ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ

ಮಂಗಳೂರು: ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವ ಭೋಪೇಂದ್ರ ಯಾದವ್ ರನ್ನು ಇಂದು ನಳಿನ್ ಕುಮಾರ್ ಕಟೀಲ್ ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ,  ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕ್ಯಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರು ಹಾಗೂ ಇತರ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು […]

ಮಂಗಳೂರು ಇಎಸ್ ಐ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಳಿನ್ ಕುಮಾರ್ ಕಟೀಲ್ ಮನವಿ Read More »

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಯರಿಗೆ “ದಿವ್ಯಾಸ್ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ”

ಪುತ್ತೂರು: ಮಂಗಳೂರು ನಗರದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ಸ್ ರೋಶನಿ ನಿಲಯದಲ್ಲಿ ನಡೆದ ಇಂಟಿಗ್ರಲ್  ಯೋಗ ಸತ್ಸಂಗ 2023-24 ನೇ ಸಾಲಿನ “ದಿವ್ಯಾಸ್  ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ”  ಯನ್ನು ಪುತ್ತೂರು ವಿವೇಕಾನಂದ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿನಿಯರಾದ ಪ್ರಜ್ಞಾ ಡಿ.  ಹಾಗೂ  ಐದನೇ ಸುತ್ತಿನ ಸೇವಾ ಪ್ರಾಜೆಕ್ಟ್ ನಲ್ಲಿ ನಗದು ಹಾಗೂ ವೈಯಕ್ತಿಕ ಟ್ರೋಫಿಯನ್ನು ಒಳಗೊಂಡ    ಎರಡನೆಯ ಬಹುಮಾನವನ್ನು ತೃತೀಯ ಬಿ ಎ ವಿದ್ಯಾರ್ಥಿನಿ ದೀಪ್ತಿ ಅಡ್ಡಂತ್ತಡ್ಕ ಪಡೆದುಕೊಂಡಿದ್ದಾರೆ. ಪ್ರಶಸ್ತಿಯು ರೋಲಿಂಗ್ ಶೀಲ್ಡ್, ನಗದು ಹಾಗೂ ವೈಯಕ್ತಿಕ ಟ್ರೋಫಿ ಒಳಗೊಂಡಿದೆ.

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿಯರಿಗೆ “ದಿವ್ಯಾಸ್ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ” Read More »

ಪುತ್ತೂರಿಗೆ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ

ಪುತ್ತೂರು: ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಹತ್ತನೇ ವರ್ಷಾಚರಣೆ – ದಶಾಂಬಿಕೋತ್ಸವದ ಸಮಾರೋಪ ಸಮಾರಂಭ ಎ.25 ರಂದು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಶೃಂಗೇರಿ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು ಸಹಿತ ತತ್ಕರಕಮಲ ಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭಾಗವಹಿಸಲಿದ್ದಾರೆ. ಎ.24ರಂದು ಸ್ವಾಮೀಜಿಯವರನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಪುತ್ತೂರಿಗೆ ಬರಮಾಡಿಕೊಳ್ಳಲಾಗುವುದು. ಸಂಜೆ ಬಪ್ಪಳಿಗೆ  ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಶ್ರೀ ಚಂದ್ರಮೌಳೀಶ್ವರ ಪೂಜೆಯನ್ನು ಸ್ವಾಮೀಜಿಯವರು ನೆರವೇರಿಸಲಿದ್ದು, ಬಳಿಕ ಅಂಬಿಕಾ ಸಮೂಹ

ಪುತ್ತೂರಿಗೆ ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಭೇಟಿ Read More »

ಫೆ. 12ರಿಂದ ಅಧಿವೇಶನ, ಫೆ. 16ಕ್ಕೆ ರಾಜ್ಯ ಬಜೆಟ್: ಸ್ಪೀಕರ್ ಖಾದರ್

ಫೆ. 12ರಿಂದ 23ರವರೆಗೆ ವಿಧಾನಸಭೆ ಬಜೆಟ್ ಅಧಿವೇಶನ ನಡೆಯಲಿದ್ದು, ಫೆ. 16ರಂದು ಸಿಎಂ ಬಜೆಟ್ ಮಂಡಿಸುವರು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ. 12ಕ್ಕೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವರು. 15ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಸಾಗಲಿದೆ. ಫೆ. 16ಕ್ಕೆ ಬಜೆಟ್ ಇರಲಿದೆ. 23ರವರೆಗೆ ಬಜೆಟ್ ಕುರಿತ ಚರ್ಚೆಗಳು ನಡೆಯಲಿವೆ. ಅದಕ್ಕೂ ಪೂರ್ವದಲ್ಲಿ ಬಜೆಟ್ ಬಗ್ಗೆ ಮಾಹಿತಿ ನೀಡಲು ಎಲ್ಲ ಶಾಸಕರಿಗೆ ಫೆ. 9ರಂದು

ಫೆ. 12ರಿಂದ ಅಧಿವೇಶನ, ಫೆ. 16ಕ್ಕೆ ರಾಜ್ಯ ಬಜೆಟ್: ಸ್ಪೀಕರ್ ಖಾದರ್ Read More »

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಸುಳ್ಯ: ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ 1994-97ರ ಬ್ಯಾಚ್‍ನ ಶಿಕ್ಷಕರ ಸ್ನೇಹ ಸಮ್ಮಿಲನ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳು ಎಲ್ಲಾ ಶಿಕ್ಷಕರನ್ನು ಸನ್ಮಾನಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಡಾ,ಪ್ರಭಾಕರ ಶಿಶಿಲ, ಡಾ.ಚಂದ್ರಶೇಖರ ದಾಮ್ಲೆ, ಪ್ರೊ.ಕೆ.ದಾಮೋದರ ಗೌಡ, ಪ್ರೊ.ಹೊನ್ನಮ್ಮ ಮೇಡಮ್, ಪ್ರೊ.ಜಾರೇ ಗೌಡ, ಡಾ.ಯಶೋಧ ಮೇಡಮ್, ಪ್ರೊ.ಸಂಜೀವ ಕುತ್ಪಾಜೆ, ಪ್ರೊ.ಪಿ.ಡಿ.ರಾಧಾಕೃಷ್ಣ ಗೌಡ ಮಣಿಬೆಟ್ಟು, ನಿವೃತ್ತ ಪ್ರೊ.ರತ್ನಾವತಿ, ಲೈಬ್ರೇರಿಯನ್ ಉಮಾವತಿ, ಪ್ರಿನ್ಸಿಪಾಲ್ ಡಾ.ರುದ್ರಕುಮಾರ್ ಎಂ.ಎಂ. , ಕುಲದೀಪ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಾಯಕ ಪ್ರೊ.

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸ್ನೇಹ ಸಮ್ಮಿಲನ ಕಾರ್ಯಕ್ರಮ Read More »

343.74 ಕೋಟಿ ವೆಚ್ಚದಲ್ಲಿ ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿ : ನಳಿನ್ ಕುಮಾರ್ ಕಟೀಲ್

ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು-ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ  ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವುದಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ. 2023-24ನೇ ಸಾಲಿನ ವಾರ್ಷಿಕ ಯೋಜನೆಯಡಿ ಸುಮಾರು 343.74 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆ ಬಳಕೆದಾರರಿಗೆ ಉತ್ತಮ ರಸ್ತೆ ಸಂಪರ್ಕ

343.74 ಕೋಟಿ ವೆಚ್ಚದಲ್ಲಿ ಚಾರ್ಮಾಡಿ ಘಾಟ್ ರಸ್ತೆ ಅಭಿವೃದ್ಧಿ : ನಳಿನ್ ಕುಮಾರ್ ಕಟೀಲ್ Read More »

ಆಸ್ಪತ್ರೆ ಕಟ್ಟಡ ಮಹಡಿಯಿಂದ ಜಿಗಿದು ಆತ್ಮಹತ್ಯೆ !

ಪುತ್ತೂರು: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಿಂಗಳಾಡಿ ಮೂಲದ ಕೂಲಿ ಕಾರ್ಮಿಕ ವಸಂತ ಆತ್ಮಹತ್ಯೆ ಮಾಡಿಕೊಂಡವರು. ವಸಂತ ಅವರು ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದೆ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಯುರ್ವೇದಿಕ್‌ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಆಸ್ಪತ್ರೆಯ ಕಟ್ಟಡದ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ಸುಳ್ಯ ಸರ್ಕಾರಿ

ಆಸ್ಪತ್ರೆ ಕಟ್ಟಡ ಮಹಡಿಯಿಂದ ಜಿಗಿದು ಆತ್ಮಹತ್ಯೆ ! Read More »

ಕೆದಂಬಾಡಿಯಲ್ಲಿ ಹಾಳೆ ತಟ್ಟೆ ಘಟಕ ಉದ್ಘಾಟನೆ

ಕೆದಂಬಾಡಿ: ಕೆದಂಬಾಡಿ ಗ್ರಾಮ ಪಂಚಾಯತ್ ನ ಆಸರೆ ಸಂಜೀವಿನಿ ಒಕ್ಕೂಟ, ಕೆದಂಬಾಡಿ  ನಂದಿನಿ ರೈತ ಮಹಿಳಾ ಉತ್ಪಾದಕರ ಸಂಘದ ಹಾಳೆ ತಟ್ಟೆ ಘಟಕ  ಉದ್ಘಾಟನಾ ಕಾರ್ಯಕ್ರಮ ನಂದಿನಿ ರೈತ ಮಹಿಳಾ ಉತ್ಪಾದಕರ ಸಂಘದ ಸದಸ್ಯೆ  ಕವಿತಾ ಐತಪ್ಪ ಪೂಜಾರಿ ಇದ್ಯಾಪೆ ಕೆದಂಬಾಡಿ  ಮನೆಯಲ್ಲಿ ನಡೆಯಿತು.  ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷೆ ಚಂದ್ರಾವತಿ  ಕಾರ್ಯಕ್ರಮ ಉದ್ಘಾಟಿಸಿ ಉತ್ಪಾದಕರ ಸಂಘಕ್ಕೆ ಶುಭ ಹಾರೈಸಿದರು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಜಗತ್ ಕೆ – ಎನ್.ಆರ್.ಎಲ್.ಎಂ  ಯೋಜನೆಯ ಬಗ್ಗೆ, ರೈತ ಉತ್ಪಾದಕರ ಸಂಘದ

ಕೆದಂಬಾಡಿಯಲ್ಲಿ ಹಾಳೆ ತಟ್ಟೆ ಘಟಕ ಉದ್ಘಾಟನೆ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸುಳ್ಯ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ನಡೆಯುತ್ತಿದ್ದು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಬುಧವಾರ ಬೆಳಿಗ್ಗೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಬಳಿಕ ಶ್ರೀ ದೇವರ ಬಲಿ ಉತ್ಸವದಲ್ಲಿ ಪಾಲ್ಗೊಂಡರು. ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ದೇವಿಪ್ರಸಾದ್  ಕಾನತ್ತೂರ್  ಶಾಸಕರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಆಡಳಿತಾಧಿಕಾರಿ ನೇಮಕ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಮೂರು ವರ್ಷಗಳ ಅವಧಿ ಮುಗಿದಿದ್ದು, ಮುಳಿಯ ಕೇಶವ ಪ್ರಸಾದ್ ಅಧ್ಯಕ್ಷತೆ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ತಾಪಂ ಕಾರ್ಯನಿರ್ವಹಣಾ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಪುತ್ತೂರು ತಾಪಂ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಕಳೆದ 5 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ನವೀನ್ ಭಂಡಾರಿ ಬ್ರಹ್ಮಾವರ ತಾಪಂ ಇ.ಒ. ಆಗಿ ವರ್ಗವಾಗಿದ್ದಾರೆ. ಇದೀಗ ಅವರು ಪುತ್ತೂರು ದೇವಳದ ಆಡಳಿತಾಧಿಕಾರಿಯಾಗಿಯೂ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೊದಲು ಇವರು ದೇವಳದ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಆಡಳಿತಾಧಿಕಾರಿ ನೇಮಕ Read More »

error: Content is protected !!
Scroll to Top