ಕಾಫಿ ತೋಟದಲ್ಲಿ ಹುಲಿಯ ಮೃತದೇಹ ಪತ್ತೆ !

ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಅರಣ್ಯ ಅಧಿಕಾರಿಗಳು ಹುಲಿಯ ಮೃತದೇಹ ಪರಿಶೀಲಿಸಿದಾಗ ಬೇರೆ ಪ್ರಾಣಿಗಳೊಂದಿಗೆ ಕಾದಾಡಿರುವ ಗಾಯದ ಗುರುತುಗಳು ಕಂಡು ಬಂದಿದೆ. ಅಂದಾಜು 14 ವರ್ಷದ ಹುಲಿ ನಿತ್ರಾಣದಿಂದ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ತೋಟದ ಮಾಲೀಕರು ಮಾಹಿತಿ ನೀಡಿದ ಹಿನ್ನೆಲೆ ತಿತಿಮತಿ ಎಸಿಎಫ್ ಗೋಪಾಲ್, ಪೊನ್ನಂಪೇಟೆ ಆರ್ ಎಫ್‍ಓ ಶಂಕರಪ್ಪ, ಡಿಆ‌ರ್ ಎಫ್‍ಓ ದಿವಾಕರ್, ತಿತಿಮತಿ ವಲಯದ ಡಿಆರ್ ಎಫ್‍ಓ ರವಿಕಿರಣ್, ಚೇತನ್, ಕಲ್ಲಳ್ಳ […]

ಕಾಫಿ ತೋಟದಲ್ಲಿ ಹುಲಿಯ ಮೃತದೇಹ ಪತ್ತೆ ! Read More »

ಅಯೋಧ್ಯಾ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ! | ಆಹ್ವಾನ ತಿರಸ್ಕರಿಸಿ ಅಧಿಕೃತ ಪ್ರಕಟಣೆ ಹೊರಡಿಸಿ ಕಾರಣ ತಿಳಿಸಿದ ಕಾಂಗ್ರೆಸ್

ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ಭವ್ಯ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಹಾಜರಾಗೋದಿಲ್ಲ ಎಂದು ಕಾಂಗ್ರೆಸ್ ಪಕ್ಷ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜನವರಿ 22 ರಂದು ಮಧ್ಯಾಹ್ನ 12 ಗಂಟೆಗೆ ಅಯೋಧ್ಯಾ ಶ್ರೀರಾಮ ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು, ಈ ಮೂಲಕ ರಾಮ ಮಂದಿರ ಉದ್ಘಾಟನೆ ಆಗಲಿದೆ. ಈ ಕಾರ್ಯಕ್ರಮದಿಂದ ದೂರ ಉಳಿಯಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಅಯೋಧ್ಯಾ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಬಿಜೆಪಿಯ ರಾಜಕೀಯ ಯೋಜನೆ ಎಂದು

ಅಯೋಧ್ಯಾ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲ್ಲ! | ಆಹ್ವಾನ ತಿರಸ್ಕರಿಸಿ ಅಧಿಕೃತ ಪ್ರಕಟಣೆ ಹೊರಡಿಸಿ ಕಾರಣ ತಿಳಿಸಿದ ಕಾಂಗ್ರೆಸ್ Read More »

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಎಲ್.ಕೆ. ಅಡ್ವಾಣಿ ಭಾಗಿ: ವಿ.ಹೆಚ್.ಪಿ.

ನವದೆಹಲಿ: ಬಿಜೆಪಿ ಹಿರಿಯ ನಾಯಕ, ಅಯೋಧ್ಯೆಯಲ್ಲಿ ರಾಮ ಮಂದಿರವಾಗಲು ಪ್ರಮುಖ ಕಾರಣಕರ್ತರಾದ ಎಲ್‌ಕೆ ಅಡ್ವಾಣಿ ಅವರು ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ದೃಢಪಡಿಸಿದ್ದಾರೆ. 96ರ ಹರೆಯದ ಎಲ್‌.ಕೆ. ಅಡ್ವಾಣಿ ಅವರು ರಾಮ ಜನ್ಮಭೂಮಿ ಆಂದೋಲನದ ನೇತೃತ್ವ ವಹಿಸಿದ್ದ ಬಿಜೆಪಿ ನಾಯಕರಲ್ಲಿ ಒಬ್ಬರಾಗಿರುವ ಕಾರಣ ರಾಮಮಂದಿರ ಪ್ರಾಣ ಪ್ರತಿಷ್ಠಾನ ಸಮಾರಂಭದಲ್ಲಿ ಪಾಲ್ಗೊಳ್ಳುವ ಅವರ ನಿರ್ಧಾರ ಇಲ್ಲಿ ಪ್ರಮುಖವಾಗಿದೆ.  ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಡಿಸೆಂಬರ್‌ನಲ್ಲಿ ಬಿಜೆಪಿ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಎಲ್.ಕೆ. ಅಡ್ವಾಣಿ ಭಾಗಿ: ವಿ.ಹೆಚ್.ಪಿ. Read More »

ಏಷ್ಯಾ ಬುಕ್ ಆಫ್ ರೆಕಾರ್ಡ್’ಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹೆಸರು

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ರಾಶಿ ಕೆ.ಸಿ.  ಅವರ ಹೆಸರು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‍ ನಲ್ಲಿ ದಾಖಲಾಗಿದೆ. ರಾಷ್ಟ್ರಗೀತೆಯನ್ನು 1 ಗಂಟೆ 40 ನಿಮಿಷ, 26 ಸೆಕೆಂಡ್ ನಲ್ಲಿ ಗರಿಷ್ಠ 116 ಬಾರಿ ನಿರಂತರವಾಗಿ ಹಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ. ರಾಶಿ ಈ ಹಿಂದೆ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ರೆಕಾರ್ಡ್ಸ್ ಯುನಿವರ್ಸಿಟಿ ಸಾಧನೆಯನ್ನು ಮಾಡಿರುತ್ತಾರೆ. ಸಂಗೀತ, ನೃತ್ಯ, ಭಾಷಣ, ಏಕಪಾತ್ರಾಭಿನಯ, ನಾಟಕ, ಯೋಗ, ಕಲಿಕೆಯಲ್ಲಿಯೂ ಪ್ರತಿಭಾನ್ವಿತ

ಏಷ್ಯಾ ಬುಕ್ ಆಫ್ ರೆಕಾರ್ಡ್’ಗೆ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಹೆಸರು Read More »

ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರ್ಥಿಯಿಂದ ತ್ಯಾಜ್ಯ ತೆರವು ಮಾಡಿಸಿದ ಕೃತ್ಯ: ಠಾಣೆಗೆ ದೂರು! | ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: 7ನೇ ತರಗತಿ ವಿದ್ಯಾರ್ಥಿಯಿಂದ ವ್ಯಕ್ತಿಯೋರ್ವರು ತ್ಯಾಜ್ಯ ತೆರವು ಮಾಡಿಸಿರುವ ಘಟನೆ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರು ವಿದ್ಯಾರ್ಥಿಗೆ ನ್ಯಾಯ ದೊರಕಿಸಿಕೊಡಲು ಶ್ರಮಿಸುವ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಯ ತಂದೆ ಬಿಳಿಯೂರು ಗ್ರಾಮದ ನಡುಮನೆ ನಿವಾಸಿ ವಾಸಪ್ಪ ನಾಯ್ಕ ಎಂಬವರು ದೂರು ನೀಡಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಸೇರಿದ ಅಪ್ರಾಪ್ತ ಬಾಲಕನಿಗೆ ಮಾನಸಿಕ ಹಿಂಸೆ ನೀಡಿರುವ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರ್ಥಿಯಿಂದ ತ್ಯಾಜ್ಯ ತೆರವು ಮಾಡಿಸಿದ ಕೃತ್ಯ: ಠಾಣೆಗೆ ದೂರು! | ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು Read More »

ನೌಕಾಪಡೆಗೆ ಸೇರ್ಪಡೆಗೊಂಡ ಭಾರತದ ಪ್ರಥಮ ದೃಷ್ಠಿ 10 `ಸ್ಟಾರ್‌ ಲೈನರ್‌’ ಡ್ರೋನ್‌!

ಹೈದರಾಬಾದ್: ಭಾರತದ ಮೊದಲ ದೇಶೀಯವಾಗಿ ನೌಕಾಪಡೆಗೆ ನಿರ್ಮಿಸಲಾದ ದೃಷ್ಟಿ 10 ʼಸ್ಟಾರ್‌ಲೈನರ್ʼ‌ ಮಾನವರಹಿತ ಡ್ರೋನ್ ಬುಧವಾರ ನೌಕಾಪಡೆ ಮುಖ್ಯಸ್ಥರಾದ ಅಡ್ಮಿರಲ್‌ ಆರ್‌ ಹರಿಕುಮಾರ್‌ ಹಸಿರು ನಿಶಾನೆ ತೋರಿಸಿದರು. ಅತ್ಯಾಧುನಿಕ ಡ್ರೋನ್‌ ಈ ಕ್ಷೇತ್ರದಲ್ಲಿ ಭಾರತಕ್ಕೆ ಮಹತ್ವದ ಸ್ವಾಯತ್ತತೆ ಮತ್ತು ತಂತ್ರಜ್ಞಾನ ನಾಯಕತ್ವಕ್ಕೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಅದಾನಿ ಸಂಸ್ಥೆಯು ಈ ಅತ್ಯಾಧುನಿಕ ಡ್ರೋನ್‌ ಅನ್ನು ಅದಾನಿ ಡಿಫೆನ್ಸ್‌ ಎಂಡ್‌ ಏರೋಸ್ಪೇಸ್‌ ಸಂಸ್ಥೆ ಮೂಲಕ ತಯಾರಿಸಿದೆ. ಇಂದಿನ ಸಮಾರಂಭ ಹೈದರಾಬಾದ್‌ನ ಅದಾನಿ ಏರೋಸ್ಪೇಸ್‌ ಪಾರ್ಕ್‌ನಲ್ಲಿ ನಡೆದಿದೆ.

ನೌಕಾಪಡೆಗೆ ಸೇರ್ಪಡೆಗೊಂಡ ಭಾರತದ ಪ್ರಥಮ ದೃಷ್ಠಿ 10 `ಸ್ಟಾರ್‌ ಲೈನರ್‌’ ಡ್ರೋನ್‌! Read More »

ಎಟಿಎಂ ಕಾರ್ಡ್ ಮೋಸದ ಜಾಲ: ಮೂವರಿಗೆ ಲಕ್ಷಾಂತರ ರೂ. ವಂಚನೆ!! | ಮೋಸ ಹೋದ ಬಗೆಯನ್ನು ಬಿಚ್ಚಿಟ್ಟ ಗ್ರಾಹಕರು!

ಎಟಿಎಂನಿಂದ ಹಣ ತೆಗೆದುಕೊಡುವುದಾಗಿ ನಂಬಿಸಿ ಕಾರ್ಡ್ ಪಡೆದು ಬದಲಾಯಿಸಿ, ಹಣ ಡ್ರಾ ಮಾಡಿ ವಂಚಿಸುವ ಜಾಲವೊಂದು ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಜ. 9ರಂದು ಒಂದೇ ದಿನ ಈ ರೀತಿ ವಂಚನೆಗೆ ಒಳಗಾದವರು ನೀಡಿರುವ ದೂರಿನಂತೆ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಜ. 9ರಂದು ಬೆಳಗ್ಗೆ 10 ಗಂಟೆಗೆ ಶಿರೂರು ಮಾರ್ಕೆಟ್ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಶಿರೂರಿನ ಚೈತ್ರಾ ಎಂಬವರಿಗೆ ಬೆಳಗ್ಗೆ 10:15ಕ್ಕೆ ಶಿರೂರು ಅರ್ಬನ್ ಬ್ಯಾಂಕಿನ ಎಟಿಎಂನಲ್ಲಿ ಶಿರೂರಿನ ಬಲ್ಕೀಸ್

ಎಟಿಎಂ ಕಾರ್ಡ್ ಮೋಸದ ಜಾಲ: ಮೂವರಿಗೆ ಲಕ್ಷಾಂತರ ರೂ. ವಂಚನೆ!! | ಮೋಸ ಹೋದ ಬಗೆಯನ್ನು ಬಿಚ್ಚಿಟ್ಟ ಗ್ರಾಹಕರು! Read More »

ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ

ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎರಡು ದಿನಗಳ ಮಟ್ಟಿಗೆ ಹಿಂದೂಡಿದೆ. ಈ ಹಿಂದೆ ಏ.20 ಹಾಗೂ 21 ರಂದು ಪರೀಕ್ಷೆ ದಿನಾಂಕ ನಿಗದಿಯಾಗಿತ್ತು. ಇದೀಗ ಏ.18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಣೆ ನೀಡಿದೆ. ಏ.21 ರಂದು ಎನ್‍ ಡಿಎ ಪರೀಕ್ಷೆ ನಡೆಯಲಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ವೃತ್ತಿಪರ ಕೋರ್ಸುಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಜ.10 ರಿಂದ

ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ Read More »

ಬ್ಯುಸಿನೆಸ್ ಸ್ಟ್ರಾಟಜಿ ಗೇಮ್ | ಪುತ್ತೂರಿನ ಶಮಂತ್ ಆಳ್ವ ನೇತೃತ್ವದ ವಿದ್ಯಾರ್ಥಿ ತಂಡ ವಿಜಯ

ಪುತ್ತೂರು: ಲಂಡನ್ ನ ಕಿಂಗ್ಸ್ಟನ್ ವಿಶ್ವವಿದ್ಯಾಲಯದ ಪುತ್ತೂರಿನ ಶಮಂತ್ ಆಳ್ವ ನೇತೃತ್ವದ ವಿದ್ಯಾರ್ಥಿ ತಂಡ  ಬ್ಯುಸಿನೆಸ್ ಸ್ಟ್ರಾಟಜಿ ಗೇಮ್ ನ ಪ್ರದರ್ಶನದಲ್ಲಿ ವಿಜಯ ಸಾಧಿಸಿದೆ. ಬ್ಯುಸಿನೆಸ್ ಸ್ಟ್ರಾಟಜಿ ಗೇಮ್ ಜಾಗತಿಕ ವಿಶ್ವವಿದ್ಯಾನಿಲಯ ಮಟ್ಟದ ಸ್ಪರ್ಧೆಯಾಗಿದ್ದು, ವಿಶ್ವದಾದ್ಯಂತ ವಿಶ್ವವಿದ್ಯಾನಿಲಯಗಳ ನೂರಾರು ತಂಡಗಳು ಭಾಗವಹಿಸಿದ್ದವು. ಕಿಂಗ್ಸ್ಟನ್ ವಿಶ್ವವಿದ್ಯಾನಿಲಯದ ಶಮಂತ್ ಆಳ್ವ ತಂಡವನ್ನು ಗೆಲುವಿನತ್ತ ಮುನ್ನಡೆಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಶಮಂತ್ ಆಳ್ವ ಪ್ರಸ್ತುತ ಮುಕ್ವೆ ನಿವಾಸಿ ರವಿರಾಜ್ ಆಳ್ವ ಮತ್ತು ರೂಪರೇಖಾ ಆರ್ . ಆಳ್ವ ದಂಪತಿ ಪುತ್ರ. ಸಂತ

ಬ್ಯುಸಿನೆಸ್ ಸ್ಟ್ರಾಟಜಿ ಗೇಮ್ | ಪುತ್ತೂರಿನ ಶಮಂತ್ ಆಳ್ವ ನೇತೃತ್ವದ ವಿದ್ಯಾರ್ಥಿ ತಂಡ ವಿಜಯ Read More »

ಸ್ಕೂಟರ್ ಗೆ ಸರಕಾರಿ ಬಸ್ ಡಿಕ್ಕಿ | ವಿದ್ಯಾರ್ಥಿನಿಗೆ ಗಂಭೀರ ಗಾಯ !

ಪುಂಜಾಲಕಟ್ಟೆ: ಸ್ಕೂಟರ್ ಗೆ ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ, ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಫಲ್ಯರ ಪುತ್ರಿ, ವಾಮದಪದವು ಕಾಲೇಜು ವಿದ್ಯಾರ್ಥಿನಿ ಪಲ್ಲವಿ ಗಂಭೀರ ಗಾಯಗೊಂಡವರು. ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಸರಕಾರಿ ಬಸ್ ಇನ್ನೊಂದು ಬಸ್ ನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಪಲ್ಲವಿ ಗಂಭೀರ ಗಾಯಗೊಂಡರೆನ್ನಲಾಗಿದೆ. ಅವರನ್ನು ಮಂಗಳೂರು ಫಾದ‌ರ್ ಮುಲ್ಲರ್

ಸ್ಕೂಟರ್ ಗೆ ಸರಕಾರಿ ಬಸ್ ಡಿಕ್ಕಿ | ವಿದ್ಯಾರ್ಥಿನಿಗೆ ಗಂಭೀರ ಗಾಯ ! Read More »

error: Content is protected !!
Scroll to Top