ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ದತ್ತಜಯಂತಿ| ವಜ್ರದೇಹಿ ಸ್ವಾಮೀಜಿಯವರಿಗೆ ಆಮಂತ್ರಣ

ಚಿಕ್ಕಮಗಳೂರು : ದತ್ತ ಜಯಂತಿ ಅಂಗವಾಗಿ ಚಿಕ್ಕಮಂಗಳೂರು ಚಂದ್ರದ್ರೋಣ ಪರ್ವತದಲ್ಲಿ ನಡೆಯುವ ದತ್ತಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಗುರುಪುರ ವಜ್ರದೇಹಿ ಮಠದ  ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರಿಗೆ ನೀಡಲಾಯಿತು. ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ್ ಸುನೀಲ್ ಕೆ.ಆರ್,ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿ ಕೃಷ್ಣ ಹಸಂತಡ್ಕ, ಬಜರಂಗದಳ ಮಂಗಳೂರು ವಿಭಾಗ ಸಹ ಸಂಯೋಜಕ್ ಪುನೀತ್ ಅತ್ತಾವರ ಆಮಂತ್ರಣ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕ್ ಜಯಂತ್ ಕುಂಜೂರುಪಂಜ,ವಿಶ್ವ ಹಿಂದೂ ಪರಿಷದ್ ಪುತ್ತೂರು […]

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ದತ್ತಜಯಂತಿ| ವಜ್ರದೇಹಿ ಸ್ವಾಮೀಜಿಯವರಿಗೆ ಆಮಂತ್ರಣ Read More »

ನಾಳೆ (ಡಿ.18)  : ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ಸಮುದಾಯ ಭವನಕ್ಕೆ ಶಿಲಾನ್ಯಾಸ

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ಹಾಗೂ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ ಡಿ.18 ಸೋಮವಾರ ಸಂಜೆ 5.30 ಕ್ಕೆ ನಡೆಯಲಿದೆ. ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘ ನಿ. ದ ಉದ್ಘಾಟನಾ ಸಮಾರಂಭ, ಚಪ್ಪರಮುಹೂರ್ತ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ನಾಳೆ (ಡಿ.18)  : ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ಸಮುದಾಯ ಭವನಕ್ಕೆ ಶಿಲಾನ್ಯಾಸ Read More »

ನಗರಸಭೆ ಚುನಾವಣೆ | ನಾಮಪತ್ರ ಹಿಂತೆಗೆದುಕೊಳ್ಳಲು ನಾಳೆ ಅಂತಿಮ ದಿನ

ಪುತ್ತೂರು: ನಗರ ಸಭೆಯ ಎರಡು ವಾರ್ಡ್ ಗಳಲ್ಲಿ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆಗೆ ಸಂಬಂಧಿಸಿ ಡಿ.27 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ಡಿ.18 ಕೊನೆಯ ದಿನವಾಗಿದೆ. ಎರಡು ವಾರ್ಡ್ ಗಳಲ್ಲಿ ನಡೆಯುವ ಚುನಾವಣೆಗೆ ಒಟ್ಟು 6 ನಾಮಪತ್ರಗಳು ಸಲ್ಲಿಕೆಯಾಗಿವೆ. ಶನಿವಾರ ನಾಮಪತ್ರ ಪರಿಶೀಲನೆ ನಡೆಸಲಾಗಿದ್ದು, ಎಲ್ಲಾ ನಾಮಪತ್ರಗಳು ಸಿಂಧುವಾಗಿವೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ವಾರ್ಡ್ 1 ರ ಅಭ್ಯರ್ಥಿಯಾಗಿ ಬಿಜೆಪಿಯಿಂದ ಸುನಿತಾ, ಕಾಂಗ್ರೆಸ್‌ನಿಂದ ದಿನೇಶ್ ಶೇವಿರೆ, ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಅನ್ನಪೂರ್ಣ ಎಸ್.ಕೆ. ರಾವ್

ನಗರಸಭೆ ಚುನಾವಣೆ | ನಾಮಪತ್ರ ಹಿಂತೆಗೆದುಕೊಳ್ಳಲು ನಾಳೆ ಅಂತಿಮ ದಿನ Read More »

ಬಿಳಿಯೂರು ಕಿಂಡಿ ಅಣೆಕಟ್ಟು ರೈತರ ಪಾಲಿಗೆ ಸಂತಸ ತಂದಿದೆ | ಗಂಗಾಪೂಜೆಯಲ್ಲಿ ಬಾಗೀನ ಅರ್ಪಿಸಿ ಸಂಜೀವ ಮಠಂದೂರು

ಬಂಟ್ವಾಳ:  ತಾಲೂಕಿನ ಪೆರ್ನೆ. ಬಿಳಿಯೂರು ಗ್ರಾಮದ ಕಡಪು ಎಂಬಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರ ಅವಧಿಯಲ್ಲಿ ನಿರ್ಮಾಣವಾದ 51 ಕೋಟಿ ವೆಚ್ಚದ ಸಂಪರ್ಕ ರಸ್ತೆ ಮತ್ತು ಕಿಂಡಿ ಅಣೆಕಟ್ಟಿನಲ್ಲಿ ನದಿಗೆ ಬಾಗಿನ ಅರ್ಪಿಸುವ ಗಂಗಾ ಪೂಜೆ ಡಿ.17 ಭಾನುವಾರ ಬೆಳಿಗ್ಗೆ ನಡೆಯಿತು. ಗೋಪಾಲಕೃಷ್ಣ ಭಟ್ ಅವರು ಪೂಜೆ ನೆರವೇರಿಸಿದರು. ಬಾಗಿನ ಅರ್ಪಿಸಿ ಮಾತನಾಡಿದ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಬಂಟ್ವಾಳ ತಾಲೂಕಿನ ಪೆರ್ನೆಯ ಬಿಳಿಯೂರು ಎಂಬಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ರೂ. 51 ಕೋಟಿ

ಬಿಳಿಯೂರು ಕಿಂಡಿ ಅಣೆಕಟ್ಟು ರೈತರ ಪಾಲಿಗೆ ಸಂತಸ ತಂದಿದೆ | ಗಂಗಾಪೂಜೆಯಲ್ಲಿ ಬಾಗೀನ ಅರ್ಪಿಸಿ ಸಂಜೀವ ಮಠಂದೂರು Read More »

ಓಪನ್ ಮಾಡಿದ ಕಾರಿನ ಬಾಗಿಲು | ಸ್ಕೂಟರ್ ಸವಾರ ಮೃತ್ಯು !

ಕಾರ್ಕಳ: ಕಾರಿನ ಬಾಗಿಲು ತೆರೆದ ಪರಿಣಾಮ ಸ್ಕೂಟರಿನಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದ ಸವಾರ ಬಿದ್ದು ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಕಾರ್ಕಳ ಕಸಬಾ ಗ್ರಾಮದಲ್ಲಿ ನಡೆದಿದೆ. ಯಶವಂತ ಮೃತಪಟ್ಟ ಸ್ಕೂಟರ್ ಸವಾರ ಎಂದು ಗುರುತಿಸಲಾಗಿದೆ. ರಸ್ತೆ ಬದಿ ಕಾ‌ರ್ ಅನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿದ್ದ. ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಗಮನಿಸದೇ ನಿರ್ಲಕ್ಷ್ಯತನದಿಂದ ತನ್ನ ಕಾರಿನ ಬಲಬದಿಯ ಬಾಗಿಲನ್ನು ತೆರೆದ ಪರಿಣಾಮ ಸಾಲ್ಮರ ಕಡೆಯಿಂದ ತಾಲೂಕು ಕಚೇರಿ ಬಳಿ ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರ್ ಸವಾರನಿಗೆ ಕಾರಿನ ಬಾಗಿಲು

ಓಪನ್ ಮಾಡಿದ ಕಾರಿನ ಬಾಗಿಲು | ಸ್ಕೂಟರ್ ಸವಾರ ಮೃತ್ಯು ! Read More »

ಸ್ಮೋಕ್ ಹೌಸ್, ಹಟ್ಟಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ನಷ್ಟ

ನೆಲ್ಯಾಡಿ: ಆಕಸ್ಮಿಕ ಬೆಂಗಿ ತಗಲಿದ ಪರಿಣಾಮ ಸ್ಮೋಕ್ ಹೌಸ್ ಹಾಗೂ ಹಟ್ಟಿ ಸುಟ್ಟು ಭಸ್ಮವಾಗಿರುವ ಘಟನೆ ಇಚ್ಲಂಪಾಡಿ ನಿಡ್ಯಡ್ಕ ಎಂಬಲ್ಲಿ ನಡೆದಿದೆ. ನಿಡ್ಯಡ್ಕ ನಿವಾಸಿ, ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ನಿರ್ದೇಶಕ ಜಾರ್ಜ್‍ ಕುಟ್ಟಿ ಉಪದೇಶಿ ಅವರಿಗೆ ಸೇರಿದ ಸ್ಮೋಕ್ ಹೌಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಸಿಕೊಂಡಿದೆ. ಪರಿಣಾಮ ಪಕ್ಕದ ಹಟ್ಟಿಗೂ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿದೆ. ಈ ಸಂದರ್ಭದಲ್ಲಿ ಹಟ್ಟಿಯಲ್ಲಿದ್ದ ಜಾನುವಾರುಗಳನ್ನು ರಕ್ಷಿಸಲಾಗಿದೆ. ಘಟನೆಯಿಂದ ಸುಮಾರು 3 ಲಕ್ಷ

ಸ್ಮೋಕ್ ಹೌಸ್, ಹಟ್ಟಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ನಷ್ಟ Read More »

ಶ್ರೀ ಸೀತಾ ರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಉತ್ಸವ-2023

ಪೆರ್ನಾಜೆ: ಪೆಟ್ಟು ತಿಂದ ಕಲ್ಲು ಹೇಗೆ ಸುಂದರ ವಿಗ್ರಹವಾಗುತ್ತದೋ ಹಾಗೆ ವಿದ್ಯಾರ್ಥಿಗಳನ್ನು ಎಳವೆಯಲ್ಲೇ ತಿದ್ದಿ ತೀಡಿ ರೂಪ ನೀಡುವ ಶಿಕ್ಷಕರು ಆದರ್ಶ ಗುರು ಎಂದು ಹಿರಿಯ ವಿದ್ಯಾರ್ಥಿ ಕುಮಾರ್ ಪೆರ್ನಾಜೆ ಹೇಳಿದರು. ಅವರು ಪೆರ್ನಾಜೆ ಶ್ರೀ ಸೀತಾರಾಘವ ಪದವಿಪೂರ್ವ ಹಾಗೂ ಪ್ರೌಢಶಾಲಾ ಸಾಂಸ್ಕೃತಿಕ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಗಾಳಿ ನಮಗೆಷ್ಟು ಮುಖ್ಯವೋ ಗಾಳಿಮಾತು ಅಷ್ಟೇ ಅಪಾಯಕಾರಿ. ನಂಬಿಕೆ ಅನ್ನೋದು ಬೆಲೆಕಟ್ಟಲಾಗದ ಅಮೂಲ್ಯ ರತ್ನ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸ್ಪಷ್ಟಗುರಿ, ಒಳ್ಳೆಯ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು

ಶ್ರೀ ಸೀತಾ ರಾಘವ ಪದವಿಪೂರ್ವ, ಪ್ರೌಢಶಾಲಾ ವಿಭಾಗದ ಸಾಂಸ್ಕೃತಿಕ ಉತ್ಸವ-2023 Read More »

ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ, ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮಕ್ಕೆ ಚಾಲನೆ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕೊಳ್ತಿಗೆ ಹಿರಿಯ ಪ್ರಾಥಮಿಕ ಶಾಲೆ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ರಜತ ಸಂಭ್ರಮ ಸಮಿತಿ ಸಂಯುಕ್ತ ಆಶ್ರಯದಲ್ಲಿ ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ ಹಾಗೂ ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು. ಕೊಳ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕಮ್ಮ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕೊಳ್ತಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಶಾಮ್‍ ಸುಂದರ

ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ, ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮಕ್ಕೆ ಚಾಲನೆ Read More »

ಬೈಕ್‍-ಬಸ್ ಅಪಘಾತ : ಬೈಕ್ ಸವಾರ ಮೃತ್ಯು

ಪುತ್ತೂರು: ಬೈಕ್‍ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟ‌ರ್ ಸವಾರ ಮೃತಪಟ್ಟ ಘಟನೆ ಕಬಕ ಕೂವೆಹಿತ್ತಿಲು ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಕ್ ಮೃತಪಟ್ಟ ಬೈಕ್‍ ಸವಾರ ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೈಕ್‍-ಬಸ್ ಅಪಘಾತ : ಬೈಕ್ ಸವಾರ ಮೃತ್ಯು Read More »

ಕೆಮ್ಮಾಯಿ ರಾಧಾ ವಾಸುದೇವ ಶೆಣೈ ನಿಧನ

ಪುತ್ತೂರು: ಪುಡಾ ನಿಕಟಪೂರ್ವ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರ ತಾಯಿ ಕೆಮ್ಮಾಯಿ ನಿವಾಸಿ ರಾಧಾ ವಾಸುದೇವ ಶೆಣೈ (91) ಶನಿವಾರ ಧನರಾದರು. ಮೃತರು ಪುತ್ರರಾದ ಭಾಮಿ ಅಶೋಕ್ ಶೆಣೈ, ಭಾಮಿ ಜಗದೀಶ್ ಶೆಣೈ, ಭಾಮಿ ಪ್ರಕಾಶ್ ಶೆಣೈ ಮತ್ತು ಪುತ್ರಿಯರಾದ ಶೈಲಾ ನಾಯಕ್, ಶೋಭಾ ನಾಯಕ್, ಭಾರತಿ ನಾಯಕ್ ಅವರನ್ನು ಅಗಲಿದ್ದಾರೆ. ಡಿ.ವಿ.ಸದಾನಂದ ಗೌಡ ಅವರು ತಮ್ಮ ಆರಂಭದ ರಾಜಕೀಯ ಚಟುವಟಿಕೆಗಳ ಸಂದರ್ಭದಲ್ಲಿ ಪುತ್ತೂರು ಕೆಮ್ಮಾಯಿ ಭಾಮಿ ಅಶೋಕ್ ಶೆಣೈ ಅವರ ಮನೆಯಲ್ಲೇ ತಂಗಿದ್ದರು. ಈ

ಕೆಮ್ಮಾಯಿ ರಾಧಾ ವಾಸುದೇವ ಶೆಣೈ ನಿಧನ Read More »

error: Content is protected !!
Scroll to Top