ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ಸಮುದಾಯ ಭವನದ ಶಿಲಾನ್ಯಾಸ ಕುರಿತು ಪೂರ್ವಭಾವಿ ಸಭೆ

ಕಡಬ: ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ಮತ್ತು ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಬಗ್ಗೆ ಪೂರ್ವಭಾವಿ ಸಭೆ  ಮತ್ತು ವಲಯವಾರು ಭೇಟಿ ಕಾರ್ಯಕ್ರಮ ಡಿ.14 ರಂದು ಆಲಂಕಾರು ಶ್ರೀ ಭಾರತೀ ಶಾಲಾ ಸಭಾಂಗಣದಲ್ಲಿ ನಡೆಯಿತು. ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರ ಆಶೀರ್ವಚನ ಮತ್ತು ಮಾರ್ಗದರ್ಶನದೊಂದಿಗೆ ನಡೆಯಿತು. ಸಭೆಯಲ್ಲಿ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು ಮತ್ತು ಪದಾಧಿಕಾರಿಗಳು ಹಾಗೂ ಆಲಂಕಾರು ವಲಯ […]

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ಸಮುದಾಯ ಭವನದ ಶಿಲಾನ್ಯಾಸ ಕುರಿತು ಪೂರ್ವಭಾವಿ ಸಭೆ Read More »

ಮುಗೇರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಆಗಮಿಸಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ

ಕುದ್ಮಾರು: ಅಯೋಧ್ಯೆ ಶ್ರೀ ರಾಮಜನ್ಮ ಭೂಮಿಯಲ್ಲಿರುವ ಶ್ರೀ ಶ್ರೀ ರಾಮ ಮಂದಿರದಲ್ಲಿ ಜ.22 ರಂದು ಶ್ರೀರಾಮನ ಪ್ರಾಣ ಪ್ರತಿಷ್ಠೆ ಅಂಗವಾಗಿ ಅಯೋಧ್ಯೆಯಿಂದ ಆಗಮಿಸಿದ ಪವಿತ್ರ ಮಂತ್ರಾಕ್ಷತೆಯನ್ನು ಮೆರವಣಿಗೆ ಮೂಲಕ ಮುಗೇರು ಶ್ರೀಮಹಾವಿಷ್ಣುಮೂರ್ತಿ  ದೇವಸ್ಥಾನನಕ್ಕೆ ತರಲಾಯಿತು. ಕುದ್ಮಾರು, ಸವಣೂರು ಹಾಗೂ ಪುಣ್ಚಪ್ಪಾಡಿಯ ರಾಮಭಕ್ತರು ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು. ಬಳಿಕ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪವಿತ್ರ ಮಂತ್ರಾಕ್ಷತೆಯನ್ನಿರಿಸಿ ಅದಕ್ಕೆಅರ್ಚಕರು ಆರತಿ ಬೆಳಗಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ಮುಗೇರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಆಗಮಿಸಿದ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ Read More »

ಕೆರೆಗೆ ಬಿದ್ದು ಮೃತ್ಯು !

ವಿಟ್ಲ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೈರಿಕಟ್ಟೆ ಎಂಬಲ್ಲಿ ನಡೆದಿದೆ. ಬೈರಿಕಟ್ಟೆ ಅಂಗ್ರಿಮನೆ ನಿವಾಸಿ ಗಣೇಶ್ (39) ಮೃತಪಟ್ಟವರು. ತೋಟದಲ್ಲಿ ಹುಲ್ಲು ತೆಗೆಯಲು ಹೋಗಿದ್ದ ಗಣೇಶ್ ಅವರು ಮನೆಗೆ ಬಾರದೆ ಇದ್ದಾಗ ಅವರ ತಂದೆ ತೋಟಕ್ಕೆ ಹುಡುಕಿಕೊಂಡು ಹೋದಾಗ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಕೆರೆಗೆ ಬಿದ್ದು ಮೃತ್ಯು ! Read More »

ಡಿ.16: ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ , ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ | ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ

ಪುತ್ತೂರು: ಪುತ್ತೂರು ತಾಲೂಕಿನ ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ ಹಾಗೂ ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮದ ಅಂಗವಾಗಿ ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ಉಡುಪಿ ಅಭಿನಯ ಕಲಾವಿದರು ತಂಡದಿಂದ ಕುತೂಹಲಭರಿತ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಕೊಳ್ತಿಗೆ ಶಾಲಾ ಸಭಾಂಗಣದಲ್ಲಿ ಡಿ.16 ಶನಿವಾರ ರಾತ್ರಿ ಗಂಟೆ 11 ರಿಂದ ಪ್ರದರ್ಶನಗೊಳ್ಳಲಿದೆ ಎಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯತ್ ಕೆಮ್ಮಾರ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಜೆ 6 ರಿಂದ ಅಂಗನವಾಡಿ ಪುಟಾಣಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ,

ಡಿ.16: ಕೊಳ್ತಿಗೆ ಶಾಲಾ ವಾರ್ಷಿಕೋತ್ಸವ , ಹಳೆ ವಿದ್ಯಾರ್ಥಿ ಸಂಘದ ರಜತ ಸಂಭ್ರಮ | ಪುತ್ತೂರು ತಾಲೂಕಿನಲ್ಲೇ ಪ್ರಪ್ರಥಮ ಬಾರಿಗೆ ತುಳು ಹಾಸ್ಯಮಯ ನಾಟಕ ‘ಶಾಂಭವಿ’ ಪ್ರದರ್ಶನ Read More »

ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಒಡ್ಡಿದ ಇಬ್ಬರ ಮೇಲೆ ಪ್ರಕರಣ ದಾಖಲು

ಪುತ್ತೂರು: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆತ್ನಿಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಪುತ್ತೂರು ನಗರದ ಕಿಲ್ಲೆ ಮೈದಾನದ ಕ್ಯಾಂಟೀನ್ ಒಂದರಲ್ಲಿ ಗುರುವಾರ ನಡೆದಿದೆ. ಮಂಜುನಾಥ ಹಾಗೂ ಪ್ರಶಾಂತ ಯಾನೆ ಪಚ್ಚು ಎಂಬವರು ಹಲ್ಲೆಗೆ ಯತ್ನಿಸಿರುವುದಾಗಿ ಆರೋಪಿಸಲಾಗಿದ್ದು, ಆರ್ಯಾಪು ಗ್ರಾಮ ಪುತ್ತೂರು ತಾಲೂಕು ಮೇರ್ಲ ಮನೆ ನಿವಾಸಿ ಪಿ ಕೇಶವ ಸುವರ್ಣ (67) ಎಂಬವರು ಗುರುವಾರ ಮಧ್ಯಾಹ್ನ ಕಿಲ್ಲೆ ಮೈದಾನದ ಬಳಿಯಿರುವ ಕ್ಯಾಂಟೀನ್ ನಲ್ಲಿ ಊಟ ಮಾಡುತ್ತಿದ್ದ ವೇಳೆ ಆರೋಪಿಗಳು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆಗೆ ಯತ್ನಿಸಿ

ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಒಡ್ಡಿದ ಇಬ್ಬರ ಮೇಲೆ ಪ್ರಕರಣ ದಾಖಲು Read More »

ಕಡಬ ಒಕ್ಕಲಿಗ ಗೌಡ ಯುವ ಸಂಘದ ಸಮಾಲೋಚನಾ ಸಭೆ

ಕಡಬ: ಒಕ್ಕಲಿಗ ಗೌಡ ಯುವ ಸಂಘದ ಸಮಾಲೋಚನಾ ಸಭೆ ಕಡಬ ಒಕ್ಕಲಿಗ ಸಮುದಾಯ ಭವನದಲ್ಲಿ ಡಿ.12 ರಂದು ನಡೆಯಿತು. ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಇವರು ವಹಿಸಿದರು. ಸಭೆಯಲ್ಲಿ ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಹತ್ವಾಕಾಂಕ್ಷಿ ಯೋಜನೆಯಾದ ನೂತನ ಸಮುದಾಯ ಭವನದ ಶಿಲಾನ್ಯಾಸ, ಕಡಬ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘ ನಿಯಮಿತದ ಉದ್ಘಾಟನಾ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲಾಯಿತು. ಯುವ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ

ಕಡಬ ಒಕ್ಕಲಿಗ ಗೌಡ ಯುವ ಸಂಘದ ಸಮಾಲೋಚನಾ ಸಭೆ Read More »

ಪುತ್ತೂರು ನಗರಸಭೆಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ಸಮರ್ಥ ಬಿಜೆಪಿ ಅಭ್ಯರ್ಥಿಗಳ ಆಯ್ಕೆ | ಎರಡೂ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಸುದರ್ಶನ್ ಮೂಡಬಿದ್ರೆ

ಪುತ್ತೂರು: ಈಗಾಗಲೇ ನಗರಸಭೆಯ ಎರಡು ವಾರ್ಡುಗಳಲ್ಲಿಯ ಸದಸ್ಯರ ಮರಣದಿಂದ ತೆರವಾದ ಸ್ಥಾನಗಳಿಗೆ ಭಾರತೀಯ ಜನತಾ ಪಾರ್ಟಿಯಿಂದ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಎರಡೂ ವಾರ್ಡುಗಳಲ್ಲಿ ಗೆಲುವು ನಿಶ್ಚಿತ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ತಿಳಿಸಿದ್ದಾರೆ. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ವಾರ್ಡು ಒಂದರಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಸಫಲ್ಯ ಅವರು ಸದಸ್ಯರಾಗಿದ್ದರು. ವಾರ್ಡು 11 ರಲ್ಲಿ ಕಾಂಗ್ರೆಸ್ ನ ಶಕ್ತಿಸಿನ್ಹ ಸದಸ್ಯರಾಗಿದ್ದರು. ಇದೀಗ ಅವರ ಮರಣದಿಂದ ವಾರ್ಡು ಒಂದರಲ್ಲಿ ಧಾರ್ಮಿಕ, ಸಾಮಾಜಿಕ,

ಪುತ್ತೂರು ನಗರಸಭೆಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ಸಮರ್ಥ ಬಿಜೆಪಿ ಅಭ್ಯರ್ಥಿಗಳ ಆಯ್ಕೆ | ಎರಡೂ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಸುದರ್ಶನ್ ಮೂಡಬಿದ್ರೆ Read More »

ಡಿ.27: ನಗರಸಭೆ ಎರಡು ವಾರ್ಡುಗಳಿಗೆ ಉಪಚುನಾವಣೆ | ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆ ಅಂತಿಮ

ಪುತ್ತೂರು : ಡಿ.27 ರಂದು ಎರಡು ಸ್ಥಾನಗಳಿಗೆ ನಡೆಯಲಿರುವ ನಗರಸಭಾ ಉಪಚುನಾವಣೆ ಅಂಗವಾಗಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಬಿಜೆಪಿಯಿಂದ ನಗರಸಭೆಯ ವಾರ್ಡ್ 1ರ ಅಭ್ಯರ್ಥಿಯಾಗಿ ಸುನೀತಾ ಹಾಗೂ ನಗರಸಭೆಯ ವಾರ್ಡ್ 11ರ ಅಭ್ಯರ್ಥಿಯಾಗಿ ರಮೇಶ್ ರೈ ಅವರನ್ನು ಆಯ್ಕೆ ಮಾಡಲಾಗಿದೆ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ರವರ ನೇತೃತ್ವದಲ್ಲಿ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಆಯ್ಕೆ ಮಾಡಲಾಗಿದೆ. ನಗರ ಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಿವರಾಮ

ಡಿ.27: ನಗರಸಭೆ ಎರಡು ವಾರ್ಡುಗಳಿಗೆ ಉಪಚುನಾವಣೆ | ಬಿಜೆಪಿಯಿಂದ ಅಭ್ಯರ್ಥಿಗಳ ಆಯ್ಕೆ ಅಂತಿಮ Read More »

ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ ಆತ್ಮಹತ್ಯೆ

ಪುತ್ತೂರು: ಸಂಪ್ಯ ಸಮೀಪದ ಕಲ್ಲರ್ಪೆ ನಿವಾಸಿ ಶ್ರೀಧ‌ರ್ ಆಚಾರ್ಯ ಅವರ ಪುತ್ರ ಭರತ್‌ ಕಲ್ಲರ್ಪೆ(24) ಮನೆಯ ಸಮೀಪದ ತಮ್ಮ ತೋಟದ ಮರವೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ರಕರ್ತ ಗಣೇಶ್ ಕಲ್ಲರ್ಪೆ ಅವರ ಸಹೋದರ ಆಗಿರುವ ಭರತ್ ಕಲ್ಲರ್ಪೆ ಹೈದರಾಬಾದ್ ನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಅಣ್ಣನ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತ್ತೆ ಹೈದರಾಬಾದ್ ಗೆ ತೆರಳಿದ್ದು, ಡಿ.12ರಂದು ಮತ್ತೆ ಮನೆಗೆ ಬಂದಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇದೀಗ ಮೃತದೇಹವನ್ನು

ಕಲ್ಲರ್ಪೆ ನಿವಾಸಿ ಭರತ್ ಕಲ್ಲರ್ಪೆ ಆತ್ಮಹತ್ಯೆ Read More »

ನಗರಸಭೆ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಎರಡೂ ವಾರ್ಡುಗಳಿಗೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಪುತ್ತೂರು: ಪುತ್ತೂರು ನಗರಸಭೆಯ ಎರಡು ವಾರ್ಡುಗಳಿಗೆ ನಡೆಯುವ ಉಪಚುನಾವಣೆಗೆ ಪುತ್ತಿಲ ಪರಿವಾರದಿಂದ ಎರಡೂ ವಾರ್ಡಿನಲ್ಲಿ ಅಭ್ಯರ್ಥಿಗಳು ಕಣದಲ್ಲಿದ್ದು, ಗುರುವಾರ ನಗರಸಭೆಯಲ್ಲಿ ನಾಮಪತ್ರ ಸಲ್ಲಿಸಿದರು. ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪುತ್ತೂರು ನಗರಸಭೆಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ವಾರ್ಡ್ ನಂ.1ರ ಅಭ್ಯರ್ಥಿಯಾಗಿ ರಕೇಶ್ವರಿ ಅನ್ನಪೂರ್ಣ ರಾವ್ ಹಾಗೂ ವಾರ್ಡು11 ರ ಅಭ್ಯರ್ಥಿಯಾಗಿ ನೆಲ್ಲಿಕಟ್ಟೆ ಚಿಂತನ್ ಅವರು ಉಪಚುನಾವಣೆಗೆ ಪುತ್ತಿಲ ಪರಿವಾರದ ವತಿಯಿಂದ ನಾಮಪತ್ರ ಸಲ್ಲಿಸಿದರು. ಚುಣಾವಣಾಧಿಕಾರಿ ನಗರ ಸಭೆಯ ಲೋಕೇಶ್ ಅವರಿಗೆ ನಾಮಪತ್ರ ಸಲ್ಲಿಸಲಾಯಿತು.

ನಗರಸಭೆ ಉಪ ಚುನಾವಣೆ | ಪುತ್ತಿಲ ಪರಿವಾರದಿಂದ ಎರಡೂ ವಾರ್ಡುಗಳಿಗೂ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ Read More »

error: Content is protected !!
Scroll to Top