ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್‍. ಅವರಿಗೆ ಚತುರ್ಥ ಸ್ಥಾನ

ಪುತ್ತೂರು: 67ನೇ ರಾಷ್ಟ್ರಮಟ್ಟದ ಯೋಗಾಸನಾ ಚಾಂಪಿಯನ್ ಶಿಪ್ -2023-24 ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲಾ 7ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಕೆ.ಎಚ್‍.  ಫೈನಲ್‍ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದು, ಚತುರ್ಥ ಸ್ಥಾನ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಸಂಗತಾನ್ ಕೇಂದ್ರೀಯ ವಿದ್ಯಾಲಯದಲ್ಲಿ ಫೆ.1 ರಿಂದ 4 ರ ತನಕ ನಡೆದ ಸ್ಪರ್ಧೆಯಲ್ಲಿ ದೆಹಲಿ, ಗುಜರಾತ್, ಕರ್ನಾಟಕ, ಮಹಾರಾಷ್ಟ್ರ, ತ್ರಿಪುರಾ, ವೆಸ್ಟ್ ಬೆಂಗಾಲ್‍ ಫೈನಲ್‍ ಗೆ ಆಯ್ಕೆಯಾಗಿತ್ತು. ಶ್ರೀಮಾ ಕೆ.ಎಚ್‍. ಸುಳ್ಯ ತಾಲೂಕಿನ […]

ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಶ್ರೀಮಾ ಕೆ.ಎಚ್‍. ಅವರಿಗೆ ಚತುರ್ಥ ಸ್ಥಾನ Read More »

ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ | ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು

ಸುಳ್ಯ: ಸುಳ್ಯ ಬಿಜೆಪಿ ನೂತನ ಮಂಡಲ ಸಮಿತಿ ವಿಚಾರದಲ್ಲಿ ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಕಾರ್ಯಕರ್ತರು ಕಚೇರಿಗೆ ಬೀಗ ಜಡಿದ ಘಟನೆ ಭಾನುವಾರ ನಡೆದಿದೆ. ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಪ್ರಮುಖರು ಹಾಗೂ ಮಹಾಶಕ್ತಿ ಕೇಂದ್ರದವರು ಸಭೆ ನಡೆಸಿದ್ದಾರೆ. ಸಭೆ ಮುಗಿದ ಬಳಿಕ ಮುಖಂಡರು ಹೊರ ಬರುತ್ತಿದ್ದಂತೆ ಕಾರ್ಯಕರ್ತರು ಕಚೇರಿಗೆ ಬೀಗ

ಸುಳ್ಯ ಬಿಜೆಪಿಯಲ್ಲಿ ಅಸಮಾಧಾನ | ಕಚೇರಿಗೆ ಬೀಗ ಜಡಿದ ಕಾರ್ಯಕರ್ತರು Read More »

ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ

ಮಂಗಳೂರು : ಬಿ ಇ ಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇಂದು  ನಡೆಯಿತು. ಸಮಾರಂಭದಲ್ಲಿ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೇ ಗೌಡ ಪಾಲ್ಗೊಂಡು ಶುಭ ಹಾರೈಸಿದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ್ ಕುಮಾರ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಪ್ರಾಚಾರ್ಯೆ ಅಪರ್ಣಾ, ತರಗತಿ ಸಲಹೆಗಾರರಾದ ರೋಷನ್ ಕುಮಾರ್, ಸಾಧನಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಯಶವಂತ ಮಾಡ, ವನಿತಾ,

ಬಿಇಎಂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ Read More »

ಗೋವು ಮನುಷ್ಯನ ಜೀವನದ ಅವಿಭಾಜ್ಯ ಅಂಗ | ಗೋಲೋಕೋತ್ಸವದಲ್ಲಿ ಹರೀಶ್ ರಾವ್

ಪುತ್ತೂರು: ಗೋವು ನಮ್ಮ ಜೀವನದ ಅವಿಭಾಜ್ಯ ಅಂಗ. ದುರಾದೃಷ್ಟವಶಾತ್ ಇಂದಿನ ಜನಾಂಗ ಅದನ್ನು ಮರೆಯುತ್ತಿದ್ದು, ಮುಂದಿನ ಪೀಳಿಗೆಗೆ ಗೋವಿನ ಮಹತ್ವದ ಕುರಿತು ತಿಳಿಹೇಳಬೇಕಾದ ಅಗತ್ಯವಿದೆ ಎಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಹೇಳಿದರು. ಅವರು ಭಾನುವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ಗೋಸೇವಾ ಬಳಗದ ನೇತೃತ್ವದಲ್ಲಿ ಮೊಟ್ಟೆತ್ತಡ್ಕ ಎನ್‍.ಆರ್‍..ಸಿ.ಸಿ. ಸಮೀಪದ ಸಂಪ್ಯದಮೂಲೆಯಲ್ಲಿರುವ ಗೋವಿಹಾರ ಧಾಮದಲ್ಲಿ ಎರಡು ದಿನಗಳ ಕಾಲ ನಡೆದ ಗೋಲೋಕೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಗೋವು-ನಾವು

ಗೋವು ಮನುಷ್ಯನ ಜೀವನದ ಅವಿಭಾಜ್ಯ ಅಂಗ | ಗೋಲೋಕೋತ್ಸವದಲ್ಲಿ ಹರೀಶ್ ರಾವ್ Read More »

ಎಂದೆಂದಿಗೂ ಸಾಂಪ್ರದಾಯಿಕ ನೆಲಮೂಲದ ಸಂಸ್ಕೃತಿ ಉಳಿಯಬೇಕು : ತುಕಾರಾಮ ಪೂಜಾರಿ

ಬಿ.ಸಿ ರೋಡ್ : ಅನೇಕ ಚಮತ್ಕಾರಿಕ ಸಂಗತಿಗಳುಳ್ಳ ನಮ್ಮ ನೆಲಮೂಲದ ಸಂಸ್ಕೃತಿ ಅದೆಷ್ಟೋ ವರ್ಷಗಳ ಇತಿಹಾಸವನ್ನು ಹೊಂದಿದೆ. ನಮ್ಮ ಪೂರ್ವಜರ ಪಾಂಡಿತ್ಯ ಹಾಗೂ ಬುದ್ಧಿಮತ್ತೆಯಿಂದ ಸಮಾಜಕ್ಕೆ ಹಲವಾರು ಕೊಡುಗೆಗಳು ಸಂದಿದೆ. ಯಾವ ಕಾಲಕ್ಕೂ ಕ್ಷೇಮಕರವಾದ ನಮ್ಮ ಸಾಂಪ್ರದಾಯಿಕ ಆಚರಣೆಗಳ ಮಹತ್ವವನ್ನರಿತು ಉಳಿಸಿಕೊಂಡು ಮುಂದಿನ ತಲೆಮಾರಿಗೂ ದಾಟಿಸಬೇಕು ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ  ಹಾಗೂ ಉಪನ್ಯಾಸಕ ತುಕಾರಾಮ ಪೂಜಾರಿ ಹೇಳಿದರು. ಅವರು ಬಿ.ಸಿ ರೋಡ್ ಸಂಜಯಗಿರಿ, ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ, ತುಳು ವಸ್ತು ಸಂಗ್ರಹಾಲಯ

ಎಂದೆಂದಿಗೂ ಸಾಂಪ್ರದಾಯಿಕ ನೆಲಮೂಲದ ಸಂಸ್ಕೃತಿ ಉಳಿಯಬೇಕು : ತುಕಾರಾಮ ಪೂಜಾರಿ Read More »

ಅಕ್ಷಯ ಕಾಲೇಜು ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಅವರ ವಿವಾಹ ಔತಣಕೂಟ | ಗಣ್ಯರಿಂದ ಶುಭ ಹಾರೈಕೆ

ಪುತ್ತೂರು: ಸಂಪ್ಯ ಅಕ್ಷಯ ಕಾಲೇಜು ಆಡಳಿತಾಧಿಕಾರಿ ಅರ್ಪಿತ್ ಟಿ.ಎ. ಅವರ ವಿವಾಹ ಔತಣಕೂಟ ಭಾನುವಾರ ಕುಂಬ್ರ ಅಕ್ಷಯ ಆರ್ಕೇಡ್‍ನಲ್ಲಿ ನಡೆಯಿತು. ಅರ್ಪಿತ್ ಟಿ.ಎ. ಅವರ ವಿವಾಹ ಇತ್ತೀಚೆಗೆ  ಶಿವಾನ್ಯ ಅವರೊಂದಿಗೆ ನಡೆದಿತ್ತು. ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.

ಅಕ್ಷಯ ಕಾಲೇಜು ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಅವರ ವಿವಾಹ ಔತಣಕೂಟ | ಗಣ್ಯರಿಂದ ಶುಭ ಹಾರೈಕೆ Read More »

ಅಕ್ರಮ ಗೋಮಾಂಶ ವಶ | ಇಬ್ಬರು ಪೊಲೀಸರ ವಶಕ್ಕೆ

ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿ ರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಟಾಲ್ ಗೋ ಮಾಂಸ, ಒಂದು ಆಟೋ , ಆಲ್ಟೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಆರೋಪಿಗಳ ಪೈಕಿ ಓರ್ವ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಅಕ್ರಮ ಗೋಮಾಂಶ ವಶ | ಇಬ್ಬರು ಪೊಲೀಸರ ವಶಕ್ಕೆ Read More »

ಕುದ್ಮಾರಿನಲ್ಲಿ ನೂತನ ಮೆಡಿಕಲ್ ‘ದೈವಾನುಗ್ರಹ’ ಶುಭಾರಂಭ

ಪುತ್ತೂರು: ನೂತನ ಔಷಧ ಮಳಿಗೆ “ದೈವಾನುಗ್ರಹ” ಮೆಡಿಕಲ್ಸ್ ಕಡಬ ತಾಲೂಕಿನ ಕುದ್ಮಾರಿನ ಸುಧಾಮ ಬಿಲ್ಡಿಂಗ್‍ ನಲ್ಲಿ ಭಾನುವಾರ ಶುಭಾರಂಭಗೊಂಡಿತು. ನೂತನ ಮೆಡಿಕಲ್ ನ್ನು ಮಾಜಿ ಸಚಿವ ಎಸ್‍.ಅಂಗಾರ ಉದ್ಘಾಟಿಸಿ ಶುಭ ಹಾರೈಸಿದರು ಈ ಸಂದರ್ಭದಲ್ಲಿ ಕಟೀಲು ನಿಡ್ಯೋಡಿ ಜ್ಞಾನರತ್ನ ಎಜ್ಯುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ಗೌಡ ದೇವಸ್ಯ, ಒಕ್ಕಲಿಗ ಗೌಡ ಸಮುದಾಯ ಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಮಾಜಿ ಅಧ್ಯಕ್ಷ ವಿಶ್ವನಾಥ

ಕುದ್ಮಾರಿನಲ್ಲಿ ನೂತನ ಮೆಡಿಕಲ್ ‘ದೈವಾನುಗ್ರಹ’ ಶುಭಾರಂಭ Read More »

ಪುತ್ತೂರಿನಲ್ಲಿ ಸಂಚರಿಸಿದ ‘ಸಂವಿಧಾನ ಜಾಗೃತಿ ಜಾಥಾ’

ಪುತ್ತೂರು: ಪುತ್ತೂರು ನಗರಸಭೆ ಮತ್ತು ತಾಲೂಕು ಅಡಳಿತದ ವತಿಯಿಂದ ‘ಸಂವಿಧಾನ ಜಾಗೃತಿ ಜಾಥಾ’ ಪ್ರಯುಕ್ತ ಬೈಕ್ ರ್ಯಾಲಿ ಭಾನುವಾರ ಪುತ್ತೂರು ನಗರದಾದ್ಯಂತ ಸಂಚರಿಸಿತು. ದರ್ಬೆ ಜಂಕ್ಷನ್‌ನಿಂದ ಎನ್‌ಎಸ್‌ ಕಿಲ್ಲೆ ಮೈದಾನದ ವರೆಗೆ ದ್ಚಿಚಕ್ರ ವಾಹನಗಳಲ್ಲಿ ಜಾಥಾ ನಡೆಸಲಾಯಿತು. ತಹಸೀಲ್ದಾರ್ ಪುರಂದರ ಹೆಗ್ಡೆ ಬೈಕ್‍ ರ್ಯಾಲಿಗೆ ಚಾಲನೆ ನೀಡಿ ರಾಜ್ಯಾದ್ಯಂತ  ಸಂವಿಧಾನ ಜಾಗೃತಿ ಯನ್ನು ಯಾಕೆ ಮೂಡಿಸಬೇಕು ಎಂಬುದನ್ನ ವಿವರಿಸಿ, ಸಂವಿಧಾನದ ಮಹತ್ವವನ್ನು ತಿಳಿಸಿದರು. ನಗರಸಭೆ ಪೌರಾಯುಕ್ತ ಮಧು ಎಸ್‍.ಮನೋಹರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಗರಸಭೆ ಹಿರಿಯ ಆರೋಗ್ಯ

ಪುತ್ತೂರಿನಲ್ಲಿ ಸಂಚರಿಸಿದ ‘ಸಂವಿಧಾನ ಜಾಗೃತಿ ಜಾಥಾ’ Read More »

ಧರ್ಮಗಳ ಬಗ್ಗೆ ಅರಿತುಕೊಂಡರೆ ಸೌಹಾರ್ದತೆ ನೆಲೆಸಲು ಸಾಧ್ಯ: ಶಾಸಕ ಅಶೋಕ್ ರೈ

ಪುತ್ತೂರು: ನಾನೇ ಶ್ರೇಷ್ಠ, ನನ್ನ ಧರ್ಮ ಮಾತ್ರ ಶ್ರೇಷ್ಠ ಉಳಿದವು ಶೂನ್ಯ ಎಂಬ ಭಾವನೆ ನಮ್ಮಲ್ಲಿ ಇರಬಾರದು, ಎಲ್ಲಾ ಧರ್ಮಗಳು ಒಳಿತನ್ನೇ ಕಲಿಸಿಸುತ್ತದೆ, ಧರ್ಮಗಳ ಬಗ್ಗೆ ಪರಸ್ಪರ ಅರಿತುಕೊಂಡಲ್ಲಿ ಸಮಾಜದಲ್ಲಿ ಸೌಹಾರ್ಧತೆಯನ್ನು ಕಾಣಲು ಸಾಧ್ಯವಾಗುತ್ತದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪುರುಷರಕಟ್ಟೆ ಮದ್ರಸ ವಠಾರದಲ್ಲಿ ನಡೆಯುತ್ತಿರುವ ಧಾರ್ಮಿಕ ಮತಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಕ್ಕಳಿಗೆ ಸಣ್ಣ ಪ್ರಾಯದಲ್ಲೇ ನಮ್ಮ ಧರ್ಮದ ಆಚಾರ ವಿಚಾರಗಳನ್ನು ಕಲಿಸಬೇಕು. ತನ್ನ ಧರ್ಮವನ್ನು ಅರಿತುಕೊಳ್ಳುವುದರ ಜೊತೆಗೆ ಸಹೋದರ ಧರ್ಮದ

ಧರ್ಮಗಳ ಬಗ್ಗೆ ಅರಿತುಕೊಂಡರೆ ಸೌಹಾರ್ದತೆ ನೆಲೆಸಲು ಸಾಧ್ಯ: ಶಾಸಕ ಅಶೋಕ್ ರೈ Read More »

error: Content is protected !!
Scroll to Top