ಫೆ.11 : ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘‘ಯುವ ಕ್ರೀಡಾ ಸಂಭ್ರಮ-2024’’

ಪುತ್ತೂರು: ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘ಯುವ ಕ್ರೀಡಾ ಸಂಭ್ರಮ-2024’ ಫೆ.11 ಭಾನುವಾರ ತೆಂಕಿಲ ವಿವೇಕಾನಂದ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಂಚಾಲಕ ಮಾಧವ ಗೌಡ ಪೆರಿಯತ್ತೋಡಿ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕ್ರೀಡಾ ಸಂಭ್ರಮದ ಅಂಗವಾಗಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಆಟೋಟ ಸ್ಪರ್ಧೆಗಳು ನಡೆಯಲಿವೆ ಎಂದು ತಿಳಿಸಿದರು. ಭಾನುವಾರ ಬೆಳಿಗ್ಗೆ […]

ಫೆ.11 : ಯುವ ಒಕ್ಕಲಿಗ ಗೌಡ ಸೇವಾ ಸಂಘ ಬನ್ನೂರು ವಲಯದ ಆತಿಥ್ಯದಲ್ಲಿ ಪುತ್ತೂರು ತಾಲೂಕು ಮಟ್ಟದ ‘‘ಯುವ ಕ್ರೀಡಾ ಸಂಭ್ರಮ-2024’’ Read More »

ಫೆ.11 : ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸಾ ಸಲಹೆ ಹಾಗೂ ಸಂದರ್ಶನ

ಪುತ್ತೂರು: ಪುರುಷರಕಟ್ಟೆ ಆತ್ರೇಯ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸೆಯ ಸಲಹೆ ಮತ್ತು ಸಂದರ್ಶನ ಫೆ.11 ಭಾನುವಾರ ಕ್ಲಿನಿಕ್‍ ನಲ್ಲಿ ನಡೆಯಲಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ನಡೆಯುವ ಕಾರ್ಯಕ್ರಮದಲ್ಲಿ ಆಯುರ್ವೇದ ಔಷಧಿ ಪದ್ಧತಿ ಮೂಲಕ ಕ್ಯಾನ್ಸರ್ ರೋಗದ ನೋವು ನಿವಾರಣೆಗೆ ಹಾಗೂ ಇತರ ಸಮಸ್ಯೆಗಳಿಗೆ ಉಚಿತ ಸಂದರ್ಶನ ಹಾಗೂ ಉಪಶಮನಕಾರಿ ಚಿಕಿತ್ಸೆಯ ಕುರಿತು ತಜ್ಞ ವೈದ್ಯರಾದ ಡಾ ಮಹೇಶ್.ಟಿ  ಸಲಹೆ ನೀಡಲಿದ್ದಾರೆ. ಸಾರ್ವಜನಿಕರು ಮುಂಚಿತವಾಗಿ ತಮ್ಮ ಹೆಸರು ನೋಂದಾಯಿಸಿ

ಫೆ.11 : ಕ್ಯಾನ್ಸರ್ ರೋಗಿಗಳಿಗೆ ಉಚಿತ ಆಯುರ್ವೇದ ಉಪಶಮನಕಾರಿ ಚಿಕಿತ್ಸಾ ಸಲಹೆ ಹಾಗೂ ಸಂದರ್ಶನ Read More »

ರೋಟರಿಪುರ ನಿವಾಸಿ ಚಂದ್ರಾವತಿ ನಿಧನ

ಪುತ್ತೂರು: ರೋಟರಿಪುರ ನಿವಾಸಿ, ವನಿತಾ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಕಿ ವನಿತಾ ಅವರ ತಾಯಿ ಚಂದ್ರಾವತಿ (70) ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದಿದ್ದ ಅವರು ಗುರುವಾರ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ರೋಟರಿಪುರ ನಿವಾಸಿ ಚಂದ್ರಾವತಿ ನಿಧನ Read More »

ಕೆದಿಲ ಉಳ್ಳಾಕುಲು ದೈವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ಮಂಜೂರು

ಕೆದಿಲ: ಜೀರ್ಣೋದ್ಧಾರಗೊಳ್ಳುತ್ತಿರುವ ಕೆದಿಲ ಉಳ್ಳಾಕುಲು, ಧೂಮವತಿ, ಮಲರಾಯ, ಪರಿವಾರ ದೈವಗಳ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಎರಡು ಲಕ್ಷ ರೂ.ವನ್ನು ಮಂಜೂರು ಮಾಡಿದ್ದಾರೆ. ಮಂಜೂರು ಮಾಡಿದ ಎರಡು ಲಕ್ಷ ರೂಪಾಯಿಯ ಮಂಜೂರಾತಿ ಪತ್ರವನ್ನು ಗುರುವಾರ ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ರವರು ದೈವಸ್ಥಾನದ ಅಧ್ಯಕ್ಷ ಜೈ ಕೃಷ್ಣ ಭಟ್ ಮೀರಾವನ  ಮತ್ತು ಕಮಿಟಿಯ ಸದಸ್ಯರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೆರ್ನೆ ವಲಯ ಮೇಲ್ವಿಚಾರಕಿ ಶಾರದಾ, ಸೇವಾ ಪ್ರತಿನಿಧಿ ಜಯಂತಿ, ಜನಜಾಗೃತಿ ವೇದಿಕೆ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ ಸತ್ತಿಕ್ಕಲ್ಲು,

ಕೆದಿಲ ಉಳ್ಳಾಕುಲು ದೈವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 2 ಲಕ್ಷ ಮಂಜೂರು Read More »

ಮಂಗಳೂರಿಗೆ ಸಿಜಿಎಚ್‍ಎಸ್  ವೆಲ್ ನೆಸ್ ಸೆಂಟರ್ ಮಂಜೂರು : ಸಂಸದ ನಳೀನ್ ಕುಮಾರ್ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು

ಮಂಗಳೂರು: ಕೇಂದ್ರ ಸರ್ಕಾರದ ನಿವೃತ್ತ ನೌಕರರ ಬಹುದಿನದ ಬೇಡಿಕೆಯಾದ ಸಿಜಿಎಚ್‍ಎಸ್ ವೆಲ್ ನೆಸ್ ಸೆಂಟರ್ ನ್ನು ಮಂಗಳೂರಿನಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಸಂಸದ ನಳೀನ್ ಕುಮಾರ್ ಅವರ ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರುತ್ತಿದ್ದು, ಸಂಸದರು ಕಳೆದ ಬಾರಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ ಮಂಗಳೂರಿನಲ್ಲಿ ಸಿಜಿಎಚ್‍ಎಸ್ ವೆಲ್ ನೆಸ್ ಸೆಂಟರ್ ನ್ನು ತೆರೆಯುವಂತೆ ಮನವಿ ಮಾಡಿದ್ದರು.  ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ. ಮನ್ ಸುಖ್

ಮಂಗಳೂರಿಗೆ ಸಿಜಿಎಚ್‍ಎಸ್  ವೆಲ್ ನೆಸ್ ಸೆಂಟರ್ ಮಂಜೂರು : ಸಂಸದ ನಳೀನ್ ಕುಮಾರ್ ಮನವಿಗೆ ಸ್ಪಂದಿಸಿದ ಆರೋಗ್ಯ ಸಚಿವರು Read More »

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ

ಮಂಗಳೂರು: ಭಾರತೀಯ ಜನತಾ ಪಾರ್ಟಿ ಒಂದು ರಾಷ್ಟ್ರೀಯ ಪಕ್ಷ. ಹೊರಗಡೆ ಆಗಿರುವ ಯಾವುದೇ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗೆ ಇಲ್ಲಾ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಎಲ್ಲವನ್ನೂ ಗಮನಿಸುವುದು, ಅದಕ್ಕೆ ಏನು ಮಾಡಬೇಕು ಎಂಬುದರ ಕುರಿತು ರಾಜ್ಯದಲ್ಲಿ ತೀರ್ಮಾನ ಮಾಡುತ್ತಾರೆ. ಬಿಜೆಪಿಯಲ್ಲಿ ನನ್ನದು ಏನಿದ್ದರೂ ಭಾರತೀಯ ಜನತಾ ಪಾರ್ಟಿ ದೊಡ್ಡ ಪ್ರಮಾಣದಲ್ಲಿ ಗೆಲ್ಲಬೇಕು, ಅದಕ್ಕೆ ಬೇಕಾದ ಪೂರ್ವಸಿದ್ಧತೆ ಏನು ಮಾಡಬೇಕು ಎಂಬುದಷ್ಟೇ ನನ್ನ ಅಭಿಪ್ರಾಯ

ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ | ಹೊರಗಡೆ ಚರ್ಚೆಗೆ ಉತ್ತರ ನೀಡುವ ಸ್ಥಿತಿ ಭಾರತೀಯ ಜನತಾ ಪಾರ್ಟಿಗಿಲ್ಲ | ಪುತ್ತಿಲ ಪರಿವಾರದ ಶ್ರೀಕೃಷ್ಣ ಉಪಾಧ್ಯಾಯ ಸವಾಲಿಗೆ ಪ್ರತಿಕ್ರಿಯೆ ನೀಡಿದ ಸತೀಶ್ ಕುಂಪಲ Read More »

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ | ಪುತ್ತಿಲರಿಗೆ ಯಾವ ಹುದ್ದೆ ? ಸಾರ್ವಜನಿಕ ವಲಯದಲ್ಲಿ ಮೂಡಿದೆ ಕುತೂಹಲ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ-ಬಿಜೆಪಿ ನಡುವಿನ ಮನಸ್ತಾಪ ಸುಖಾಂತ್ಯಗೊಂಡಿದೆ ಎನ್ನುವ ವಿಚಾರ ಬಲ್ಲಮೂಲಗಳಿಂದ ತಿಳಿದು ಬಂದಿದೆ. ಮಂಗಳೂರಿನಲ್ಲಿ ಅಜ್ಞಾತ ಸ್ಥಳವೊಂದರಲ್ಲಿ ನಡೆದ ಸಭೆಯಲ್ಲಿ ಪಕ್ಷ ಸೇರ್ಪಡೆ ಕುರಿತು ಮುಖಂಡರ ಸಭೆ ನಡೆದಿದ್ದು, ಅರುಣ್ ಕುಮಾರ್ ಪುತ್ತಿಲ ಶೀಘ್ರ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬುದು ಚರ್ಚೆಯ ಪ್ರಮುಖ ಅಂಶವಾಗಿತ್ತು. ಆದರೆ ಪಕ್ಷ ಸೇರ್ಪಡೆಗೆ ಯಾವ ಹುದ್ದೆ ನೀಡುತ್ತಾರೆ ಎಂಬುದು ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ. ಇಲ್ಲಿತ ನಕ ನಡೆದಿರುವುದು ಇತಿಹಾಸ. ಮುಂದೆ ನಡೆಯುವುದೆಲ್ಲಾ ಹೊಸ ಅಧ್ಯಾಯ ಎಂದು ಸಭೆಯಲ್ಲಿ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ | ಪುತ್ತಿಲರಿಗೆ ಯಾವ ಹುದ್ದೆ ? ಸಾರ್ವಜನಿಕ ವಲಯದಲ್ಲಿ ಮೂಡಿದೆ ಕುತೂಹಲ Read More »

ಎಂ.ಡಿ.ಎಸ್. ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರಿಗೆ ರಾಜ್ಯಮಟ್ಟದ ಚಿನ್ನದ ಪದಕ

ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ 2023ರಲ್ಲಿ ನಡೆಸಿದ ಎಂ.ಡಿ.ಎಸ್ (Oral and Maxillofacial Surgery)ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಮೊದಲ ಸ್ಥಾನ ಪಡೆದು ರಾಜ್ಯ ಮಟ್ಟದ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ದಾವಣಗೆರೆಯ ಬಾಪೂಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಎಂ.ಡಿ.ಎಸ್ ಸ್ನಾತಕೋತ್ತರ ಪದವಿ ಪೂರೈಸಿರುವ ಅವರು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದಲ್ಲಿ ವಾಸ್ತವ್ಯವಿರುವ ಬಿರ್ಮುಕಜೆ ಸುಧಾಕರ ಗೌಡ ಮತ್ತು  ಉದಯಗೌರಿ ದಂಪತಿ ಪುತ್ರ. ಅವರು ಸುಳ್ಯದ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿ.ಡಿ.ಎಸ್ ಪದವಿ ಪಡೆದಿದ್ದಾರೆ. ಪ್ರಸ್ತುತ

ಎಂ.ಡಿ.ಎಸ್. ನಲ್ಲಿ ಡಾ.ಸಂದೀಪ್ ಬಿರ್ಮುಕಜೆಯವರಿಗೆ ರಾಜ್ಯಮಟ್ಟದ ಚಿನ್ನದ ಪದಕ Read More »

ನೇಣು ಬಿಗಿದು ಯುವತಿ ಆತ್ಮಹತ್ಯೆ !

ಬೆಳ್ತಂಗಡಿ: ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಗುರುವಾರ ನಡೆದಿದೆ. ಕಾಯರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ (30) ಆತ್ಮಹತ್ಯೆ ಮಾಡಿಕೊಂಡವರು. ಮಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ವನಿತಾ ಅನಾರೋಗ್ಯ ಹಿನ್ನಲೆಯಲ್ಲಿ ಒಂದು ತಿಂಗಳು ಮನೆಯಲ್ಲಿದ್ದರು. ಬುಧವಾರ ಮುಂಜಾನೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಡೆತ್ ನೋಟ್ ದೊರಕಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದೆ. ಧರ್ಮಸ್ಥಳ ಪೊಲೀಸರು

ನೇಣು ಬಿಗಿದು ಯುವತಿ ಆತ್ಮಹತ್ಯೆ ! Read More »

ಅಡ್ಯನಡ್ಕ ಬ್ಯಾಂಕ್‍ ದರೋಡೆ | ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ | ಘಟನೆ ಕುರಿತು ಮಾಹಿತಿ ನೀಡಿದ ಎಸ್.ಪಿ. ರಿಷ್ಯಂತ್

ಅಡ್ಯನಡ್ಕ : ಕರ್ನಾಟಕ ಬ್ಯಾಂಕ್‍ ಗೆ ಕಳ್ಳರು ನುಗ್ಗಿ ಕೋಟ್ಯಾಂತರ ಮೌಲ್ಯದ ನಗ-ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕು ಪಡೆದುಕೊಂಡಿದ್ದು, ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಒಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಬಂದು

ಅಡ್ಯನಡ್ಕ ಬ್ಯಾಂಕ್‍ ದರೋಡೆ | ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ | ಘಟನೆ ಕುರಿತು ಮಾಹಿತಿ ನೀಡಿದ ಎಸ್.ಪಿ. ರಿಷ್ಯಂತ್ Read More »

error: Content is protected !!
Scroll to Top