ನಾಳೆ ಕಡಬ ತಾಲೂಕು ಒಕ್ಕಲಿಗ ಗೌಡ ನೂತನ ಸಮುದಾಯ ಭವನಕ್ಕೆ ಶಿಲಾನ್ಯಾಸ | ಇಂದು ಸಂಜೆ ನಡೆಯಲಿದೆ ಬೃಹತ್ ಹೊರೆಕಾಣಿಕೆ ಸಮರ್ಪಣೆ | ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತಿ
ಕಡಬ: ಡಿ.26 ರಂದು ನಡೆಯಲಿರುವ ಕಡಬ ತಾಲೂಕು ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ, ನೂತನ ತಾಲೂಕು ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನಾ ಸಮಾರಂಭದ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ ಇಂದು ನಡೆಯಲಿದೆ. ಈಗಾಗಲೇ ಕಾರ್ಯಕ್ರಮದ ಅಂಗವಾಗಿ ಎಲ್ಲಾ ಸಿದ್ಧತೆಗಳು ನಡೆದಿದ್ದು, ಎಲ್ಲಾ ಗ್ರಾಮದ ಹೊರಕಾಣಿಕೆ ವಾಹನಗಳು ಇಂದು ಸಂಜೆ 3 ಗಂಟೆಗೆ ಕಡಬ ಶ್ರೀ ಗಣಪತಿ ದೇವಸ್ಥಾನಕ್ಕೆ ಬಂದು ಅಲ್ಲಿಂದ ಗಣ್ಯರ ಸಮ್ಮುಖದಲ್ಲಿ ಮೆರವಣಿಗೆ ಉದ್ಘಾಟನೆಗೊಂಡು ಚೆಂಡೆ, […]









