ಜ. 7ರಂದು ಸ್ನೇಹಮಿಲನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಬೆಂಗಳೂರು ಇದರ ವತಿಯಿಂದ ಸ್ನೇಹಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜನವರಿ 7ರಂದು ಬೆಂಗಳೂರಿನ ಚೌಡೇಶ್ವರಿನಗರದ  ಲಗ್ಗೆರೆಯ “ನಮ್ಮನೆ” ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಡೆಯಲಿದೆ. ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಸಮಾರಂಭ ಉದ್ಘಾಟಿಸಲಿದ್ದಾರೆ. ಕೊಡಗು ಮತ್ತು ದಕ್ಷಿಣಕನ್ನಡ ಗೌಡ ಸಮಾಜ ಬೆಂಗಳೂರು ಇದರ ಅಧ್ಯಕ್ಷ ಪಳಂಗಪ್ಪ ಪಾಣತ್ತಲೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಮುನಿರತ್ನ, ಶಾಸಕರಾದ ಮುನಿರಾಜು, ಡಾ. ಮಂತರ್ ಗೌಡ, ಬೆಳ್ಳಾರೆ ಡಾ. […]

ಜ. 7ರಂದು ಸ್ನೇಹಮಿಲನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ Read More »

ನೂತನ ಸಹಾಯಕ ಆಯುಕ್ತರಿಗೆ ಸರಕಾರಿ ನೌಕರರಿಂದ ಸ್ವಾಗತ

ಪುತ್ತೂರು: ನೂತನ ಸಹಾಯಕ ಆಯುಕ್ತರಾಗಿ ಹಾಗೂ ದಂಡಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಜುಬಿನ್ ಮೊಹಪಾತ್ರ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಸ್ವಾಗತಿಸಲಾಯಿತು. ಸಹಾಯಕ ಆಯುಕ್ತರನ್ನು ಭೇಟಿಯಾದ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಸ್ವಾಗತಿಸಿ, ಸಂಘದ ಕ್ಯಾಲೆಂಡರ್ ಅನ್ನು ನೀಡಿದರು. ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ಕಾರ್ಯದರ್ಶಿ ಅಬ್ರಹಾಂ ಎಸ್.ಎ., ರಾಜ್ಯ ಪರಿಷತ್ ಸದಸ್ಯ ಪುರುಷೋತ್ತಮ ಬಿ., ಗೌರವಾಧ್ಯಕ್ಷ ರಾಮಚಂದ್ರ, ನಿಕಟಪೂರ್ವ ಅಧ್ಯಕ್ಷ ಮೌರಿಸ್ ಮಸ್ಕರೇನಸ್, ಕವಿತಾ, ಚಂದ್ರಶೇಖರ್, ಸುಲೋಚನ ಇನ್ನಿತರರು ಉಪಸ್ಥಿತರಿದ್ದರು.

ನೂತನ ಸಹಾಯಕ ಆಯುಕ್ತರಿಗೆ ಸರಕಾರಿ ನೌಕರರಿಂದ ಸ್ವಾಗತ Read More »

ರನ್‌ವೇಯಲ್ಲೇ ಸುಟ್ಟು ಭಸ್ಮವಾದ ವಿಮಾನ!!

ವಿಮಾನ ಆಗಷ್ಟೇ ಭೂಮಿಯನ್ನು ಸ್ಪರ್ಶಿಸಿತ್ತು. ಅಷ್ಟರಲ್ಲೇ ಕಾಣಿಸಿಕೊಂಡಿತು ಬೆಂಕಿ. ವಿಮಾನದ ರೆಕ್ಕೆಯಲ್ಲಿ ಕಾಣಿಸಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಇಡೀಯ ವಿಮಾನವನ್ನು ಆಹುತಿ ತೆಗೆದುಕೊಂಡಿತು. ಇದು ನಡೆದದ್ದು ಜಪಾನಿನ ನರೆಡಾ ವಿಮಾನ ನಿಲ್ದಾಣದಲ್ಲಿ. ವಿಮಾನದಲ್ಲಿ 379 ಪ್ರಯಾಣಿಕರನ್ನು ರಕ್ಷಿಸಲಾಗಿದೆ ಎಂದು ಹೇಳಲಾಗಿದೆ. ಜಪಾನಿನ ಮಾಧ್ಯಮಗಳು ಪ್ರಸಾರ ಮಾಡಿರುವ ವೀಡಿಯೋದಲ್ಲಿ ಕಂಡುಬಂದಂತೆ, ರನ್ ವೇಯಲ್ಲಿ ಬೆಂಕಿಯುಂಡೆ ಉಗುಳತ್ತ ವಿಮಾನ ಚಲಿಸುತ್ತಿರುವುದು ಕಂಡುಬರುತ್ತಿದೆ. ಕಿಟಕಿ ಮೂಲಕ ದಟ್ಟ ಹೊಗೆ ಹೊರಹೋಗುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ.

ರನ್‌ವೇಯಲ್ಲೇ ಸುಟ್ಟು ಭಸ್ಮವಾದ ವಿಮಾನ!! Read More »

ಜ. 4: ಉಡುಪಿ ಪುತ್ತಿಗೆ ಮಠಾಧೀಶರಿಗೆ ಪುತ್ತೂರಿನಲ್ಲಿ ಪೌರ ಸನ್ಮಾನ

ಪುತ್ತೂರು: ವಿಶ್ವ ಧರ್ಮ ಸಮ್ಮೇಳನದಲ್ಲಿ ಹಿಂದೂ ಧರ್ಮದ ವಿಚಾರದಲ್ಲಿ ಭಾರತವನ್ನು ಪ್ರತಿನಿಧಿಸಿದ ಅಪರೂಪದ ಯತಿಗಳಾದ ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶೀಂದ್ರ ತೀರ್ಥ ಶ್ರೀಪಾದರಿಗೆ ಪುತ್ತೂರಿನಲ್ಲಿ ಪೌರ ಸನ್ಮಾನ ನಡೆಯಲಿದೆ ಎಂದು ಪೌರ ಸನ್ಮಾನ ಸಮಿತಿ ಅಧ್ಯಕ್ಷ ಬಲರಾಮ ಆಚಾರ್ಯ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ. 4ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಪೌರ ಸನ್ಮಾನದ ಜೊತೆಗೆ ಶ್ರೀಗಳಿಂದ ಕೋಟಿ ಗೀತಾ ಲೇಖನ

ಜ. 4: ಉಡುಪಿ ಪುತ್ತಿಗೆ ಮಠಾಧೀಶರಿಗೆ ಪುತ್ತೂರಿನಲ್ಲಿ ಪೌರ ಸನ್ಮಾನ Read More »

ಭ್ರಷ್ಟಾಚಾರ ರಹಿತ, ಪ್ರಾಮಾಣಿಕವಾಗಿ ಫಲಾನುಭವಿಯ ಮನೆ ಬಾಗಿಲಿಗೆ ಹಕ್ಕುಪತ್ರ | ಅಕ್ರಮ-ಸಕ್ರಮ, 94ಸಿ, 94ಸಿಸಿ ಹಕ್ಕು ಪತ್ರ ವಿತರಿಸಿ ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರು ಹಾಗೂ ಉಪ್ಪಿನಂಗಡಿ ಹೋಬಳಿಯಲ್ಲಿ ಬಾಕಿಯಿರುವ ಅಕ್ರಮ-ಸಕ್ರಮ, 94ಸಿ, 94ಸಿಸಿ ಹಕ್ಕುಪತ್ರ ವಿತರಣೆಯನ್ನು ಪ್ರಾಮಾಣಿಕವಾಗಿ, ಭ್ರಷ್ಟಾಚಾರ ರಹಿತವಾಗಿ ಕಾನೂನಿನ ಚೌಕಟ್ಟಿನಲ್ಲಿ, ಸಂಬಂಧ ಪಟ್ಟ ಅಧಿಕಾರಿಗಳ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಪ್ರತಿಯೊಬ್ಬ ಫಲಾನುಭವಿಯ ಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಶಾಸಕರ ಕಚೇರಿ ಎದುರು ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಪುತ್ತೂರು ಹಾಗೂ ಉಪ್ಪಿನಂಗಡಿ ಹೋಬಳಿಯ ಅಕ್ರಮ-ಸಕ್ರಮ, 94ಸಿ ಹಾಗೂ 94ಸಿಸಿ ಹಕ್ಕುಪತ್ರ ವಿತರಿಸಿ ಮಾತನಾಡಿದರು. ಇಂದು ಸುಮಾರು 460

ಭ್ರಷ್ಟಾಚಾರ ರಹಿತ, ಪ್ರಾಮಾಣಿಕವಾಗಿ ಫಲಾನುಭವಿಯ ಮನೆ ಬಾಗಿಲಿಗೆ ಹಕ್ಕುಪತ್ರ | ಅಕ್ರಮ-ಸಕ್ರಮ, 94ಸಿ, 94ಸಿಸಿ ಹಕ್ಕು ಪತ್ರ ವಿತರಿಸಿ ಶಾಸಕ ಅಶೋಕ್ ರೈ Read More »

ಬೋರ್ವೆಲ್ ಲಾರಿಯಿಂದ ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವು!!

ಕಡಬ: ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿ ನಿಲ್ಲಿಸಿದ್ದ ಬೋರ್ವೆಲ್ ಲಾರಿಯಿಂದ ಕೊಳವೆ ಬಾವಿ ಕೊರೆಯುವ ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವು ಮಾಡಿರುವ ಘಟನೆ ನಡೆದಿದೆ. ರಾಜ್ಯ ಸರಕಾರದ ಜಲಜೀವನ ಯೋಜನೆಯಡಿ ಕೊಳವೆ ಬಾವಿ ಕೊರೆಯಲು ಟೆಂಡರ್ ಆಗಿದ್ದು, ಅದರಂತೆ ಬಿಳಿನೆಲೆ ಗ್ರಾ.ಪಂ.ಗೆ ಸಂಬಂಧಿಸಿದ ಕೊಳವೆ ಬಾವಿ ಕೊರೆಯುವ ಬೋರ್ವೆಲ್ ಆಗಮಿಸಿತ್ತು. ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ರಾಜ್ಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ಕೆಲಸಗಾರರು ಲಾರಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಬೆಳಗ್ಗೆದ್ದು ನೋಡಿದಾಗ ಕೊಳವೆ ಬಾವಿ

ಬೋರ್ವೆಲ್ ಲಾರಿಯಿಂದ ಕಬ್ಬಿಣದ ಡ್ರಿಲ್ಲಿಂಗ್ ಬಿಟ್ ಕಳವು!! Read More »

ಆಲಂಕಾರು: ಕೊಂಡಾಡಿಕೊಪ್ಪ ಶಾಲಾ ಗೇಟ್ ಉದ್ಘಾಟನೆ

ಆಲಂಕಾರು: ಆಲಂಕಾರು ಗ್ರಾಮ ಪಂಚಾಯತ್ ವತಿಯಿಂದ ಕೊಂಡಾಡಿಕೊಪ್ಪ ಶಾಲೆಗೆ ಒದಗಿಸಿದ ಶಾಲಾ ಗೇಟ್ ಇದರ ಉದ್ಘಾಟನೆಯನ್ನು ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ನೆರವೇರಿಸಿದರು. ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ಕೊಂಡಾಡಿ, ಸದಸ್ಯರಾದ ಸದಾನಂದ ಆಚಾರ್ಯ, ವಾರಿಜಾ ಶ್ವೇತಕುಮಾರ್, ಆಲಂಕಾರು ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಪ್ರದೀಪ್ ರೈ ಮನವಳಿಕೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ ಕಮಿತ್ತಿಲು, ಉಪಾಧ್ಯಕ್ಷೆ ಲತಾ ಆಲಂಕಾರು, ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಪರಮೇಶ್ವರ ಗೌಡ, ನಿರ್ದೇಶಕ ಹರೀಶ್ ಗೌಡ

ಆಲಂಕಾರು: ಕೊಂಡಾಡಿಕೊಪ್ಪ ಶಾಲಾ ಗೇಟ್ ಉದ್ಘಾಟನೆ Read More »

ಮೆಡಿಕಲ್ ಶಾಪಿಗೆ ನುಗ್ಗಿದ ಆಂಬುಲೆನ್ಸ್: ಅಂಗಡಿಗಳಿಗೆ ಹಾನಿ!!

ಜನೌಷಧ ಕೇಂದ್ರಕ್ಕೆ ಆಂಬುಲೆನ್ಸ್ ನುಗ್ಗಿದ ಘಟನೆ ಮಣಿಪಾಲದ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ, ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಆಂಬುಲೆನ್ಸ್ ರಸ್ತೆ ಪಕ್ಕಕ್ಕೆ ಚಲಿಸಿದೆ. ನೇರವಾಗಿ ಜನೌಷಧ ಕೇಂದ್ರಕ್ಕೆ ಆಂಬುಲೆನ್ಸ್ ನುಗ್ಗಿದ್ದು, ಚಾಲಕ ಗಾಯಗೊಂಡಿದ್ದಾನೆ. ಜನೌಷಧ ಕೇಂದ್ರ ಸೇರಿದಂತೆ ಪಕ್ಕದ ಅಂಗಡಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಮೆಡಿಕಲ್ ಶಾಪಿಗೆ ನುಗ್ಗಿದ ಆಂಬುಲೆನ್ಸ್: ಅಂಗಡಿಗಳಿಗೆ ಹಾನಿ!! Read More »

ಸ್ಫೋಟದಲ್ಲಿ ಜೈಶ್​ ಮುಖ್ಯಸ್ಥ ಮಸೂದ್ ಅಜರ್ ಹತ್ಯೆ? ಸಾಮಾಜಿಕ ಜಾಲತಾಣದಲ್ಲಿದೆ ವಿಡಿಯೋ!!

ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ (55) ಸಾವನ್ನಪ್ಪಿದ್ದಾನೆ. ಮಂಗಳವಾರ ಬೆಳಗ್ಗೆ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಮಸೂದ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಆದರೆ ಈ ಕುರಿತಾಗಿ ಯಾವುದೇ ಅಧಿಕೃತವಾದ ಮಾಹಿತಿ ಕೂಡ ಲಭ್ಯವಾಗಿಲ್ಲ. ಮೊಹಮ್ಮದ್ ಮಸೂದ್ ಅಜರ್ ಅಲ್ವಿ, ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸ್ಥಾಪಕ. ಸೋಮವಾರ ಬೆಳಗ್ಗೆ ಭಾವಲ್‌ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಆತನ ಮೇಲೆ ಬಾಂಬ್ ಎಸೆದಿದ್ದಾರೆ ಎಂದು ವರದಿಯಾಗಿದೆ. ಮಸೂದ್ ಅಜರ್ ಸಾವಿನ ಕುರಿತು ಅಧಿಕೃತ ಘೋಷಣೆ

ಸ್ಫೋಟದಲ್ಲಿ ಜೈಶ್​ ಮುಖ್ಯಸ್ಥ ಮಸೂದ್ ಅಜರ್ ಹತ್ಯೆ? ಸಾಮಾಜಿಕ ಜಾಲತಾಣದಲ್ಲಿದೆ ವಿಡಿಯೋ!! Read More »

ಪಡ್ಡಾಯೂರಿನ ಅಂಬೇಡ್ಕರ್ ವಸತಿ ಶಾಲಾ ಸ್ವಂತ ಕಟ್ಟಡಕ್ಕೆ ಪ್ರಯತ್ನ | ವಸತಿ ಶಾಲಾ ವಾರ್ಷಿಕೋತ್ಸವದಲ್ಲಿ ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಪಡ್ಡಾಯೂರಿನ ಅಂಬೇಡ್ಕರ್ ವಸತಿ ಶಾಲೆಗೆ ಸ್ವಂತ ಕಟ್ಟಡ ಅಗತ್ಯವಿದ್ದು, ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಪಡ್ಡಾಯೂರಿನಲ್ಲಿರುವ ಉಪ್ಪಿನಂಗಡಿ ಅಂಬೇಡ್ಕರ್ ವಸತಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರದ ಶಿಕ್ಷಣವನ್ನು ನೀಡಬೇಕಾದ ಅಗತ್ಯವಿದೆ. ಇಲ್ಲಿನ ಶಿಕ್ಷಣ ಮತ್ತು ಇತರ  ಸೌಲಭ್ಯಗಳು ಚೆನ್ನಾಗಿರುವ ಬಗ್ಗೆ ಪೋಷಕರು ತಿಳಿಸಿದ್ದಾರೆ ಎಂದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರತಿಭೆಗೆ ಅಭಿನಂದನೆ

ಪಡ್ಡಾಯೂರಿನ ಅಂಬೇಡ್ಕರ್ ವಸತಿ ಶಾಲಾ ಸ್ವಂತ ಕಟ್ಟಡಕ್ಕೆ ಪ್ರಯತ್ನ | ವಸತಿ ಶಾಲಾ ವಾರ್ಷಿಕೋತ್ಸವದಲ್ಲಿ ಶಾಸಕ ಅಶೋಕ್ ಕುಮಾರ್ ರೈ Read More »

error: Content is protected !!
Scroll to Top