಪಿ. ಐ. ಪಕ್ಷದ ಇಬ್ರಾಹಿಂ ಸಾಗರ್ Read More »

ಫೆ.21-22 : ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಪುತ್ತೂರು: ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಫೆ.21 ಹಾಗೂ 22 ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ಅಯೋಧ್ಯಾನಗರ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬ್ರಹ್ಮಕಲಶೋತ್ಸವದ ಅಂಗವಾಗಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.21 ಬುಧವಾರ ಬೆಳಿಗ್ಗೆ 11 ಕ್ಕೆ ಹಸಿರುವಾಣಿ ಸಮರ್ಪಣೆ, ಸಂಜೆ 7 ರಿಂದ

ಫೆ.21-22 : ಬನ್ನೂರು ಆನೆಮಜಲು  ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ Read More »

ಬಸ್-ಬೈಕ್ ಡಿಕ್ಕಿ | ಬೈಕ್ ಸವಾರ ಗಂಭೀರ

ಕಡಬ: ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಮರ್ದಾಳದಲ್ಲಿ ಸೋಮವಾರ ನಡೆದಿದೆ. ಕಡಬ ತಾಲೂಕಿನ ಕೊಂಬಾರು ಮಣಿಭಾಂಡದ ಮೆಕ್ಯಾನಿಕ್ ವಾಸು ಗಾಯಗೊಂಡ ಬೈಕ್ ಸವಾರ. ಕೆಎಸ್‍ ಆರ್‍ ಟಿಸಿ ಬಸ್ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್‍ ಗೆ ಡಿಕ್ಕಿ ಹೊಡೆದಿದೆ. ಎನ್ನಲಾಗಿದೆ. ಗಂಭೀರ ಗಾಯಗೊಂಡ ಬೈಕ್‍ ಸವಾರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಬಸ್-ಬೈಕ್ ಡಿಕ್ಕಿ | ಬೈಕ್ ಸವಾರ ಗಂಭೀರ Read More »

ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ | ಚರ್ಚೆಗೆ ಗ್ರಾಸವಾದ ಸಿ.ಎಂ. ಸಿದ್ಧರಾಮಯ್ಯ ಹೇಳಿಕೆ

ಬೆಂಗಳೂರು: ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ. ಹೀಗೆಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಚರ್ಚೆಗೆ ಕಾರಣವಾಗಿದ್ದಾರೆ. ತನ್ನ ಸರಕಾರದಲ್ಲೂ ಭ್ರಷ್ಟಾಚಾರ ಇದೆ ಎಂಬುದನ್ನು ಸಿದ್ಧರಾಮಯ್ಯ ಒಪ್ಪಿಕೊಂಡಂತಾಗಿದೆ ಎಂದು ಹಲವರು ಈ ಹೇಳಿಕೆಯನ್ನು ವಿಶ್ಲೇಷಿಸಿದ್ದಾರೆ. ಭ್ರಷ್ಟಾಚಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ಧರಾಮಯ್ಯ, ಭ್ರಷ್ಟಾಚಾರ ಇಲ್ಲ ಎಂದು ಯಾರು ಹೇಳಿದರು? ಭ್ರಷ್ಟಾಚಾರ ಮುಕ್ತವಾಗುವುದು ಅಸಾಧ್ಯ. ಎಲ್ಲದರಲ್ಲೂ ಕಪ್ಪುಕುಳಗಳು ಇದ್ದೇ ಇರುತ್ತವೆ, ಆದರೆ ಅಂತಹದ್ದನ್ನು ಗುರುತಿಸಿ, ಶಿಕ್ಷಿಸಲಾಗುತ್ತದೆ ಎಂದಿದ್ದಾರೆ. ಬಿಜೆಪಿ ಭ್ರಷ್ಟಾಚಾರ ಮಾಡಿದೆ, ಶೇ.40 ಕಮಿಷನ್ ಎಂದೆಲ್ಲ ಆರೋಪಗಳನ್ನು

ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ | ಚರ್ಚೆಗೆ ಗ್ರಾಸವಾದ ಸಿ.ಎಂ. ಸಿದ್ಧರಾಮಯ್ಯ ಹೇಳಿಕೆ Read More »

ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ, ಖ್ಯಾತ ಕಾದಂಬರಿಕಾರ ಕೆ. ಟಿ. ಗಟ್ಟಿ ನಿಧನ

ಮಂಗಳೂರು: ಕಾದಂಬರಿಕಾರ, ಭಾಷಾತಜ್ಞ, ಪ್ರಾಧ್ಯಾಪಕ, ಹಿರಿಯ ಸಾಹಿತಿ  ಕೆ. ಟಿ. ಗಟ್ಟಿ (86) ನಿಧನ ರಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪಡೆದಿರುವ ಖ್ಯಾತ ಕಾದಂಬರಿಕಾರ ಅದರಲ್ಲೂ ಪತ್ರಿಕಾ ಕಾದಂಬರಿಗಳ ಮೂಲಕ ಹೆಸರುವಾಸಿಯಾಗಿದ್ದರು. ಅವರು ಮೂಲತಃ ಕಾಸರಗೋಡಿನ ಕೂಡ್ಲುವಿನಲ್ಲಿ 1938 ರಲ್ಲಿ ಜನಿಸಿದ್ದರು. 1957 ರಿಂದಲೇ ಸಾಹಿತ್ಯ ಕೃಷಿ ಪ್ರಾರಂಭಿಸಿದ ಗಟ್ಟಿಯವರಿಗೆ ತಂದೆ ತಾಯಿಗಳೇ ಪ್ರೇರಣೆ. ವೃತ್ತಿಯಲ್ಲಿ ಕೃಷಿಕರಾದರೂ ಯಕ್ಷಗಾನ ಪ್ರಿಯರಾದ ಧೂಮಪ್ಪನವರು ಕೂಡ್ಲು ಯಕ್ಷಗಾನ ನಾಟಕ ಮಂಡಳಿಯೊಡನೆ ಊರೂರು ಸುತ್ತುತ್ತಿದ್ದು, ಸಿಕ್ಕಿದ ಪುಸ್ತಕಗಳನ್ನು ಮನೆಗೆ

ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ, ಖ್ಯಾತ ಕಾದಂಬರಿಕಾರ ಕೆ. ಟಿ. ಗಟ್ಟಿ ನಿಧನ Read More »

ಕಾರು ಪಲ್ಟಿ : ಪ್ರಯಾಣಿಕರು ಅಪಾಯದಿಂದ ಪಾರು

ಪುತ್ತೂರು: ಕಾರೊಂದು ಪಲ್ಟಿಯಾದ ಘಟನೆ ಕೌಡಿಚ್ಚಾರು ಬಳಿ ಇಂದು ಮುಂಜಾನೆ ನಡೆದಿದೆ. ಅಲ್ವಿನ್ ಡಿ’ಸೋಜಾ ಹಾಗೂ ಕಾರ್ತಿಕ್ ಶೆಟ್ಟಿ ಕಾರ್ಕಳ ಎಂಬವರು ಮಡಿಕೇರಿ ಕಡೆಯಿಂದ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ತಕ್ಷಣ ಸಾರ್ವಜನಿಕರು ರಕ್ಷಿಸಿದ್ದಾರೆ ಎನ್ನಲಾಗಿದೆ. ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಭೇಟಿ ನೀಡಿ ಸಹಕರಿಸಿದರು.

ಕಾರು ಪಲ್ಟಿ : ಪ್ರಯಾಣಿಕರು ಅಪಾಯದಿಂದ ಪಾರು Read More »

error: Content is protected !!
Scroll to Top