ಕುಕ್ಕೆ ಸುಬ್ರಹ್ಮಣ್ಯ: ಮಾವುತನನ್ನು ಗೌರವಿಸಿ ಬೀಳ್ಕೊಟ್ಟ ‘ಯಶಸ್ವಿ’

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆನೆ ‘ಯಶಸ್ವಿ’ಯ ಮಾವುತರಾಗಿದ್ದ ಶ್ರೀನಿವಾಸ ಗೌಡ ಧರ್ಮಸ್ಥಳ ಅವರು ಭಾನುವಾರ ನಿವೃತ್ತರಾದರು. ಈ ಸಂದರ್ಭ ಯಶಸ್ವಿಯು ಶ್ರೀನಿವಾಸ ಅವರಿಗೆ ಹಾರ ಹಾಕಿ ಸೊಂಡಿಲನ್ನು ಅವರ ತಲೆಯ ಮೇಲಿರಿಸಿ ಗೌರವ ಸಲ್ಲಿಸಿತು. ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆನೆ ಮಾವುತರಾಗಿ ಸುಮಾರು 15 ವರ್ಷ ಅವರು ಸೇವೆ ಸಲ್ಲಿಸಿದ್ದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಅವರು ಶ್ರೀನಿವಾಸ ಅವರನ್ನು ಸನ್ಮಾನಿಸಿದರು. ದೇವಳದ ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಉಪಸ್ಥಿತರಿದ್ದರು.

ಕುಕ್ಕೆ ಸುಬ್ರಹ್ಮಣ್ಯ: ಮಾವುತನನ್ನು ಗೌರವಿಸಿ ಬೀಳ್ಕೊಟ್ಟ ‘ಯಶಸ್ವಿ’ Read More »

ಮೇಸ್ತ್ರಿ ಗುತ್ತಿಗೆದಾರ ನೇಣು ಬಿಗಿದು ಆತ್ಮಹತ್ಯೆ!!

ಪುತ್ತೂರು: ಆರ್ಲಪದವು ನಿವಾಸಿ ಶಿವಪ್ಪ ನಾಯ್ಕ ಅವರ ಪುತ್ರ, ಮೇಸ್ತ್ರಿ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ನೇಣಿಗೆ ಶರಣಾಗಿದ್ದಾರೆ. ಜನವರಿ 1ರ ಸಂಜೆ ಮನೆಯೊಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಮೇಸ್ತ್ರಿ ಗುತ್ತಿಗೆದಾರ ನೇಣು ಬಿಗಿದು ಆತ್ಮಹತ್ಯೆ!! Read More »

ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ | ಉಳತ್ತೋಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾರ್ಥನೆ

ಉಪ್ಪಿನಂಗಡಿ: ಅಯ್ಯೋಧ್ಯೆ ಶ್ರೀರಾಮ ಮಂದಿರದ ಪವಿತ್ರ ಮಂತ್ರಾಕ್ಷತೆ ಮನೆ-ಮನೆ ವಿತರಣಾ ಕಾರ್ಯಕ್ರಮ ಹಿರೇಬಂಡಾಡಿ ಉಳತ್ತೋಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು. ಶ್ರೀ ಸುಬ್ರಹ್ಮಣ್ಯ ದೇವರ ಮುಂದೆ ಪ್ರಾರ್ಥನೆ ನಡೆದು, ಬಳಿಕ ಮಂತ್ರಾಕ್ಷತೆ ವಿತರಣಾ ಕಾರ್ಯಕ್ರಮ ನಡೆಯಿತು. ಪ್ರತಿಯೊಬ್ಬ ಹಿಂದೂವಿನ ಮನೆಗೂ ಈ ಮಂತ್ರಾಕ್ಷತೆ ತಲುಪಿ, ಶ್ರೀ ರಾಮನ ಪುಣ್ಯ ಕಾರ್ಯವನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕು ಎಂದು ಇದೇ ಸಂದರ್ಭ ತಿಳಿಸಲಾಯಿತು. ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಪ್ರಮುಖರು ಮನೆ ಮನೆ ಭೇಟಿ ನೀಡಿ ಮಂತ್ರಾಕ್ಷತೆ ವಿತರಿಸಿದರು.

ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ | ಉಳತ್ತೋಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾರ್ಥನೆ Read More »

ವೆಬ್ ಚಾನೆಲ್ ಸಬ್ ಸ್ಕ್ರೈಬ್: ವಿಜೇತರ ಘೋಷಣೆ

ಪುತ್ತೂರು: ಸಬ್ ಸ್ಕ್ರೈಬ್ ಆಗಿ ಬಹುಮಾನ ಗೆಲ್ಲಿ ವಿಶೇಷ ಕಾರ್ಯಕ್ರಮದ ವಿಜೇತರ ಹೆಸರನ್ನು ಘೋಷಣೆ ಮಾಡಲಾಗಿದೆ. ಪ್ರಥಮ ಬಹುಮಾನವನ್ನು ರಂಜಿತ್, ದ್ವಿತೀಯ ಬಹುಮಾನವನ್ನು ಸುಜಿತ್ ಕೋಡಿಂಬಾಳ, ತೃತೀಯ ಬಹುಮಾನವನ್ನು ಮನೋಹರ್ ಗೌಡ ಪಡೆದುಕೊಂಡಿದ್ದಾರೆ. ನ್ಯೂಸ್ ಪುತ್ತೂರು ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ವೆಬ್ ಚಾನೆಲ್ ಸಬ್ ಸ್ಕ್ರೈಬ್: ವಿಜೇತರ ಘೋಷಣೆ Read More »

ಎಸ್.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬ: ವಿಶೇಷ ಶಾಲೆಗೆ ಧನಸಹಾಯ, ಸಹಭೋಜನ

ಸುಳ್ಯ: ಬೆಳ್ಳಿಹಬ್ಬ ಸಂಭ್ರಮದಲ್ಲಿರುವ ಪುತ್ತೂರು ಎಸ್.ಆರ್.ಕೆ. ಲ್ಯಾಡರ್ಸ್, ತನ್ನ ಸರಣಿಯ ಎರಡನೇ ಕಾರ್ಯಕ್ರಮವನ್ನು ವಿಶಿಷ್ಟವಾಗಿ ಆಚರಿಸಿಕೊಂಡಿದೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ಇನ್ನರ್ ವ್ಹೀಲ್ ಕ್ಲಬ್ ಸಹಯೋಗದಲ್ಲಿ ಸುಳ್ಯ ಎಂ.ಬಿ. ಫೌಂಡೇಷನ್ ಪ್ರವರ್ತಿತ ಸಾಂದೀಪ್ ವಿಶೇಷ ಶಾಲೆಯ ಕ್ಷೇಮಾಭಿವೃದ್ಧಿ ನಿಧಿಗೆ ಧನ ಸಹಾಯ ನೀಡಲಾಯಿತು. ಕಾರ್ಯಕ್ರಮದ ಬಳಿಕ ಸಹಭೋಜನ ಜರಗಿತು. ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ್ ಅಮೈ ಮಾತನಾಡಿ, ವಿಶೇಷ ಶಾಲೆ ನಡೆಸುವುದೆಂದರೆ ಸಣ್ಣ ವಿಚಾರವಲ್ಲ. ಹಾಗಿದ್ದು ಎಂ.ಬಿ. ಫೌಂಡೇಷನ್ ದೊಡ್ಡ ಸಾಹಸವನ್ನೇ ಮಾಡುತ್ತಿದೆ. ಫೌಂಡೇಶನಿನ ಸಾಮಾಜಿಕ ಕಾರ್ಯ ಶ್ಲಾಘನೀಯ

ಎಸ್.ಆರ್.ಕೆ. ಲ್ಯಾಡರ್ಸ್ ಬೆಳ್ಳಿಹಬ್ಬ: ವಿಶೇಷ ಶಾಲೆಗೆ ಧನಸಹಾಯ, ಸಹಭೋಜನ Read More »

ಹಿಂಗಾರು ಬೆಳೆ ಸಮೀಕ್ಷೆ: ಮೊಬೈಲಿನಲ್ಲೇ ದಾಖಲಿಸಬಹುದು!

ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆ್ಯಪ್ ಮೂಲಕ ಹಿಂಗಾರು ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಆರಂಭಿಸಲಾಗಿದೆ. ಈ ಕುರಿತು ರೈತರಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಡಿಸೆಂಬರ್ 30ರಿಂದ ಸಮೀಕ್ಷೆ ಆರಂಭವಾಗಿದ್ದು, ರೈತರು ತಮ್ಮ ಹೊಲಗಳಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ಆಂಡ್ರಾಯ್ಡ್ ಮೊಬೈಲ್ ಅಪ್ಲಿಕೇಶನ್‌ ಮೂಲಕ ತಾವೇ ಸ್ವತಃ ದಾಖಲಿಸಬಹುದಾಗಿದೆ. ಡೌನ್‌ಲೋಡ್ ಮಾಡಿಕೊಳ್ಳಿ; ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇಸ್ಟೋರ್‌ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ

ಹಿಂಗಾರು ಬೆಳೆ ಸಮೀಕ್ಷೆ: ಮೊಬೈಲಿನಲ್ಲೇ ದಾಖಲಿಸಬಹುದು! Read More »

ಅಪ್ಪಳಿಸಿದ 1ರಿಂದ 2 ಅಡಿ ಎತ್ತರದ ಸುನಾಮಿಯ ಮೊದಲ ಅಲೆ!!

ಸೋಮವಾರ ಬೆಳಗ್ಗೆ ಸಂಭವಿಸಿದ ಪ್ರಬಲ ಭೂಕಂಪನದ ಬಳಿಕ ಜಪಾನ್ ಕರಾವಳಿಗೆ ಸುನಾಮಿಯ ಮೊದಲ ಅಲೆಗಳು ಅಪ್ಪಳಿಸಿವೆ ಎಂದು ಹೇಳಲಾಗಿದೆ. ಸೋಮವಾರ ಮಧ್ಯ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲವಾದ  ಭೂಕಂಪ ಸಂಭವಿಸಿದ್ದು, ಅಮೆರಿಕ ಭೂ ಸರ್ವೇಕ್ಷಣಾ ಇಲಾಖೆ ಸುನಾಮಿ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಜಪಾನ್ ಕರಾವಳಿ ತೀರಕ್ಕೆ 1ರಿಂದ 2 ಅಡಿ ಎತ್ತರದ ಸುನಾಮಿ ಅಲೆಗಳು ಅಪ್ಪಳಿಸಿವೆ ಎಂದು ಹೇಳಲಾಗಿದೆ. ಜಪಾನ್ ಇಶಿಕಾವಾ ಪ್ರಾಂತ್ಯದ ವಾಜಿಮಾ ನಗರಕ್ಕೆ 1.2 ಮೀಟರ್‌ ನಿಂದ 2 ಮೀಟರ್ ಗಳಷ್ಟು

ಅಪ್ಪಳಿಸಿದ 1ರಿಂದ 2 ಅಡಿ ಎತ್ತರದ ಸುನಾಮಿಯ ಮೊದಲ ಅಲೆ!! Read More »

ಸುಭದ್ರ ಸರಕಾರದ ಜತೆ ಸಮರ್ಥ ನಾಯಕ ದೇಶಕ್ಕೆ ಸಿಕ್ಕಿದ್ದಾರೆ | ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಸಂಜೀವ ಮಠಂದೂರು | ಕೇಂದ್ರ ಸರಕಾರದ ವಿವಿಧ ಯೋಜನೆಯ ಮಾಹಿತಿ

ಪುತ್ತೂರು: ಬ್ಯಾಂಕ್ ಹಾಗೂ ಸರಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಯಶಸ್ವಿಯಾಗಿ ಮಾಡಿದ್ದಾರೆ. ಇದರೊಂದಿಗೆ ಎಲ್ಲರನ್ನು ಒಟ್ಟುಗೂಡಿಸಿ, ಸರ್ವರ ವಿಕಾಸದ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಬ್ಯಾಂಕ್ ಆಫ್ ಬರೋಡಾ ಸಹಯೋಗದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆ

ಸುಭದ್ರ ಸರಕಾರದ ಜತೆ ಸಮರ್ಥ ನಾಯಕ ದೇಶಕ್ಕೆ ಸಿಕ್ಕಿದ್ದಾರೆ | ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಸಂಜೀವ ಮಠಂದೂರು | ಕೇಂದ್ರ ಸರಕಾರದ ವಿವಿಧ ಯೋಜನೆಯ ಮಾಹಿತಿ Read More »

ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ

ಚಾರ್ವಾಕ : ಅಯೋಧ್ಯೆಯಿಂದ ತರಲಾದ ಪವಿತ್ರ ಮಂತ್ರಾಕ್ಷತೆಯನ್ನು ಚಾರ್ವಾಕ ಕಪಿಲೇಶ್ವರ ದೇವಸ್ಥಾನದಿಂದ ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೋಮವಾರ ಬೆಳಿಗ್ಗೆ ತರಲಾಯಿತು. ಜ.22 ರಂದು ಅಯೋಧ್ಯೇಯಲ್ಲಿ ನಡೆಯಲಿರುವ ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಕಪಿಲೇಶ್ವರ ದೇವಸ್ಥಾನದಿಂದ ಅಯೋದ್ಯೆಯ ಮಂತ್ರಾಕ್ಸತೆ ಇಂದು ಬೆಳಿಗ್ಗೆ ಕುಂಬ್ಲಾಡಿ ಬಾಲಸುಬ್ರಮಣ್ಯ ದೇವಸ್ಥಾನಕ್ಕೆ ತಂದು ಬಳಿಕ ಅರ್ಚಕರು ಪವಿತ್ರ ಮಂತ್ರಾಕ್ಷತೆಗೆ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಕಪಿಲೇಶ್ವರ ದೇವಸ್ಥಾನದ ಅರ್ಚಕರಾದ ವೆಂಕಟಕೃಷ್ಣ ಭಟ್, ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನದ ಅಚರ್ಕರಾದ ನೂತನ್ ಭಟ್, ಗಣಪತಿ ಭಟ್, ಸತೀಶ್

ಕುಂಬ್ಲಾಡಿ ಬಾಲಸುಬ್ರಹ್ಮಣ್ಯ ದೇವಸ್ಥಾನ ತಲುಪಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ Read More »

ಪುರುಷ ಮೃಗ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ಪ್ರಯುಕ್ತ ಮಹಾಭಾರತ ಸರಣಿಯ ಪುರುಷಮೃಗ ತಾಳಮದ್ದಳೆ ಜರಗಿತು. ಭಾಗವತರಾಗಿ ಪದ್ಮನಾಭ ಕುಲಾಲ್, ಡಿ.ಕೆ. ಆಚಾರ್ಯ ಅಲಂಕಾರು. ಹಿಮ್ಮೇಳದಲ್ಲಿ ದಿವಾಕರ ಆಚಾರ್ಯ ನೆರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಅರ್ಥಧಾರಿಗಳಾಗಿ ಜಯರಾಮ ಬಲ್ಯ (ಶ್ರೀ ಕೃಷ್ಣ), ಬಾಲಕೃಷ್ಣ ಕೇಪುಳು (ಧರ್ಮರಾಯ), ಗುಡ್ಡಪ್ಪ ಬಲ್ಯ (ಭೀಮ), ಜಯರಾಮ ಭಟ್ ದೇವಸ್ಯ (ಹನುಮಂತ), ಹರೀಶ ಆಚಾರ್ಯ ಬಾರ್ಯ (ಪುರುಷ ಮೃಗ), ಮಹಾಲಿಂಗೇಶ್ವರ ಭಟ್ ಪೆರಿಯಡ್ಕ (ಅರ್ಜುನ)

ಪುರುಷ ಮೃಗ ತಾಳಮದ್ದಳೆ Read More »

error: Content is protected !!
Scroll to Top