ಬಡವರ ಮನೆ‌ ಮೇಲೆ ಹಾಕಿರುವ ವಿದ್ಯುತ್ ತಂತಿಗಳನ್ನು ತೆರವು ಮಾಡಿ : ಇಂಧನ‌ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಬಡವರ ಮನೆಯ ಮೇಲೆ ಹಾದು ಹೋಗಿರುವ ವಿದ್ಯುತ್ ತಂತಿಗಳನ್ನು ಇಲಾಖೆಯ ಖರ್ಚಿನಲ್ಲೇ ತೆರವು ಮಾಡಬೇಕು. ಮನೆಯ ಮೇಲೆ ತಂತಿ ಹೋಗಿರುವ ಕಾರಣ ಸಮಸ್ಯೆಯಾಗಿದ್ದು ಶೀಘ್ರ ತೆರವು ಮಾಡಬೇಕು‌ ಎಂದು ಶಾಸಕ ಅಶೋಕ್ ರೈ ಇಂಧನ‌ಸಚಿವ ಕೆ. ಜೆ ಜಾರ್ಜ್ ಗೆ ಮನವಿ ಮಾಡಿದ್ದಾರೆ. ಶಾಸಕರ ಪ್ರಶ್ನೆಗೆ ವಿವರಣೆ ನೀಡಿದ ಕೆಪಿಟಿಸಿಎಲ್ ಎಂ ಡಿ ಪಂಕಜ್ ಪಾಂಡೆಯವರು, ಮನೆ ಕಟ್ಟಿದ ಮೇಲೆ ತಂತಿ ಎಳೆದಿಲ್ಲ, ತಂತಿಯ ಅಡಿಯಲ್ಲೇ ಮನೆ ಕಟ್ಟಿದ್ದಾರೆ ಎಂಬ ಮಾಹಿತಿ‌ನೀಡಿದರು. ಇದಕ್ಕೆ ಪ್ರತ್ಯುತ್ತರ ನೀಡಿದ […]

ಬಡವರ ಮನೆ‌ ಮೇಲೆ ಹಾಕಿರುವ ವಿದ್ಯುತ್ ತಂತಿಗಳನ್ನು ತೆರವು ಮಾಡಿ : ಇಂಧನ‌ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ Read More »

ಎಸ್‍ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆಗೆ ಬಿಜೆಪಿ ಕಚೇರಿಯಲ್ಲಿ ಸ್ವಾಗತ

ಪುತ್ತೂರು: ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ ಮೋರ್ಚದ  ಅಧ್ಯಕ್ಷರಾಗಿ ನಿಯುಕ್ತಿಯಾದ ಹರೀಶ್ ಬಿಜತ್ರೆಯವರನ್ನು ಪುತ್ತೂರು ಬಿಜೆಪಿ ಕಛೇರಿಯಲ್ಲಿ ಸ್ವಾಗತಿಸಲಾಯಿತು. ಬಿಜೆಪಿ ಪಕ್ಷದ ಪರವಾಗಿ ಬಿಜೆಪಿ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಶಾಲು ಹೊದಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಪಿ ಜಿ ಜಗನಿವಾಶ್ ರಾವ್, ಪ್ರಮುಖರಾದ ಪುರುಷೋತ್ತಮ ಮುಂಗ್ಲಿಮನೆ, ನಿತೇಶ್ ಶಾಂತಿವನ, ಸುರೇಶ್ ಆಳ್ವಾ, ರಾಜೇಶ್ ರೈ ಪರ್ಪುಂಜ, ದಯಾನಂದ ಶೆಟ್ಟಿ, ವಿನಯ್ ಕಲ್ಲೇಗ, ವಿಶ್ವನಾಥ್ ಕುಲಾಲ್ ಉಪಸ್ಥಿತರಿದ್ದರು

ಎಸ್‍ ಟಿ ಮೋರ್ಚಾ ಅಧ್ಯಕ್ಷ ಹರೀಶ್ ಬಿಜತ್ರೆಗೆ ಬಿಜೆಪಿ ಕಚೇರಿಯಲ್ಲಿ ಸ್ವಾಗತ Read More »

ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟ | ವೆಂಕಟೇಶ್ ಪ್ರಸಾದ್ ರಿಲೇಯಲ್ಲಿ ದ್ವಿತೀಯ ಸ್ಥಾನ

ಪುತ್ತೂರು: ವೆಟರನ್ಸ್ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡಿನ ತಿರುನಲ್ವೇಲಿಯ ಅಣ್ಣಾ ಸ್ಟೇಡಿಯಂನಲ್ಲಿ ಮೂರು ದಿನಗಳ ಕಾಲ ನಡೆದ 43ನೇ ರಾಷ್ಟ್ರ ಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ 45ರ ವಯೋಮಾನದ 4×100 ರಿಲೇಯಲ್ಲಿ ದ್ವಿತೀಯ, ಮತ್ತು 4×100 ಮಿಕ್ಸೆಡ್ ರಿಲೇಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಅವರು ದರ್ಬೆತ್ತಡ್ಕ ಹಿರಿಯ ಪ್ರಾಥಮಿಕ ಶಾಲೆ,  ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಕಾಲೇಜು ಹಾಗೂ ಪುತ್ತೂರು ಸಂತ ಫಿಲೋಮಿನಾ ಪದವಿ ಕಾಲೇಜಿನ 

ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟ | ವೆಂಕಟೇಶ್ ಪ್ರಸಾದ್ ರಿಲೇಯಲ್ಲಿ ದ್ವಿತೀಯ ಸ್ಥಾನ Read More »

ವಿಷ ಜಂತು ಕಡಿದು ವ್ಯಕ್ತಿ ಮೃತ್ಯು !

ಬಂಟ್ವಾಳ: ವ್ಯಕ್ತಿಯೋರ್ವರಿಗೆ ವಿಷ ಜಂತು ಕಡಿದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ನಗ್ರಿಯಲ್ಲಿ ನಡೆದಿದೆ. ನಗ್ರಿ ನಿವಾಸಿ ಅಂದ್ರು ಡಿ’ಸೋಜಾ (60) ಮೃತಪಟ್ಟವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಂದ್ರು ಡಿ’ಸೋಜಾ ಅವರಿಗೆ ವಿಷ ಜಂತು ಕಡಿದಿದೆ. ತಕ್ಷಣ ಹಳ್ಳಿ ಔಷಧಿ ಮಾಡಲಾಗಿತ್ತು. ಗಾಯ ಉಲ್ಷಣವಾಗಿತ್ತು. ಗುಣಮುಖ ಕಾಣದೇ ಇದ್ದಾಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಷ ಜಂತು ಕಡಿದು ವ್ಯಕ್ತಿ ಮೃತ್ಯು ! Read More »

ರೈಲು ಡಿಕ್ಕಿ ಹೊಡೆದು ಕಾರ್ಮಿಕ ಮೃತ್ಯು !

ಬಂಟ್ವಾಳ : ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡು ಸಮೀಪದ ‌ಮಾರ್ನಬೈಲು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೂಲತಃ ಮಡಂತ್ಯಾರು ಪಣಕಜೆ ನಿವಾಸಿ, ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ ಮಾರ್ನಬೈಲು ದಾಸರಗುಡ್ಡೆಯಲ್ಲಿ ವಾಸವಾಗಿರುವ ಹರಿಶ್ಚಂದ್ರ (37) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕರಾಗಿರುವ ಹರಿಶ್ಚಂದ್ರ ಇಂದು ಬೆಳಿಗ್ಗೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದು, ರೈಲ್ವೆ ಹಳಿಯನ್ನು ದಾಟುವ ಸಂದರ್ಭ ರೈಲು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರಬೇಕೆಂದು ಸ್ಥಳೀಯರು ತಿಳಿಸಿದ್ದಾರೆ. ರೈಲ್ವೆ ಪೋಲೀಸ್ ಇಲಾಖೆಯ ಎ.ಎಸ್.ಐ.ಜಾನ್ ಕೊರಿಯ ಕೋಸ್ ಸ್ಥಳಕ್ಕೆ

ರೈಲು ಡಿಕ್ಕಿ ಹೊಡೆದು ಕಾರ್ಮಿಕ ಮೃತ್ಯು ! Read More »

ಫೆ.13: ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದ ವರ್ಷಾವಧಿ ಉತ್ಸವ, ಕುಟುಂಬ ದೈವಗಳ ವಾರ್ಷಿಕ ತಂಬಿಲ

ಪುತ್ತೂರು: ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದ ವರ್ಷಾವಧಿ ಉತ್ಸವ ಹಾಗೂ ಕುಟುಂಬದ ಧರ್ಮ ದೈವಗಳ ವಾರ್ಷಿಕ ತಂಬಿಲ ಫೆ.13 ಮಂಗಳವಾರ ಶ್ರೀ ದೇವಸ್ಥಾನದಲ್ಲಿ ನಡೆಯಲಿದೆ. ಉತ್ಸವದ ಅಂಗವಾಗಿ ಫೆ.7 ರಂದು ಬೆಳಿಗ್ಗೆ 8 ಕ್ಕೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿ ಹಾಗೂ ಬ್ರಹ್ಮಶ್ರೀ ದಿನೇಶ್ ಮರಡಿತ್ತಾಯ ಗುಮ್ಮಟಗದ್ದೆ ಅವರ ನೇತೃತ್ವದಲ್ಲಿ ಗೊನೆ ಕಡಿಯುವುದು. ಫೆ.13 ರಂದು ಬೆಳಿಗ್ಗೆ 9 ಕ್ಕೆ ಬೈಲಾಡಿ ಮನೆಯಲ್ಲಿ ಶ್ರೀ ವೆಂಕಟರಮಣ ದೇವರ ಮುಡಿಪು ಪೂಜೆ, ಬೆಳಿಗ್ಗೆ 8 ಕ್ಕೆ ದೇವಸ್ಥಾನದಲ್ಲಿ ದೇವತಾ

ಫೆ.13: ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನದ ವರ್ಷಾವಧಿ ಉತ್ಸವ, ಕುಟುಂಬ ದೈವಗಳ ವಾರ್ಷಿಕ ತಂಬಿಲ Read More »

ಸಾರ್ವಜನಿಕ-ಖಾಸಗಿ ಆಸ್ತಿಗಳಿಗೆ ಹಾನಿ | ಕಾನೂನಿನಲ್ಲಿ ತಿದ್ದುಪಡಿ | ಯಾವ ರೀತಿ ಇದೆ ಕಾನೂನು ?

ನವದೆಹಲಿ: ಪ್ರತಿಭಟನೆ, ಗುಂಪು ಗಲಾಟೆಯಂತಹ ಸಂದರ್ಭದಲ್ಲಿ ಸಾರ್ವಜನಿಕ / ಖಾಸಗಿ ಆಸ್ತಿಗಳಿಗೆ ಹಾನಿ ಉಂಟುಮಾಡುವುದು ಮತ್ತು ಸಾರ್ವಜನಿಕರಿಗೆ ಅನಾನುಕೂಲತೆ ಉಂಟು ಮಾಡುವ ಕುರಿತು ಕಾನೂನು ಆಯೋಗವು ಕಾನೂನುಗಳಿಗೆ ತಿದ್ದುಪಡಿಗಳನ್ನು ಶಿಫಾರಸು ಮಾಡಿದೆ. ಅಂತಹ ಸಂಘಟನೆಯ ಜವಾಬ್ದಾರಿಯುತ ಪದಾಧಿಕಾರಿಗಳನ್ನು “ಅಪರಾಧಕ್ಕೆ ಪ್ರಚೋದನೆ ನೀಡಿದ ಅಪರಾಧಕ್ಕಾಗಿ ತಪ್ಪಿತಸ್ಥರೆಂದು ಪರಿಗಣಿಸಿ ದಂಡ ವಿಧಿಸಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ, ಖಾಸಗಿ ಆಸ್ತಿಗಳಿಗೆ ಉಂಟಾದ ಹಾನಿಯ ಮಾರುಕಟ್ಟೆ ಮೌಲ್ಯಕ್ಕೆ ಸಮಾನವಾದ ಭಾರಿ ದಂಡವನ್ನು ವಿಧಿಸುವ ಗುರಿಯನ್ನು ಹೊಂದಿರುವ ಅಸ್ತಿತ್ವದಲ್ಲಿರುವ ಕಾನೂನುಗಳಿಗೆ

ಸಾರ್ವಜನಿಕ-ಖಾಸಗಿ ಆಸ್ತಿಗಳಿಗೆ ಹಾನಿ | ಕಾನೂನಿನಲ್ಲಿ ತಿದ್ದುಪಡಿ | ಯಾವ ರೀತಿ ಇದೆ ಕಾನೂನು ? Read More »

ವಿಟ್ಲ ಸ್ವಸ್ತಿಕ್ ಫ್ರೆಂಡ್ಸ್ ನಿಂದ ಸ್ವಸ್ತಿಕ್ ಕಲೋತ್ಸವ | ನರೇಂದ್ರ ಟ್ರೋಫಿ ಅಂತರ್ ರಾಜ್ಯ ಕಬಡ್ಡಿ ಪಂದ್ಯಾಟ

ವಿಟ್ಲ: ವಿಟ್ಲ ಸ್ವಸ್ತಿಕ್ ಫ್ರೆಂಡ್ಸ್ ನ ಸ್ವಸ್ತಿಕ್ ಕಲೋತ್ಸವ ಹಾಗೂ ನರೇಂದ್ರ ಟ್ರೋಫಿ ಅಂತರ್ ರಾಜ್ಯ ಕಬಡ್ಡಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ವಿಟ್ಲದಲ್ಲಿ ನಡೆಯಿತು. ವಿಟ್ಲದ ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಸತೀಶ್ ಆಳ್ವಾ ಇರ ಬಾಳಿಕೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ಮೋದಿಯವರ ಹೆಸರಲ್ಲಿ  ಕಾರ್ಯಕ್ರಮ ನಡೆಯುತ್ತಿದ್ದು, ಸ್ವಸ್ತಿಕ್ ಫ್ರೆಂಡ್ಸ್ ನ ಸದಸ್ಯರು ಹಲವಾರು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದು ಉತ್ಸಾಹಿ ಯುವಕರ ತಂಡವನ್ನು ಹೊಂದಿದೆ ಎಂದರು. ವಿಟ್ಲ ಅರಮನೆಯ ಕೃಷ್ಣಯ್ಯ ವಿಟ್ಲ ಮತ್ತು

ವಿಟ್ಲ ಸ್ವಸ್ತಿಕ್ ಫ್ರೆಂಡ್ಸ್ ನಿಂದ ಸ್ವಸ್ತಿಕ್ ಕಲೋತ್ಸವ | ನರೇಂದ್ರ ಟ್ರೋಫಿ ಅಂತರ್ ರಾಜ್ಯ ಕಬಡ್ಡಿ ಪಂದ್ಯಾಟ Read More »

ಭಗವಂತನ ಕೆಲಸದಲ್ಲಿ ಕೈ ಜೋಡಿಸಿದರೆ ಅನುಗ್ರಹ ಪ್ರಾಪ್ತಿ: ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ | ಪಶುಪತಿನಾಥ ಭಜನಾ ಮಂದಿರದ ನೀಲನಕಾಶೆ ಅನಾವರಣಗೊಳಿಸಿದ ರಾಘವೇಶ್ವರ ಶ್ರೀ

ಪುತ್ತೂರು: ಭಗವಂತ ಕೈಗೊಳ್ಳುವ ಕೆಲಸದಲ್ಲಿ ನಾವು ಕೈಜೋಡಿಸಿದರೆ ಭಗವಂತನ ಅನುಗ್ರಹ ಪ್ರಾಪ್ತಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾಗಿ ಪ್ರತಿಯೊಂದು ಮನೆಯಲ್ಲೂ ಗೋಸಾಕಣೆ, ಗೋವಿನ ಆರಾಧನೆ ಮಾಡಬೇಕಾದ ಅಗತ್ಯವಿದೆ ಎಂದು ಉಡುಪಿ ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗದ ನೇತೃತ್ವದಲ್ಲಿ ಮೊಟ್ಟೆತ್ತಡ್ಕ ಎನ್.ಆರ್.ಸಿ.ಸಿ. ಸಮೀಪದ ಸಂಪ್ಯದಮೂಲೆಯ ಗೋವಿಹಾರ ಧಾಮದಲ್ಲಿ ಎರಡು ದಿನಗಳ ಕಾಲ ನಡೆದ ಗೋಲೋಕೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಭಗವಂತನ ಕೆಲಸದಲ್ಲಿ ಕೈ ಜೋಡಿಸಿದರೆ ಅನುಗ್ರಹ ಪ್ರಾಪ್ತಿ: ಶ್ರೀ ವಿಶ್ವಪ್ರಿಯತೀರ್ಥ ಸ್ವಾಮೀಜಿ | ಪಶುಪತಿನಾಥ ಭಜನಾ ಮಂದಿರದ ನೀಲನಕಾಶೆ ಅನಾವರಣಗೊಳಿಸಿದ ರಾಘವೇಶ್ವರ ಶ್ರೀ Read More »

ನಳೀಲು ದೇವಸ್ಥಾನದ ಮಹಾದ್ವಾರ, ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ | ಫೆ. 17ರಿಂದ 24ರವರೆಗೆ ನಡೆಯಲಿದೆ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ

ಪೆರ್ಲಂಪಾಡಿ: ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಹಾದ್ವಾರ ಹಾಗೂ ರಸ್ತೆಯ ಉದ್ಘಾಟನೆಯನ್ನು ಶಾಸಕ ಹಾಗೂ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಅಶೋಕ್ ಕುಮಾರ್ ರೈ ಅವರು ಫೆ. 4ರಂದು ನೆರವೇರಿಸಿದರು. ಫೆ. 17ರಿಂದ 24ರವರೆಗೆ ನಳೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಸಂದರ್ಭ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಶಾಸಕ ಅಶೋಕ್ ಕುಮಾರ್ ರೈ ಅವರು ತನ್ನ ಶಾಸಕ ನಿಧಿಯಿಂದ 20 ಲಕ್ಷ ರೂ. ಮಂಜೂರು ಮಾಡಿದ್ದರು. ಈ ರಸ್ತೆಯ ಕಾಮಗಾರಿ ಪೂರ್ಣಗೊಂಡಿದ್ದು,

ನಳೀಲು ದೇವಸ್ಥಾನದ ಮಹಾದ್ವಾರ, ರಸ್ತೆ ಉದ್ಘಾಟಿಸಿದ ಶಾಸಕ ಅಶೋಕ್ ರೈ | ಫೆ. 17ರಿಂದ 24ರವರೆಗೆ ನಡೆಯಲಿದೆ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ Read More »

error: Content is protected !!
Scroll to Top