ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನ | ಪುತ್ತೂರಿನಿಂದ ಹೊರಟಿತು ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ

ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ ನಲ್ಲಿ ಫೆ.18 ಹಾಗೂ 19 ರಂದು ನಡೆಯಲಿರುವ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ’, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಪುತ್ತೂರಿನಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ಶುಕ್ರವಾರ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಹೊರೆಕಾಣಿಕೆ ಸಮಿತಿ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ, ಗೌರವ ಸಲಹೆಗಾರರು ಸವಣೂರು ಸೀತಾರಾಮ ರೈ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೊರೆಕಾಣಿಕೆ ಸಮಿತಿ ಕಾರ್ಯಾಧ್ಯಕ್ಷ […]

ಫೆ.18-19 : ಒಡಿಯೂರು ಕ್ಷೇತ್ರದಲ್ಲಿ ತುಳುನಾಡ ಜಾತ್ರೆ ‘ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನ | ಪುತ್ತೂರಿನಿಂದ ಹೊರಟಿತು ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ Read More »

ಪಾಂಗ್ಲಾಯಿ ನಿವಾಸಿ ಹೇಮಚಂದ್ರ ಆಚಾರ್ಯ ನಿಧನ

ಪುತ್ತೂರು: ಇಲ್ಲಿಯ ಪಾಂಗ್ಲಾಯಿ ನಿವಾಸಿ ಹೇಮಚಂದ್ರ ಆಚಾರ್ಯ ಶುಕ್ರವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಪಾಂಗ್ಲಾಯಿ ನಿವಾಸಿ ದಿ. ಮಾಣಿ ಆಚಾರ್ಯ ಅವರ ಪುತ್ರರಾದ ಹೇಮಚಂದ್ರ ಆಚಾರ್ಯ ಆಟೋ ರಿಕ್ಷಾ ಚಾಲಕರಾಗಿದ್ದು, ಕೆ. ಎಸ್‍. ಆರ್‍. ಟಿ. ಸಿ. ಯಲ್ಲೂ ಕೆಲಸ ನಿರ್ವಹಿಸಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಪಾಂಗ್ಲಾಯಿ ನಿವಾಸಿ ಹೇಮಚಂದ್ರ ಆಚಾರ್ಯ ನಿಧನ Read More »

ಫೆ.18: ಪುರುಷರಕಟ್ಟೆ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಉಚಿತ ಗುದಾಗತ ರೋಗಗಳ ತಪಾಸಣೆ ಶಿಬಿರ

ಪುತ್ತೂರು: ಪುರುಷರಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ) ಫೆ.18 ಭಾನುವಾರ ನಡೆಯಲಿದೆ. ಮಧ್ಯಾಹ್ನ 2 ರಿಂದ ಸಂಜೆ 5 ರ ತನಕ ನಡೆಯುವ ಶಿಬಿರದಲ್ಲಿ ಪೈಲ್ಸ್, ಫಿಷರ್, ಫಿಸ್ತುಲ ಮುಂತಾದ ಗುದ ಸಂಬಂಧಿ ರೋಗಗಳು, ಮಲಬದ್ಧತೆ, ಗುದದ್ವಾರದಲ್ಲಿ ಊತ, ನೋವು, ಕೀವು, ತುರಿಕೆ, ರಕ್ತಸ್ರಾವ ಮುಂತಾದ ಲಕ್ಷಣಗಳು ಕಾಣಿಸಿದರೆ ನಿರ್ಲಕ್ಷಿಸದೇ ಕೂಡಲೇ ತಪಾಸಣೆ ಮಾಡಿಕೊಂಡು ಮುಂದೆ ಆಗುವ ಅನೇಕ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬಹುದು.

ಫೆ.18: ಪುರುಷರಕಟ್ಟೆ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ನಲ್ಲಿ ಉಚಿತ ಗುದಾಗತ ರೋಗಗಳ ತಪಾಸಣೆ ಶಿಬಿರ Read More »

ಬಿಜೆಪಿ ನಾಯಕರನ್ನು ಗೂಂಡಾಗಳು ಎಂದ ಸಿಎಂ. ಸಿದ್ಧರಾಮಯ್ಯ | ಭಾರೀ ಆಕ್ರೋಶ

ಬೆಂಗಳೂರು: ಬಿಜೆಪಿ ನಾಯಕರನ್ನು ಗೂಂಡಾಗಳು ಎಂದು ಕರೆದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ವಿಧಾನಸಭೆಯಲ್ಲಿ ಈ ಪದ ಬಳಸಿದ ಕುರಿತು ಮಾತನಾಡಿರುವ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಗೂಂಡಾಗಿರಿ ಮಾಡ್ತೀರಾ ಎಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ. ನಾಲ್ಕೈದು ನಿಮಿಷದಲ್ಲಿ ಉತ್ತರಿಸಬಹುದಾಗಿದ್ದ ಪ್ರಶ್ನೆಗೆ ಸಿಎಂ ಸಿದ್ಧರಾಮಯ್ಯ ಉತ್ತರಿಸುವಾಗ ಗಂಟೆಗಟ್ಟಲೆ ಕೇಂದ್ರವನ್ನು ಟೀಕಿಸಿ ಆಕ್ಷೇಪ ವ್ಯಕ್ತಪಡಿಸಿದರು. ಅವರು ಉತ್ತರಿಸುವ ಬದಲು ಎಲ್ಲಾ ಪ್ರತಿಪಕ್ಷದ ಸದಸ್ಯರನ್ನು ಗೂಂಡಾಗಳು ಎಂದು

ಬಿಜೆಪಿ ನಾಯಕರನ್ನು ಗೂಂಡಾಗಳು ಎಂದ ಸಿಎಂ. ಸಿದ್ಧರಾಮಯ್ಯ | ಭಾರೀ ಆಕ್ರೋಶ Read More »

ಉಡುಪಿ ಕ್ಷೇತ್ರ ನನ್ನದೇ, ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ| ಬದಲಾವಣೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕಿದ ಸಚಿವೆ

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ. ಈ ಕ್ಷೇತ್ರ ನನ್ನದೇ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳುವ ಮೂಲಕ ಕ್ಷೇತ್ರದ ಟಿಕೇಟ್ ಬೇರೆಯವರಿಗೆ ಕೊಡುವ ಸಾಧ್ಯತೆಯನ್ನು ಅಲ್ಲಗಳೆದಿದ್ದಾರೆ. ಕನಿಷ್ಠ 5-6 ಕ್ಷೇತ್ರಗಳು ನನ್ನ ಹೆಸರನ್ನು ಹೇಳುತ್ತಿವೆ. ಆದರೆ ಉಡುಪಿ- ಚಿಕ್ಕಮಗಳೂರು ನನ್ನ ಕ್ಷೇತ್ರ. ಈ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ನಾನು ಬೇರೆ ಕ್ಷೇತ್ರಗಳಿಗೆ ಹೋಗುವ ಪ್ರಶ್ನೆಯೇ ಇಲ್ಲ. ಆದರೆ ಪಕ್ಷ ಬದಲಾವಣೆ ಬಯಸಿದಲ್ಲಿ ಅದನ್ನು ಪಾಲಿಸಿ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇನೆ ಎಂದು ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು

ಉಡುಪಿ ಕ್ಷೇತ್ರ ನನ್ನದೇ, ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದಾರೆ| ಬದಲಾವಣೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕಿದ ಸಚಿವೆ Read More »

ಪುತ್ತೂರು ತಾಲೂಕು ಯುವ ಬಂಟರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ, ಪ್ರಜ್ವಲ್ ರೈ ಸೊರಕೆ

ಪುತ್ತೂರು: ತಾಲೂಕು ಯುವ ಬಂಟರ ಸಂಘದ ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ ಹಾಗೂ ಪ್ರಜ್ವಲ್ ರೈ ಸೊರಕೆ ಆಯ್ಕೆಗೊಂಡಿದ್ದಾರೆ. ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡಲಾಗಿದ್ದು, ಸಂಘದ ಸಲಹೆಗಾರ ಚುನಾವಣಾಧಿಕಾರಿ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಅವರ ನೇತೃತ್ವದಲ್ಲಿ ಮಾಡಲಾಯಿತು. ಖಜಾಂಚಿಯಾಗಿ ಶಿವ ಶ್ರೀರಂಜನ್ ರೈ ದೇರ್ಲ, ಜೊತೆ ಕಾರ್ಯದರ್ಶಿಯಾಗಿ ಶುಭಾ ರೈ, ಸಂಘಟನಾ

ಪುತ್ತೂರು ತಾಲೂಕು ಯುವ ಬಂಟರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಡಾ. ಹರ್ಷಕುಮಾರ್ ರೈ ಮಾಡಾವು, ಪ್ರಧಾನ ಕಾರ್ಯದರ್ಶಿಗಳಾಗಿ ರಂಜಿನಿ ಶೆಟ್ಟಿ, ಪ್ರಜ್ವಲ್ ರೈ ಸೊರಕೆ Read More »

ಆರೋಗ್ಯ ವ್ಯತ್ಯಯ | ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು !

ಮಂಗಳೂರು : ಆರೋಗ್ಯ ವ್ಯತ್ಯಗೊಂಡ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಹೆಚ್,ಡಿ ದೇವೇಗೌಡರನ್ನು ದಾಖಲು ಮಾಡಲಾಗಿದೆ ಎನ್ನಲಾಗಿದೆ. ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ ಆಸ್ಪತ್ರೆಗೆ ದಾಖಲು ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬ

ಆರೋಗ್ಯ ವ್ಯತ್ಯಯ | ಮಾಜಿ ಪ್ರಧಾನಿ ದೇವೇಗೌಡರು ಆಸ್ಪತ್ರೆಗೆ ದಾಖಲು ! Read More »

ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಪದ ಸ್ವೀಕಾರ

ಪುತ್ತೂರು: ಇಲ್ಲಿಯ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಗುರುವಾರ ಪದ ಸ್ವೀಕಾರ ಮಾಡಿದರು. ಹದಿನೆಂಟು ವರ್ಷಗಳ ಅಧ್ಯಾಪನ ಅನುಭವ ಹೊಂದಿರುವ ಅವರು ಕಂಪ್ಯೂಟರ್ ವಿಭಾಗದ ನೂತನ ತಂತ್ರಜ್ಞಾನಗಳ ಬಗ್ಗೆ ಅಪಾರ ತಿಳುವಳಿಕೆ ಹೊಂದಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಪದಾಧಿಕಾರಿಗಳು, ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಪದ ಸ್ವೀಕಾರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಶುಭ ಹಾರೈಸಿದರು

ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾಗಿ ಡಾ.ನಿಶ್ಚಯ್ ಕುಮಾರ್ ಹೆಗ್ಡೆ ಪದ ಸ್ವೀಕಾರ Read More »

ಬಲ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ | ನಿರ್ಮಾಣವಾಗಲಿದೆ 1.28 ಕೋಟಿ ರೂ. ವೆಚ್ಚದ ನೂತನ ಕಟ್ಟಡ

ಪುತ್ತೂರು: ಬಲ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ ಗುರುವಾರ ನಡೆಯಿತು. ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆಯಲ್ಲಿ ಸುಮಾರು 1.28 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಂಘದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ರವಿಚಂದ್ರ ನೆಲ್ಲಿತ್ತಾಯ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಗೌಡ ಶಿಲಾನ್ಯಾಸ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಸೀತಾರಾಮ, ಉಪಾಧ್ಯಕ್ಷ ಅಬ್ದುಲ್ ಹಕೀಂ, ನಿರ್ದೇಶಕರಾದ ಕೆ.ಚಂದಪ್ಪ ಪೂಜಾರಿ, ಎ.ಯಂ.ಪ್ರಕಾಶ್ಚಂದ್ರ ಆಳ್ವ, ಎ.ಎಂ.ಪ್ರವೀಣ್ ಚಂದ್ರ ಆಳ್ವ, ಅಂಬ್ರೋಸ್ ಡಿ’ಸೋಜಾ, ನವೀನ

ಬಲ್ನಾಡು ಕೃಷಿಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಭೂಮಿಪೂಜೆ | ನಿರ್ಮಾಣವಾಗಲಿದೆ 1.28 ಕೋಟಿ ರೂ. ವೆಚ್ಚದ ನೂತನ ಕಟ್ಟಡ Read More »

ಅಭಿವೃದ್ಧಿ ಹಿನ್ನಲೆಯಲ್ಲಿ ರಸ್ತೆ ಅಗೆತ | ಮೂರು ತಿಂಗಳು ಕಳೆದರೂ ನಡೆಯದ ಡಾಮರೀಕರಣ | ಧೂಳುಮಯವಾದ ಪರಿಸರದಲ್ಲಿ ರೋಗಭೀತಿಯ ಭಯ

ಪುತ್ತೂರು: ಅಭಿವೃದ್ಧಿ ಹಿನ್ನಲೆಯಲ್ಲಿ ಮುಖ್ಯ ರಸ್ತೆಗಳನ್ನು ಅಗೆದು ತಿಂಗಳು ಮೂರು ಕಳೆದರೂ ಸಂಬಂಧ ಪಟ್ಟ ಇಲಾಖೆ ಇನ್ನೂ ಡಾಮರೀಕರಣ ಮಾಡಿಲ್ಲ. ಪರಿಣಾಮ ವಾಹನ ಸವಾರರು ಸಹಿತ ಸ್ಥಳೀಯ ಅಂಗಡಿ ಮುಂಗಟ್ಟುಗಳನ್ನು ಕೆಲಸ ಮಾಡುವವರು ಸಮಸ್ಯೆ ಎದುರಿಸುವಂತಾಗಿದೆ. ಪುತ್ತೂರು-ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಪುರುಷರಕಟ್ಟೆಯಲ್ಲಿ ಸುಮಾರು 50 ಮೀ. ಹಾಗೂ ನರಿಮೊಗರಿನಲ್ಲಿ 100-200 ಮೀಟರ್ ರಸ್ತೆಯನ್ನು ಡಾಮರೀಕರಣ ಮಾಡುವ ನಿಟ್ಟಿನಲ್ಲಿ ಕಳೆದ ಮೂರು ತಿಂಗಳ ಹಿಂದೆ ಅಗೆಯಲಾಗಿತ್ತು. ಅಲ್ಲಿಂದ ಇಲ್ಲಿ ತನಕ ರಸ್ತೆಯನ್ನು ಡಾಮರೀಕರಣ ಮಾಡದ ಪರಿಣಾಮ ಇಡೀ ಪರಿಸರ

ಅಭಿವೃದ್ಧಿ ಹಿನ್ನಲೆಯಲ್ಲಿ ರಸ್ತೆ ಅಗೆತ | ಮೂರು ತಿಂಗಳು ಕಳೆದರೂ ನಡೆಯದ ಡಾಮರೀಕರಣ | ಧೂಳುಮಯವಾದ ಪರಿಸರದಲ್ಲಿ ರೋಗಭೀತಿಯ ಭಯ Read More »

error: Content is protected !!
Scroll to Top