ಪಾಕಿಸ್ತಾನದ ವಿವಿಯಲ್ಲಿ ಸಂಸ್ಕೃತ ಕೋರ್ಸ್‌!

ಸಾಂಸ್ಕೃತಿಕ ಪರಂಪರೆಗೆ ಮರುಸಂಪರ್ಕ ಸಾಧಿಸಲು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಕೆ ಇಸ್ಲಾಮಾಬಾದ್‌: ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಸಲು ಕೋರ್ಸ್ ಆರಂಭಿಸಿ ಸುದ್ದಿಯಾಗಿದೆ. ಲಾಹೋರ್ ಮ್ಯಾನೇಜ್ಮೆಂಟ್ ಸೈನ್ಸಸ್ ವಿಶ್ವವಿದ್ಯಾಲಯ 1947ರ ನಂತರ ಮೊದಲ ಬಾರಿಗೆ ಭಗವದ್ಗೀತೆ ಶ್ಲೋಕ ಮತ್ತು ಮಹಾಭಾರತವನ್ನು ಪರಿಚಯಿಸಿದ್ದು ನಾಲ್ಕು ಕೋರ್ಸ್ ಪ್ರಾರಂಭಿಸಿದೆ. ವಿಶ್ವವಿದ್ಯಾಲಯ ಮೂರು ತಿಂಗಳ ಹಿಂದೆ ವಾರಾಂತ್ಯದಲ್ಲಿ ಸಂಸ್ಕೃತ ಕಾರ್ಯಾಗಾರ ಯೋಜಿಸಿತ್ತು. ಈ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳಿಂದ ಮತ್ತು ವಿದ್ವಾಂಸರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಪೂರ್ಣ ಪ್ರಮಾಣದ ಕೋರ್ಸ್‌ ಆರಂಭಿಸಿದೆ. ಈ […]

ಪಾಕಿಸ್ತಾನದ ವಿವಿಯಲ್ಲಿ ಸಂಸ್ಕೃತ ಕೋರ್ಸ್‌! Read More »

ಸುಳ್ಯ : ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವು

ಸುಳ್ಯ : ಮೈಸೂರಿನ ಮಳವಳ್ಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸುಳ್ಯ ಉಬರಡ್ಕ ಮಿತ್ತೂರು ಗ್ರಾಮದ ಕಲ್ಟಾರ್ ನಿವಾಸಿ ಶೇಷಪ್ಪ ನಾಯ್ಕ ಎಂಬವರ ಪುತ್ರ ದೀಕ್ಷಿತ್ (25) ಮೃತಪಟ್ಟವರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ಟಾರಿನ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ. ಗಂಭೀರ ಗಾಯಗೊಂಡ ದೀಕ್ಷಿತ್‌ರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ

ಸುಳ್ಯ : ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕ ಸಾವು Read More »

ನರೇಗಾ ಇನ್ನು ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ

ಕೆಲಸದ ದಿನ, ಕೂಲಿ ಹೆಚ್ಚಳ ನವದೆಹಲಿ: ಸರ್ಕಾರದ ಬಡವರ ಪರವಾದ ಮಹತ್ವದ ಯೋಜನೆಯಾಗಿರುವ ನರೇಗಾದ ಹೆಸರು ಇನ್ನು ಬದಲಾಗಲಿದೆ. ಈ ಯೋಜನೆಗೆ ಹಲಕವು ಬದಲಾವಣೆಗಳೊಂದಿಗೆ ʻಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆʼ ಎಂದು ಹೆಸರಿಡಲು ಕೇಂದ್ರ ಸರ್ಕಾರ ಅನುಮೋದಿಸಿದೆ. ನರೇಗಾಕ್ಕೆ ʻಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆʼಯಾಗಿ ಮರು ನಾಮಕರಣ ಮಾಡಿಈ ಯೋಜನೆ ಅಡಿಯಲ್ಲಿ ಕನಿಷ್ಠ ಉದ್ಯೋಗ ದಿನಗಳ ಸಂಖ್ಯೆಯನ್ನು ಸರ್ಕಾರ 125 ದಿನಗಳಿಗೆ ಹೆಚ್ಚಿಸಿದೆ. ಅಲ್ಲದೆ ಕನಿಷ್ಠ ವೇತನ ದಿನಕ್ಕೆ 240 ರೂ.ಗೆ ಪರಿಷ್ಕರಿಸಲಾಗಿದೆ. ಇದಲ್ಲದೆ

ನರೇಗಾ ಇನ್ನು ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ Read More »

ಮತಗಳ್ಳತನ ಪ್ರಕರಣ : ಮಾಜಿ ಶಾಸಕ ಸೇರಿ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌

ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನವಾದ ಆರೋಪ ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಕೃತ್ಯದಲ್ಲಿ ಪ್ರಭಾವಿ ನಾಯಕನ ಪಾತ್ರ ಸಿಐಡಿ ತನಿಖೆಯಲ್ಲಿ ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಎಸ್‌ಐಟಿ ತಂಡ ಬೆಂಗಳೂರು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಶುಕ್ರವಾರ ಚಾರ್ಜ್‌ಶೀಟ್ ಸಲ್ಲಿಸಿದೆ. ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ ಒಟ್ಟು 7 ಜನರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ

ಮತಗಳ್ಳತನ ಪ್ರಕರಣ : ಮಾಜಿ ಶಾಸಕ ಸೇರಿ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌ Read More »

ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್‌ ಸಂಸದರ ವಿರುದ್ಧ ಆಕ್ರೋಶ

ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ನ್ಯಾಯಾಧೀಶರ ಪದಚ್ಯುತಿಗೆ ಕಾಂಗ್ರೆಸ್‌ ಯತ್ನ ಬೆಂಗಳೂರು: ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲಿನ ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಸ್ವಾಮಿನಾಥನ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಂವಿಧಾನದ 124ನೇ ವಿಧಿಯೊಂದಿಗೆ 217ನೇ ವಿಧಿಯ ಅಡಿಯಲ್ಲಿ ಲೋಕಸಭೆಯಲ್ಲಿ ನಿರ್ಣಯ ಮಂಡಿಸಲಾಗಿದ್ದು, ಜಡ್ಜ್​​​ ಸ್ವಾಮಿನಾಥನ್ ಪದಚ್ಯುತಿಗೆ ಮಹಾಭಿಯೋಗ ನೋಟೀಸ್‌ ನೀಡಲಾಗಿದೆ. ಈ ನೋಟೀಸ್‌ಗೆ ಕರ್ನಾಟಕದ ಕಾಂಗ್ರೆಸ್ ಸಂಸದರಾದ ಶ್ರೇಯಸ್ ಪಟೇಲ್ (ಹಾಸನ), ಪ್ರಭಾ ಮಲ್ಲಿಕಾರ್ಜುನ (ದಾವಣಗೆರೆ)

ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್‌ ಸಂಸದರ ವಿರುದ್ಧ ಆಕ್ರೋಶ Read More »

ಔತಣಕೂಟ ವಿವಾದ: ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಬೆಳಗಾವಿ: ಶಾಸಕರ ಜೊತೆಗೆ ನಗರದ ಹೊರವಲಯದಲ್ಲಿ ಔತಣಕೂಟ ನಡೆಸಿದ ವಿವಾದಕ್ಕೆ ಸಂಬಂಧಿಸಿದ ಹಾಗೆ ಡಿಸಿಎಂ ‌ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸ್ಥಳೀಯರು ಮತ್ತು ಪಕ್ಷದವರು ಪ್ರೀತಿಯಿಂದ ಆಹ್ವಾನಿಸಿದ ಕಾರಣಕ್ಕೆ ಔತಣಕೂಟದಲ್ಲಿ ಭಾಗವಹಿಸಿರುವುದಾಗಿ ಅವರು ತಿಳಿಸಿದ್ದಾರೆ. ಪ್ರತಿನಿತ್ಯ ಸ್ಥಳೀಯರು ಅಥವಾ ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಾರೆ. ಪ್ರೀತಿಯಿಂದ ಕರೆದಾಗ ಬೇಡ ಎನ್ನಲು ಆಗುವುದಿಲ್ಲ. ಆ ಕಾರಣಕ್ಕೆ ಒಂದೊಂದು ದಿನ ಒಂದೊಂದು ಕಡೆಗೆ ಔತಣಕ್ಕೆ ಹೋಗುತ್ತೇವೆ. ಇದು ಯಾವ ಔತಣ ಕೂಟವೂ ಅಲ್ಲ, ಏನೂ ಅಲ್ಲ ಎಂದು

ಔತಣಕೂಟ ವಿವಾದ: ಡಿ.ಕೆ. ಶಿವಕುಮಾರ್ ಹೇಳಿದ್ದೇನು? Read More »

ಪಡ್ಡಾಯೂರಿನ ವ್ಯಕ್ತಿ ಮೃತ್ಯು

ಪುತ್ತೂರು: ನೆಹರೂ ನಗರದ ಪಡ್ಡಾಯೂರಿನವರಾದ, ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪ್ಪ ಅವರು ನಿಧನರಾಗಿದ್ದಾರೆ. ಅವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ತೀವ್ರವಾಗಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಕೆಲಸ ಮಾಡುತ್ತಿದ್ದ ಅವರು ಕುಚುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

ಪಡ್ಡಾಯೂರಿನ ವ್ಯಕ್ತಿ ಮೃತ್ಯು Read More »

ಎಂ‌ಬಿ‌ಎ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ನಗರದ ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರ ಎಂಬಲ್ಲಿ ಎಂಬಿಎ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಕೇರಳ ಮೂಲಕ ಜಗನ್ ಮೋಹನ್(25) ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಜಗನ್ ಶಾಂತಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಡೆತ್‌ನೋಟ್‌ನಲ್ಲಿ ವಿಡಿಯೋ ಕಾಲ್ ಮೂಲಕ ಟಾರ್ಚರ್ ನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದು, ಮೂರು ನಂಬರ್‌ಗಳನ್ನು ‌ಸಹ ಬರೆದಿಟ್ಟಿದ್ದಾನೆ. ಫೇಕ್ ‌ವಿಡಿಯೋ‌ ಕಾಲ್‌ನಲ್ಲಿ ಹಣ ಕಳಕೊಂಡಿರುವ ಬಗ್ಗೆಯೂ ಪೊಲೀಸರಿಗೆ ಮಾಹಿತಿ ದೊರೆತಿದೆ. 25 ಸಾವಿರ ರೂ.

ಎಂ‌ಬಿ‌ಎ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು Read More »

ಮುಡಾ ಹಗರಣ : 22 ಕೋಟಿ ರೂ. ಲಂಚ ನುಂಗಿದ ಮಾಜಿ ಆಯುಕ್ತ

700 ಕೋ. ರೂ. ಮೌಲ್ಯದ 1,095 ನಿವೇಶನಗಳು ಅಕ್ರಮವಾಗಿ ಮಂಜೂರು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸುತ್ತಿಕೊಂಡಿದ್ದ ಮುಡಾ ಹಗರಣದ ಒಂದೊಂದೇ ಭ್ರಷ್ಟಾಚಾರ ಈಗ ಬಯಲಾಗತೊಡಗಿದೆ. ಜಾರಿ ನಿರ್ದೇಶನಾಲಯದ ತನಿಖೆಯಲ್ಲಿ ಮುಡಾದ ಮಾಜಿ ಆಯುಕ್ತ ಜಿಟಿ ದಿನೇಶ್ ಕುಮಾರ್ ತಮ್ಮ ಅಧಿಕಾರಾವಧಿಯಲ್ಲಿ 140 ಕೋಟಿ ರೂ. ಮೌಲ್ಯದ 283 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿದ್ದರು ಮತ್ತು ಅದಕ್ಕಾಗಿ 22.47 ಕೋಟಿ ರೂ. ಲಂಚ ಪಡೆದಿದ್ದರು ಎಂಬುದು ತಿಳಿದುಬಂದಿದೆ. ಮನಿ ಲಾಂಡರಿಂಗ್ ಆ್ಯಕ್ಟ್ (ಪಿಎಂಎಲ್‌ಎ) ಅಡಿಯಲ್ಲಿ ನಡೆಸಲಾದ ತನಿಖೆಯಲ್ಲಿ

ಮುಡಾ ಹಗರಣ : 22 ಕೋಟಿ ರೂ. ಲಂಚ ನುಂಗಿದ ಮಾಜಿ ಆಯುಕ್ತ Read More »

ಕೇಂದ್ರದ ಮಾಜಿ ಸಚಿವ, ಸ್ಪೀಕರ್‌ ಶಿವರಾಜ್‌ ಪಾಟೀಲ್‌ ನಿಧನ

ಗೃಹ ಸಚಿವ, ರಕ್ಷಣಾ ಸಚಿವ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಪಾಟೀಲ್‌ ಮುಂಬಯಿ: ಕೇಂಧ್ರದ ಮಾಜಿ ಕೇಂದ್ರ ಗೃಹ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶಿವರಾಜ್ ಪಾಟೀಲ್ ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್‌ನಲ್ಲಿ ನಿಧನರಾದರು. ಅವರಿಗೆ 91 ವರ್ಷವಾಗಿತ್ತು. ವಯೋಸಹಜ ಕಾಯಿಲೆಗಳಿಂದ ಉಂಟಾದ ದೀರ್ಘಕಾಲದ ಅನಾರೋಗ್ಯದಿಂದಾಗಿ ಪಾಟೀಲ್ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಶಿವರಾಜ್ ಪಾಟೀಲ್ 1980, 1984, 1989, 1991,

ಕೇಂದ್ರದ ಮಾಜಿ ಸಚಿವ, ಸ್ಪೀಕರ್‌ ಶಿವರಾಜ್‌ ಪಾಟೀಲ್‌ ನಿಧನ Read More »

error: Content is protected !!
Scroll to Top