ಮಹಿಳೆ ನಾಪತ್ತೆ : ದೂರು ದಾಖಲು

ವಿಟ್ಲ: ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಸಮೀಪದ ಪಳಿಕೆ ಜನತಾ ಕಾಲೋನಿ ನಿವಾಸಿ ಲಕ್ಷ್ಮೀ (60) ನಾಪತ್ತೆಯಾದವರು. ಮಾನಸಿಕ ಅಸ್ವಸ್ಥರಾಗಿದ್ದ ಲಕ್ಷ್ಮೀ ಅವರು ವಿಟ್ಲ ಪೇಟೆಯಲ್ಲಿ ಸುತ್ತಾಡುತ್ತಿದ್ದರು ಎನ್ನಲಾಗಿದ್ದು, ಡಿ.16 ರಂದು ಹೋದವರು ಬಳಿಕ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಮಹಿಳೆ ಕುರಿತು ತಿಳಿದು ಬಂದಲ್ಲಿ ವಿಟ್ಲ ಠಾಣೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ಮಹಿಳೆ ನಾಪತ್ತೆ : ದೂರು ದಾಖಲು Read More »

ಬ್ಯಾನರ್ ಹರಿದ ಪ್ರಕರಣ : ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಸುಳ್ಯ: ಸುಳ್ಯ ಜಾತ್ರೋತ್ಸವ ಹಾಗೂ ಅಯೋಧ್ಯೆ ರಾಮಮಂದಿರ ಕುರಿತು ಹಾಕಿರುವ ಬ್ಯಾನರ್ ಒಂದನ್ನು ಹರಿದ ಪ್ರಕರಣ ಸುಳ್ಯದಲ್ಲಿ ನಡೆದಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಆಟೋ ಚಾಲಕ ಮಾಲಕರು ಸುಳ್ಯ ಜಾತ್ರೋತ್ಸವ, ಅಯೋಧ್ಯೆ ರಾಮ ಮಂದಿರ ಮತ್ತು ಬೆಳ್ಳಿ ಹಬ್ಬ ಸಂಭ್ರಮದ ಶುಭಕೋರುವ ಬ್ಯಾನರ್ ಕೆಲ ದಿನಗಳ ಹಿಂದೆ ಅಳವಡಿಸಲಾಗಿತ್ತು ಆದರೆ ಇಂದು ಮುಂಜಾನೆ ನೋಡಿದಾಗ ಬ್ಯಾನ‌ರ್ ನಲ್ಲಿ ರಾಮ ಮಂದಿರದ ಚಿತ್ರವಿರುವ ಸ್ಥಳವನ್ನು ಮಾತ್ರ ಹರಿದು

ಬ್ಯಾನರ್ ಹರಿದ ಪ್ರಕರಣ : ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ Read More »

ಖ್ಯಾತ ಸಾಹಿತಿ, ವಿಮರ್ಶಕ, ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಸೋಮೇಶ್ವರ ಅಸ್ತಂಗತ

ಪುತ್ತೂರು: ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಸಂಶೋಧಕ, ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಸೋಮೇಶ್ವರ (88) ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅನುವಾದಕ, ವಿಮರ್ಶಕ, ಜಾನಪದ ತಜ್ಞ, ಕವಿ, ಕಥೆಗಾರರಾಗಿದ್ದ ಅವರು, 1935 ರ ಸೆ.27ರಂದು ಕೋಟೆಕಾರು ಸಮೀಪ ಅಡ್ಯ ಎಂಬಲ್ಲಿ ಜನಿಸಿದ್ದರು. ಕೇಟೆಕಾರಿನ ಸ್ಟೆಲ್ಲ ಮೇರಿಸ್ ಕಾನ್ವೆಂಟ್ ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಅನಂತರ ಇಲ್ಲಿನ ಆನಂದಾಶ್ರಮದಲ್ಲಿ ಪ್ರೌಢಶಾಲೆ ವಿಧ್ಯಾಭ್ಯಾಸ ಮಾಡಿದರು. ಅಲೋಶಿಯಸ್ ಕಾಲೇಜಿನಲ್ಲಿ ಪದವಿ ಅಭ್ಯಾಸ ಮುಗಿಸಿ, ಖಾಸಗಿಯಾಗಿ ಓದಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ. ಎ. ಪದವಿ

ಖ್ಯಾತ ಸಾಹಿತಿ, ವಿಮರ್ಶಕ, ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಸೋಮೇಶ್ವರ ಅಸ್ತಂಗತ Read More »

ನೌಕಪಡೆಯ ಯಶಸ್ವಿ ಕಾರ್ಯಾಚರಣೆ: ಅಪಹರಣಕ್ಕೊಳಗಾದ 15 ಭಾರತೀಯರ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಹೈಜಾಕ್ ಆದ ಹಡಗಿನಲ್ಲಿದ್ದ ಎಲ್ಲಾ 15 ಭಾರತೀಯರನ್ನು ಭಾರತೀಯ ನೌಕಪಡೆಯ ಕಮಾಂಡೋಗಳು ರಕ್ಷಿಸಿದ್ದಾರೆ. ಸರಕು ಹಡಗು ಎಂವಿ ಲೀಲಾ ನಾರ್ಫೋಕ್ ನ್ನು ಗುರುವಾರ ಸಂಜೆ ಸೊಮಾಲಿಯಾ ಕರಾವಳಿಯಲ್ಲಿ ಅಪಹರಿಸಲಾಗಿತ್ತು. ಇದರಲ್ಲಿ 15 ಭಾರತೀಯರಿದ್ದರು. ಹಡಗಿನಲ್ಲಿ ಐದರಿಂದ ಆರು ಅಪರಿಚಿತ ಶಸ್ತ್ರಸಜ್ಜಿತ ವ್ಯಕ್ತಿಗಳು ಇದ್ದರು ಎಂದು ತಿಳಿದು ಬಂದಿತ್ತು. ಘಟನೆಯ ಬಗ್ಗೆ ತಿಳಿದ ನಂತರ, ಯುದ್ಧನೌಕೆ ಐಎನ್ಎಸ್ ಚೆನ್ನೈ ಸೊಮಾಲಿ ಕರಾವಳಿಯಲ್ಲಿ ಅಪಹರಣಕ್ಕೊಳಗಾದ ಹಡಗು ಎಂವಿ ಲೀಲಾ ನಾರ್ಫೋಕ್ಷ್ಯ ಸಮೀಪಿಸುತ್ತಿತ್ತು ಮತ್ತು ಅಪಹರಣಕ್ಕೊಳಗಾದ ಹಡಗನ್ನ ಬಿಡುಗಡೆ

ನೌಕಪಡೆಯ ಯಶಸ್ವಿ ಕಾರ್ಯಾಚರಣೆ: ಅಪಹರಣಕ್ಕೊಳಗಾದ 15 ಭಾರತೀಯರ ರಕ್ಷಣೆ Read More »

ಬಸ್ ಪಲ್ಟಿ : ಪ್ರಯಾಣಿಕರಿಗೆ ಗಾಯ

ನೆಲ್ಯಾಡಿ : ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಯಲ್ಲಿ ಪಲ್ಟಿಯಾಗಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಬಸ್‍ ನಲ್ಲಿ ಪ್ರಯಾಣಿಸುತ್ತಿದ್ದ ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಬಸ್ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿತ್ತು ಎನ್ನಲಾಗಿದೆ.

ಬಸ್ ಪಲ್ಟಿ : ಪ್ರಯಾಣಿಕರಿಗೆ ಗಾಯ Read More »

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ- 2023 24’

ಪುತ್ತೂರು: ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ 2023 24’ ಪೆರ್ನಾಜೆ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಸಾದ್ವಿ ಶ್ರೀ ಮಾತಾ ನಂದಮಯೀ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿ, ಈ ಸಂಸ್ಥೆ ಉತ್ತರೋತ್ತರ ಅಭಿವೃದ್ದಿ ಹೊಂದಿ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕು ಪಸರಿಸಲಿ ಎಂದು ನುಡಿದರು. ನಿವೃತ್ತ ಉಪನ್ಯಾಸಕಿ ಸುಕನ್ಯಾ ಡಿ. ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ

ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ‘ಪೆರ್ನಾಜೆ ಪ್ರತಿಬಾಲಾಲಿತ್ಯ- 2023 24’ Read More »

ವಿದ್ಯುತ್ ಶಾಕ್ : ಲೈನ್‍ ಮ್ಯಾನ್ ಮೃತ್ಯು

ಸುಬ್ರಹ್ಮಣ್ಯ: ವಿದ್ಯುತ್ ಶಾಕ್ ತಗುಲಿ ಲೈನ್ ಮ್ಯಾನ್‌ ಓರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಬಳ್ಪದ ಪಾದೆ ಎಂಬಲ್ಲಿ ಶುಕ್ರವಾರ ನಡೆದಿದೆ. ಹಾಸನ ಜಿಲ್ಲೆಯ ಹೊಳೆನರಸಿಪುರ ಸಿಗರನಹಳ್ಳಿ ನಿವಾಸಿ ರಘು ಎಸ್‍.ಆರ್‍. (32) ಮೃತಪಟ್ಟವರು. ಬಳ್ಪದಲ್ಲಿ ಪವರ್‌ಮ್ಯಾನ್ ಆಗಿದ್ದ ರಘು ಎಸ್.ಆರ್. ಬಳ್ಪದ ಪಾದೆ ಸಮೀಪದ ನರಿಯಂಗ ಎಂಬಲ್ಲಿ ವಿದ್ಯುತ್‌ ಕಂಬ ಹತ್ತಿ ಕೆಲಸ ನಿರ್ವಹಣೆ ವೇಳೆ ಆಕಸ್ಮಿಕವಾಗಿ ವಿದ್ಯುತ್‌ ಪ್ರವಹಿಸಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಮೆಸ್ಕಾಂ

ವಿದ್ಯುತ್ ಶಾಕ್ : ಲೈನ್‍ ಮ್ಯಾನ್ ಮೃತ್ಯು Read More »

ವೃದ್ಧರು ಮಾತ್ರವಲ್ಲ, ವಯಸ್ಕರು ಕೂಡ ಬೂಸ್ಟರ್ ಡೋಸ್ ಪಡೆಯಬಹುದು: ರಾಜ್ಯ ಸರ್ಕಾರ ಮಾರ್ಗಸೂಚಿ

ಕಳೆದ ಆರು ತಿಂಗಳಲ್ಲಿ 18 ವರ್ಷ ತುಂಬಿದವರೂ ಸಹ ಬೂಸ್ಟರ್ ಡೋಸ್ ಅಥವಾ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ. ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ, ಕಾರ್ಬೆವಾಕ್ಸ್ ಲಸಿಕೆಯನ್ನು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಸಹವರ್ತಿ ರೋಗಿಗಳಿಗೆ ಮಾತ್ರ ಬೂಸ್ಟರ್ ಡೋಸ್ ಆಗಿ ನೀಡಲಾಗುತ್ತದೆ. ತಜ್ಞರು ಮತ್ತು ತಾಂತ್ರಿಕ ಸಲಹಾ ಸಮಿತಿ ಸದಸ್ಯರು 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಲಸಿಕೆ ಹಾಕಬಹುದೆಂದು ಸರ್ಕಾರ ಮತ್ತು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್‌ನ

ವೃದ್ಧರು ಮಾತ್ರವಲ್ಲ, ವಯಸ್ಕರು ಕೂಡ ಬೂಸ್ಟರ್ ಡೋಸ್ ಪಡೆಯಬಹುದು: ರಾಜ್ಯ ಸರ್ಕಾರ ಮಾರ್ಗಸೂಚಿ Read More »

ಅಯೋಧ್ಯೆ ರಾಮಮಂದಿರಕ್ಕೆ ತಿರುಮಲದಿಂದ 1 ಲಕ್ಷ ಲಡ್ಡು!!

ಉದ್ಘಾಟನೆಗೆ ಸಜ್ಜಾಗಿ ನಿಂತಿರುವ ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ತಿರುಪತಿ ತಿರುಮಲ ದೇಗುಲದಿಂದ ಸುಮಾರು 1 ಲಕ್ಷ ಲಡ್ಡು ಪ್ರಸಾದ ವಿತರಣೆ ಮಾಡಲಾಗುತ್ತಿದೆ. ತಿರುಪತಿಯ ವೆಂಕಟೇಶ್ವರ ದೇವಸ್ಥಾನದ ಅಧಿಕೃತ ಪಾಲಕರಾದ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಗೆ ಒಂದು ಲಕ್ಷ ಲಡ್ಡುಗಳನ್ನು ಪೂರೈಸಲಿದೆ ಎಂದು ಶುಕ್ರವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ಶ್ರೀರಾಮ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪ್ರವಾಸಿಗರಿಗೆ ವಿತರಿಸಲು ತಲಾ 25 ಗ್ರಾಂ ತೂಕದ ಒಂದು ಲಕ್ಷ ಲಡ್ಡುಗಳನ್ನು

ಅಯೋಧ್ಯೆ ರಾಮಮಂದಿರಕ್ಕೆ ತಿರುಮಲದಿಂದ 1 ಲಕ್ಷ ಲಡ್ಡು!! Read More »

ಏಷ್ಯಾದ ಶ್ರೀಮಂತ: ಮುಕೇಶ್ ಅಂಬಾನಿ ಹಿಂದಿಕ್ಕಿದ ಗೌತಮ್ ಅದಾನಿ!

ಹಿಂಡನ್ ಬರ್ಗ್ ವರದಿ ಕುರಿತಂತೆ ಕೋರ್ಟ್ ನ ಮಹತ್ವದ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಮತ್ತೆ ಗೌತಮ್ ಅದಾನಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಗೌತಮ್ ಅದಾನಿ ಅವರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಬ್ಲೂಮ್ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ನಲ್ಲಿ ಹೊರಹೊಮ್ಮಿದ್ದಾರೆ. ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿ ಅದಾನಿ ಇದ್ದು,

ಏಷ್ಯಾದ ಶ್ರೀಮಂತ: ಮುಕೇಶ್ ಅಂಬಾನಿ ಹಿಂದಿಕ್ಕಿದ ಗೌತಮ್ ಅದಾನಿ! Read More »

error: Content is protected !!
Scroll to Top