ಲೋಕಸಭಾ ಚುನಾವಣೆವರೆಗೂ ವಿಶ್ರಮಿಸದಿರಿ: ಬಿ.ವೈ. ವಿಜಯೇಂದ್ರ

ಬೆಂಗಳೂರು: ನಮ್ಮ ಮುಂದಿರುವ ಗುರಿ ಲೋಕಸಭಾ ಚುನಾವಣೆ. ಆ ಲೋಕಸಭಾ ಚುನಾವಣೆ ಆಗುವವರೆಗೂ ನಾವು ವಿಶ್ರಾಂತಿ ಪಡೆಯುವ, ಮನೆಯಲ್ಲಿ ಕುಳಿತುಕೊಳ್ಳುವ ಸಂದರ್ಭ ಉದ್ಭವಿಸಬಾರದು. ನಮ್ಮ ಸಾಧನೆಗಳನ್ನು ಜನರ ಮುಂದಿಟ್ಟು, ಹಗಲು ರಾತ್ರಿ ಪಕ್ಷದ ಗೆಲುವಿಗಾಗಿ ಶ್ರಮ ಹಾಕಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಆರಂಭವಾದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಒಂದು ಕಡೆ ಲೋಕಸಭಾ ಚುನಾವಣೆ ಬರುತ್ತಿದೆ. ಇನ್ನೊಂದೆಡೆ ನೂರಾರು ವರ್ಷಗಳ […]

ಲೋಕಸಭಾ ಚುನಾವಣೆವರೆಗೂ ವಿಶ್ರಮಿಸದಿರಿ: ಬಿ.ವೈ. ವಿಜಯೇಂದ್ರ Read More »

ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡಕ್ಕೆ ಕೋಟ ಶ್ರೀನಿವಾಸ ಪೂಜಾರಿ ಉಸ್ತುವಾರಿ | ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿ ನೇಮಿಸಿದ ಬಿಜೆಪಿ!

ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್, ಈ ಬಾರಿ ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧ ಮೋಹನದಾಸ್ ಅಗರವಾಲ್ ಹಾಗೂ ಸುಧಾಕರ್ ರೆಡ್ಡಿ ಅವರಿಗೆ ನೀಡಲಾಗಿದೆ. ಅಲ್ಲದೇ, ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ  ಉಸ್ತುವಾರಿಗಳನ್ನು ನೇಮಕ ಮಾಡಿ ಅಧಿಕೃತ ಪಟ್ಟಿಯನ್ನು ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ಕೋಟ ಶ್ರೀನಿವಾಸ ಪೂಜಾರಿ, ಮೈಸೂರಿಗೆ ಡಾ. ಸಿ.ಎನ್. ಅಶ್ವತ್ಥ ನಾರಾಯಣ್, ಮಂಡ್ಯಕ್ಕೆ ಸುನಿಲ್ ಸುಬ್ರಮಣಿ ಅವರಿಗೆ ಉಸ್ತುವಾರಿ ವಹಿಸಲಾಗಿದೆ. ಇದರ ಜೊತೆಗೆ ಇತರ ಕ್ಷೇತ್ರವಾರು ಉಸ್ತುವಾರಿಗಳ ಪಟ್ಟಿ ಹೀಗಿದೆ. ಮೈಸೂರು: ಡಾ.ಸಿಎನ್

ಲೋಕಸಭಾ ಚುನಾವಣೆ: ದಕ್ಷಿಣ ಕನ್ನಡಕ್ಕೆ ಕೋಟ ಶ್ರೀನಿವಾಸ ಪೂಜಾರಿ ಉಸ್ತುವಾರಿ | ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿ ನೇಮಿಸಿದ ಬಿಜೆಪಿ! Read More »

ಪ್ರಧಾನಿ ಮುಂದೆ ವೈಜ್ಞಾನಿಕ ಮಾದರಿ ಪ್ರದರ್ಶಿಸಲಿದ್ದಾರೆ ಅಚಲ್ ಬಿಳಿನೆಲೆ | ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 7

ಸುಳ್ಯ: ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ – 7 ಕಾರ್ಯಕ್ರಮದಲ್ಲಿ ವೈಜ್ಞಾನಿಕ ಮಾದರಿ ಪ್ರದರ್ಶಿಸಲು ಸುಳ್ಯದ ಅಚಲ್ ಬಿಳಿನೆಲೆ ಆಯ್ಕೆಯಾಗಿದ್ದಾರೆ. ಮುಡಿಪು ಜವಾಹರ್ ನವೋದಯ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿರುವ ಅಚಲ್ ಬಿಳಿನೆಲೆ ಅವರು, ಜ. 29ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯುವ ಪರೀಕ್ಷಾ ಪೇ ಚರ್ಚಾ – 7 ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆಯ್ದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಒತ್ತಡ ನಿರ್ವಹಣೆಯ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ಇದೇ

ಪ್ರಧಾನಿ ಮುಂದೆ ವೈಜ್ಞಾನಿಕ ಮಾದರಿ ಪ್ರದರ್ಶಿಸಲಿದ್ದಾರೆ ಅಚಲ್ ಬಿಳಿನೆಲೆ | ನವದೆಹಲಿಯ ಭಾರತ್ ಮಂಟಪದಲ್ಲಿ ನಡೆಯಲಿರುವ ಪರೀಕ್ಷಾ ಪೇ ಚರ್ಚಾ 7 Read More »

ಕುದ್ಮಾರು ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ವಾರ್ಷಿಕ ನೇಮೋತ್ಸವ: ಪೂರ್ವಭಾವಿ ಸಭೆ

ಕಾಣಿಯೂರು: ಕುದ್ಮಾರು ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಪೂರ್ವಭಾವಿ ಸಭೆ ಜ. 27ರಂದು ದೈವಸ್ಥಾನದ ಆವರಣದಲ್ಲಿ ನಡೆಯಿತು. ಮಾ. 9ರಂದು ಶ್ರೀ ಶಿರಾಡಿ ರಾಜನ್ ದೈವದ ನೇಮೋತ್ಸವ ನಡೆಯಲಿದೆ. ಅಂದು ಬೆಳಿಗ್ಗೆ 9ಕ್ಕೆ ಕಟ್ಟತ್ತಾರು ಕಟ್ಟೆಯಲ್ಲಿ ಗಣಹೋಮ ನಡೆದು, ಸಂಜೆ ಅನ್ಯಾಡಿ ಗ್ರಾಮ ಚಾವಡಿಯಿಂದ ಭಂಡಾರ ಹೊರಟು ಕಟ್ಟತ್ತಾರು ಕಟ್ಟೆಯಲ್ಲಿ ನೇಮೋತ್ಸವ ನಡೆಯಲಿದೆ. ಇದೇ ಸಂದರ್ಭ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ವಾರ್ಷಿಕ ನೇಮೋತ್ಸವದ ಅಂಗವಾಗಿ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಪೂರ್ವತಯಾರಿ ನಡೆಯುತ್ತಿದ್ದು, ಯಶಸ್ಸಿಗಾಗಿ

ಕುದ್ಮಾರು ಅನ್ಯಾಡಿ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ವಾರ್ಷಿಕ ನೇಮೋತ್ಸವ: ಪೂರ್ವಭಾವಿ ಸಭೆ Read More »

ರಾಜಸ್ಥಾನದ ಜೈಪುರದಲ್ಲಿ ನಡೆಯಲಿದೆ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ | ಕರ್ನಾಟಕದ ಪ್ರತಿನಿಧಿಗಳಾಗಿ ಪ್ರಗತಿ ಶಾಲೆಯ ಶ್ರೀಮಾ, ಮೋನಿಶ್ ಆಯ್ಕೆ

ಕಾಣಿಯೂರು: ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಶ್ರೀಮಾ ಕೆ.ಎಚ್. ಹಾಗೂ ಮೋನಿಶ್ ಅವರು ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ಫೆ. 1ರಿಂದ 4ರವರೆಗೆ ಯೋಗಾಸನ ಸ್ಪರ್ಧೆ ನಡೆಯಲಿದೆ. ಕರ್ನಾಟಕ ತಂಡದಿಂದ ಒಟ್ಟು 14 ಮಂದಿ ಸ್ಪರ್ಧಿಸುತ್ತಿದ್ದು, ಇದರಲ್ಲಿ ಕಾಣಿಯೂರು ಪ್ರಗತಿ ಶಾಲೆಯ ಶ್ರೀಮಾ ಕೆ.ಎಚ್. ಹಾಗೂ ಮೋನಿಶ್ ಇಬ್ಬರು. ಇವರಿಗೆ ಪ್ರಗತಿ ವಿದ್ಯಾಸಂಸ್ಥೆ ಯೋಗಗುರು ಶಶಿಕಲಾ ಹಾಗೂ ಸಂತೋಷ್ ಮುಂಡಕಜೆ ಸುಳ್ಯ ಅವರು ತರಬೇತಿ ನೀಡಿದ್ದಾರೆ. ಶ್ರೀಮಾ ಕೆ.ಎಚ್. ಅವರು ಕುಶಾಲಪ್ಪ

ರಾಜಸ್ಥಾನದ ಜೈಪುರದಲ್ಲಿ ನಡೆಯಲಿದೆ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ | ಕರ್ನಾಟಕದ ಪ್ರತಿನಿಧಿಗಳಾಗಿ ಪ್ರಗತಿ ಶಾಲೆಯ ಶ್ರೀಮಾ, ಮೋನಿಶ್ ಆಯ್ಕೆ Read More »

ಅಯೋಧ್ಯೆಯಿಂದ ರಾಜ್ಯಕ್ಕೆ ಬರಲಿದೆಯೇ ರಾಮನ ಮೂರ್ತಿ?? | ರಾಘವೇಶ್ವರ ಶ್ರೀಗಳಿಂದ ಗೋಕರ್ಣದಲ್ಲಿ ಪ್ರತಿಷ್ಠಾಪನೆಗೆ ಚಿಂತನೆ?!

ಅಯೋಧ್ಯೆಯಲ್ಲಿ ನಿರ್ಮಾಣಗೊಂಡ ನೂತನ ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೆಂದು ಅಂತಿಮಗೊಂಡ ಮೂರು ಮೂರ್ತಿಗಳಲ್ಲೊಂದನ್ನು ರಾಜ್ಯಕ್ಕೆ ತರಲು ರಾಘವೇಶ್ವರ ಶ್ರೀ ಉತ್ಸಾಹಿತರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಮೂಲದ ಶಿಲ್ಪಿ ಗಣೇಶ್‌ ಭಟ್‌ ಅವರು ರಚಿಸಿದ ವಿಗ್ರಹ ಇದಾಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಂಡಿದೆ. ಉಳಿದೆರಡು ವಿಗ್ರಹಗಳನ್ನು ಅಯೋಧ್ಯೆಯಲ್ಲಿ ವೀಕ್ಷಣೆಗೆ ಇಡಲಾಗಿದೆ. ಇದನ್ನು ವೀಕ್ಷಿಸಿದ ಬಳಿಕ ರಾಘವೇಶ್ವರ ಶ್ರೀ ಪ್ರತಿಕ್ರಿಯೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಚಿಸಿದ ಶ್ರೀರಾಮನ ವಿಗ್ರಹವನ್ನು ರಾಜ್ಯಕ್ಕೆ ತಂದು ಪ್ರತಿಷ್ಠಾಪಿಸಬೇಕೆಂಬ ಅಭಿಲಾಷೆ ನಮಗೂ ಇದೆ.

ಅಯೋಧ್ಯೆಯಿಂದ ರಾಜ್ಯಕ್ಕೆ ಬರಲಿದೆಯೇ ರಾಮನ ಮೂರ್ತಿ?? | ರಾಘವೇಶ್ವರ ಶ್ರೀಗಳಿಂದ ಗೋಕರ್ಣದಲ್ಲಿ ಪ್ರತಿಷ್ಠಾಪನೆಗೆ ಚಿಂತನೆ?! Read More »

ಮದರಸಾಗಳಲ್ಲಿ ಶ್ರೀರಾಮನ ಅಧ್ಯಯನಕ್ಕೆ ಅವಕಾಶ!!

ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ದೇಶಾದ್ಯಂತ ರಾಮನ ಕುರಿತ ವಿಚಾರಗಳು ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ. ಅತ್ತ ಉತ್ತರಾಖಂಡದಲ್ಲಿ ಮದರಸಾಗಳಲ್ಲಿ ರಾಮ ದೇವರ ಕುರಿತ ಅಧ್ಯಯನಕ್ಕೆ ಅವಕಾಶ ಕಲ್ಪಿಸಿರುವ ಬಗ್ಗೆ ವರದಿಯಾಗಿದೆ. ಉತ್ತರಾಖಂಡದ ಮದರಸಾಗಳಲ್ಲೂ ಶ್ರೀರಾಮನ ಕುರಿತು ಅಧ್ಯಯನ ನಡೆಯಬೇಕು ಎಂದು ಹೊಸ ಪಠ್ಯವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಆ ಮೂಲಕ ಇನ್ನು ಮುಸ್ಲಿಂ ವಿದ್ಯಾರ್ಥಿಗಳು ಕೂಡ ರಾಮನ ಕುರಿತು ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಕುರಿತು ಉತ್ತರಾಖಂಡ ವಕ್ಫ್‌ ಬೋರ್ಡ್‌ ಚೇರ್ಮನ್‌ ಆಗಿರುವ ಶಾದಾಬ್‌ ಶಾಮ್ಸ್‌ ಅವರೇ ಮಾಹಿತಿ ನೀಡಿದ್ದು,

ಮದರಸಾಗಳಲ್ಲಿ ಶ್ರೀರಾಮನ ಅಧ್ಯಯನಕ್ಕೆ ಅವಕಾಶ!! Read More »

ಮಂಗಳನ ಅಂಗಳದಲ್ಲಿ ಹಾರಾಟ ನಿಲ್ಲಿಸಿದ ನಾಸಾದ ನೌಕೆ!

ಮಂಗಳ ಗ್ರಹದ ಅಧ್ಯಯನಕ್ಕೆ ತೆರಳಿದ್ದ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದ ಬಾಹ್ಯಾಕಾಶ ನೌಕೆ ‘ಇಂಜೆನ್ಯುಯಿಟಿ’ ತನ್ನ ಹಾರಾಟವನ್ನು ನಿಲ್ಲಿಸಿದೆ. ನಾಸಾದ ಪುಟ್ಟ ಹೆಲಿಕಾಪ್ಟರ್‌ ‘ಇಂಜೆನ್ಯುಯಿಟಿ’ ಮಂಗಳ ಗ್ರಹದಲ್ಲಿ ತನ್ನ ಕಡೆಯ ಹಾರಾಟವನ್ನು ನಡೆಸಿ ಹಾರಾಟ ಸ್ಥಗಿತಗೊಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ನಾಸಾ, 1.8 ಕೆ.ಜಿ ತೂಕದ ‘ಇಂಜೆನ್ಯುಯಿಟಿ’ ಮತ್ತೆಂದೂ ಹಾರಾಟ ನಡೆಸುವುದಿಲ್ಲ. ನೌಕೆಯ ರೆಕ್ಕೆಗಳು ಜಖಂಗೊಂಡಿದ್ದು, ಹೀಗಾಗಿ ಇದರ ಕಾರ್ಯ ಸ್ಥಗಿತವಾಗಿದೆ. ಪ್ರಸ್ತುತ ಬಿದ್ದಿರುವ ನೌಕೆ ಮಂಗಳ ಗ್ರಹದಲ್ಲಿಯೇ ಇರಲಿದ್ದು, ನಿಯಂತ್ರಣ ಕೊಠಡಿ ಜೊತೆ ಸಂಪರ್ಕದಲ್ಲಿರಲಿದೆ.

ಮಂಗಳನ ಅಂಗಳದಲ್ಲಿ ಹಾರಾಟ ನಿಲ್ಲಿಸಿದ ನಾಸಾದ ನೌಕೆ! Read More »

ದೈವ ನರ್ತನದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದ ನರ್ತಕ!! | ನರ್ತಕನ ಮಗನಿಗೆ ದೈವ ನೀಡಿತು ಅಭಯ!!

ಕಾಣಿಯೂರು: ದೈವ ನರ್ತನದ ವೇಳೆಯೇ ಕುಸಿದು ಬಿದ್ದು ಮೃತಪಟ್ಟಿದ್ದ ದೈವ ನರ್ತಕನ ಪುತ್ರ ಮೋನಪ್ಪ ಅವರಿಗೆ ದೈವ ಅಭಯ ನೀಡಿದೆ. ಚಾರ್ವಾಕದ ಇಡ್ಯಡ್ಕ ತರವಾಡು ಮನೆಯಲ್ಲಿ ಕೆಲ ಸಮಯಗಳ ಹಿಂದೆ ಶಿರಾಡಿ ದೈವದ ನರ್ತನ ಸೇವೆ ಮಾಡುತ್ತಿದ್ದ ಕಾಂತು ಅಜಿಲ ಅವರು ಕುಸಿದು ಬಿದ್ದು ಮೃತಪಟ್ಟಿದ್ದರು. ದೈವ ನರ್ತನದ ವೇಳೆಯೇ ನರ್ತಕ ಸಾವಿಗೀಡಾದ್ದದ್ದು ಹಲವು ಪ್ರಶ್ನೆಗಳಿಗೆ ಕಾರಣವಾಗಿತ್ತು. ಇದೀಗ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆ ಸಮೀಪಿಸುತ್ತಿದೆ. ಈ ಸಂದರ್ಭ ನಡೆಯುವ ದೈವಗಳ ನೇಮೋತ್ಸವದ ವಿಚಾರ ಪ್ರಸ್ತಾಪವಾದಾಗ,

ದೈವ ನರ್ತನದ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದ ನರ್ತಕ!! | ನರ್ತಕನ ಮಗನಿಗೆ ದೈವ ನೀಡಿತು ಅಭಯ!! Read More »

ಟೀ ಅಂಗಡಿಯಲ್ಲಿ ಕುಳಿತು ಕೇರಳ ರಾಜ್ಯಪಾಲರ ಪ್ರತಿಭಟನೆ!

ರಾಜ್ಯದ ಪ್ರಥಮ ಪ್ರಜೆ ಎಂದೇ ಕರೆಸಿಕೊಳ‍್ಳುವ ರಾಜ್ಯಪಾಲರೇ ಪ್ರತಿಭಟನೆಗೆ ಕುಳಿತರೆ ಹೇಗೆ? ಇಂತಹದ್ದೊಂದು ವಿಚಿತ್ರ ಘಟನೆ ಕೇರಳದಲ್ಲಿ ಶನಿವಾರ ನಡೆದಿದೆ. ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಸಂದರ್ಭ, ಎಸ್.ಎಫ್.ಐ. ಪ್ರತಿಭಟನೆ ನಡೆಸಿತು. ಇದರಿಂದ ಖೇದಗೊಂಡ ರಾಜ್ಯಪಾಲರು, ಅಲ್ಲೇ ಇದ್ದ ಟೀ ಅಂಗಡಿ ಮುಂದೆ ಕುಳಿತು ಪ್ರತಿಭಟನೆ ನಡೆಸಿದರು. ಮಾತ್ರವಲ್ಲ, ಆಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ, ವಿಚಾರವನ್ನು ತಿಳಿಸಿದರು. ತಾನು ರಾಜ್ಯಪಾಲರಾಗಿದ್ದರೂ ತನಗೆ ಭದ್ರತೆ ಇಲ್ಲದಂತಾಗಿದೆ ಎಂದು

ಟೀ ಅಂಗಡಿಯಲ್ಲಿ ಕುಳಿತು ಕೇರಳ ರಾಜ್ಯಪಾಲರ ಪ್ರತಿಭಟನೆ! Read More »

error: Content is protected !!
Scroll to Top