ನಾಳೆ: ಪ್ರಬಂಧ-ಚಿತ್ರಕಲೆ-ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ, ಕ.ಸಾ.ಪ. ಪುತ್ತೂರು ವೆಬ್ಸೈಟ್ ಮೊಬೈಲ್ ಆವೃತ್ತಿ ಅನಾವರಣ

ಪುತ್ತೂರು: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ಹಾಗೂ ಬಾಲವನ ಅಭಿವೃದ್ಧಿ ಸಮಿತಿ ಪುತ್ತೂರು ಸಹಯೋಗದಲ್ಲಿ 75 ನೇ ಗಣರಾಜ್ಯೋತ್ಸವದ ಕುರಿತ ಪ್ರಬಂಧ-ಚಿತ್ರಕಲೆ-ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ ಹಾಗೂ ಕ.ಸಾ.ಪ. ಪುತ್ತೂರು ವೆಬ್ಸೈಟ್ ಮೊಬೈಲ್ ಆವೃತ್ತಿ ಅನಾವರಣ ಫೆ.14 ಬುಧವಾರ ಪರ್ಲಡ್ಕ ಬಾಲವನದಲ್ಲಿ ನಡೆಯಲಿದೆ. ಬೆಳಗ್ಗೆ 9 ರಿಂದ ನಡೆಯುವ ಕಾರ್ಯಕ್ರಮವನ್ನು ಸಹಾಯಕ ಆಯುಕ್ತ ಜುಬಿನ್ ಮಹಾಪಾತ್ರ ಉದ್ಘಾಟಿಸಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. […]

ನಾಳೆ: ಪ್ರಬಂಧ-ಚಿತ್ರಕಲೆ-ಭಾಷಣ ಸ್ಪರ್ಧೆಗಳ ಬಹುಮಾನ ವಿತರಣೆ, ಕ.ಸಾ.ಪ. ಪುತ್ತೂರು ವೆಬ್ಸೈಟ್ ಮೊಬೈಲ್ ಆವೃತ್ತಿ ಅನಾವರಣ Read More »

ಫುಟ್ಬಾಲ್ ಆಟದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿತ | ಆಟಗಾರ ಮೃತ್ಯು

ಫುಟ್ಬಾಲ್ ಆಟಗಾರನೊಬ್ಬ ಆಟದಲ್ಲಿ ನಿರತರಾಗಿದ್ದ ವೇಳೆ ಸಿಡಿಲು ಬಡಿದು ಮೃತಪಟ್ಟ ಘಟನೆ ಇಂಡೋನೇಷ್ಯಾದ ಸಿಲಿವಾಂಗಿ ಸ್ಟೇಡಿಯಂನಲ್ಲಿ ನಡೆದಿದ್ದು, ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಫೆಬ್ರವರಿ 10ರಂದು ಘಟನೆ ನಡೆದಿದ್ದು, ಪಶ್ಚಿಮ ಜಾವಾದ ಬಮಡಂಗ್‌ನಲ್ಲಿರುವ ಸಿಲಿವಾಂಗಿ ಸ್ಟೇಡಿಯಂನಲ್ಲಿ ಫುಟ್ಬಾಲ್ ಪಂದ್ಯ ಏರ್ಪಡಿಸಲಾಗಿತ್ತು. ಈ ಸೌಹಾರ್ದದ ಪಂದ್ಯದ ವೇಳೆ ಏಕಾಏಕಿ ಮಳೆ ಪ್ರಾರಂಭವಾಯಿತು. ಈ  ವೇಳೆ ಸಿಡಿಲು ಬಡಿದು ಆಟಗಾರ ಮೈದಾನದಲ್ಲೇ ಕುಸಿದು ಬಿದ್ದಿದ್ದಾನೆ. ಕುಸಿತದ ಬಳಿಕ ಕೊಂಚ ಹೊತ್ತು ಉಸಿರಾಡಿದ್ದು, ಬಳಿಕ ಸಾವನ್ನಪ್ಪಿದ್ದಾನೆ. ಈ

ಫುಟ್ಬಾಲ್ ಆಟದಲ್ಲಿ ನಿರತರಾಗಿದ್ದಾಗ ಸಿಡಿಲು ಬಡಿತ | ಆಟಗಾರ ಮೃತ್ಯು Read More »

ಮಾ.9: ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ಸಮಿತಿ ಗೌರವಾಧ್ಯಕ್ಷರಾಗಿ ರವಿ ಶೆಟ್ಟಿ ನೇಸರಕಂಪ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ

ಪುತ್ತೂರು: ಮುಂಡೂರು ಗ್ರಾಮದ ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಮಾ.9 ರಂದು ನಡೆಯಲಿರುವ ವರ್ಷಾವಧಿ ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೂಡಂಬೈಲು ರವಿ ಶೆಟ್ಟಿ ನೇಸರ ಕಂಪ, ಅಧ್ಯಕ್ಷರಾಗಿ ಅರುಣ್ ಕುಮಾ‌ರ್ ಪುತ್ತಿಲ ಹಾಗೂ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ ಆಯ್ಕೆಯಾಗಿದ್ದಾರೆ. ದೇವಳದ ವಠಾರದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಜಯಪ್ರಸಾದ ಅಂಬಟ, ಉಮೇಶ್ ಗೌಡ ಗುತ್ತಿನಪಾಲು, ಶೇಷಪ್ಪ ಶೆಟ್ಟಿ ಪೊನೋಣಿ, ಗಣೇಶ್ ಗೌಡ ಪಜಿಮಣ್ಣು, ಉಮೇಶ್ ಅಂಬಟ, ಧನಂಜಯ ಕುಲಾಲ್

ಮಾ.9: ಮುಂಡೂರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ | ಸಮಿತಿ ಗೌರವಾಧ್ಯಕ್ಷರಾಗಿ ರವಿ ಶೆಟ್ಟಿ ನೇಸರಕಂಪ, ಅಧ್ಯಕ್ಷರಾಗಿ ಅರುಣ್ ಕುಮಾರ್ ಪುತ್ತಿಲ, ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಕಣ್ಣಾರ್ನೂಜಿ Read More »

ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷರ ಕುರಿತು ಹೀನಾಯ ಶಬ್ಧಗಳಿಂದ ಮಾತನಾಡಿರುವುದು ಖಂಡನೀಯ | ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಚಂದ್ರಶೇಖರ ಆರೋಪ

ಪುತ್ತೂರು: ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಹಾಗೂ ನೆಲ್ಯಾಡಿ ಮೊರಂಕಲ ಅಣ್ಣು ನಾಯ್ಕರ ಕುರಿತು ದಲಿತ ಸಂಘರ್ಷ ಸಮಿತಿ ಭೀಮವಾದ ಉಡುಪಿ ಜಿಲ್ಲೆಯ ವಿಶ್ವನಾಥ ಬೆಳ್ಳಂಪಳ್ಳಿ ಅವರು ಸ್ವಯಂ ಘೋಷಿತ ಮುಖಂಡ, ವಸೂಲುಗಾರನೆಂದು ಹೀನಾಯ ಶಬ್ದಗಳಿಂದ ಮಾತನಾಡಿದ್ದು, ಯಾವುದೇ ವ್ಯಕ್ತಿಯ ಪೂರ್ವಾಪರ ತಿಳಿಯದೇ ಹೀಗೆ ಮಾತನಾಡುವುದು ಖಂಡನೀಯ ಎಂದು ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಕಾರ್ಯಾಧ್ಯಕ್ಷ ಚಂದ್ರಶೇಖರ ತಿಳಿಸಿದ್ದಾರೆ. ಮಂಗಳವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಶಬ್ಧಗಳಿಂದ ಮಾತನಾಡಿರುವುದು

ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷರ ಕುರಿತು ಹೀನಾಯ ಶಬ್ಧಗಳಿಂದ ಮಾತನಾಡಿರುವುದು ಖಂಡನೀಯ | ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಚಂದ್ರಶೇಖರ ಆರೋಪ Read More »

ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಪುತ್ತೂರು: ಮತದಾನ ಮಾಡುವುದು ಎಲ್ಲರ ಕರ್ತವ್ಯ. ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಸ್ವ ಇಚ್ಛೆಯಿಂದ ಮತದಾನ ಮಾಡುವುದು ಮುಖ್ಯ. ವಿದ್ಯಾರ್ಥಿಗಳಾದವರು ಸಂವಿಧಾನದ ಮೌಲ್ಯವನ್ನು ಅರಿತುಕೊಂಡು ಮುಂದೆ ಸಾಗಬೇಕು ಎಂದು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಅವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಕಲಾ ವಿಭಾಗದ ಡೀನ್ ಹಾಗೂ ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ದುರ್ಗಾರತ್ನ. ಸಿ

ವಿವೇಕಾನಂದ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ Read More »

ಮೋದಿ ಕುರಿತು ತುಚ್ಛವಾಗಿ ಮಾತನಾಡಿದ ರಾಹುಲ್ ಗಾಂಧಿ ದೇಶದ ಕ್ಷಮೆ ಯಾಚಿಸಬೇಕು | ಪ್ರತಿಭಟನೆಯಲ್ಲಿ ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಆರ್‍.ಸಿ. ನಾರಾಯಣ ಆಗ್ರಹ

ಪುತ್ತೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಪ್ರಧಾನಿ ನರೇಂದ್ರ ಮೋದಿಯವರನ್ನು ಜಾತಿ ವಿಚಾರದಲ್ಲಿ ಅವಮಾನಿಸಿರುವುದು ಖಂಡನೀಯ. ಈ ಕುರಿತು ರಾಹುಲ್ ಗಾಂಧಿ ದೇಶದ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಆರ್‍.ಸಿ. ನಾರಾಯಣ ಆಗ್ರಹಿಸಿದ್ದಾರೆ. ಅವರು ಮಂಗಳವಾರ ಬಿಜೆಪಿ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲದ ಒಬಿಸಿ ಮೋರ್ಚಾದಿಂದ ಬಿಜೆಪಿ ಕಚೇರಿ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ವಿಶ್ವಗುರು ಎಂದು ಉಲ್ಲೇಖಿಸಲ್ಪಟ್ಟ ನರೇಂದ್ರ ಮೋದಿಯವರ

ಮೋದಿ ಕುರಿತು ತುಚ್ಛವಾಗಿ ಮಾತನಾಡಿದ ರಾಹುಲ್ ಗಾಂಧಿ ದೇಶದ ಕ್ಷಮೆ ಯಾಚಿಸಬೇಕು | ಪ್ರತಿಭಟನೆಯಲ್ಲಿ ಒಬಿಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಆರ್‍.ಸಿ. ನಾರಾಯಣ ಆಗ್ರಹ Read More »

ಇಬ್ಬರ ಸಾವಿಗೆ ಕಾರಣವಾದ ರಸ್ತೆ ಅಪಘಾತ | ಒಬ್ಬರು ಅಪಘಾತದಿಂದ ಮೃತಪಟ್ಟರೆ, ಇನ್ನೊಬ್ಬರು ಮನನೊಂದು ಆತ್ಮಹತ್ಯೆ

ಮಡಿಕೇರಿ: ರಸ್ತೆ ಅಪಘಾತವೊಂದು ಇಬ್ಬರ ಸಾವಿಗೆ ಕಾರಣವಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಎರಡು ಬೈಕ್‍ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ವಿದ್ಯಾರ್ಥಿ ಧನಲ್ ಸುಬ್ಬಯ್ಯ (24) ಮೃತಪಟ್ಟರೆ, ಅಪಘಾತದಿಂದ ನೊಂದು ಅಪಘಾತವೆಸಗಿದ ಇನ್ನೊಂದು ಬೈಕ್ ಸವಾರ ಹೆಚ್‍. ಡಿ. ತಮ್ಮಯ್ಯ (57) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಡಿಕೇರಿಯ ಚೈನ್ ಗೇಟ್ ಬಳಿ ಅಪಘಾತ ಸಂಭವಿಸಿತ್ತು. ವಿದ್ಯಾರ್ಥಿ ಧನಲ್ ಸುಬ್ಬಯ್ಯ ಹಾಗೂ ಹೆಚ್. ಡಿ ತಮ್ಮಯ್ಯ ಅವರ ದ್ವಿಚಕ್ರ ವಾಹನಗಳು ಪರಸ್ಪರ ಡಿಕ್ಕಿಯಾಗಿದ್ದವು. ಅಪಘಾತದಲ್ಲಿ ಧನಲ್

ಇಬ್ಬರ ಸಾವಿಗೆ ಕಾರಣವಾದ ರಸ್ತೆ ಅಪಘಾತ | ಒಬ್ಬರು ಅಪಘಾತದಿಂದ ಮೃತಪಟ್ಟರೆ, ಇನ್ನೊಬ್ಬರು ಮನನೊಂದು ಆತ್ಮಹತ್ಯೆ Read More »

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸನಗಳನ್ನು ಸಂರಕ್ಷಿಸುವ, ಶಾಸನ ಮಂಟಪ ರಚನೆಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನವಿ

ಪುತ್ತೂರು: ದೇವಸ್ಥಾನದ ಹೊರಪ್ರಾಂಗಣದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿ ಇರುವ ಪುರಾತನ ಶಾಸನಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ  ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಶಾಸನ ಮಂಟಪವನ್ನು ನಿರ್ಮಿಸುವ ಕುರಿತು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ದೇವಸ್ಥಾನ ಆಡಳಿತಾಧಿಕಾರಿ ನವೀನ್ ಭಂಡಾರಿ ಅವರಿಗೆ  ಮನವಿ ಮಾಡಿದ್ದಾರೆ. ಮನವಿ ಪತ್ರದಲ್ಲಿ ಸದರಿ ಶಾಸನಗಳು ಸುಮಾರು 12ನೇ ಶತಮಾನಕ್ಕೆ ಸೇರಿದ ಪ್ರಾಚೀನ ಕನ್ನಡ ಶಾಸನಗಳಾಗಿವೆ. ಈ ಶಾಸನಗಳಿಂದಾಗಿ 12ನೇ ಶತಮಾನದಲ್ಲಿ ಪ್ರಚಲಿತದಲ್ಲಿ ಇದ್ದ ಕನ್ನಡ ಭಾಷೆ, ಲಿಪಿ,

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸನಗಳನ್ನು ಸಂರಕ್ಷಿಸುವ, ಶಾಸನ ಮಂಟಪ ರಚನೆಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮನವಿ Read More »

ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ: ಸ್ವಾಮಿ ಜಿತ ಕಾಮಾನಂದಜಿ | ವಿಶೇಷ ಉಪನ್ಯಾಸ ಮಾಲಿಕೆ ವಿವೇಕ ಸ್ಮೃತಿ

ಪುತ್ತೂರು: ಶಿಕ್ಷಣ ಒಬ್ಬ ವ್ಯಕ್ತಿಯ ಚಾರಿತ್ರ್ಯ ನಿರ್ಮಾಣ ಮತ್ತು ವ್ಯಕ್ತಿತ್ವ ನಿರ್ಮಾಣಕ್ಕೆ ಕಾರಣವಾಗಬೇಕು. ಕೇವಲ ಪರೀಕ್ಷೆ ಬರೆಯಲು ಮಾತ್ರ ಸೀಮಿತವಾಗದೆ ಉತ್ತಮ ನಾಗರೀಕರನ್ನಾಗಿ ಮಾಡಬೇಕು. ಇಂದಿನ ಭಾರತದ ಭವಿಷ್ಯ ಯುವಜನತೆಯ ಕೈಯಲ್ಲಿದೆ. ಮೊದಲು ನಮ್ಮ ಮೇಲೆ ನಮಗೆ ನಂಬಿಕೆ ಇರಬೇಕು ಜವಬ್ದಾರಿಯನ್ನು ನಿಭಾಯಿಸಲು ಕಲಿಯಬೇಕು ಎಂದು ಮಂಗಳೂರು ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತ ಕಾಮಾನಂದಜಿ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ನಡೆದ ವಿವೇಕಾನಂದ ಸಂಶೋಧನಾ ಅಧ್ಯಯನ ಕೇಂದ್ರ ಮತ್ತು

ದೇಶದ ಭವಿಷ್ಯ ಯುವ ಜನತೆಯ ಕೈಯಲ್ಲಿದೆ: ಸ್ವಾಮಿ ಜಿತ ಕಾಮಾನಂದಜಿ | ವಿಶೇಷ ಉಪನ್ಯಾಸ ಮಾಲಿಕೆ ವಿವೇಕ ಸ್ಮೃತಿ Read More »

ಸತ್ಯ, ಧರ್ಮ, ನಿಷ್ಠೆಯಲ್ಲಿ ನಡೆಯುವ ಒಕ್ಕಲಿಗ ಸಮುದಾಯ ರಾಜಪರಂಪರೆಯ ಹಿನ್ನಲೆಯ ಸಮುದಾಯ : ಡಿ.ಬಿ.ಬಾಲಕೃಷ್ಣ | ಎಲ್ಲ ಸಮುದಾಯವನ್ನು ಅಪ್ಪಿಕೊಂಡು ಒಪ್ಪಿಕೊಂಡು ಬಂದಿರುವಂತಹ  ಸಮುದಾಯ |ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಸೇವಾ ಸಂಘ (ರಿ.) ಮಂಗಳೂರು ಅಸ್ಥಿತ್ವಕ್ಕೆ

ಮಂಗಳೂರು: ಸತ್ಯ, ಧರ್ಮ, ನಿಷ್ಠೆಯಲ್ಲಿ ನಡೆಯುವ ಒಕ್ಕಲಿಗ ಸಮುದಾಯ ರಾಜಪರಂಪರೆಯ ಹಿನ್ನಲೆಯ ಸಮುದಾಯವಾಗಿದ್ದು ಕೇವಲ ಕೃಷಿಕರಾಗಿ ಮಾತ್ರ ಗುರುತಿಸಿಕೊಂಡಿಲ್ಲ. ಬದಲಾಗಿ ಶೈಕ್ಷಣಿಕ, ವೈದ್ಯಕೀಯ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿಯೂ ಬಹಳಷ್ಟು ಕೊಡುಗೆ ನೀಡಿದೆ ಎಂದು ಬಾಲಕೃಷ್ಣ ಡಿ.ಬಿ. ತಿಳಿಸಿದ್ದಾರೆ. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಕ್ಕಲಿಗ ಸಮುದಾಯ ಪ್ರಪ್ರಥಮ ಸ್ವಾತಂತ್ರ್ಯ ಹೋರಾಟಗಾರರಾಗಿದ್ದು, ಕೆದಂಬಾಡಿ ರಾಮಯ್ಯ ಗೌಡ, ಗುಡ್ಡೆಮನೆ ಅಪ್ಪಯ್ಯ ಗೌಡ, ಬೆಂಗಳೂರು ನಿರ್ಮಾತೃ ನಾಡ ಪ್ರಭು ಕೆಂಪೇಗೌಡ, ದೇಶಕ್ಕೆ ಪ್ರಧಾನಿ, ರಾಜ್ಯದ ಮೊದಲನೇ, ಎರಡನೇ ಮುಖ್ಯಮಂತ್ರಿ ಹಾಗೂ

ಸತ್ಯ, ಧರ್ಮ, ನಿಷ್ಠೆಯಲ್ಲಿ ನಡೆಯುವ ಒಕ್ಕಲಿಗ ಸಮುದಾಯ ರಾಜಪರಂಪರೆಯ ಹಿನ್ನಲೆಯ ಸಮುದಾಯ : ಡಿ.ಬಿ.ಬಾಲಕೃಷ್ಣ | ಎಲ್ಲ ಸಮುದಾಯವನ್ನು ಅಪ್ಪಿಕೊಂಡು ಒಪ್ಪಿಕೊಂಡು ಬಂದಿರುವಂತಹ  ಸಮುದಾಯ |ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗ ಸೇವಾ ಸಂಘ (ರಿ.) ಮಂಗಳೂರು ಅಸ್ಥಿತ್ವಕ್ಕೆ Read More »

error: Content is protected !!
Scroll to Top