ಫೆ.5 : ಪುತ್ತಿಲ ಪರಿವಾರದಿಂದ ಸಮಾಲೋಚನಾ ಸಮಾವೇಶ

ಪುತ್ತೂರು: ಪುತ್ತಿಲ ಪರಿವಾರದ ವತಿಯಿಂದ ಸಮಾಲೋಚನಾ ಸಮಾವೇಶ ಫೆ.5 ಸೋಮವಾರ ಸಾಲ್ಮರ ಕೊಟೇಚಾ ಹಾಲ್‍ ನಲ್ಲಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ನಡೆಯುವ ಸಭೆಯ ಅಧ್ಯಕ್ಷತೆಯನ್ನು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ವಹಿಸಲಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಪಸ್ಥಿತರಿರುವರು. ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ಸಂಘಟನಾ ಸಂದೇಶ ನೀಡುವರು. ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಪುತ್ತಿಲ ಪರಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಫೆ.5 : ಪುತ್ತಿಲ ಪರಿವಾರದಿಂದ ಸಮಾಲೋಚನಾ ಸಮಾವೇಶ Read More »

ಪಜಿರೋಡಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಶಾಂತಿಗೋಡು ಗ್ರಾಮದ ಪಜಿರೋಡಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಹಾಗೂ ಶ್ರೀ ಅಯ್ಯಪ್ಪ ಭಜನಾ ಮಂದಿರದ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ದೈವಸ್ಥಾನ ವಠಾರದಲ್ಲಿ ಇಂದು ನಡೆಯಿತು. ಶ್ರೀ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ ಆಮಂತ್ರಣ ಮತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ದೈವಸ್ಥಾನದ ಗೌರವಾಧ್ಯಕ್ಷ ಮಾಯಿಲಪ್ಪ ಪಜಿರೋಡಿ, ನೆಮೋತ್ಸವ ಸಮಿತಿ ಅಧ್ಯಕ್ಷ ದೇವಪ್ಪ ಪಜಿರೋಡಿ, ಗೌರವಾಧ್ಯಕ್ಷ ಶ್ಯಾಮ್ ಭಟ್, ಸಮಿತಿ ಸದಸ್ಯರಾದ ಧರ್ಣಪ್ಪ ಬರಿಕೆ, ನಾಗೇಶ್ ಸಾರಕರೆ,

ಪಜಿರೋಡಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ವಾರ್ಷಿಕ ನೇಮೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯಿಂದ ಮಾನವೀಯತೆ ಮೆರೆದು ನೆರವಿನ ಹಸ್ತ..!

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿರುವ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೇಷ್ಟಾ’ ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ ಪಂಜಾಬಿ ಲಸ್ಸಿ ಸಂಸ್ಥೆಯ ವತಿಯಿಂದ ಐದು ದಿನದಲ್ಲಿ ಬಂದ ಲಾಭದ ಹಣವನ್ನು ಕ್ಯಾನ್ಸರ್ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಐದು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಹಸ್ತಾಂತರ ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹಸ್ತಾಂತರಿಸಿ ಮಾತನಾಡಿ, ಬಿರುವೆರ್ ಕುಡ್ಲ ಸಂಸ್ಥೆಗೆ ಸಮಾಜದಲ್ಲಿನ ಎಲ್ಲಾ ಕಷ್ಟಗಳನ್ನು ನೀಗಿಸಲು ದೇವರು

ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯಿಂದ ಮಾನವೀಯತೆ ಮೆರೆದು ನೆರವಿನ ಹಸ್ತ..! Read More »

ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ!

ಕಡಬ: ರಿಕ್ಷಾವೊಂದು ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಸಮೀಪದ ಜೋಕಟ್ಟೆಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಕುಂತೂರಿನಿಂದ ಆಲಂಕಾರು ಕಡೆಗೆ ಬರುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಾಳುಗಳ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ! Read More »

ಸಮಾಜ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?

ಪುತ್ತೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜನ ಶಿಕ್ಷಣ ಟ್ರಸ್ಟ್ ಸಹಭಾಗಿತ್ವದಲ್ಲಿ ಪುತ್ತೂರು ತಾಲೂಕು ಕೇಂದ್ರದಲ್ಲಿ ನಡೆಯುತ್ತಿರುವ ಸಾಂತ್ವನ ಕೇಂದ್ರದಲ್ಲಿ ತೆರವಾಗಿರುವ ಸಮಾಜ ಕಾರ್ಯಕರ್ತರ ಹುದ್ದೆಗೆ ಸೇವಾಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಾರ್ಯ ಅಥವಾ ಮನಃಶಾಸ್ತ್ರದಲ್ಲಿ ಪದವಿ ವಿದ್ಯಾರ್ಹತೆ ಹೊಂದಿದ್ದು, 22 ರಿಂದ 35 ವರ್ಷದೊಳಗಿನ ಕಂಪ್ಯೂಟರ್ ಜ್ಞಾನ ಹೊಂದಿರುವ, ಗೌರವಧನದ ಆಧಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಸೇವಾಸಕ್ತ ಹಾಗೂ ಕ್ಷೇತ್ರ ಅನುಭವ ಹೊಂದಿರುವ, ಪುತ್ತೂರು ತಾಲೂಕು ವ್ಯಾಪ್ತಿಯೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಸಮಾಜ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ? Read More »

ಫೆ.10 : ಡಾ.ಕೆ.ಚಿನ್ನಪ್ಪ ಗೌಡ ರಚಿತ ‘ಸಿರಿಸಂಧಿ’ ಕೃತಿ ಅನಾವರಣ

ಉಡುಪಿ: ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ (ಮಾಹೆ) ಹಾಗೂ ಮಣಿಪಾಲ ಅಕಾಡೆಮಿ ಆಫ್‍ ಹೈಯರ್ ಎಜುಕೇಶನ್ ಸಹಯೋಗದಲ್ಲಿ ಡಾ.ಕೆ.ಚಿನ್ನಪ್ಪ ಗೌಡ ಅವರ ಕೃತಿ ಮಾಚಾರು ಗೋಪಾಲ ನಾಯ್ಕ ಹೇಳಿದ ‘ಸಿರಿಸಂಧಿ’ ಬಿಡುಗಡೆ ಸಮಾರಂಭ ಫೆ.10 ಶನಿವಾರ ಬೆಳಿಗ್ಗೆ 10.30 ಕ್ಕೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರದದ ಸಲಹಾ ಸಮಿತಿ ಅಧ್ಯಕ್ಷ ಡಾ.ಬಿ.ಎ.ವಿವೇಕ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಾಹೆ ಸಹಕುಲಾಧಿಪತಿಗಳಾದ ಡಾ.ಎಚ್‍.ಎಸ್‍.ಬಲ್ಲಾಳ್‍ ಕೃತಿ

ಫೆ.10 : ಡಾ.ಕೆ.ಚಿನ್ನಪ್ಪ ಗೌಡ ರಚಿತ ‘ಸಿರಿಸಂಧಿ’ ಕೃತಿ ಅನಾವರಣ Read More »

ಪುತ್ತೂರಿನ ಅಂತರಾಷ್ಟ್ರೀಯ ಕ್ರಿಕೇಟ್ ಮೈದಾನ ಜಾಗದ ದಾಖಲೆಪತ್ರ ಹಸ್ತಾಂತರ | ಸಾಕಾರಗೊಂಡ ಮಾಜಿ ಶಾಸಕ ಸಂಜೀವ ಮಠಂದೂರು ಅವರ ಕನಸಿನ ಯೋಜನೆ

ಪುತ್ತೂರು: ಪುತ್ತೂರಿನ ಕಬಕ ಗ್ರಾಮದ ಪೆರಿಯತ್ತೋಡಿ ಎಂಬಲ್ಲಿ ನಿರ್ಮಾಣವಾಗಲಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನಕ್ಕೆ ಜಾಗದ ದಾಖಲೆಗಳ ಹಸ್ತಾಂತರ ಕಾರ್ಯಕ್ರಮ ಪುತ್ತೂರು ಆಡಳಿತ ಸೌಧದ ಸಹಾಯಕ ಆಯುಕ್ತರ ನ್ಯಾಯಾಲಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಪುತ್ತೂರಿನ ಹಿಂದಿನ ಶಾಸಕರಾಗಿದ್ದ ಸಂಜೀವ ಮಠಂದೂರು ಅವರ ಪ್ರಯತ್ನದಿಂದ ಮಂಜೂರುಗೊಂಡು ಸರಕಾರದಿಂದ ಅನುಮೋದನೆ ಪಡೆದಿದ್ದ ಯೋಜನೆಯನ್ನು ಮುಂದುವರಿಸುವ ನಿಟ್ಟಿನಲ್ಲಿ ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮಹಾಪಾತ್ರ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಅವರು ಜಮೀನಿನ ದಾಖಲೆ ಪತ್ರಗಳನ್ನು ಕರ್ನಾಟಕ ಕ್ರಿಕೆಟ್ ಅಸೋಶಿಯೇಷನ್ ಅಧ್ಯಕ್ಷ

ಪುತ್ತೂರಿನ ಅಂತರಾಷ್ಟ್ರೀಯ ಕ್ರಿಕೇಟ್ ಮೈದಾನ ಜಾಗದ ದಾಖಲೆಪತ್ರ ಹಸ್ತಾಂತರ | ಸಾಕಾರಗೊಂಡ ಮಾಜಿ ಶಾಸಕ ಸಂಜೀವ ಮಠಂದೂರು ಅವರ ಕನಸಿನ ಯೋಜನೆ Read More »

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ಅನುಮತಿ | ವಾರಣಾಸಿ ನ್ಯಾಯಾಲಯ ಆದೇಶ

ವಾರಣಾಸಿ: ಜ್ಞಾನವಾಪಿ ಮಸೀದಿಯ ಮೊಹರು ಮಾಡಿದ ನೆಲಮಳಿಗೆಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ವಾರಣಾಸಿ ನ್ಯಾಯಾಲಯ ಅನುಮತಿ ನೀಡಿದೆ. ಬುಧವಾರ ಈ ಅನುಮತಿ ಆದೇಶ ಹೊರಡಿಸಿದ್ದು, ಆದೇಶದ ಪ್ರಕಾರ ಜ್ಞಾನವಾಪಿ ಮಸೀದಿಯೊಳಗೆ ಮುಚ್ಚಿದ ಪ್ರದೇಶದವಾದ  ವ್ಯಾಸ್ ಜೀ ಕಾ ತಹಖಾನಾದಲ್ಲಿ ಹಿಂದೂ ಭಕ್ತಾದಿಗಳು ಪ್ರಾರ್ಥನೆ ಸಲ್ಲಿಸಬಹುದು. ಈ ಕುರಿತು ಮುಂದಿನ ಏಳು ದಿನಗಳಲ್ಲಿ ವ್ಯವಸ್ಥೆಗಳನ್ನು ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಈ ಕುರಿತು ಮಾಧ್ಯಮದವರಿಗೆ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಮಾಹಿತಿ ನೀಡಿದ್ದು, ಎಲ್ಲರಿಗೂ ಪೂಜೆ

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಧರ್ಮದವರಿಗೆ ಪೂಜೆ ಮಾಡಲು ಅನುಮತಿ | ವಾರಣಾಸಿ ನ್ಯಾಯಾಲಯ ಆದೇಶ Read More »

ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ | ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನೆ

ರಾಯಚೂರು: ಕಿಡಿಗೇಡಿಗಳು ಟಿಪ್ಪುಸುಲ್ತಾನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪರಿಣಾಮ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಮುಸ್ಲಿಂ ಸಮುದಾಯ ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದೆ. ಸಿರವಾರ ಪಟ್ಟಣದ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್ ನಲ್ಲಿ ಹಾಕಲಾಗಿದ್ದ ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕುವ ಮೂಲಕ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿತ್ತು. ಆಕ್ರೋಶಗೊಂಡ ಪ್ರತಿಭಟನಾಕಾರರು ಚಪ್ಪಲಿ ಹಾರ ಹಾಕಿದವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದೆ. ಮಾಹಿತಿ ತಿಳಿದ ಪೊಲೀಸರು ಮುಖಂಡರ ಜತೆ

ಟಿಪ್ಪು ಭಾವಚಿತ್ರಕ್ಕೆ ಚಪ್ಪಲಿ ಹಾರ | ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನೆ Read More »

2024 ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿ ಬಿಡುಗಡೆ | ಕರ್ನಾಟಕದಿಂದ 9 ಮಂದಿ ಆಯ್ಕೆ

ನವದೆಹಲಿ: 2024ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿಯನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದ್ದು, ಕರ್ನಾಟಕ 9 ಮಂದಿ ಸೇರಿ ಒಟ್ಟು 132 ಮಂದಿ ಈ ಬಾರಿ ಪದ್ಮ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಪ್ರಶಸ್ತಿಗಳ ಪೈಕಿ 5 ಮಂದಿ ಪದ್ಮ ವಿಭೂಷಣ, 17 ಮಂದಿ ಪದ್ಮಭೂಷಣ ಹಾಗೂ 110 ಮಂದಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದಿಂದ ಆಯ್ಕೆಯಾದವರ ಪಟ್ಟಿ : ಪದ್ಮಭೂಷಣಕ್ಕೆ ಸೀತಾರಾಮ್ ಜಿಂದಾಲ್ (ವ್ಯಾಪಾರ ಮತ್ತು ಕೈಗಾರಿಕೆ), ಪದ್ಮಶ್ರೀಗೆ ರೋಹನ್ ಮಾಚಂಡ ಬೋಪಣ್ಣ (ಕ್ರೀಡೆ), ಪ್ರೇಮಾ ಧನರಾಜ್ (ವೈದ್ಯಕೀಯ),

2024 ನೇ ಸಾಲಿನ ಪದ್ಮ ಪ್ರಶಸ್ತಿ ಪಟ್ಟಿ ಬಿಡುಗಡೆ | ಕರ್ನಾಟಕದಿಂದ 9 ಮಂದಿ ಆಯ್ಕೆ Read More »

error: Content is protected !!
Scroll to Top